Editor

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಬ್ಯಾಂಕಿಂಗ್ ಮಾತ್ರವಲ್ಲದೆ ಶಿಕ್ಷಣ, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ವೆಂಕಟರಮಣ ಸೊಸೈಟಿಯ ಬದ್ಧತೆ ಅಭಿನಂದನಾರ್ಹ. ಈ ಸಹಕಾರ ಸಂಘದ ಆಡಳಿತ ಮಂಡಳಿಯು ಸಮಾಜದಲ್ಲಿ ಉತ್ತಮ ಕಾರ್ಯಮುಖೇನ ಜನಪ್ರಿಯವಾಗಿದೆ ಎಂದು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹೇಳಿದರು. ಅವರು ಮೂರ್ನಾಡಿನಲ್ಲಿ ನಡೆದ ಸುಳ್ಯದ ವೆಂಕಟರಮಣ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಇದರ 24ನೇ ನೂತನ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸದಾನಂದ ಕೆ.ಸಿ ವಹಿಸಿದ್ದರು. […]

ಮೂರ್ನಾಡು: ಶ್ರೀ ವೆಂಕಟರಮಣ ಸೊಸೈಟಿ ನೂತನ 24ನೇ ಶಾಖೆ ಉದ್ಘಾಟನೆ Read More »

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ

ಸಮಗ್ರ ನ್ಯೂಸ್: ಪಂಚ ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಮೇಲಾಟದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಶುಕ್ರವಾರ ‘ಸಾವಿರ ದಿನ’ ಪೂರೈಸಿದೆ. ಪಂಚ ಗ್ಯಾರಂಟಿಗಳಿಂದ ಗಲ್ಲಿಯಿಂದ ದಿಲ್ಲಿ, ನ್ಯೂಯಾರ್ಕ್‌ವರೆಗೂ ಚರ್ಚೆಯಾಗಿರುವ ಸರ್ಕಾರ ತನ್ನ ಸಾವಿರ ದಿನ ಪೂರೈಸಿದೆ. ಈ ಮೈಲುಗಲ್ಲಿನ ನೆನಪಿಗಾಗಿ ‘1001’ನೇ ದಿನವಾದ ಶನಿವಾರ ‘ಭೂ ಗ್ಯಾರಂಟಿ’ ಘೋಷಣೆ ಮಾಡುತ್ತಿದೆ. ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ

ರಾಜ್ಯ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ| ಇಂದು ಹಾವೇರಿಯಲ್ಲಿ ಬೃಹತ್ ಸಮಾವೇಶ Read More »

ಪುಲ್ವಾಮಾ ದಾಳಿ; ಮರೆಯಲಾಗದ ದುರ್ಘಟನೆಗೆ ಏಳು ವರ್ಷ

ಸಮಗ್ರ ನ್ಯೂಸ್: 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇತಾಪೋರಾ ಪ್ರದೇಶದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿ ಭಾರತವನ್ನು ದುಃಖದ ಸಾಗರದಲ್ಲಿ ಮುಳುಗಿಸಿತು. ಈ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಯ 40 ಯೋಧರು ಹುತಾತ್ಮರಾದರು. ಏಳು ವರ್ಷಗಳು ಕಳೆದರೂ ಆ ದಿನದ ಕಹಿ ನೆನಪು ಭಾರತೀಯರ ಮನಸ್ಸಿನಲ್ಲಿ ಇನ್ನೂ ಹಚ್ಚಹಳಿಯದೇ ಉಳಿದಿದೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಸಿಆರ್‌ಪಿಎಫ್ ಯೋಧರ ಕಾಫಿಲಾ ಮೇಲೆ ಸ್ಫೋಟಕಗಳಿಂದ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ

ಪುಲ್ವಾಮಾ ದಾಳಿ; ಮರೆಯಲಾಗದ ದುರ್ಘಟನೆಗೆ ಏಳು ವರ್ಷ Read More »

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ

ಸಮಗ್ರ ನ್ಯೂಸ್: ಪಿಯುಸಿ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ಕೊಟ್ಟಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಕೆ.ಎಸ್.ಆರ್.ಟಿ.ಸಿ ಉಚಿತ ಪ್ರಯಾಣ ಘೋಷಿಸಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ದಿನಗಳಂದು ಉಚಿತ ಪ್ರಯಾಣಕ್ಕೆ ಅವಕಶ ಕಲ್ಪಿಸಲಾಗುವುದು ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದವರೆಗೂ ಉಚಿತ ಬಸ್ ಪ್ರಯಾಣವಿರಲಿದೆ ಎಂದು ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ ಈ ನಿರ್ಧಾರ ಪಿಯುಸಿ ವಿದ್ಯಾಅರ್ಥಿಗಳಿಗೆ ಪರೀಕ್ಷೆಗೆ ತೆರಳುವವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಪರೀಕ್ಷೆಗೆ ತೆರಳುವ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಕೊಡುಗೆ ನೀಡಿದ ಕೆಎಸ್ಆರ್ ಟಿಸಿ Read More »

ಟಿ20 ವಿಶ್ವಕಪ್| ಆಸ್ಟ್ರೇಲಿಯಾ ಗೆದ್ದ ಜಿಂಬಾಬ್ವೆ

ಸಮಗ್ರ ನ್ಯೂಸ್: ಸಾಂಘಿಕ ಆಟದ ಪ್ರದರ್ಶನ ನೀಡಿದ ಜಿಂಬಾಬ್ವೆ ತಂಡ ಟಿ20 ವಿಶ್ವಕಪ್‌ ಟೂರ್ನಿ ಪಂದ್ಯದಲ್ಲಿ ಶುಕ್ರವಾರ ಆಸ್ಟ್ರೇಲಿಯಾ ತಂಡಕ್ಕೆ 23 ರನ್‌ಗಳಿಂದ ಆಘಾತ ನೀಡಿತು. ಇದು ಈ ವಿಶ್ವಕಪ್‌ನ ಮೊದಲ ಅಚ್ಚರಿಯ ಫಲಿತಾಂಶವಾಯಿತು. ಆರ್‌.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಬಿ ಗುಂಪಿನ ಪಂದ್ಯದಲ್ಲಿ ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಜಿಂಬಾಬ್ವೆ ತಂಡವು, ಆರಂಭ ಆಟಗಾರ ಬ್ರಯಾನ್ ಬೆನೆಟ್‌ ಅವರ ಅಜೇಯ 64 ಮತ್ತು ಇತರ ಆಟಗಾರರ ಉಪಯುಕ್ತ ಕೊಡುಗೆಗಳ ನೆರವಿನಿಂದ 2 ವಿಕೆಟ್‌ಗೆ 169 ರನ್‌ಗಳ ಉತ್ತಮ ಮೊತ್ತ ಗಳಿಸಿತು.

ಟಿ20 ವಿಶ್ವಕಪ್| ಆಸ್ಟ್ರೇಲಿಯಾ ಗೆದ್ದ ಜಿಂಬಾಬ್ವೆ Read More »

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯಾವರ ಬಳಿ ಘಟನೆ ನಡೆದಿದೆ. ಕಾರು, ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಜನ ಹಾಗೂ ಬೈಕ್ ನಲ್ಲಿದ್ದ ಬರ್ತಿದ್ದ ಸವಾರ ಸಾವನ್ನಪ್ಪಿದ್ದಾರೆ. ಮೊದಲಿಗೆ ಕ್ಯಾಂಟರ್ ಬೈಕ್​​ಗೆ ಡಿಕ್ಕಿ ಹೊಡೆದಿದೆ ನಂತರ ಕ್ಯಾಂಟರ್​ನ ಚಾರ್ಸಿ ಕಟ್ ಆಗಿದೆ. ಬಳಿಕ ಕ್ಯಾಂಟರ್​ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಹಿನ್ನಲೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ

ಭೀಕರ ಅಪಘಾತಕ್ಕೆ ಏಳು ಮಂದಿ ಬಲಿ Read More »

ಪುತ್ತೂರು: ಆನ್ ಲೈನ್ ಮೂಲಕ ವಂಚಿಸುತ್ತಿದ್ದಾತ ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರು ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ. ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ ಅವರಿಗೆ

ಪುತ್ತೂರು: ಆನ್ ಲೈನ್ ಮೂಲಕ ವಂಚಿಸುತ್ತಿದ್ದಾತ ಅರೆಸ್ಟ್ Read More »

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ

ಸಮಗ್ರ ನ್ಯೂಸ್: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿ ಅವರು ಬರೆದಿರುವ, ಕರಾವಳಿ ಕರ್ನಾಟಕದ ಮತೀಯ ಸಂಘರ್ಷದ ಕರಾಳ ಮುಖವನ್ನು ಅನಾವರಣಗೊಳಿಸುವ ‘ಕರಾವಳಿಯ ರಕ್ತ-ಕಣ್ಣೀರು’ ಕೃತಿ ಫೆ.15ರ ಭಾನುವಾರದಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಬಿಡುಗಡೆಯಾಗಲಿದೆ. ‘ಅಹರ್ನಿಶಿ ಪ್ರಕಾಶನ’ ಪ್ರಕಟಿಸಿರುವ ಈ ಕೃತಿಯು 2015 ರಿಂದ 2025ರ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮತೀಯ ಸಂಘರ್ಷಗಳು ಹಾಗೂ ಪ್ರತಿಕಾರದ ದಾಳಿಗಳಿಗೆ ಬಲಿಯಾದ ಅಮಾಯಕ ಕುಟುಂಬಗಳ ಇಂದಿನ ದಾರುಣ ಸ್ಥಿತಿಗತಿಗಳನ್ನು ದಾಖಲಿಸಲಾಗಿದೆ. ದ್ವೇಷದ ರಾಜಕಾರಣವು ಸಾಮಾನ್ಯ ಕುಟುಂಬಗಳನ್ನು ಹೇಗೆ

ಫೆ.15: ಪತ್ರಕರ್ತ ಇರ್ಷಾದ್ ಉಪ್ಪಿನಂಗಡಿಯವರ ಕೃತಿ ‘ಕರಾವಳಿಯ ರಕ್ತಕಣ್ಣೀರು’ ಬಿಡುಗಡೆ Read More »

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು

ಸಮಗ್ರ ನ್ಯೂಸ್: ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದ್ದು, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಲ್ಲಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಸ್ಥಳೀಯ

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್ ನಲ್ಲಿ ಸಾಗಿಸಿದ ಶಿಕ್ಷಕ ಅಮಾನತು Read More »

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ

ಸಮಗ್ರ ನ್ಯೂಸ್: ಆಧಾರ್ ಕಾರ್ಡ್ ತೋರಿಸಿ ಕೆಎಸ್​​ಆರ್​ಟಿಸಿ, ಬಿಎಂಟಿಸಿ ಬಸ್‌ ಹತ್ತಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ದಿನಗಳು ಇನ್ನೇನು ಮುಗಿಯಲಿವೆ. ರಾಜ್ಯದ ಮಹಿಳೆಯರಿಗೆ ಸಂಜೀವಿನಿಯಾಗಿರುವ ‘ಶಕ್ತಿ’ ಯೋಜನೆಗೆ ಇನ್ಮುಂದೆ ಕೇವಲ ಗುರುತಿನ ಚೀಟಿ ತೋರಿಸಿದರೆ ಸಾಲದು, ಸರ್ಕಾರ ನೀಡುವ ‘ಶಕ್ತಿ ಸ್ಮಾರ್ಟ್ ಕಾರ್ಡ್’ ನಿಮ್ಮ ಬಳಿ ಇರಲೇಬೇಕು. ಯೋಜನೆ ಜಾರಿಯಾದಾಗಿನಿಂದಲೂ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಫೋಟೋ ಐಡಿ ತೋರಿಸಿ ಶೂನ್ಯ ದರದ ಟಿಕೆಟ್ ಪಡೆಯುತ್ತಿದ್ದಾರೆ. ಆದರೆ, ಇದರಲ್ಲಿ ಸಾಕಷ್ಟು ಗೊಂದಲಗಳಿವೆ. ಆಧಾರ್ ಕಾರ್ಡ್‌ ಅಸ್ಪಷ್ಟವಾಗಿರುವುದು, ಫೋಟೋ

‘ಶಕ್ತಿ’ ಯೋಜನೆಯ ಉಚಿತ ಪ್ರಯಾಣಕ್ಕೆ ಬೇಕು ಸ್ಮಾರ್ಟ್ ಕಾರ್ಡ್| ಆಧಾರ್ ತೋರಿಸಿ ಪ್ರಯಾಣ ಇನ್ನಿಲ್ಲ Read More »