ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ವಿಪಕ್ಷಗಳ ಎದುರಿಸಲು ಸರ್ಕಾರ ಸಜ್ಜು| ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ ಬಿಸಿಬಿಸಿ ಚರ್ಚೆ
ಸಮಗ್ರ ನ್ಯೂಸ್: ರಾಜ್ಯದ ನಾಯಕತ್ವ ಬದಲಾವಣೆ ತಿಕ್ಕಾಟದ ಮಧ್ಯ ಒಗ್ಗಟ್ಟಿನ ಮಂತ್ರ ಜಪಿಸಿರುವ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ವಿಪಕ್ಷಗಳ ಟೀಕೆಗಳಿಗೆ, ಪ್ರಶ್ನೆಗಳು ಮತ್ತು ಆರೋಪಗಳಿಗೆ ತಕ್ಕ ಉತ್ತರ ಕೊಡಲು ಸಜ್ಜಾಗಿದ್ದಾರೆ. ಬೆಂಬಲ ಬೆಲೆ, ರೈತರು ಬೆಳೆದ ಕಬ್ಬು, ಮಕ್ಕೆಜೋಳ ಇತರ ಬೆಳೆಗೆ ಸೂಕ್ತ ಬೆಲೆ, ನೆರೆ-ಪ್ರವಾಹ ಪರಿಹಾರ, ಸರ್ಕಾರ ನೇಮಕಾತಿ, ಪೊಲೀಸ್ ವೈಫಲ್ಯ, ನೀರಾವರಿ ವಿಷಯಗಳು ಸೇರಿದಂತೆ ಉತ್ತರ ಕರ್ನಾಟಕದ ಹತ್ತು ಹಲವು ಸಮಸ್ಯೆಗಳು, ಬೇಡಿಕೆಗಳ ಪ್ರಸ್ತಾಪಿಸಿ ಸರ್ಕಾರದ ಮೇಲೆ ಮುಗಿ ಬೀಳಲು ವಿಪಕ್ಷಗಳು ಅಣಿಯಾಗಿವೆ. […]










