Editor

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ

ಬೆಂಗಳೂರು: ಖಾಸಗಿ ಕಂಪನಿಯೊಂದಕ್ಕೆ 2 ಕೋಟಿ ರೂ. ಮನನಷ್ಟ ಪರಿಹಾರ ನೀಡಲು ಮಾಜಿ ಪ್ರಧಾನ ಮಂತ್ರಿ ದೇವೇಗೌಡರಿಗೆ ನ್ಯಾಯಾಲಯ ಆದೇಶ ನೀಡಿದೆ. ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಆರೋಪವೊಂದನ್ನು ಮಾಡಿದ್ದರು. ಇದೀಗ ಅದನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರು ಕಂಪನಿಯ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದಾಗ […]

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ Read More »

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ

ವಿಜಯನಗರ: ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ Read More »

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು

”ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು” ಮಂಡ್ಯ: ಸತತ ಲಾಕ್‌ಡೌನ್‌ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು ಇಂದಿನಿಂದ ಅನ್‌ಲಾಕ್ ಮಾಡಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗ ಸೂಚಿಗಳನ್ನು ಅನುಸರಿಸದೇ ಇದ್ದರೆ ಮತ್ತೆ ಲಾಕ್‌ಡೌನ್ ಮಾಡುವುದುದಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲೆಯನ್ನು ಅನ್‌ಲಾಕ್ ಮಾಡಿರುವ ಕಾರಣ ಮಂಡ್ಯ ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಬಟ್ಟೆ, ಚಿನ್ನ, ಮೊಬೈಲ್ ಅಂಗಡಿಗಳು ಸೇರಿದಂತೆ ಇತರೆ

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು Read More »

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ

ನವದೆಹಲಿ: ಭಾರತದಲ್ಲಿ ಇನ್ನು ಎರಡರಿಂದ ನಾಲ್ಕು ತಿಂಗಳ ಅವಧಿಯೊಳಗೆ ಕೊರೋನಾ 3ನೇ ಅಲೆ ಕಾಣಿಸಿಕೊಳ್ಳಬಹುದು ಆರೋಗ್ಯ ಕ್ಷೇತ್ರದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಮೊದಲ 2 ಅಲೆಗೆ ಹೋಲಿಸಿದರೆ ಭಾರತವು 3ನೇ ಅಲೆಯನ್ನು ಹೆಚ್ಚು ಉತ್ತಮ ರೀತಿಯಲ್ಲಿ ನಿರ್ವಹಿಸಲಿದೆ ಎಂದು ಹೇಳಿದ್ದಾರೆ. ರಾಯಿಟರ್ಸ್‌ ಸುದ್ದಿ ಸಂಸ್ಥೆ ಆನ್‌ಲೈನ್‌ ಮೂಲಕ 40 ಜನ ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು, ವಿಜ್ಞಾನಿಗಳು, ಸೂಕ್ಷ್ಮಾಣುಜೀವಿ ಮತ್ತು ಸಾಂಕ್ರಾಮಿಕ ರೋಗ ತಜ್ಞರನ್ನು ಸಮೀಕ್ಷೆಗೆ ಒಳಪಡಿಸಿತ್ತು. ಈ ವೇಳೆ 3 ತಜ್ಞರು ಆಗಸ್ಟ್‌ ವೇಳೆಗೆ

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ Read More »

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ

ಮಂಗಳೂರು : ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಸೇರಿದಂತೆ ಮತ್ತಿತರ ರೋಗಗಳ ನಿಯಂತ್ರಣ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದ್ದಾರೆ. ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಮಲೇರಿಯಾ, ಡೆಂಗ್ಯೂ ನಿಯಂತ್ರಣದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಂತು ಅದರಲ್ಲಿ ಸೊಳ್ಳೆ ಉತ್ಪತ್ತಿ ಹೆಚ್ಚಾಗಿ ಮಲೇರಿಯಾ, ಡೆಂಗ್ಯೂ, ಚಿಕುಂಗುನ್ಯಾ ಸೇರಿದಂತೆ ಮತ್ತಿತರ ರೋಗಗಳು

ಸಾಂಕ್ರಾಮಿಕ ರೋಗಗಳ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ದ.ಕ ಡಿಸಿ ರಾಜೇಂದ್ರ Read More »

ಮಗುವಿಗೆ ಜ್ಚರವೆಂದು ಆಸ್ಪತ್ರೆ ಹೋಗುವ ಬದಲು ಸ್ವಾಮಿಜೀ ಬೇಟಿಯಾದ ತಾಯಿ | ಮುಂದೆ ನಡೆಯಿತು ಭಯಾನಕ ಘಟನೆ

ಚೆನ್ನೈ: ಮಗುವಿಗೆ ದೆವ್ವ ಹಿಡಿದಿರುವುದಾಗಿ ಸ್ವಾಮೀಜಿಯೊಬ್ಬ ಹೇಳಿದ ಕಾರಣಕ್ಕೆ ಜ್ವರದಿಂದ ಬಳಲುತ್ತಿರುವ ಏಳು ವರ್ಷದ ಮಗುವನ್ನು ತಾಯಿಯೇ ಹಿಗ್ಗಾಮುಗ್ಗ ಥಳಿಸಿ, ಅದಲ್ಲದೆ ಆತನಿಗೆ ನೀರು ಆಹಾರ ನೀಟದೆ ಕೊಲೆ ಮಾಡಿರುವ ಭಯಾನಕ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಾನಿಯಲ್ಲಿ ನಡೆದಿದೆ. ಬಾಲಕನಿಗೆ ಕೆಲವು ದಿನಗಳಿಂದ ಆರೋಗ್ಯ ಕೆಟ್ಟಿತ್ತು. ಮಾನಸಿಕವಾಗಿಯೂ ಆತನಿಗೆ ಏನೋ ಸಮಸ್ಯೆಯಾಗಿತ್ತು. ಆಸ್ಪತ್ರೆಗೆ ಹೋಗುವ ಬದಲು ಈ ತಾಯಿ ಸ್ವಾಮೀಜಿಯನ್ನು ಭೇಟಿಯಾಗಿದ್ದಾಳೆ. ಆತನಿಗೆ ದೆವ್ವ ಹಿಡಿದಿದೆ ಎಂದು ಆತ ಹೇಳಿದ್ದಾನೆ. ಮನೆಗೆ ಬಂದವಳೇ ಮಗನನ್ನು ಹಿಗ್ಗಾಮುಗ್ಗ

ಮಗುವಿಗೆ ಜ್ಚರವೆಂದು ಆಸ್ಪತ್ರೆ ಹೋಗುವ ಬದಲು ಸ್ವಾಮಿಜೀ ಬೇಟಿಯಾದ ತಾಯಿ | ಮುಂದೆ ನಡೆಯಿತು ಭಯಾನಕ ಘಟನೆ Read More »

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ Read More »

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ಮಗನ ತಲೆ ಕೂದಲು ತೆಗೆಸಿ ಹರಕೆಯನ್ನು ತೀರಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿಯವರು, ಪತ್ನಿ ಪ್ರಗತಿ ಹಾಗೂ ಮಗ ರನ್ವಿತ್ ಸಮೇತ ಕೊಲ್ಲೂರಿಗೆ ಭೇಟಿ ನೀಡಿ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಅನ್‌ಲಾಕ್ ಆರಂಭವಾದ ಮೊದಲ ದಿನವೇ ದೇವಾಲಯಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ ಅವರು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋ ರಿಷಬ್ ಶೆಟ್ಟಿ ಫಿಲ್ಮ್ಸ್

ಮಗನ ಕೇಶ ಅರ್ಪಿಸಿ ಕೊಲ್ಲೂರು ದೇವಿಯ ಹರಕೆ ತೀರಿಸಿದ ರಿಷಬ್ ಶೆಟ್ಟಿ Read More »

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ

ನವದೆಹಲಿ: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್. ಎಲ್ಲರೂ ಇದೇ ಹಾದಿಯಲ್ಲಿ ಸಾಗುತ್ತಾರೆ. ಸಣ್ಣ-ಪುಟ್ಟ ವಿಚಾರಗಳನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನನ್ನ ಹೆಸರನ್ನು ಯಾರೂ ಹೇಳಬಾರದು. ಸದ್ಯ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಬೇಕು. ಕೊರೊನಾ ಸಮಯದಲ್ಲಿ ಜನರನ್ನು

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ Read More »

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!?

ಉತ್ತರ ಪ್ರದೇಶ: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಕ್ಕಳು ಮತ್ತು ಅಸಹಾಯಕರನ್ನು ಆಮಿಷ ಒಡ್ಡಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಈ ಸಂಬಂಧ ಇಬ್ಬರನ್ನು ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ಜೂನ್ 2ರಂದು ದೆಹಲಿಯ ದಾಸನ ದ ದೇವಾಲಯಕ್ಕೆ ಇಬ್ಬರು ಅಕ್ರಮವಾಗಿ ನುಸುಳಿದ್ದರು. ಆ ಸಂಬಂಧ ಅವರಿಬ್ಬರನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸಿದಾಗ ಹಲವಾರು ಆಘಾತಕಾರಿ ಅಂಶಗಳು ಹೊರಬಂದಿವೆ. ಬಂಧಿತರನ್ನು ಜಂಹಗೀರ್ ಹಾಗೂ ಉಮರ್ ಗೌತಮ್ ಎಂದು ಗುರುತಿಸಲಾಗಿದೆ. ಇದರಲ್ಲಿ ಉಮರ್ ಗೌತಮ್

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!? Read More »