ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ
ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ವೇಳೆ ಟಿಪ್ಪರೊಂದು ಮನೆಯ ಮೇಲೆ ಬಿದ್ದು ಟಿಪ್ಪರ್ ನಲ್ಲಿದ್ದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ಇಂದು ನಡೆದಿದೆ. ಟಿಪ್ಪರ್ ನಲ್ಲಿದ್ದ ವಿಠಲ್ ರವರು ಗಾಯಗೊಂಡವರು. ಇವರು ಟಿಪ್ಪರ್ ಅಡಿಗೆ ಸಿಲುಕಿದ್ದು, ಬಿ.ಸಿ.ರೋಡಿನ ವಿಜಯಲಕ್ಷ್ಮಿ ಕ್ರೇನ್ ತಕ್ಷಣ ಸ್ಥಳಕ್ಕೆ ತೆರಳಿ ಟಿಪ್ಪರನ್ನು ಮೇಲಕ್ಕೆತ್ತಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ನಾರಾಯಣ ಭಂಡಾರಿ ಅವರ ಮನೆ ಸಂಪೂರ್ಣ ಜಖಂಗೊಂಡಿದ್ದು, ಮನೆ ಮಂದಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ
ಬಂಟ್ವಾಳ: ಹಿಟಾಚಿ ಸಾಗಿಸುತ್ತಿದ್ದ ಟಿಪ್ಪರ್ ಮನೆ ಮೇಲೆ ಪಲ್ಟಿ: ಓರ್ವ ಗಂಭೀರ Read More »









