Editor

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು

ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.ಈ ಘಟನೆ ನ.20ರಂದು ನಡೆದಿದೆ. ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬರು ಪ್ರಶ್ನಿಸಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಓರ್ವ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪಿಸಲಾಗಿದೆ. […]

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು Read More »

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಉಕ್ರೇನ್‌-ರಷ್ಯಾ ಸಂಘರ್ಷ ತೀವ್ರಗೊಂಡಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಪರಿಣಾಮವೆಂಬಂತೆ, ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಗುರುವಾರ ರೂಪಾಯಿ ಮೌಲ್ಯ 8 ಪೈಸೆ ಕುಸಿದು, ದಿನದ ಅಂತ್ಯಕ್ಕೆ 84.50ಕ್ಕೆ ತಲುಪಿದೆ. ಈ ಹಿಂದೆ ನ.14ರಂದು 84.46 ರೂ.ಗೆ ತಲುಪಿದ್ದೇ ದಾಖಲೆ ಆಗಿತ್ತು. ಇದೇ ವೇಳೆ, ಅದಾನಿ ಗ್ರೂಪ್‌ ವಿರುದ್ಧ ಲಂಚ ಮತ್ತು ಷೇರು ವಂಚನೆ ಆರೋಪ ಕೇಳಿಬರುತ್ತಿದ್ದಂತೆಯೇ, ಷೇರುಪೇಟೆಯಲ್ಲಿ ಸಂಚಲನ ಮೂಡಿದೆ. ಹೂಡಿಕೆದಾರರು ಏಕಾಏಕಿ ಷೇರುಗಳ ಮಾರಾಟದಲ್ಲಿ ತೊಡಗಿದ

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್ Read More »

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ

ಸಮಗ್ರ ನ್ಯೂಸ್: ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆ ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಗಾಯಗೊಂಡ ದಿವ್ಯಶ್ರೀ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು . ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ. ಸಂಜೆಯ ವೇಳೆ ತಲವಾರು ಹಿಡಿದುಕೊಂಡು ಬಂದ

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ Read More »

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು?

ಸಮಗ್ರ ನ್ಯೂಸ್: ದೇಶದ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಸ್ಥಿರವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,400 ಏರಿಕೆಯಾಗಿದ್ದು, ₹79,300 ಆಗಿದೆ. ಸ್ಟ್ಯಾಂಡರ್ಡ್‌ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹78,900 ಆಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ₹93 ಸಾವಿರ ಇದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ. ಆಭರಣ ತಯಾರಕರು ಮತ್ತು ಖರೀದಿದಾರರಿಂದ ಹೆಚ್ಚಿದ

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು? Read More »

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ

ಸಮಗ್ರ ನ್ಯೂಸ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್‌ನಲ್ಲಿ ಭಾರೀ ಬದಲಾವಣೆ ಆಗಲಿದೆ. ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಲಿದ್ಯಾರೆ. ಸದ್ಯ ಜಸ್‌ ಪ್ರೀತ್ ಬುಮ್ರಾ ಭಾರತ ಟೆಸ್ಟ್ ತಂಡದ ಉಪನಾಯಕರಾಗಿದ್ದು, ಹಾಗಾಗಿ ಇವರೇ ತಂಡವನ್ನು ಲೀಡ್ ಮಾಡಲಿದ್ದಾರೆ ಎಂದು ಟೀಮ್

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ Read More »

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: ವಾಯುವ್ಯ ಪಾಕಿಸ್ತಾನದ ಬುಡಕಟ್ಟು ಪ್ರದೇಶದಲ್ಲಿ ಗುರುವಾರ ಭಯೋತ್ಪಾದಕರು ಪ್ರಯಾಣಿಕರ ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 29 ಜನರು ಗಾಯಗೊಂಡಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮುಖ್ಯ ಕಾರ್ಯದರ್ಶಿ ನದೀಮ್ ಅಸ್ಲಂ ಚೌಧರಿ ತಿಳಿಸಿದ್ದಾರೆ. ಕುರ್ರಾಮ್ ಬುಡಕಟ್ಟು ಜಿಲ್ಲೆಯಲ್ಲಿ ಸಂಭವಿಸಿದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆ ಮತ್ತು ಮಗು ಸೇರಿದ್ದಾರೆ ಎಂದು ಚೌಧರಿ ಹೇಳಿದರು, “ಇದು ದೊಡ್ಡ ದುರಂತ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಹೇಳಿದರು.

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ Read More »

ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ| ನ. 24ರಂದು ನೇರ ಸಂದರ್ಶನ

ಉದ್ಯೋಗ: ದುಬೈನಲ್ಲಿ ಪ್ರಸಿದ್ದಿ ಪಡೆದು ಹಲವು ವರ್ಷಗಳಿಂದ ಸೇವೆ ಸಲ್ಲಿಸುತಿರುವ ಕಂಪನಿಯು ಇದೆ ಮೊದಲ ಬಾರಿಗೆ ಮಂಗಳೂರಿನಲ್ಲಿ ಉದ್ಯೋಗ ನೇರ ಸಂದರ್ಶನ ನಡೆಸಲಿದ್ದು, ಇದೇ ತಿಂಗಳ ನ. 24 ರಂದು ಮಂಗಳೂರಿನ ಹೆಸರಾಂತ ಕಂಪನಿ ನೂರ್ ಇಂಟರ್ನ್ಯಾಷನಲ್ ನ ಸಹಯೋಗದೊಂಧಿಗೆ ನಡೆಸಲಿದೆ. ಹೆಚ್ಚಿನ ವಿವರಗಳಿಗೆ ನೂರ್ international ನ ಮಂಗಳೂರು ವಿಭಾಗ ಕಚೇರಿಗೆ ಅಥವಾ ಈ ಕೆಳಗೆ ನಮೂದಿಸಿರುವ ನಂಬರ್ಗೆ (9008758055,8951428055 )ಸಂಪರ್ಕಿಸ ಬಹುದು. (ವಿ.ಸೂ: ಇಲ್ಲಿ ಪ್ರಕಟವಾಗಿರುವ ಸುದ್ದಿ ವಿಶ್ವಾಸಪೂರ್ಣವೇ ಆದರೂ ಸಮಗ್ರ ಸಮಾಚಾರ ಜವಾಬ್ದಾರಿ

ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ| ನ. 24ರಂದು ನೇರ ಸಂದರ್ಶನ Read More »

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಷಷ್ಠಿ ಮಹೋತ್ಸವಕ್ಕಂತೂ ಕಿಕ್ಕಿರಿದು ಜನ ಸೇರುತ್ತಾರೆ. ಅನೇಕ ಧಾರ್ಮಿಕ ಆಚರಣೆಗಳು, ವಿವಿಧ ಉತ್ಸವಾದಿ ಕಾರ್ಯಗಳು ಇಲ್ಲಿ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ಚಂಪಾ ಷಷ್ಠಿ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಸಿದ್ಧತೆಗಳು ಕೂಡಾ ಭರದಿಂದ ಸಾಗುತ್ತಿದೆ. ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆ ಇದೇ ಬರುವ ನ.27ರಿಂದ ಡಿ.12ರವರೆಗೆ ಶ್ರೀ ಕ್ಷೇತ್ರದಲ್ಲಿ ಅನೇಕ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯಲಿದೆ. ಷಷ್ಠಿ ಮಹೋತ್ಸವದ ಪ್ರಯುಕ್ತ ದೇಗುಲದ ಆಡಳಿತ ಮಂಡಳಿ ಭಕ್ತಾದಿಗಳಿಗೆ ಆಮಂತ್ರಣ ಪತ್ರಿಕೆಯನ್ನು ಕೂಡಾ ಬಿಡುಗಡೆ

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ Read More »

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ

ಸಮಗ್ರ ನ್ಯೂಸ್: ತಿರುಪತಿ ತಿಮ್ಮಪ್ಪ ಸ್ವಾಮಿಯ ದರ್ಶನಕ್ಕೆ ಪ್ರತಿನಿತ್ಯ ಸಾಗರೋಪಾದಿಯಲ್ಲಿ ಭಕ್ತರು ಬರುವ ಕಾರಣ ಸಾಕಷ್ಟು ಭಕ್ತರಿಗೆ ತಿಮ್ಮಪ್ಪನ ದರ್ಶನ ಆಗುವ ವೇಳೆಗೆ ಜೀವ ಬಾಯಿಗೆ ಬಂದು ಬಿಟ್ಟಿರುತ್ತದೆ. ಕೆಲವೊಮ್ಮೆ ದೇವರ ದರ್ಶನವಾಗದೆ ಹಿಂದಿರುಗಬೇಕಾಗುತ್ತದೆ. ಸದ್ಯ, ಈ ಎಲ್ಲ ಸಮಸ್ಯೆಗಳನ್ನು ಅರಿತಿರುವ ಆಂಧ್ರ ಸರ್ಕಾರ ಹೊಸದೊಂದು ತೀರ್ಮಾನಕ್ಕೆ ಬಂದಿದ್ದು, ಇದು ತಿಮ್ಮಪ್ಪನ ಭಕ್ತರಿಗೆ ತಿರುಪತಿ ಲಡ್ಡುವಿನಷ್ಟೇ ಸಿಹಿ ಸುದ್ದಿಯಾಗಲಿದೆ. ತಿರುಪತಿ ತಿಮ್ಮಪ್ಪ ದೇಗುಲದ ಆಡಳಿತ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ Read More »

ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ

ಸಮಗ್ರ ನ್ಯೂಸ್:ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಾನದ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಮಹೇಂದ್ರ ಕೊಲ್ಲಾಜೆಪಳಿಕೆ ಎಂಬವರಿಗೆ ಯಾತ್ರಾರ್ಥಿಗಳು ಹಲ್ಲೆ ನಡೆಸಿದ ಘಟನೆ ನ.20ರಂದು ನಡೆದಿದೆ. ಸ್ವಚ್ಚತಾ ಸಿಬ್ಬಂದಿಯಾದ ಮಹೇಂದ್ರ ಅವರು ತನ್ನ ಮೊಬೈಲನ್ನು ಶೌಚಾಲಯದ ಒಳಗಿಟ್ಟು, ಸ್ವಚ್ಚತೆಗೊಳಿಸುತ್ತಿದ್ದ ವೇಳೆ ಹಲ್ಲೆ ನಡೆಸಿದ್ದಾರೆ.ಅವರ ತಲೆಗೆ ಗಂಭೀರ ಏಟಾಗಿದ ಪರಿಣಾಮ ಅವರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕರೆತಂದು, ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು

ಸೌತಡ್ಕ ಮಹಾಗಣಪತಿ ಕ್ಷೇತ್ರದ ಸ್ವಚ್ಚತಾ ಸಿಬ್ಬಂದಿಯ ಮೇಲೆ ಹಲ್ಲೆ Read More »