Editor

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್

ಮಂಗಳೂರು, ಜೂನ್ 06; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.“ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ, ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.ಇದು ಬಿಜೆಪಿಯ […]

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ?

ಬೆಂಗಳೂರು: ಸದ್ಯ ಕೊರೊನಾ ತಡೆಗೆ ಎಲ್ಲೆಡೆ ವ್ಯಾಕ್ಸಿನ್ ಹಾಕಲಾಗುತ್ತಿದೆ. ಅದರಂತೆ ದೇಶದ ಜನ ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ವ್ಯಾಕ್ಸಿನ್ ಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ವ್ಯಾಕ್ಸಿನ್ ಹಾಕಿಸಿಕೊಂಡವರ ಫೋಟೊವೊಂದು ವೈರಲ್ ಆಗಿದ್ದು, ತರಹೇವಾರಿ ಕವನಗಳು ಮೂಡಿ ಬರ್ತಾ ಇವೆ. ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿರುವ ಹುಡುಗ ಇಂಜೆಕ್ಷನ್ ಚುಚ್ಚುತ್ತಿರುವ ನರ್ಸನ್ನೇ ನೋಡುತ್ತಿದ್ದಾನೆ. ಯಾವ ಸೋಷಿಯಲ್ ಮೀಡಿಯಾದಲ್ಲೇ ನೋಡಿದ್ರು ಈ ಫೋಟೊ ಹರಿದಾಡ್ತಾ ಇದೆ. ಆ ಫೋಟೊ ಮೇಲೆ ಕವನಗಳ ಸುರಿಮಳೆಯೇ ಸುರಿಯುತ್ತಿದೆ. ಅದರಲ್ಲೂ ಎಷ್ಡರ ಮಟ್ಟಿಗೆ ವೈರಲ್

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ? Read More »

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ Read More »

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ

ಈ ವಾರ ನಿಮ್ಮ ರಾಶಿ ಭವಿಷ್ಯ Read More »

ಮಂಡ್ಯ, ಮೈಸೂರಿನಲ್ಲಿ ಐಎಎಸ್ ಗಂಡ ಹೆಂಡ್ತಿ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ಗೌತಮ್ ಬಗಾದಿ ನೇಮಕಗೊಂಡಿದ್ದಾರೆ.ವಿಶೇಷ ಎಂದರೆ ಅವರ ಪತ್ನಿ ಪಕ್ಕದ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಅಶ್ವಥಿ. ಈ ಹಿಂದೆಯು ಅಕ್ಕಪಕ್ಕದ ಜಿಲ್ಲೆಯಲ್ಲಿ ಐಎಎಸ್ ಗಂಡ ಹೆಂಡ್ತಿ ಕೆಲಸ ಮಾಡಿದ್ದರು. ಈ ಹಿಂದೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಶಿಖಾ ಹಾಗೂ ಅವರ ಗಂಡ ಅಜಯ್ ನಾಗಭೂಷಣ್ ಮಂಡ್ಯದಲ್ಲಿ ಜಿಲ್ಲಾಧಿಕಾರಿಯಾಗಿದ್ದರು.

ಮಂಡ್ಯ, ಮೈಸೂರಿನಲ್ಲಿ ಐಎಎಸ್ ಗಂಡ ಹೆಂಡ್ತಿ Read More »

ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ

ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ

ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ Read More »

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ?

ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ಇಳಿಕೆ ಕಂಡುಬರದ ಕಾರಣ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, “ಇನ್ನು ಮೂರ್ನಾಲ್ಕು ದಿನ

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ? Read More »

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ

ಅಹಮದಾಬಾದ್: ಕೊಡಗು ಮೂಲದ ಮಹತ್ವಾಕಾಂಕ್ಷಿ ಪೈಲಟ್ ಆಗುವ ಕನಸು ಹೊಂದಿದ್ದ ಯುವಕ ಅಹಮದಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಸೋಮವಾರಪೇಟೆ ತಾಲ್ಲೂಕಿನ ಜಂಬುರು ಗ್ರಾಮದ ಬೋಪಯ್ಯ ಮತ್ತು ಪೊನಮ್ಮ ಅವರ ಮಗ ಶಿಬಿ ಬೋಪಯ್ಯ (23) ಎಂದು ಗುರುತಿಸಲಾಗಿದೆ. ಶಿಬಿ ಯಾವಾಗಲೂ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದನು ಮತ್ತು ಅಹಮದಾಬಾದ್‌ನ ಏರೋನಾಟಿಕಲ್ ಸೆಂಟರ್‌ನಲ್ಲಿ ತನ್ನ ತರಬೇತಿ ಕೋರ್ಸ್ ಅನ್ನು ಓದುತ್ತಿದ್ದ. ದಿನಂಪ್ರತಿ ತನ್ನ ಹೆತ್ತವರ ಜೊತೆ ಫೋನಿನಲ್ಲಿ ಮಾತಾನಾಡುತ್ತಿದ್ದನು ಮತ್ತು ಗುರುವಾರ ರಾತ್ರಿ ಅವನ ಕಾಲ್ ಬಂದಿರಲಿಲ್ಲ.ಅಲ್ಲದೇ ಅವನಿಗೆ

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ Read More »