Editor

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ

ಸಮಾಚಾರ ವರದಿ: ಎಲ್ಲಾ ಬಗೆಯ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವುದು ಇಂದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಪ್ರತೀ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುವುದು. ಈಗ ನಮ್ಮ ಪರಿಸರ ಹೇಗಿದೆ, ಇದನ್ನು ರಕ್ಷಣೆ ಮಾಡದಿದ್ದರೆ ಮುಂದೇನು ಆಗುವುದು ಎಂಬ ಕಟು ವಾಸ್ತವ ಎಲ್ಲರಿಗೂ ಗೊತ್ತು. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಜಾಣ ಕುರುಡರಾಗಿ ವರ್ತಿಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಎಷ್ಟೋ ಮರ ಗಿಡಗಳನ್ನು ಕಡೆಯಲಾಗಿದೆ, ನದಿ […]

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ Read More »

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸಬೇಕೆಂಬ ಜೆಡಿಎಸ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ಈ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್‌ ಇನ್ನೂ ಸಮ್ಮತಿ ನೀಡಿಲ್ಲ. ಹೀಗಾಗಿ ದೇವೇಗೌಡರ ಬದಲು ಅಚ್ಚರಿಯ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವುದು ದೃಢಪಟ್ಟಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚೆ ನಡೆಯಲಿದೆ. ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ ಈ ಸಭೆಗೆ ಗೈರಾಗಲಿದ್ದಾರೆ. ಕೋರ್

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್ Read More »

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್‌ನಿಂದಲೇ ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಅವರ ಆಯ್ಕೆ ಆಗಿದೆ. ಕಾಂಗ್ರೆಸ್ ವರಿಷ್ಠರಿಂದಲೇ ಇಂದು ಬುಧವಾರ ಬೆಳಗ್ಗೆ ದೂರವಾಣಿ ಕರೆ ಬಂದಿದೆ. ನಾಯಕರೊಂದಿಗೆ ಮಾತನಾಡಿದ ಬಿಕೆ. ಹರಿಪ್ರಸಾದ್ ಅವರು ವರಿಷ್ಠ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೊಸ ಜವಾಬ್ದಾರಿ ನಿರ್ವಹಣೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ Read More »

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್)

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ Read More »

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ

ಸಮಗ್ರ ನ್ಯೂಸ್: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನದಲ್ಲಿ ಯಾವುದೇ ವಿಳಂಬವಿಲ್ಲ ಎಂಬ ಸಿಹಿ ಸುದ್ದಿಯನ್ನು ಹವಾಮಾನ ಇಲಾಖೆ ನೀಡಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ. ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು

ಜೂ.5ರಂದು ರಾಜ್ಯಕ್ಕೆ ಮುಂಗಾರು ಆಗಮನ Read More »

ಬಿಜೆಪಿ ತೊರೆದ ಅಣ್ಣಾಮಲೈ| ಹೊಸ ಪಕ್ಷ ಸ್ಥಾಪಿಸ್ತಾರಾ ತಮಿಳ್ ಸಿಂಗಂ!?

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾದ ಅಣ್ಣಾಮಲೈ ಮಂಗಳವಾರ (ಜೂನ್‌ 2) ರಾಜೀನಾಮೆ ಪತ್ರ ಸಲ್ಲಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಅವರಿಗೆ ಬಿಜೆಪಿಯಲ್ಲಿ ಇನ್ನು ಭವಿಷ್ಯವಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಧ್ಯಕ್ಷ ನಿತಿನ್ ನಬಿನ್ ಮತ್ತು

ಬಿಜೆಪಿ ತೊರೆದ ಅಣ್ಣಾಮಲೈ| ಹೊಸ ಪಕ್ಷ ಸ್ಥಾಪಿಸ್ತಾರಾ ತಮಿಳ್ ಸಿಂಗಂ!? Read More »

ಹವಾಮಾನ ವರದಿ| ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ| ಒಂದು ವಾರ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವೆಡೆ ಜೂನ್ 1ರಿಂದ ಒಂದು ವಾರ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ

ಹವಾಮಾನ ವರದಿ| ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ| ಒಂದು ವಾರ ಮಳೆ ಮುನ್ಸೂಚನೆ Read More »

ಐಪಿಎಲ್‌ ಕ್ರಿಕೆಟ್ ಫೈನಲ್| ಎರಡನೇ ಬಾರಿ ಕಫ್ ಎತ್ತಿದ ಆರ್ ಸಿಬಿ

ಸಮಗ್ರ ನ್ಯೂಸ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಗುಜರಾತ್ ಟೈಟನ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್

ಐಪಿಎಲ್‌ ಕ್ರಿಕೆಟ್ ಫೈನಲ್| ಎರಡನೇ ಬಾರಿ ಕಫ್ ಎತ್ತಿದ ಆರ್ ಸಿಬಿ Read More »

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ‌ಹೇಳಲಾಗಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ Read More »