Editor

ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾಗಿದೆ | ಇದೀಗ ಜಾತಿ ನೆಪ ಹೇಳಿ ಬೇರೆ ಮದುವೆಯಾದ ಪತಿ

ಕೋಲಾರ: ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾದ ಬಳಿಕ ಜಾತಿ ಹೆಸರಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಮತ್ತೊಂದು ಮದುವೆಯಾಗಿರುವ ಘಟನೆ ನಗರದಲ್ಲಿ ನಡೆದಿದೆ. 5 ವರ್ಷದ ಹಿಂದೆ ಬಂಗಾರಪೇಟೆ ತಾಲೂಕಿನ ದೊಡ್ಡ ಚಿನ್ನಹಳ್ಳಿಯ ಸುನಿಲ್, ಚಿಕ್ಕ ಅಂಕಂಡಹಳ್ಳಿಯ ಕಾವ್ಯಾ ಪ್ರೀತಿಸಿ ಮದುವೆಯಾಗಿದ್ದಾರೆ. ಇಬ್ಬರ ಪ್ರೀತಿಗೆ ಸಾಕ್ಷಿಯಾಗಿ 4 ವರ್ಷದ ಹಾಗೂ 9 ತಿಂಗಳ ಎರಡು ಗಂಡು ಮಕ್ಕಳಿವೆ. ಈ ಮಧ್ಯೆ ಪತಿ ತನ್ನ ತಾಯಿಯ ಮನೆಗೆ ಹೋಗಿ ಬರುತ್ತಿದ್ದು, ಮನೆಯವರ ಮಾತು ಕೇಳಿರುವ ಸುನಿಲ್, ಮತ್ತೊಂದು […]

ಪ್ರೀತಿಸಿ ಮದುವೆಯಾಗಿ ಎರಡು ಮಕ್ಕಳಾಗಿದೆ | ಇದೀಗ ಜಾತಿ ನೆಪ ಹೇಳಿ ಬೇರೆ ಮದುವೆಯಾದ ಪತಿ Read More »

ಕಡಬ: ಕಾರುಗಳ ನಡುವೆ ಅಪಘಾತ | ಇಬ್ಬರು ಗಂಭೀರ

ಕಡಬ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಗೋಳಿತ್ತಡಿ ಕುಂಡಾಜೆ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಕಾರುಗಳೆರಡು ಜಖಂಗೊಂಡಿದೆ. ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ: ಕಾರುಗಳ ನಡುವೆ ಅಪಘಾತ | ಇಬ್ಬರು ಗಂಭೀರ Read More »

ತುಳುವ ಯುವಕರ ದನಿಯಾದ ಸಂಸದ ಪ್ರಜ್ವಲ್ ರೇವಣ್ಣ

ಹಾಸನ: ಮಂಗಳೂರಿನ ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಯಾವುದೇ ಆದ್ಯತೆ ನೀಡದೆ ಉತ್ತರ ಭಾರತದ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡ ಬಗ್ಗೆ ಆಕ್ರೋಶ ಹೊರಹಾಕಿರುವ ಹಾಸನ ಕ್ಷೇತ್ರದ ಯುವ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಸ್ಥಳೀಯರಿಂದ ಮತ್ತು ರಾಜ್ಯ ಸರ್ಕಾರದಿಂದ ಮಂಗಳೂರಿನಲ್ಲಿ ಭೂಮಿ ಪಡೆದು ಎತ್ತರಕ್ಕೆ ಬೆಳೆದಿರುವ ಸಂಸ್ಥೆ ಎಂಆರ್ಪಿಎಲ್. ತುಳುನಾಡ ಜನರ ಸಹಯೋಗದಲ್ಲಿ ಬೆಳೆದು ಇಲ್ಲಿನ ಯುವಕರನ್ನು ಎಂಆರ್ಪಿಎಲ್ ಕಡೆಗಣಿಸಿರುವುದು ಸರಿಯಲ್ಲ. ಇದು ಪ್ರಾದೇಶಿಕತೆಯ ಭಾವನೆಗೆ ದ್ರೋಹ ಮಾಡಿದೆ. ಮುಂದಿನ ನೇಮಕಾತಿ ವೇಳೆ ತುಳುನಾಡನ್ನು ಕಡೆಗಣಿಸಿದರೆ

ತುಳುವ ಯುವಕರ ದನಿಯಾದ ಸಂಸದ ಪ್ರಜ್ವಲ್ ರೇವಣ್ಣ Read More »

ಮಹಿಳೆಯರ ಮುಂದೆ ಬೆತ್ತಲಾಗಿ ಅಸಭ್ಯ ವರ್ತನೆ | ಅಪ್ಪನ ಜೊತೆ ಮಕ್ಕಳೂ ಅರೆಸ್ಟ್

ಚಾಮರಾಜನಗರ: ಕುಡಿದ ಮತ್ತಿನಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಮಹಿಳೆಯರ ಎದುರು ಬೆತ್ತಲಾದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಇಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಆತನ ಇಬ್ಬರು ಮಕ್ಕಳನ್ನೂ ಬಂಧಿಸಲಾಗಿದೆ. ಜಿಲ್ಲೆಯ ಪುನಜನೂರು ಗ್ರಾಮದ ತಾಂಡವಮೂರ್ತಿ ಎಂಬಾತ ಗ್ರಾಮದಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ಮಹಿಳೆಯ ಜೊತೆ ವಾಗ್ವಾದಕ್ಕಿಳಿದಿದ್ದ. ಈ ವೇಳೆ ಕುಡಿದಮತ್ತಿನಲ್ಲಿದ್ದ ಆತನ ಪಂಚೆ ಜಾರಿಬಿದ್ದಿದೆ. ಆ ಬಳಿಕ ಆತ ಒಳಗಿದ್ದ ಒಳ ಉಡುಪನ್ನು ಜಾರಿಸಿ ಮಹಿಳೆಯರ ಎದುರು ಅಸಭ್ಯವಾಗಿ ವರ್ತಿಸಿದ್ದಾನೆ. ಸ್ಥಳದಲ್ಲಿದ್ದ ಕೆಲವರು

ಮಹಿಳೆಯರ ಮುಂದೆ ಬೆತ್ತಲಾಗಿ ಅಸಭ್ಯ ವರ್ತನೆ | ಅಪ್ಪನ ಜೊತೆ ಮಕ್ಕಳೂ ಅರೆಸ್ಟ್ Read More »

ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ | ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ | ಕಿಡಿಕಾರಿದ ಭೋಜೇಗೌಡರಿಗೆ ಪ್ರತಿಕ್ರಿಯೆಸಿದ ಎಸ್. ಅಂಗಾರ

ಚಿಕ್ಕಮಗಳೂರು: ತನ್ನ ವಿರುದ್ಧ ಕಿಡಿಕಾರಿದ ಭೋಜೆಗೌಡರಿಗೆ, ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ. ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ ಎಂದು ಹೇಳುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಪ್ರತಿಕ್ರಿಯೆ ನೀಡಿದರು. ತಮ್ಮ ಮೇಲಿನ ಆರೋಪಕ್ಕೆ ತಾಲೂಕಿನ ಸಖರಾಯಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ಪಕ್ಷದ, ಯಾವುದೇ ಜನಪ್ರತಿನಿಧಿಯನ್ನು ಕಡೆಗಣಿಸಿಲ್ಲ. ಯಾವುದೇ ಸಭಾ ಕಾರ್ಯಕ್ರಮ ಮಾಡಿಲ್ಲ. ನನ್ನ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಬಗ್ಗೆ ಸ್ಥಳ ಪರಿಶೀಲನೆ ಮಾಡಿದ್ದೇನೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾದ ಮೇಲೆ

ಕ್ಷೇತ್ರದ ಜನ ನನ್ನನ್ನು ಆರು ಬಾರಿ ಗೆಲ್ಲಿಸಿದ್ದಾರೆ | ನಾನು ಯಾವತ್ತೂ, ಯಾರನ್ನೂ ಕಡೆಗಣಿಸಿಲ್ಲ | ಕಿಡಿಕಾರಿದ ಭೋಜೇಗೌಡರಿಗೆ ಪ್ರತಿಕ್ರಿಯೆಸಿದ ಎಸ್. ಅಂಗಾರ Read More »

ಮನೆ ಗೋಡೆ ಕುಸಿದು ಓರ್ವ ಸಾವು | ಇನ್ನೋರ್ವ ಗಂಭೀರ

ಕಾರವಾರ: ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸದಾಶಿವಘಡದ ವೈಶ್ಯವಾಡದಲ್ಲಿ ನಡೆದಿದೆ. ಹುಚ್ಚಪ್ಪ (35) ಸ್ಥಳದಲ್ಲೇ ಸಾವು ಕಂಡ ಕಾರ್ಮಿಕನಾಗಿದ್ದು, ಗೋಡೆಯ ಅಡಿಯಲ್ಲಿ ಸಿಲುಕಿಕೊಂಡಿದ್ದ ಇನ್ನೋರ್ವ ಕಾರ್ಮಿಕನನ್ನು ಅಗ್ನಿಶಾಮ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಇಂದು ಸದಾಶಿವಘಡದ ತುಳಸಿ ಬಾಯಿ ಅವರ ಮನೆಯ ದುರಸ್ತಿ ಕಾರ್ಯ ಮಾಡಲು ಕಾರ್ಮಿಕರು ತೆರಳಿದ್ದರು. ಈ ವೇಳೆ ಗೋಡೆ ಕೆಡವುವಾಗ ಘಟನೆ ನಡೆದಿದೆ. ಈ

ಮನೆ ಗೋಡೆ ಕುಸಿದು ಓರ್ವ ಸಾವು | ಇನ್ನೋರ್ವ ಗಂಭೀರ Read More »

ದಕ ದಲ್ಲಿ ವೀಕೆಂಡ್ ಕರ್ಫ್ಯೂ ಆನ್ | ಜಿಲ್ಲೆಯಲ್ಲಿ ಹೇಗಿದೆ ಕೋವಿಡ್ ಪರಿಸ್ಥಿತಿ | ಜಿಲ್ಲಾಧಿಕಾರಿ ನೀಡಿದ ಮಾಹಿತಿಯ ವಿಡಿಯೋ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಇನ್ನು ಈ ಅವಧಿಯಲ್ಲಿ ಹಾಲು, ಪತ್ರಿಕೆ, ಮೆಡಿಕಲ್ ಹಾಗೂ ತುರ್ತು ಸೇವೆಗಳಿಗಷ್ಟೇ ಅವಕಾಶವಿದೆ. ವೀಕೆಂಡ್ ಕರ್ಫ್ಯೂವಿನಲ್ಲಿ ದಿನಸಿ ಅಂಗಡಿ, ಮದ್ಯದಂಗಡಿ ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಆಗಲಿದ್ದು, ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿರಲಿದೆ.ಎಲ್ಲಾ ರಾಜ್ಯ ಮತ್ತು ಕೇಂದ್ರ ಸರಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ತುರ್ತು ಅಗತ್ಯ ಸೇವೆಗಳು ಮತ್ತು ಕೋವಿಡ್

ದಕ ದಲ್ಲಿ ವೀಕೆಂಡ್ ಕರ್ಫ್ಯೂ ಆನ್ | ಜಿಲ್ಲೆಯಲ್ಲಿ ಹೇಗಿದೆ ಕೋವಿಡ್ ಪರಿಸ್ಥಿತಿ | ಜಿಲ್ಲಾಧಿಕಾರಿ ನೀಡಿದ ಮಾಹಿತಿಯ ವಿಡಿಯೋ Read More »

ಶಿಕ್ಷಣ ಸಚಿವರೇನು ಗೆಣಸು ಕೀಳೋದಕ್ಕಿರೋದಾ? |ಆಕ್ರೋಶಭರಿತ ಪೋಷಕರಿಂದ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅವರನ್ನು ನಾರಾಯಣ ಇ-ಟೆಕ್ನೊ ಶಾಲಾ ಮಕ್ಕಳ ಪೋಷಕರು ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಶಿಕ್ಷಣ ಸಚಿವರ ಪಂಚೇಂದ್ರಿಯಗಳೇ ಸತ್ತು ಹೋಗಿದೆ. ಅವರ ತೆವಲನ್ನ ತೀರಿಸಿಕೊಳ್ಳಲು ಹೀಗೆಲ್ಲ ನಡೆದುಕೊಳ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಾಲೆಗಳ ಗುಲಾಮರಾಗಿದ್ದಾರೆ. ಶುಲ್ಕ ಸಮಸ್ಯೆ ಬಗೆಹರಿಸೊಲ್ಲ ಅಂದ್ರೆ ಸಚಿವ ಸ್ಥಾನದಲ್ಲಿ ಯಾಕಿದ್ದೀರಿ? ಸಚಿವ ಸ್ಥಾನ ನಿಭಾಯಿಸೋಕೆ ಆಗೊಲ್ಲ ಅಂದ್ರೆ ಕೆಳಗಿಳಿಯಿರಿ ಎಂದು ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಸ್ಯೆಯನ್ನ ಪೋಷಕರು ಮತ್ತು ಖಾಸಗಿ ಶಾಲೆಗಳೇ

ಶಿಕ್ಷಣ ಸಚಿವರೇನು ಗೆಣಸು ಕೀಳೋದಕ್ಕಿರೋದಾ? |ಆಕ್ರೋಶಭರಿತ ಪೋಷಕರಿಂದ ಹಿಗ್ಗಾಮುಗ್ಗಾ ತರಾಟೆ Read More »

ಮುಸ್ಲಿಂ ಯುವತಿ, ದಲಿತ ಯುವಕನ ಬರ್ಬರ ಹತ್ಯೆ ಪ್ರಕರಣ | ಕಲ್ಲು ಎತ್ತಿ ಹಾಕಿದ ಆರೋಪಿಗಳು ಅಂದರ್

ವಿಜಯಪುರ: ಮುಸ್ಲಿಂ ಯುವತಿ ಹಾಗೂ ದಲಿತ ಯುವಕನನ್ನು ಬರ್ಬರ ಹತ್ಯೆ ಮಾಡಿ, ಜಿಲ್ಲೆಯ ಸಲಾಡಹಳ್ಳಿ ಗುಡ್ಡಪ್ರದೇಶದಲ್ಲಿ ಇಬ್ಬರ ಶವನ್ನು ಎಸೆಯಲಾಗಿತ್ತು. ಇದೀಗ ಈ ಪ್ರಕರಣ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲಕೇರಿ ಠಾಣಾ ವ್ಯಾಪ್ತಿಯಲ್ಲಿ ಮೊನ್ನೆ ಮಧ್ಯಾಹ್ನ ಬಸವರಾಜ್ (19), ದಾವಲಭಿ (18) ಎಂಬ ಪ್ರೇಮಿಗಳ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಯುವತಿ ತಂದೆ ಬಂದಗಿಸಾಬ್ ತಂಬದ್ (50), ಸಹೋದರ ದಾವಲ್ ಪಟೇಲ್ (29), ಅಳಿಯರಾದ

ಮುಸ್ಲಿಂ ಯುವತಿ, ದಲಿತ ಯುವಕನ ಬರ್ಬರ ಹತ್ಯೆ ಪ್ರಕರಣ | ಕಲ್ಲು ಎತ್ತಿ ಹಾಕಿದ ಆರೋಪಿಗಳು ಅಂದರ್ Read More »

ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ

ಚಿಕ್ಕಮಗಳೂರು: ಜಿಲ್ಲಾಡಳಿತ ನನ್ನನ್ನು ನಿರ್ಲಕ್ಷ್ಯ ಮಾಡಿದೆ, ಜಿಲ್ಲಾ ಉಸ್ತುವಾರಿ ಸಚಿವರು ನನ್ನನ್ನು ಸಭೆಗಳಿಗೆ ಕರೆಯದೆ ಪ್ರೊಟೊಕಾಲ್ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿಧಾನಪರಿಷತ್ ಸದಸ್ಯ , ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತ ಪ್ರಸಂಗ ನಡೆದಿದೆ. ಜಿಲ್ಲಾಡಳಿತ ನಿರ್ಲಕ್ಷ್ಯ ಮಾಡಿದೆ. ಯಾವುದೇ ಸಭೆ -ಕಾರ್ಯಕ್ರಮಗಳಿಗೆ ಕರೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಏಕಾಂಗಿಯಾಗಿ ಕುಳಿತು ಪ್ರತಿಭಟನೆ ನಡೆಸಿದರು. ‘ಹಲವು ಬಾರಿ ಶಾಸಕರಾಗಿ, ಈಗ ಸಚಿವರಾಗಿದ್ರೂ ಜಿಲ್ಲಾ ಮಂತ್ರಿಗಳಿಗೆ ಪ್ರೊಟೋಕಾಲ್ ಏನೆಂದು ಗೊತ್ತಿಲ್ವೇ?

ಸಚಿವರಾಗಿದ್ರೂ ಅಂಗಾರರಿಗೆ ಪ್ರೋಟೋಕಾಲ್ ಗೊತ್ತಿಲ್ವೇ…? | ಕಿಡಿಕಾರಿದ ಎಂಎಲ್ ಸಿ ಭೋಜೇಗೌಡ Read More »