Editor

ಚಿಕ್ಕಮಗಳೂರು: ಗಾಂಜಾ ಮಾರಾಟ|ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸಿ.ಇ.ಎನ್. ಅಪರಾಧ ಪೊಲೀಸರು 1.26 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಫಿನಾಡಿನಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರು ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐಸ್.ಐ ರಘುನಾಥ ಎಸ್. ವಿ ಮತ್ತು ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರೀಶ ಟಿ. ಕೆ, ಧರ್ಮರಾಜ, ಹರಿಪ್ರಸಾದ, […]

ಚಿಕ್ಕಮಗಳೂರು: ಗಾಂಜಾ ಮಾರಾಟ|ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ Read More »

ಅಪ್ಪಾ.. ಅಪ್ಪಾ.. ಮೊಬೈಲ್ ಕೊಡಿಸಪ್ಪಾ ಎಂದು ಕೇಳಿದ 14 ವರ್ಷದ ಮಗನ ಕಥೆಯನ್ನೇ ಮುಗಿಸಿದ ಅಪ್ಪ!

ಸಮಗ್ರ ನ್ಯೂಸ್:ಅಪ್ಪಾ.. ಅಪ್ಪ.. ನಂಗೆ ನೀನು ಹೊಸ ಮೊಬೈಲ್ ಕೊಡಿಸಪ್ಪಾ.. ಇಲ್ಲ, ಮನೆಯಲ್ಲಿರುವ ಹಳೆಯ ಮೊಬೈಲ್ ಅನ್ನೇ ರಿಪೇರಿ ಮಾಡಿಸು ಅಪ್ಪಾ.. ಎಂದು ಕೇಳಿದ 14 ವರ್ಷದ ಮಗನನ್ನು ನಿಷ್ಕರುಣಿ ತಂದೆ, ಮಗನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಶಿನಗರದಲ್ಲಿ ನಿನ್ನೆ ತಡರಾತ್ರಿ ವೇಳೆ ಈ ನಡೆದಿದೆ. ತೇಜಸ್ (14) ತಂದೆಯಿಂದಲೇ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಗ ಆಗಿದ್ದಾನೆ. ಈ ಘಟನೆ ಕುರಿತಂತೆ ಕುಮಾರಸ್ವಾಮಿ

ಅಪ್ಪಾ.. ಅಪ್ಪಾ.. ಮೊಬೈಲ್ ಕೊಡಿಸಪ್ಪಾ ಎಂದು ಕೇಳಿದ 14 ವರ್ಷದ ಮಗನ ಕಥೆಯನ್ನೇ ಮುಗಿಸಿದ ಅಪ್ಪ! Read More »

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ!

ಸಮಗ್ರ ನ್ಯೂಸ್:ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದ್ದು, ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ. ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ! Read More »

ಮೂಲವ್ಯಾಧಿ ಸಮಸ್ಯೆ ಇದ್ಯಾ.? ಈ ಎಲೆ ಜಗಿದು ತಿನ್ನಿ, ಜೀವನದುದ್ದಕ್ಕೂ ಸಮಸ್ಯೆ ಕಾಡೋದಿಲ್ಲ

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಇಂದಿನ ಕಾಲದಲ್ಲಿ ಮೂಲವ್ಯಾಧಿಯ ಸಮಸ್ಯೆ ಹೆಚ್ಚುತ್ತಿದ್ದು, ನಿಮಗೆ ಈ ಸಮಸ್ಯೆ ಕಾಡುತ್ತಿದ್ದರೆ ನೀವು ಈ ಎಲೆಗಳನ್ನ ಅಗಿದು ತಿಂದರೆ, ನಿಮ್ಮ ಜೀವನದುದ್ದಕ್ಕೂ ಮೂಲವ್ಯಾಧಿಯ ಸಮಸ್ಯೆಗಳನ್ನ ಮತ್ತೆ ಕಾಣಿಸಿಕೊಳ್ಳುವುದಿಲ್ಲ. ನೀವು ತೊಗರಿ ಗಿಡದ ಎಲೆಗಳನ್ನ ಜಗಿದು ತಿನ್ನಬೇಕು. ಯಾಕಂದ್ರೆ, ತೊಗರಿ ಎಲೆಗಳು ಪ್ರೋಟೀನ್ ಜೊತೆಗೆ ಹೆಚ್ಚಿನ ಪ್ರಮಾಣದ ಫೈಬ‌ರ್ ಹೊಂದಿರುತ್ತವೆ. ಈ ಕಾರಣದಿಂದಾಗಿ, ಹೊಟ್ಟೆಯಲ್ಲಿ ಮಲಬದ್ಧತೆ ರೂಪುಗೊಳ್ಳುವುದಿಲ್ಲ ಮತ್ತು ಮೂಲವ್ಯಾಧಿಯ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ. ಇದು ಮಾತ್ರವಲ್ಲ, ತೊಗರಿ ಎಲೆಗಳು ಪ್ರತಿಜೀವಕ

ಮೂಲವ್ಯಾಧಿ ಸಮಸ್ಯೆ ಇದ್ಯಾ.? ಈ ಎಲೆ ಜಗಿದು ತಿನ್ನಿ, ಜೀವನದುದ್ದಕ್ಕೂ ಸಮಸ್ಯೆ ಕಾಡೋದಿಲ್ಲ Read More »

ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವು

ಸಮಗ್ರ ನ್ಯೂಸ್: 12 ವರ್ಷದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತೆಲಂಗಾಣ ಚೆನ್ನೂರು ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಚೆನ್ನೂರಿನ ಪದ್ಮನಗರ ಬಡಾವಣೆಯ ಶ್ರೀನಿವಾಸ್-ರಾಮ ದಂಪತಿ ಪುತ್ರಿ ನಿವೃತ್ತಿ(12) ಎಂದು ಗುರುತಿಸಲಾಗಿದೆ. ‌ ಈಕೆ ಚೆನ್ನೂರು ಪಟ್ಟಣದ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ಕಾರ್ತಿಕ ಹುಣ್ಣಿಮೆ ಇದ್ದ ಕಾರಣ ಶಾಲೆಗೆ ರಜೆ ನೀಡಲಾಗಿತ್ತು. ಹಬ್ಬದ ಚಟುವಟಿಕೆಯಲ್ಲಿ ನಿರತರಾಗಿದ್ದ ಮಗುವೊಂದು ದಿಢೀರ್ ಕುಸಿದು ಬಿದ್ದು, ಇದನ್ನು ಗಮನಿಸಿದ ಮನೆಯವರು ನಿವೃತಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗುವನ್ನು

ಹೃದಯಾಘಾತದಿಂದ 12 ವರ್ಷದ ಬಾಲಕಿ ಸಾವು Read More »

ಅಪ್ರಾಪ್ತ ನವಜಾತ ಶಿಶುವಿಗೆ ಜನ್ಮನೀಡಿ, ಹತ್ಯೆ ಕೇಸ್: ತಾಯಿ, ಅಜ್ಜ, ಅಜ್ಜಿ ಅರೆಸ್ಟ್

ಸಮಗ್ರ ನ್ಯೂಸ್:ಅ.17 ರಂದು ಮಡಿಕೇರಿ ತಾಲೂಕಿನ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷದ ಬಾಲಕಿಯೊಬ್ಬಳು ರಹಸ್ಯವಾಗಿ ಮಗುವಿಗೆ ಜನ್ಮ ನೀಡಿದ್ದಳು.ಮಗುವನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ನವಜಾತ ಶಿಶುವಿನ ತಾಯಿ, ಅಜ್ಜಿ ಹಾಗೂ ಅಜ್ಜನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಸೂತಿಯಾಗಿ 4 ದಿನ ಕಳೆದರೂ ನವಜಾತ ಶಿಶು ಕಂಡುಬಂದಿರಲಿಲ್ಲ. ಆಸ್ಪತ್ರೆಯಿಂದ ಆ ಶಿಶು ನಾಪತ್ತೆಯಾಗಿತ್ತು. ಮತ್ತೇ ಶಿಶುವಿನ ಮೃತದೇಹ ಗುಂಡಿಯಲ್ಲಿ ಪತ್ತೆಯಾಗಿತ್ತು.ಮೊದಲಿಗೆ ಹೆತ್ತಾಕೆಯೇ ಮಗುವನ್ನು ನಾಪತ್ತೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು. ನಂತರ ಅಜ್ಜಿಯೇ ಹೂತಿಟ್ಟಿದ್ದು

ಅಪ್ರಾಪ್ತ ನವಜಾತ ಶಿಶುವಿಗೆ ಜನ್ಮನೀಡಿ, ಹತ್ಯೆ ಕೇಸ್: ತಾಯಿ, ಅಜ್ಜ, ಅಜ್ಜಿ ಅರೆಸ್ಟ್ Read More »

ಉತ್ತರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿದುರಂತ| 10 ನವಜಾತ ಶಿಶುಗಳು ಸಾವು

ಸಮಗ್ರ ನ್ಯೂಸ್: ಉತ್ತರಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾಡ್ 9ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ಇದೆ. ಶುಕ್ರವಾರ ರಾತ್ರಿ 10.30ರ ವೇಳೆಗೆ ನವಜಾತ ಶಿಶುಗಳ ವಾರ್ಡ್‌ನಲ್ಲಿ ಸಿಲಿಂಡ‌ರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಅವಘಡದ ಕುರಿತು ಎಚ್ಚರಿಕೆ ನೀಡಬೇಕಿದ್ದ ಅಲರಾಂ ಹೊಡೆಯದೇ

ಉತ್ತರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿದುರಂತ| 10 ನವಜಾತ ಶಿಶುಗಳು ಸಾವು Read More »

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ‘ಲಕ್ಷ್ಮೀ ನಿವಾಸ’ದ ಜಾಹ್ನವಿ | ಚಿನ್ನು ಮರಿ ಚಂದನಾ ಕೈಹಿಡಿಯುವ ವರನ್ಯಾರು ಗೊತ್ತೇ?

ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ಮಿಂಚುತ್ತಿರುವ ಚಂದನಾ ಅನಂತಕೃಷ್ಣ ಮದುವೆ ಆಗುತ್ತಿದ್ದಾರೆ. ರೀಲ್‌ನಲ್ಲಿ ಮದುವೆ ಆಗಿರುವ ಚಂದನಾ ಇದೀಗ ರಿಯಲ್ ಆಗಿ ಮದುವೆ ಆಗುತ್ತಿದ್ದಾರೆ. ಚಂದನಾ ಅನಂತಕೃಷ್ಣ ಮತ್ತು ಪ್ರತ್ಯಕ್ಷ್ ಇದೇ ನವೆಂಬರ್ 28ರಂದು ಮದುವೆ ಆಗುತ್ತಿದ್ದಾರೆ. ಭಾವಿ ಪತಿ ಪ್ರತ್ಯಕ್ಷ್‌ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಹೆಸರು ಮಾಡಿದ್ದ ದಿವಂಗತ ನಟ ಉದಯ್ ಹುತ್ತಿನಗದ್ದೆ ಮತ್ತು ನಟಿ ಲಲಿತಾಂಜಲಿ

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ‘ಲಕ್ಷ್ಮೀ ನಿವಾಸ’ದ ಜಾಹ್ನವಿ | ಚಿನ್ನು ಮರಿ ಚಂದನಾ ಕೈಹಿಡಿಯುವ ವರನ್ಯಾರು ಗೊತ್ತೇ? Read More »

ಟಿ.20 ಕ್ರಿಕೆಟ್| ಭಾರತದ ವಿರುದ್ದ ಭಾರೀ ಅಂತರದಿಂದ “ಸೋತಾಫ್ರಿಕಾ”

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಜೊಹಾನ್ಸ್ ಬರ್ಗ್ ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಮತ್ತು ಅಂತಿಮ T20 ಪಂದ್ಯದಲ್ಲಿ ಭಾರತ ಸುಲಭದ ಗೆಲುವು ದಾಖಲಿಸಿದೆ. 283 ರನ್ ಗಳ ಬೃಹತ್ ಮೊತ್ತ ದಾಖಲಿಸಿದ್ದ ಭಾರತ ತಂಡ ಬ್ಯಾಟಿಂಗ್ ನಲ್ಲಿ ಮಾತ್ರವಲ್ಲ ಬೌಲಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿದೆ. 284 ರನ್ ಗಳ ಬೆಟ್ಟದಷ್ಟು ದೊಡ್ಡ ಮೊತ್ತದ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 148 ರನ್ ಗಳನ್ನಷ್ಟೇ ಸಾಧಿಸಲು ಶಕ್ತವಾಯ್ತು. ಈ ಹಿನ್ನೆಲೆ 135 ರನ್ ಗಳ

ಟಿ.20 ಕ್ರಿಕೆಟ್| ಭಾರತದ ವಿರುದ್ದ ಭಾರೀ ಅಂತರದಿಂದ “ಸೋತಾಫ್ರಿಕಾ” Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಮಧ್ಯಂತರ ಜಾಮೀನು ತಡೆಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಮ್ಮತಿ ನೀಡಿದೆ. ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್‌ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು‌ ಮಂಜೂರು ಮಾಡಿತ್ತು. ‌ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಮಧ್ಯಂತರ ಜಾಮೀನು ತಡೆಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್ Read More »