Editor

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ….

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕ್ 43,393 ಜನರಲ್ಲಿ ಪತ್ತೆಯಾಗಿದ್ದು ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 3,07,52,950ಕ್ಕೆ ಏರಿದೆ. ಇದಿರಿಂದ ಮತ್ತೆ ಲಾಕ್ ಡೌನ್ ಆಗುವ ಮುನ್ಸೂಚನೆ ಇದೆ. ಕಳೆದ 24 ಗಂಟೆಯಲ್ಲಿ 911 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,939ಕ್ಕೆ ಏರಿಕೆಯಾಗಿದೆ.ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದಲ್ಲದೆ ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನಲೆ ಲಾಕ್ ಡೌನ್ ಮಾಡುವ ಸ್ಥಿತಿ […]

ಮತ್ತೆ ದೇಶದಲ್ಲಿ ಏರಿಕೆಕಾಣುತ್ತಿರುವ ಕೊರೊನ ಸೋಂಕಿನ ಪ್ರಮಾಣ, ಮೈಮರೆತೀರಾ ಜೋಕೆ…. Read More »

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್

ತಿರುವನಂತಪುರಂ: ಮೊದಲ ಬಾರಿಗೆ ಕೇರಳದಲ್ಲಿ ಮಹಿಳೆಯೊಬ್ಬರಿಗೆ ಝಿಕಾ ವೈರಸ್ ಸೋಂಕು ತಗುಲಿರುವುದಾಗಿ ಆರೋಗ್ಯ ಸಚಿವೆ ಹೇಳಿದ್ದಾರೆ. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪರಶಾಲಾದ (24) ಗರ್ಭಿಣಿಯಲ್ಲಿ ಈ ರೋಗ ಪತ್ತೆಯಾಗಿದೆ. ಜೂ. 28 ರಂದು ಮಹಿಳೆಯನ್ನು ಜ್ವರ, ತಲೆನೋವು ಮತ್ತು ಕೆಂಪು ಕಲೆಗಳಿಂದ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ನಡೆದ ಮೊದಲ ಪರೀಕ್ಷೆಯಲ್ಲಿ ಅಲ್ಪ ಪ್ರಮಾಣದ ಧನಾತ್ಮಕ ಅಂಶ ಕಂಡುಬಂದಿದೆ. ಝಿಕಾ ವೈರಸ್ ಅನ್ನು ಪತ್ತೆಹಚ್ಚಲು ಎನ್‌ಐವಿ ಅನ್ನು ಬಳಸಬಹುದು. ಮಾದರಿಗಳನ್ನು ಪುಣೆಗೆ ಕಳುಹಿಸಲಾಗಿದೆ. ಅದೇ ಸಮಯದಲ್ಲಿ,

ಕೇರಳದಲ್ಲಿ ‌ಕಾಣಿಸಿಕೊಳ್ತು ಮಾರಕ ಝಿಕಾ ವೈರಸ್ Read More »

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ

ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ Read More »

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು

ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು Read More »

ಪಶ್ಚಿಮ ‌ಘಟ್ಟದ ಸೌಂದರ್ಯ ಸವಿಯಲು ಬರ್ತಿದೆ ವಿಸ್ಟಾಡೋಮ್ ಗಾಜಿನ ರೈಲು, ಜು.16ರಿಂದ ಸಂಚಾರ ಆರಂಭ

ಮಂಗಳೂರು: ಮಂಗಳೂರುನಿಂದ ಯಶವಂತಪುರ ನಡುವೆ ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಸೇರ್ಪಡೆ ಮಾಡಿದ್ದು ಜು.೧೬ ರಂದು ಅರಂಭಗೊಳ್ಳಲಿದೆ. ರೈಲಿನಲ್ಲಿ ಸಂಚಾರಿಸುವ ಪ್ರಯಾಣಿಕರು ಪಶ್ಚಿಮ ಘಟ್ಟ ಸಮೇತ ಪ್ರಕೃತಿಯ ಸೌಂದರ್ಯ, ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವೆ ಪಶ್ಚಿಮ ಘಟ್ಟದ ಹಸಿರು ಸೌಂದರ್ಯದಟ್ಟವಾದ ಅರಣ್ಯ, ಅಲ್ಲಲ್ಲಿ ಕಾಣುವ ಜಲಪಾತ, ರೈಲು ಸುರಂಗ ಮಾರ್ಗ, ಶಿರಾಡಿ ಘಾಟ್‌ನ ಸೌಂದರ್ಯವನ್ನು ಆಸ್ವಾದಿಸುವ ಉದೇಶದಿಂದ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೀಗಿಗಳ ಸೇರ್ಪಡೆ ನಡೆದಿದೆ. ಈ ಕುರಿತು ರೈಲ್ವೇ ಇಲಾಖೆ

ಪಶ್ಚಿಮ ‌ಘಟ್ಟದ ಸೌಂದರ್ಯ ಸವಿಯಲು ಬರ್ತಿದೆ ವಿಸ್ಟಾಡೋಮ್ ಗಾಜಿನ ರೈಲು, ಜು.16ರಿಂದ ಸಂಚಾರ ಆರಂಭ Read More »

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ ಕರಂದ್ಲಾಜೆ.!

ಉಡುಪಿ: ಶೋಭಾ ಕರಂದ್ಲಾಜೆಯವರು ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಈ ಹಿಂದಿನ ಎಲ್ಲಾ ಟ್ವೀಟ್ ಗಳನ್ನು ಅಳಿಸಿ ಹಾಕಿದ್ದಾರೆ. ನಿನ್ನೆಯಷ್ಟೆ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿದ್ದ ಹಿಂದಿನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ಟ್ವೀಟ್ ಹೊರತುಪಡಿಸಿ ಉಳಿದ ಅವರ ಎಲ್ಲ ಸಂದೇಶಗಳನ್ನು ಡಿಲೀಟ್

ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಎಲ್ಲಾ ಟ್ವೀಟ್‌ಗಳನ್ನು ಅಳಿಸಿ ಹಾಕಿದ ಕರಂದ್ಲಾಜೆ.! Read More »

ಜಾಲತಾಣಗಗಳಲ್ಲಿ ವೈರಲ್ ಆಗುತ್ತಿದೆ ಕೈಕಟ್ಟಿ ನಿಂತ ಹೆಚ್‌ಡಿಕೆ ಫೋಟೋ!! ಇದರ ಹಿಂದಿನ ರಹಸ್ಯವೇನು??

ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ರ ನಡುವೆ ವಿವಾದಗಳು ಕೆಲ ದಿನಗಳಿಂದ ನಡೆವುತ್ತಿದೆ. ವಿವಾದ ಹೆಚುತ್ತಿದ್ದಂತೆ ಸುಮಲತಾ ಅವರ ಅಭಿಮಾನಿಗಳು ಸುಮಲತಾ ಮತ್ತು ಅಂಬರೀಶ್ ಬೆಂಬಲಿಗರು ಪೇಜ್ ಗಳಲ್ಲಿ ಹೆಚ್‌ಡಿಕೆ ಅಂಬರೀಶ್ ಮುಂದೆ ಕೈಕಟ್ಟಿ ನಿಂತ ಪೋಟೋವನ್ನು ವಿವಿಧ ಬರಹಗಳ ಮುಖಾಂತರ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಸುಮಲತಾ, ನಮ್ಮ ಪಕ್ಷ ನಿಮ್ಮಂತಹ ಸಾವಿರಾರೂ ಲೀಡರ್ ಗಳನ್ನು ತಯಾರು ಮಾಡಿದೆ ಅಂತ ಹೇಳುತ್ತಾರೆ. ನೀವು ಸಾವಿರಾರರು ಜನರನ್ನು ತಯಾರು

ಜಾಲತಾಣಗಗಳಲ್ಲಿ ವೈರಲ್ ಆಗುತ್ತಿದೆ ಕೈಕಟ್ಟಿ ನಿಂತ ಹೆಚ್‌ಡಿಕೆ ಫೋಟೋ!! ಇದರ ಹಿಂದಿನ ರಹಸ್ಯವೇನು?? Read More »

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ವೇಳೆ ಟಿಪ್ಪರೊಂದು ಮನೆಯ ಮೇಲೆ ಬಿದ್ದು ಟಿಪ್ಪರ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ಇಂದು ನಡೆದಿದೆ. ಟಿಪ್ಪರ್ ನಲ್ಲಿದ್ದ ವಿಠಲ್ ರವರು ಗಾಯಗೊಂಡವರು. ಇವರು ಟಿಪ್ಪರ್ ಅಡಿಗೆ ಸಿಲುಕಿದ್ದು, ಬಿ.ಸಿ.ರೋಡಿನ ವಿಜಯಲಕ್ಷ್ಮಿ ಕ್ರೇನ್ ತಕ್ಷಣ ಸ್ಥಳಕ್ಕೆ ತೆರಳಿ ಟಿಪ್ಪರನ್ನು ಮೇಲಕ್ಕೆತ್ತಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ನಾರಾಯಣ ಭಂಡಾರಿ ಅವರ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆ ಮಂದಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ

ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ Read More »

ಮೋದಿ ಸಂಪುಟ 2.0: ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೈಲ್ ವರದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ನೂತನ 15 ಸಾರಥಿಗಳು ಸೇರ್ಪಡೆಯಾಗಿದ್ದಾರೆ. ಇಂತಹ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ಡೀಟೈಲ್ ಇಲ್ಲಿದೆ. ಉನ್ನತ ವರದಿಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಮೇಲೆ ನಿಗಾ ಇಡಲಿದ್ದು, ಅಮಿತ್ ಶಾ ಅವರು ಗೃಹ ಸಚಿವಾಲಯದ ಜೊತೆಗೆ ಸಹಕಾರ ಸಚಿವಾಲಯದ ಮೇಲೆ ನಿಗಾ ಇಡಲಿದ್ದಾರೆ. ಮನ್ಸುಖ್ ಮಾಂಡವಿಯಾ ಅವರು ಕೇಂದ್ರ

ಮೋದಿ ಸಂಪುಟ 2.0: ಯಾರಿಗೆ ಯಾವ ಖಾತೆ? ಇಲ್ಲಿದೆ ಡೀಟೈಲ್ ವರದಿ Read More »