Editor

ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಗುಂದಿ ಗ್ರಾಮದ ಒಂಟಿ ಮನೆಗೆ ನಕ್ಸಲರು ಭೇಟಿ ನೀಡಿದ್ದಾರೆ ಎಂದು ವರದಿಯಾಗಿದ್ದು, ಗ್ರಾಮಕ್ಕೆ ನಕ್ಸಲ್ ನಿಗ್ರಹ ಪಡೆ ಅಧಿಕಾರಿಗಳು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶೃಂಗೇರಿ ಹಾಗೂ ಕೊಪ್ಪ ಗಡಿ ಭಾಗದಲ್ಲಿರುವ ಕಡೇಗುಂದಿ ಗ್ರಾಮದ ಒಂಟಿ ಮನೆಯಲ್ಲಿರುವ ಸುಬ್ಬಗೌಡ ಎಂಬುವವರ ಮನೆಗೆ ನಕ್ಸಲ್ ಚಳುವಳಿಯ ಮುಂಡಗಾರು ಲತಾ, ಜಯಣ್ಣ ಸೇರಿದಂತೆ ಇನ್ನಿಬ್ಬರು ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ನಕ್ಸಲ್ ನಿಗ್ರಹ ಪಡೆ ದಾಳಿ ನಡೆಸಿದ್ದಾರೆ. […]

ಕೊಪ್ಪ: ನಕ್ಸಲರಿಗೆ ಆಶ್ರಯ ನೀಡಿದ ಆರೋಪ| ಮೂವರ ವಿರುದ್ದ ಪ್ರಕರಣ ದಾಖಲು Read More »

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ

ಸಮಗ್ರ ನ್ಯೂಸ್: ರಿಯಲ್ ಎಸ್ಟೇಟ್ ಮಾಫಿಯಾದಿಂದ ಮನನೊಂದು ಉದ್ಯಮಿಯೊಬ್ಬರು ಪತ್ನಿಯೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣದ ಬೈಲಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಗಿನ ಕುಶಾಲನಗರದಲ್ಲಿ ಉದ್ಯಮ ನಡೆಸುತ್ತಿದ್ದ ಕೊಪ್ಪ ನಿವಾಸಿ ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಆತ್ಮಹತ್ಯೆಗೆ ಶರಣಾದವರು. ಸುರೇಶ್ ತನ್ನ ಪತ್ನಿಯನ್ನು ಬುಧವಾರ ದೇವಸ್ಥಾನಕ್ಕೆಂದು ಕರೆದೊಯ್ದಿದ್ದರು. ಆದರೆ ಕಾವಲ್ ನ ಜಮೀನಿನ ಹಳೇಯ ಖಾಲಿ ಮನೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಮಾಫಿಯಾ ಕಿರುಕುಳದಿಂದ ನೊಂದು

ಮಡಿಕೇರಿ: ರಿಯಲ್ ಎಸ್ಟೇಟ್ ‌ಮಾಫಿಯಾ ಕಿರುಕುಳ| ಆತ್ಮಹತ್ಯೆಗೆ ಶರಣಾದ ಉದ್ಯಮಿ ದಂಪತಿ Read More »

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ₹ 605 ಕೋಟಿ ಲಾಭಾಂಶ ವಿತರಣೆ

ಸಮಗ್ರ ನ್ಯೂಸ್: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ (ಎಸ್ಕೆಡಿಆರ್ಡಿಪಿ) ಸ್ವಸಹಾಯ ಸಂಘಗಳ ಸದಸ್ಯರಿಗೆ ಒಟ್ಟು ₹ 605 ಕೋಟಿ ಲಾಭಾಂಶ ವಿತರಿಸಲಾಯಿತು. ಧರ್ಮಸ್ಥಳದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ‌ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್ ಅವರು, ಬೆಳ್ತಂಗಡಿಯ ಧನ್ಯಶ್ರೀ ಸಂಘ, ಕುಂದಾಪುರದ ಶ್ರೀನಿಧಿ ಸಂಘ, ಹೊಸಪೇಟೆಯ ಶ್ರೀಶಂಕರ ಸಂಘ, ಆನೇಕಲ್ ನ ಅಪೂರ್ವ ಸಂಘ, ಖಾನಾಪುರದ ಅಹದ್ ಸಂಘ, ಹಾಸನದ ರೋಶನ್ ಸಂಘಗಳ ಸದಸ್ಯರಿಗೆ ಲಾಭಾಂಶದ ಚೆಕ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ‘ಹಿಂದೆ ಗ್ರಾಮೀಣಾಭಿವೃದ್ಧಿ ಎಂಬುದು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ₹ 605 ಕೋಟಿ ಲಾಭಾಂಶ ವಿತರಣೆ Read More »

16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ! ಯಾರಿಗೂ ಕಾಣದಂತೆ

ಸಮಗ್ರ ನ್ಯೂಸ್:ಇತ್ತೀಚೆಗಷ್ಟೇ ತೆಲಂಗಾಣ ಮೂಲದ ಪ್ರಿಯಕರನೊಬ್ಬ 16 ಲಕ್ಷ ರೂ. ಹಣದ ದಾಹಕ್ಕೆ ತಾನು ಇಷ್ಟಪಟ್ಟು ಪ್ರೀತಿಸಿದ ಹುಡುಗಿಯನ್ನೇ ಬರ್ಬರವಾಗಿ ಹತ್ಯೆಗೈದಿದ್ದಾನೆ. ಪ್ರಿಯಕರನ ಮೋಸದ ಜಾಲಕ್ಕೆ ತುತ್ತಾದ 30 ವರ್ಷದ ಸ್ವಾತಿ, 20 ತುಂಡಾಗಿ ಭೂಮಿ ಸೇರಿದ ಘಟನೆ ಸ್ಥಳೀಯ ನಿವಾಸಿಗಳನ್ನು ಬೆಚ್ಚಿಬೀಳಿಸಿದೆ. ಈ ಘಟನೆ ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಜೂಲುರುಪಾಡು ಮಂಡಲದ ಕೊಮ್ಮುಗುಡೆಂನಲ್ಲಿ ಸಂಭವಿಸಿದೆ. ಆರೋಪಿ ವೀರಭದ್ರ ಮತ್ತು ಸ್ವಾತಿ ಇಬ್ಬರು ಪ್ರೇಮಿಗಳು. ಇತ್ತೀಚೆಗಷ್ಟೇ ಸಿಂಗರೇಣಿಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ ಇವರಿಬ್ಬರು, ಪತಿ-ಪತ್ನಿಯರಾದ ರತ್ನಕುಮಾರ್

16 ಲಕ್ಷ ರೂ.ಗಾಗಿ ಪ್ರೇಯಸಿಯ ದೇಹ 16 ತುಂಡು ಮಾಡಿದ ಪ್ರಿಯಕರ! ಯಾರಿಗೂ ಕಾಣದಂತೆ Read More »

ಆಟೋ ಡ್ರೈವರ್ V/S ಟೆಕ್ಕಿ: ಕನ್ನಡ ವಿಚಾರಕ್ಕೆ ಮತ್ತೆ

ಸಮಗ್ರ ನ್ಯೂಸ್:ಆಟೋ ಡ್ರೈವ‌ರ್ ಮತ್ತು ಟೆಕ್ಕಿ ನಡುವೆ ಕನ್ನಡ ವಿಚಾರಕ್ಕೆ ವಾ‌ರ್ ನಡೆದಿದೆ.ನೆಹರೂ ಅವರು ಆಧುನಿಕ ಭಾರತದ ಶಿಲ್ಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಟೋ ಡ್ರೈವರ್ ಮತ್ತು ಸಾಕ್ಷಿ ಎಂಬಾಕೆಯಿಂದ ಆಟೋದಲ್ಲಿ ಮಾತಿನ ಚಕಮಕಿ ನಡೆದಿದೆ. 80 ರಷ್ಟು ಕನ್ನಡ ಮಾತನಾಡಬೇಕು. ನೀವೆಲ್ಲಾ EXTRA ಇರೋರು ಇಲ್ಲಿ ಎಂದು ಆಟೋ ಚಾಲಕ ಹೇಳಿದ್ದಾರೆ. ನಾನು ಸಿದ್ದರಾಮಯ್ಯನನ್ನೆ ಕರುಸುತ್ತೀನಿ ಎಂದು ಆಟೋ ಚಾಲಕನ ವಾದ ಮಾಡಿದ್ದಾರೆ. ನೀವು ಅಷ್ಟೆಲ್ಲಾ ಮಾತನಾಡಬೇಡಿ ನೀಮ್ಮದು ಎಷ್ಟಿದೆ ಅಷ್ಟು ಮಾತ್ರ ನೋಡಿ ಎಂದು ಮಹಿಳೆ

ಆಟೋ ಡ್ರೈವರ್ V/S ಟೆಕ್ಕಿ: ಕನ್ನಡ ವಿಚಾರಕ್ಕೆ ಮತ್ತೆ Read More »

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್‌ ಪಾಂಗಣ್ಣಾಯಗೆ ಜಾಮೀನು ಮಂಜೂರು ಆಗಿದೆ. ಪ್ರಸಾದ್ ಪಾಂಗಣ್ಣಾಯರನ್ನು ಸೆ.19 ರಂದು ಪೋಕ್ಸೋ ಪ್ರಕರಣದಲ್ಲಿ ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದ ಆರೋಪಿಯಾಗಿರುವ ಪ್ರಸಾದ್ ಪಾಂಗಣ್ಣಾಯ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಘೋಷಣೆ ಮಾಡಿದೆ. ಆರೋಪಿಯ ಪರವಾಗಿ ಪುತ್ತೂರಿನ ಖ್ಯಾತ ವಕೀಲ ನರಸಿಂಹ

ಬೆಳ್ಳಾರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯಗೆ ಜಾಮೀನು ಮಂಜೂರು Read More »

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್!

ಸಮಗ್ರ ನ್ಯೂಸ್:(ನ.14) ಶಾಲೆಯ ಪ್ರಿನ್ಸಿಪಾಲ್ ಮಗನ ಸೇವೆ ಮಾಡಲಿಲ್ಲವೆಂದು 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಬೆತ್ತದಿಂದ ಹಲ್ಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಂಡಿಬೆಲೆ ರಸ್ತೆಯಲ್ಲಿರುವ ವಿಸ್ಲಂ ಅಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಪಟ್ಟಣದ ಪ್ರಭಾವತಿ ಹಾಗೂ ಆಂಜಿನಪ್ಪ ದಂಪತಿಯ ಪುತ್ರಿಯಾಗಿರುವ ಭವ್ಯ ವಿದ್ಯಾರ್ಥಿನಿ,ಶಾಲೆಯ ಪ್ರಿನ್ಸಿಪಲ್ ಉಷಾಕಿರಣ್ ಗೆ ವಿಕಲಚೇತನ ಮಗನಿದ್ದಾನೆ. ಅದೇ ಶಾಲೆಯಲ್ಲಿ ಮಗನನ್ನು ನೋಡಿಕೊಳ್ಳಲು ಕೇರ್ ಟೇಕರ್ ಆಗಿ ಮಹಿಳೆಯನ್ನ ನೇಮಿಸಿಕೊಂಡಿದ್ದ ಪ್ರಿನ್ಸಿಪಾಲ್. ಆದರೆ ಆ ಮಹಿಳೆಗೆ ವಿದ್ಯಾರ್ಥಿನಿ ಭವ್ಯ ಸಹಕಾರ

ಮಕ್ಕಳ ದಿನಾಚರಣೆಯಂದೇ ಹೀನಾಯ ಕೃತ್ಯ; ಮಗನ ಸೇವೆ ಮಾಡದ್ದಕ್ಕೆ ವಿದ್ಯಾರ್ಥಿನಿಗೆ ಥಳಿಸಿದ ಪ್ರಿನ್ಸಿಪಾಲ್! Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ..

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್ ಗಳ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಮೊದಲನೇ ಬಹುಮಾನ ವೀಕ್ಷಿತ ಉಪ್ಪಿನಂಗಡಿ (ಸೋಫಾ ಸೆಟ್) ಕೂಪನ್ ನಂ.4589,ಎರಡನೇ ಬಹುಮಾನ ಹಸೀನಾ ಚಿಕ್ಕಮಗಳೂರು (ವಾಟರ್ purifier) ಕೂಪನ್ ನಂ.4375, ಮೂರನೇ ಬಹುಮಾನ ಸಮಂತ ಕಲ್ಲಡ್ಕ (ಸ್ಟಾಂಡ್ ಫ್ಯಾನ್) ಕೂಪನ್ ನಂ.4334, ಕೂಪನ್ ನಂ.2745, (consolation cooker 3L )ಅನಾಗ ಕಾಮತ್ ಪುತ್ತೂರು ಕೂಪನ್ ನಂ. 4492, ಪ್ರೈಸ್ ಮಾಲತಿ

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಐದನೇ ವೀಕ್ ಡ್ರಾ ವಿಜೇತರ ಪಟ್ಟಿ ಇಲ್ಲಿದೆ ನೋಡಿ.. Read More »

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ

ಸಮಗ್ರ ನ್ಯೂಸ್:ಮಗನ ಸಾವಿನ ಕುರಿತು ತಾಯಿ ಸಂಶಯ ವ್ಯಕ್ತಪಡಿಸಿ ದೂರು ನೀಡಿದ್ದು, ಹೂತಿದ್ದ ಶವವನ್ನು ಪರೀಕ್ಷೆಗಾಗಿ ಹೊರತೆಗೆಯುವ ಪ್ರಕ್ರಿಯೆ ಜಿಲ್ಲೆಯ ನವಲಗುಂದ ತಾಲ್ಲೂಕಿನ ಯಮನೂರಿನ ಸ್ಮಶಾನಗಟ್ಟಿಯಲ್ಲಿ ನಡೆಯುತ್ತಿದೆ.ತಹಶೀಲ್ದಾರ್ ಸುಧೀರ್ ಸಾಹುಕಾರ್, ಪಿಎಸ್‌ಐ ಜನಾರ್ದನ ಭಟ್ರಳ್ಳಿ ಸ್ಥಳದಲ್ಲಿ ಇದ್ದಾರೆ. ಮಗ ಯಲ್ಲಪ್ಪ (3) ಸಾವು ಸಹಜವಲ್ಲ, ಪಕ್ಕದ ಮನೆಯವರು ಕೊಲೆ ಮಾಡಿರಬಹುದು ಎಂದು ತಾಯಿ ಶಾಂತಾ ಅವರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಇನ್‌ಕ್ವೆಸ್ಟ್ ಪಂಚನಾಮೆ, ಪರೀಕ್ಷೆ ಶವ ಹೊರತೆಗೆಯಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಯಮನೂರಿನ ವೆಂಕಪ್ಪ ಮತ್ತು ಶಾಂತಾ

3 ವರ್ಷದ ಮಗನ ಸಾವು; ಸಂಶಯ ವ್ಯಕ್ತಪಡಿಸಿದ ತಾಯಿ: ಪರೀಕ್ಷೆಗೆ ಹೂತಿದ್ದ ಶವ ಹೊರಕ್ಕೆ Read More »

ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಏಕಾಏಕಿ ಸ್ಫೋಟ

ಸಮಗ್ರ ನ್ಯೂಸ್:ಮಹಾರಾಷ್ಟ್ರದ ಜಲ್ಲಾಂವ್‌ನ ಜಿಲ್ಲೆಯಲ್ಲಿ ಅಂಬ್ಯುಲೆನ್ಸ್‌ಗೆ ಬೆಂಕಿ ತಗುಲಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಅಂಬ್ಯುಲೆನ್ಸ್ ಸ್ಫೋಟಗೊಂಡಿದ್ದು, ಅದರಲ್ಲಿದ್ದ ಗರ್ಭಿಣಿ ಮತ್ತು ಅವರ ಕುಟುಂಬ ಭಾರೀ ದುರಂತದಿಂದ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾರೆ. ಸ್ಫೋಟದ ಪರಿಣಾಮದಿಂದಾಗಿ ಹತ್ತಿರದ ಮನೆಗಳ ಕಿಟಕಿಗಳು ಸಹ ಛಿದ್ರಗೊಂಡಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಪ್ರಾಣಹಾನಿ ಸಂಭವಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.ಅಂಬ್ಯುಲೆನ್ಸ್‌ನಲ್ಲಿ ಗರ್ಭಿಣಿ ಮತ್ತು ಅವರ ಕುಟುಂಬವನ್ನು ಎರಾಂಡೋಲ್ ಸರ್ಕಾರಿ ಆಸ್ಪತ್ರೆಯಿಂದ ಜಲ್ಲಾಂವ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಅಂಬ್ಯುಲೆನ್ಸ್ ಚಾಲಕ ತನ್ನ ವಾಹನದ

ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಏಕಾಏಕಿ ಸ್ಫೋಟ Read More »