Editor

ಜನನಾಂಗವಿಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷಗಳಲ್ಲಿ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ನಲ್ಲಿ ವಿಚಿತ್ರ ಮಗುವೊಂದು ಜನ್ಮ ತಾಳಿದ್ದು, ವೈದ್ಯರನ್ನೇ ಅಚ್ಚರಿಗೊಳಿಸಿದೆ. ಅಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಗುವಿಗೆ ಹುಟ್ಟುವಾಗ ಜನನಾಂಗ ಮತ್ತು ಒಂದು ಕಾಲು ಇರಲಿಲ್ಲ. ಹುಬ್ಬಳ್ಳಿಯ ಹುಸೇನ್ ಸಾಬ್-ರೇಷ್ಮಾ ಬಾನು ದಂಪತಿಗೆ ಈ ವಿಚಿತ್ರ ಮಗು ಹುಟ್ಟಿದೆ. ಮಗು ಹುಟ್ಟಿದ 20 ನಿಮಿಷಕ್ಕೆ ಮೃತಪಟ್ಟಿದೆ. 7 ತಿಂಗಳಲ್ಲಿ ರೇಷ್ಮಾ ಬಾನುವಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯ ಮೊದಲು ರೇಶ್ಮಾ […]

ಜನನಾಂಗವಿಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷಗಳಲ್ಲಿ ಸಾವು Read More »

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಪಿಂಡಪ್ರದಾನ ಮಾಡಿದ ಜಿಲ್ಲಾಡಳಿತ

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಮೋಕ್ಷಕ್ಕೆ ದ.ಕ. ಜಿಲ್ಲಾಡಳಿತದ ವತಿಯಿಂದ ತಿಲಹೋಮ ಮತ್ತು ಪಿಂಡ ಪ್ರದಾನ ಕಾರ್ಯಕ್ರಮ ಸೋಮೇಶ್ವರದ ಸೋಮನಾಥೇಶ್ವರ ದೇವಾಲಯದಲ್ಲಿ ನಡೆಯಿತು. ಸ್ಥಳೀಯ ಅರ್ಚಕರಾದ ಶಂಕರ್ ಅಡಿಗ ಅವರ ಮಾರ್ಗದರ್ಶನದಲ್ಲಿ ಮೃತರ ಪರವಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ವಿಧಿವಿಧಾನಗಳನ್ನು ನೆರವೇರಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಸೋಮೇಶ್ವರ ಸಮುದ್ರಕಿನಾರೆಯಲ್ಲಿ ಪಿಂಡಪ್ರದಾನ ಮಾಡಿದರು. ದ ಕ ಜಿಲ್ಲಾಸ್ಪತ್ರೆಯಲ್ಲಿ 12 ಜನ ಅನಾಥರು ಕೊರೋನಾಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರೆಲ್ಲರ ಅಂತ್ಯಸಂಸ್ಕಾರ

ಸೋಮೇಶ್ವರ: ಕೋವಿಡ್ ನಿಂದ ಮೃತಪಟ್ಟ 12 ಜನ ಅನಾಥರ ಪಿಂಡಪ್ರದಾನ ಮಾಡಿದ ಜಿಲ್ಲಾಡಳಿತ Read More »

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಮೂವರು ಸಾವು

ತಮಿಳುನಾಡು: ದೇಶದಲ್ಲೇ ಅತೀ ಹೆಚ್ಚು ಪಟಾಕಿ ಉತ್ಪಾದಿಸುವ ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಶಿವಕಾಶಿಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದ್ದು, ಕಾರ್ಖಾನೆ ಸುಟ್ಟು ಕರಕಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಮೂವರು ಸಾವು Read More »

ಗೋ ಸಾಗಾಟದ ಟೆಂಪೋ ಹರಿಸಿ ಗೋ ರಕ್ಷಕನ ಹತ್ಯೆ

ಗುಜರಾತ್: ಗೋ ರಕ್ಷಕನ ಮೇಲೆ ಗೋಸಾಗಾಟದ ಟೆಂಪೋ ಹರಿಸಿ ಹತ್ಯೆ ಮಾಡಿದ ಘಟನೆ ರಾಜ್ಯದ ಅಹಮದಬಾದ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಹಾರ್ದಿಕ್ ಕನ್ಸರ್ (29) ಎಂದು ಗುರುತಿಸಲಾಗಿದೆ. ಕಳೆದ ಶುಕ್ರವಾರ ಧರಾಂಪುರ- ವಲ್ಸಾದ್ ಹೆದ್ದಾರಿಯಲ್ಲಿ ಟೆಂಪೋ ಒಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಹಾರ್ದಿಕ್ ಗೆ ಸಿಕ್ಕಿದೆ. ತಕ್ಷಣ ಕಾರ್ಯಪ್ರವ್ರತರದ ಹಾರ್ದಿಕ್ ಮತ್ತು ಆತನ ಇಬ್ಬರು ಸ್ನೇಹಿತರು ಬಾಮ್’ಕ್ರೀಕ್ ಸೇತುವೆವ ಮೇಲೆ ತಮ್ಮ ಲಾರಿಯೊಂದನ್ನು ಅಡ್ಡ ನಿಲ್ಲಿಸಿದ್ದರು. ಗೋಸಾಗಾಟದ ಲಾರಿ ಬರುತ್ತಿದ್ದಂತೆ ಹಾರ್ದಿಕ್ ಅದರ

ಗೋ ಸಾಗಾಟದ ಟೆಂಪೋ ಹರಿಸಿ ಗೋ ರಕ್ಷಕನ ಹತ್ಯೆ Read More »

ಮೂವರು ಲಷ್ಕರ್-ಎ -ತಾಯ್ಬ ಉಗ್ರರನ್ನು ಸದೆಬಡಿದ ಸೇನೆ

ಬರಾಮುಲ್ಲ: ಲಷ್ಕರ್ -ಇ- ತಾಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಸೇನೆ ಇಂದು ಮುಂಜಾನೆ ಹತ್ಯೆ ಮಾಡಿದೆ. ಜಮ್ಮು-ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸುಪೋರ್ ನಲ್ಲಿ ಉಗ್ರರು ಇರುವ ಮಾಹಿತಿ ಪಡೆದ ಸೇನೆ ಯೋಜಿತ ದಾಳಿ ನಡೆಸಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ನಿನ್ನೆ ರಾತ್ರಿ ಆರಂಭವಾದ ಸೇನಾಕಾರ್ಯಾಚರಣೆ ಇಂದು ಮುಂಜಾನೆ ಉಗ್ರ ಸಂಘಟನೆಯ ಕಮಾಂಡರ್ ಮುದಾಸಿರ್ ಪಂಡಿತ್ ಹತ್ಯೆಯಾಗುವ ಮೂಲಕ ಕೊನೆಗೊಂಡಿದೆ ಎಂದು ತಿಳಿದುಬಂದಿದೆ. ಈ ಉಗ್ರರು ವಾರದ ಹಿಂದೆ ಇಬ್ಬರು ನಾಗರಿಕರು ಮತ್ತು

ಮೂವರು ಲಷ್ಕರ್-ಎ -ತಾಯ್ಬ ಉಗ್ರರನ್ನು ಸದೆಬಡಿದ ಸೇನೆ Read More »

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಲಾರಿ |ಚಾಲಕರಿಬ್ಬರು ಸಾವು ಶಂಕೆ

ಮಂಗಳೂರು: ನವಮಂಗಳೂರು ಬಂದರಿನಲ್ಲಿ ನಿನ್ನೆ ರಾತ್ರಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸಮುದ್ರಕ್ಕೆ ಇಳಿದಿದ್ದು ಚಾಲಕರಿಬ್ಬರು ಲಾರಿ ಸಹಿತ ಕಣ್ಮರೆಯಾಗಿದ್ದಾರೆ. ಎನ್ಎಂಪಿಟಿ ಯ 14ನೇ ಬರ್ತ್ ನಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ಸಂಭವಿಸಿದೆ. ಕಣ್ಮರೆಯಾದ ವರನ್ನು ಚಾಲಕ ರಾಜೇಶಾಬ್ (25) ಮತ್ತು ಬದಲಿ ಚಾಲಕ ಮಾಲಕಪ್ಪ (35) ಎಂದು ಗುರುತಿಸಲಾಗಿದೆ. ಇಬ್ಬರೂ ಚಾಲಕರು ಸಾವವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಲಾರಿಗೆ ಹಡಗಿನಿಂದ ಸರಕು ತುಂಬಿಸಲು ತರುತ್ತಿದ್ದಾಗ ಆಕಸ್ಮಿಕವಾಗಿ ಲಾರಿ ನೀರಿಗೆ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಮಂಗಳೂರು ಬಂದರಿನಲ್ಲಿ ನೀರಿಗೆ ಬಿದ್ದ ಲಾರಿ |ಚಾಲಕರಿಬ್ಬರು ಸಾವು ಶಂಕೆ Read More »

ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ

ಬೆಂಗಳೂರು: ಆರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಇದೀಗ ಲೋಕಸಭೆ ಸಚಿವಾಲಯದ ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಸೇರ್ಪಡಿಸಿ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೇಶೀಯ ಮತ್ತು ವಿದೇಶಿ ಭಾಷೆಗಳನ್ನು ಕಲಿಸಲು ಜೂ.22ರಂದು ದೆಹಲಿಯಲ್ಲಿ ಪ್ರೈಡ್‌ ಕಲಿಕಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ತೆಲುಗು, ಬಂಗಾಳಿ, ಮರಾಠಿ, ತಮಿಳು ಸೇರಿದಂತೆ ಬಹುತೇಕ ಭಾಷೆಗಳನ್ನು ಸೇರ್ಪಡೆ ಮಾಡಿ ಕನ್ನಡವನ್ನು ನಿರ್ಲಕ್ಷ್ಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಲೋಕಸಭೆ ಕನ್ನಡ ಭಾಷೆಯನ್ನು ಸೇರ್ಪಡಿಸಿಕೊಂಡಿದೆ. ಲೋಕಸಭಾ ಸಚಿವಾಲಯದ

ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ Read More »

ಯೋಗ ಕೊರೊನ ಸಂಕಷ್ಟ‌ ನಿವಾರಣೆಯ ಆಶಾಕಿರಣ- ಪ್ರಧಾನಿ ಮೋದಿ

ನವದೆಹಲಿ : ಕೊರೊನಾ ಸಂಕಷ್ಟ ತೊಲಗಿಸಲು ಯೋಗ ಆಶಾಕಿರಣವಾಗಿದೆ. ಯೋಗದಿಂದ ಜನರ ಉತ್ಸಾಹ ಪ್ರೀತಿ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದು 7 ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾಷಣ ಮಾಡಿದ ಪ್ರಧಾನಿ ಮೋದಿ, ದೇಶದ ಮೂಲೆ ಮೂಲೆಯಲ್ಲಿ ಲಕ್ಷಾಂತರ ಜನರಿಂದ ಯೋಗ ನಡೆಯುತ್ತಿದೆ. ಕೊರೊನಾದ ವಿರುದ್ಧ ಹೋರಾಡಲು ಯೋಗ ಸಹಕಾರಿಯಾಗಿದೆ. ಕೊರೊನಾದಿಂದ ಇಂದು ವಿಶ್ವವೇ ನರಳುತ್ತಿದೆ. ಹೀಗಾಗಿ ದೊಡ್ಡ ಕಾರ್ಯಕ್ರಾಮ ಆಯೋಜನೆ ಮಾಡಲಾಗುತ್ತಿಲ್ಲ.ಆದರೂ ಯೋಗ ದಿನದ ಹುಮ್ಮಸ್ಸು ಮಾತ್ರ ಕಡಿಮೆಯಾಗಲ್ಲ. ಈ ಬಾರಿಯ

ಯೋಗ ಕೊರೊನ ಸಂಕಷ್ಟ‌ ನಿವಾರಣೆಯ ಆಶಾಕಿರಣ- ಪ್ರಧಾನಿ ಮೋದಿ Read More »

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್

ನವದೆಹಲಿ: ಜೂನ್ 7 ರಂದು ಪ್ರಧಾನಿ ಮೋದಿ ಘೋಷಿಸಿದಂತೆ, ಕೋವಿಡ್ -19 ವ್ಯಾಕ್ಸಿನೇಷನ್‌ನ ಹೊಸ ಅಭಿಯಾನ ಜೂನ್ 21 ರಿಂದ ಪ್ರಾರಂಭವಾಗಲಿದ್ದು, 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆಗಳನ್ನು ನೀಡಲಾಗುವುದು. ವ್ಯಾಕ್ಸಿನೇಷನ್ ಡ್ರೈವ್‌ ನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಕೋವಿಡ್ -19 ಲಸಿಕೆಗಳನ್ನು ನೀಡಲಿದ್ದು, ಲಸಿಕೆ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಂತೆ, ರಾಜ್ಯಗಳು ಲಸಿಕೆ ಉತ್ಪಾದಕರಿಂದ ಲಸಿಕೆಗಳನ್ನು ಸಂಗ್ರಹಿಸಬೇಕಾಗಿಲ್ಲ. ಕೇಂದ್ರವು ಶೇಕಡ 75 ರಷ್ಟು ಲಸಿಕೆಗಳನ್ನು ಖರೀದಿಸಿ

ಜೂ.21ರಿಂದ ವ್ಯಾಕ್ಸಿನೇಷನ್‌ ಹೊಸ ಅಭಿಯಾನ, ಪ್ರತಿಯೊಬ್ಬರಿಗೂ ಸಿಗುತ್ತೆ ಉಚಿತ ವ್ಯಾಕ್ಸಿನ್ Read More »

ಮಾದಕ ಚೆಲುವೆಯ ಸೆಕ್ಸಿ ಶೋ | ಪಂದ್ಯವನ್ನೇ ಮರೆತ ಕ್ಯಾಮರಾಮ್ಯಾನ್ |ಹಾಡುಗಾರನಾದ ಕಮೆಂಟೇಟರ್

ಇತ್ತೆಚಿನ ದಿನಗಳಲ್ಲಿ ಪ್ರಮುಖ ಪಂದ್ಯಗಳ ವೇಳೆ ಕ್ರೀಡಾಂಗಣದಲ್ಲಿ ಸುಂದರಿಯರು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಫುಟ್ಬಾಲ್ ಪಂದ್ಯ, ಕ್ರಿಕೆಟ್ ಪಂದ್ಯಗಳ ವೇಳೆ ಕ್ಯಾಮರಾ ಮ್ಯಾನ್ ಕಣ್ಣಿಗೆ ಸುಂದರಿಯರು ಬಿದ್ದರೆ ಆದಿನ ಪಡ್ಡೆ ಹುಡುಗರಿಗೆ ಹಬ್ಬವಾಗುತ್ತದೆ. ಈ ಹಿಂದೆ ಹಲವಾರು ಸುಂದರಿಯರು ಕ್ರೀಡಾಂಗಣದ ಕ್ಯಾಮರಾ ಮ್ಯಾನ್ ಕಣ್ಣಿಗೆ ಬಿದ್ದು ಪಂದ್ಯ ನೋಡುತ್ತಿದ್ದ ಕ್ರೀಡಾಭಿಮಾನಿಗಳು ಪಂದ್ಯವನ್ನೇ ಮರೆಯುವಂತೆ ಮಾಡಿದ್ದಾರೆ. ಜೊತೆಗೆ ಸೆಲೆಬ್ರಿಟಿಗಳಾಗಿ ಮೆರೆದ್ದಾರೆ. ಐಪಿಎಲ್ ನ ಇತ್ತೀಚಿನ ಸೀಸನ್ ಗಳಲ್ಲಿ ಒಬ್ಬೊಬ್ಬ ಚೆಲುವೆಯರು ಕಾಣಿಸಿಕೊಂಡು ಯುವಕರ ಕ್ರಶ್ ಗಳಾಗಿದ್ದಾರೆ. ಅರೇಬಿಯನ್ ದೇಶದಲ್ಲಿ ನಡೆದ

ಮಾದಕ ಚೆಲುವೆಯ ಸೆಕ್ಸಿ ಶೋ | ಪಂದ್ಯವನ್ನೇ ಮರೆತ ಕ್ಯಾಮರಾಮ್ಯಾನ್ |ಹಾಡುಗಾರನಾದ ಕಮೆಂಟೇಟರ್ Read More »