Editor

ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ನೀಡಿದೆ. ಬಂಧನದ ಸಂದರ್ಭದಲ್ಲಿ ರೇವಣ್ಣ ಜಾಮೀನು ಕೋರಿದ್ದರು. ಅಮಾನತುಗೊಂಡ ನಾಯಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (ಎನ್) (ಪುನರಾವರ್ತಿತ ಅತ್ಯಾಚಾರ), ಸೆಕ್ಷನ್ 376 (2) (ಕೆ) (ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರ), ಸೆಕ್ಷನ್ 506 (ಕ್ರಿಮಿನಲ್ […]

ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು ನ.26ರಿಂದ ನ.30 ರ ವರೆಗೆ ನಡೆಯಲಿದೆ. ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ 25,000ಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಪ್ರಾರ್ಥನೆ ಭಜನೆ ಹಾಗೂ ಶಿವಪಂಚಾಕ್ಷರಿ ಪಠಣದೊಂದಿಗೆ ಬಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿರುವರು.

ನ.26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ| ವಿವಿಧ ಧಾರ್ಮಿಕ, ಸಾಂಸ್ಕೃತಿಕ, ವೈದಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಲಿದೆ ಕುಡುಮಪುರ Read More »

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ

ಸಮಗ್ರ ನ್ಯೂಸ್:ಅಮಾಯಕ ಯುವಕನೊಬ್ಬ ತನ್ನ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಜನರ ಪುಂಡರ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್ ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು.ಬಳಿಕ ಆತ ವಿಡಯೋದಿಂದ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ

ಬೆಳ್ತಂಗಡಿ ಮಾರುಕಟ್ಟೆಯಲ್ಲಿ ಯುವಕನ ಹಿಡಿದಿಟ್ಟು ಪ್ಯಾಂಟ್ ಹೊಲಿದ ಪುಂಡರು, ವಿಡಿಯೋ ವೈರಲ್; ಆತ್ಮಹತ್ಯೆಗೆತ್ನಿಸಿದ ಯುವಕ Read More »

ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಿ ಬಂದ ದುಡ್ಡಲ್ಲಿ ಫ್ಲಾಟ್ ಖರೀದಿಸಿದ

ಸಮಗ್ರ ನ್ಯೂಸ್:ಚೀನಾದಲ್ಲಿ ವ್ಯಕ್ತಿಯೊಬ್ಬ ಕ್ಯಾನ್ಸರ್ ಹೆಸರಿನಲ್ಲಿ ಜನರಿಂದ ದೇಣಿಗೆ ಕೇಳಿ ಹಣ ಸಂಗ್ರಹಿಸಿ ತನಗಾಗಿ ಮನೆ ಖರೀದಿಸಿದ್ದಾನೆ.ಚೀನಾದಲ್ಲಿ ವಾಸಿಸುವ 29 ವರ್ಷದ ಲ್ಯಾನ್ ಎಂಬ ವ್ಯಕ್ತಿ, ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ‌ರ್ ಅನ್ನು ಹಂಚಿಕೊಂಡಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಸಹಾಯದ ಅಗತ್ಯವಿದೆ ಎಂದು ಜನರಿಗೆ ಮನವಿ ಮಾಡಿದ್ದಾನೆ. ಕೆಲವರು ಕೈಲಾದಷ್ಟು ಸಹಾಯವನ್ನು ಮಾಡಿದ್ದಾರೆ. ಕೆಲವು ತಿಂಗಳ ನಂತರ ಅವರು ತಮ್ಮ ಮನೆಯ ಫೋಟೋವನ್ನು ಪೋಸ್ಟ್ ಮಾಡಿದರು ಮತ್ತು ಕೆಲವೇ ದಿನಗಳ ಹಿಂದೆ ಈ ಮನೆಯನ್ನು ಖರೀದಿಸಿರುವುದಾಗಿ

ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಿ ಬಂದ ದುಡ್ಡಲ್ಲಿ ಫ್ಲಾಟ್ ಖರೀದಿಸಿದ Read More »

ದೇಶಕ್ಕಾಗಿ ಹೋರಾಡಿ ಮೃತಪಟ್ಟ ಸೈನಿಕರ ದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕಿಸ್ತಾನ ಸೇನೆ!

ಸಮಗ್ರ ನ್ಯೂಸ್ : ಪಾಕಿಸ್ತಾನದ ಆಡಳಿತವು ಭಯೋತ್ಪಾದಕರ ವಿರುದ್ಧ ಹೋರಾಡಿ ಮಡಿದ ಪಾಕ್ ಸೈನಿಕರ ದೇಹಗಳನ್ನು ವಾಹನಗಳ ಬದಲಿಗೆ ಕತ್ತೆಗಳ ಮೇಲೆ ಸಾಗಿಸಿದೆ. ಪಾಕಿಸ್ತಾನಿ ಸೇನೆಯ ಉನ್ನತ ಕಮಾಂಡರ್‌ಗಳನ್ನು ಕತ್ತೆಗಳ ಮೇಲೆ ಹೊತ್ತೊಯ್ಯುವ ವಿಡಿಯೋ ಹೊರಬಿದ್ದ ನಂತರ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನದ ಪರ ಹೋರಾಡಿ ಪ್ರಾಣತೆತ್ತ ಸೈನಿಕರಿಗೆ ಅಲ್ಲಿನ ಸರ್ಕಾರ ತೋರುತ್ತಿರುವ ಅಗೌರವದ ಬಗ್ಗೆ ಟೀಕೆ ವ್ಯಕ್ತವಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ್ ಮತ್ತು ಖೈಬರ್ ಪುಂಖ್ಯಾ ಪ್ರದೇಶಗಳಲ್ಲಿ ಪಾಕಿಸ್ತಾನ ಸೇನೆಯ 100ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ. ಈ

ದೇಶಕ್ಕಾಗಿ ಹೋರಾಡಿ ಮೃತಪಟ್ಟ ಸೈನಿಕರ ದೇಹಗಳನ್ನು ಕತ್ತೆ ಮೇಲೆ ಹೊತ್ತೊಯ್ದ ಪಾಕಿಸ್ತಾನ ಸೇನೆ! Read More »

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು

ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ.ಈ ಘಟನೆ ನ.20ರಂದು ನಡೆದಿದೆ. ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬರು ಪ್ರಶ್ನಿಸಿ ವಿದ್ಯಾರ್ಥಿಗಳನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.ಓರ್ವ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.

ಕಡಬ: ವಿದ್ಯಾರ್ಥಿಗಳ ಮೇಲೇರಿ ಹೋದ ಉಪನ್ಯಾಸಕ, ಓರ್ವ ಆಸ್ಪತ್ರೆಗೆ ದಾಖಲು Read More »

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಉಕ್ರೇನ್‌-ರಷ್ಯಾ ಸಂಘರ್ಷ ತೀವ್ರಗೊಂಡಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಪರಿಣಾಮವೆಂಬಂತೆ, ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಗುರುವಾರ ರೂಪಾಯಿ ಮೌಲ್ಯ 8 ಪೈಸೆ ಕುಸಿದು, ದಿನದ ಅಂತ್ಯಕ್ಕೆ 84.50ಕ್ಕೆ ತಲುಪಿದೆ. ಈ ಹಿಂದೆ ನ.14ರಂದು 84.46 ರೂ.ಗೆ ತಲುಪಿದ್ದೇ ದಾಖಲೆ ಆಗಿತ್ತು. ಇದೇ ವೇಳೆ, ಅದಾನಿ ಗ್ರೂಪ್‌ ವಿರುದ್ಧ ಲಂಚ ಮತ್ತು ಷೇರು ವಂಚನೆ ಆರೋಪ ಕೇಳಿಬರುತ್ತಿದ್ದಂತೆಯೇ, ಷೇರುಪೇಟೆಯಲ್ಲಿ ಸಂಚಲನ ಮೂಡಿದೆ. ಹೂಡಿಕೆದಾರರು ಏಕಾಏಕಿ ಷೇರುಗಳ ಮಾರಾಟದಲ್ಲಿ ತೊಡಗಿದ

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್ Read More »

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ

ಸಮಗ್ರ ನ್ಯೂಸ್: ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆ ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಗಾಯಗೊಂಡ ದಿವ್ಯಶ್ರೀ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು . ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ. ಸಂಜೆಯ ವೇಳೆ ತಲವಾರು ಹಿಡಿದುಕೊಂಡು ಬಂದ

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ Read More »

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು?

ಸಮಗ್ರ ನ್ಯೂಸ್: ದೇಶದ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಸ್ಥಿರವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,400 ಏರಿಕೆಯಾಗಿದ್ದು, ₹79,300 ಆಗಿದೆ. ಸ್ಟ್ಯಾಂಡರ್ಡ್‌ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹78,900 ಆಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ₹93 ಸಾವಿರ ಇದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ. ಆಭರಣ ತಯಾರಕರು ಮತ್ತು ಖರೀದಿದಾರರಿಂದ ಹೆಚ್ಚಿದ

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು? Read More »

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ

ಸಮಗ್ರ ನ್ಯೂಸ್‌: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಾಳೆಯಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರೇಯಿಂಗ್ ಇಲೆವೆನ್‌ನಲ್ಲಿ ಭಾರೀ ಬದಲಾವಣೆ ಆಗಲಿದೆ. ರೋಹಿತ್ ಮತ್ತು ರಿತಿಕಾ ಜೋಡಿ 2ನೇ ಮಗುವಿಗೆ ಜನ್ಮ ನೀಡಿದ ಕಾರಣ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿದಿದ್ದು, ಟೀಮ್ ಇಂಡಿಯಾವನ್ನು ಬುಮ್ರಾ ಮುನ್ನಡೆಸಲಿದ್ಯಾರೆ. ಸದ್ಯ ಜಸ್‌ ಪ್ರೀತ್ ಬುಮ್ರಾ ಭಾರತ ಟೆಸ್ಟ್ ತಂಡದ ಉಪನಾಯಕರಾಗಿದ್ದು, ಹಾಗಾಗಿ ಇವರೇ ತಂಡವನ್ನು ಲೀಡ್ ಮಾಡಲಿದ್ದಾರೆ ಎಂದು ಟೀಮ್

ಬಾರ್ಡರ್ ಗವಾಸ್ಕರ್ ಟ್ರೋಫಿ/ ಭಾರತ ತಂಡಕ್ಕೆ ಬುಮ್ರಾ ನಾಯಕ Read More »