Editor

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ

ಸಮಗ್ರ ನ್ಯೂಸ್:ನಗರದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರನೇ ಆರೋಪಿ ಫೈಸಲ್ ಎಂಬಾತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ. ಕಳೆದ ಮಾರ್ಚ್ 1ರಂದು ಕೆಫೆಗೆ ಬಂದಿದ್ದ ಶಂಕಿತನೊಬ್ಬ ಬ್ಯಾಗ್‌ನಲ್ಲಿ ತಂದಿದ್ದ ಕಚ್ಚಾ ಬಾಂಬ್ ಅನ್ನು ಕೆಫೆಯಲ್ಲಿ ಇಟ್ಟು ಪರಾರಿ ಆಗಿದ್ದ. ಗ್ರಾಹಕರು ಗಾಯಗೊಂಡಿದ್ದರು.ತನಿಖೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು, ಪಶ್ಚಿಮ ಬಂಗಾಳದಲ್ಲಿ ಶಂಕಿತ ಉಗ್ರರಾದ ಮುಸಾವೀ‌ರ್ ಹುಸೇನ್ ಶಾಜೀದ್‌ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು […]

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ Read More »

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಂದು ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ಬಸ್ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಸುಳ್ಯ – ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತಳನ್ನು ಉಬರಡ್ಕ ಗ್ರಾಮದ ನಾರಾಯಣ ಕಾಡುತೋಟ ರವರ ಮಗಳು ರಚನಾ ಎಂದು ಗುರುತಿಸಲಾಗಿದೆ. ಇನ್ನೊರ್ವ ಸಹ ಸವಾರೆ ಮೃತಳ ಸಹೋದರಿ ಸುಳ್ಯ ಜೂನಿಯ‌ರ್ ಕಾಲೇಜ್ ವಿದ್ಯಾರ್ಥಿನಿ ಅನನ್ಯ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ವಿದ್ಯಾರ್ಥಿನಿ ಪುತ್ತೂರು ವಿವೇಕಾನಂದ ಕಾಲೇಜಿನ ತೃತೀಯ ವರ್ಷದ

ಸುಳ್ಯ: ಬಸ್ – ಸ್ಕೂಟಿ ನಡುವೆ ಭೀಕರ ಅಪಘಾತ| ಕಾಲೇಜು ವಿದ್ಯಾರ್ಥಿನಿ ಮೃತ್ಯು Read More »

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ. ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ Read More »

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು?

ಸಮಗ್ರ ನ್ಯೂಸ್: ತಾಯಿ ಮತ್ತು ಮಗನ ನಡುವಿನ ಜಗಳದಿಂದ ಒಂದು ಅಹಿತಕರ ಘಟನೆ ನಡೆದಿದೆ. ಠಾಣೆಯಲ್ಲಿ ಜಗಳದ ವೇಳೆ ತಾಯಿಯ ಪ್ರಚೋದನೆಯಿಂದ ಮಗ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪಿಎಸ್‌ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್‌ಐ (PSI) ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್‌ಔಟ್ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು? Read More »

ನಾಪತ್ತೆಯಾಗಿದ್ದ ಮಹಿಳೆ 5 ವರ್ಷದ ಬಳಿಕ ಪತ್ತೆ, ಒಂದಾದ ತಾಯಿ-ಮಕ್ಕಳು

ಸಮಗ್ರ ನ್ಯೂಸ್: 5 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಆಸ್ಮಾ ಎಂಬ ಮಹಿಳೆ ಮಂಗಳೂರಿನಲ್ಲಿ ನ.8 ರಂದು ಪತ್ತೆಯಾಗಿದ್ದಾರೆ. ಮಕ್ಕಳು ಸಂತಸಗೊಂಡಿದ್ದಾರೆ. ಮೂಲತಃ ಮುಂಬೈನ ಥಾಣೆಯ ಮಂಬ್ರಿಲ್‌ನ ನಿವಾಸಿ ಆಸ್ಮಾ ಅವರು ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿದ್ದರು. ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್‌ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಆಸ್ಮಾ, 2019ರ ಮೇನಲ್ಲಿ ಮನೆಯಿಂದ ನಾಪತ್ತೆಯಾಗಿದ್ದರು. ಪತಿ ಮನೆಯಿಂದ ಮುಂಬೈನ ಬೈಕಲಾದಲ್ಲಿರುವ ತವರು ಮನೆಗೆ ರೈಲಿನಲ್ಲಿ ತೆರಳುತ್ತಿದ್ದಾಗ ಆಸ್ಮಾ ನಾಪತ್ತೆಯಾಗಿದ್ದರು.

ನಾಪತ್ತೆಯಾಗಿದ್ದ ಮಹಿಳೆ 5 ವರ್ಷದ ಬಳಿಕ ಪತ್ತೆ, ಒಂದಾದ ತಾಯಿ-ಮಕ್ಕಳು Read More »

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ

ಸಮಗ್ರ ನ್ಯೂಸ್:ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಟ್ಟೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ದಿಟ್ಟೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಪಹರಣಕ್ಕೊಳಗಾಗಿದ್ದ ಯೋಗ ಶಿಕ್ಷಕಿ ಮೂಲತಃ ದೇವನಹಳ್ಳಿ ತಾಲೂಕಿನವರು. ಮದುವೆಯಾಗಿ ಪತಿಯಿಂದ ಪ್ರತ್ಯೇಕವಾಗಿ ವಾಸವಿದ್ದರು. ಶಿಕ್ಷಕಿ ಬಳಿ ಸತೀಶ್‌ರೆಡ್ಡಿ ಯೋಗ ಕಲಿಯುವುದಕ್ಕೆ ಹೋಗುತ್ತಿದ್ದ. ನಂತರ ಗನ್ ತರಬೇತಿ ನೀಡುವುದಾಗಿ ಮನೆಗೆ ಬಂದಿದ್ದ. ಸತೀಶ್‌ರೆಡ್ಡಿ ಮಾಜಿ ಸೈನಿಕ ಎನ್ನಲಾಗಿದೆ. ಕೊಪ್ಪಳದಲ್ಲಿ ಕಾರು ಕದ್ದು

ಜೀವಂತವಾಗಿ ಹೂತುಹಾಕಿದ ಹಂತಕರು: ಸತ್ತಂತೆ ನಟಿಸಿ ಗುಂಡಿಯಿಂದ ಎದ್ದು ಬಂದ ಯೋಗ ಶಿಕ್ಷಕಿ Read More »

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸರ್ಕಾರಿ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಕಸಬದಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ನೋಂದಣಿಯಾಗಿದೆ. 2018 ರಲ್ಲಿ ವಕ್ಫ್ ಕಾನೂನು ಬಳಸಿ ಈ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಂಡಿದೆ. ಸರ್ವೆ ನಂಬರ್ 436\ 11 ರಲ್ಲಿರುವ 5.48 ಎಕರೆ ಸರಕಾರಿ ಜಾಗವನ್ನು ಪಹಣಿಪತ್ರದ ಕಾಲಂ 11 ರಲ್ಲಿ ವಕ್ಫ್ ಬೋರ್ಡ್ ಹೆಸರು ಬರೆಯಲಾಗಿರುವುದು

ದ.ಕ ಜಿಲ್ಲೆಯಲ್ಲೂ ವಕ್ಫ್ ಬೋರ್ಡ್ ನಿಂದ ಆಸ್ತಿ ಕಬಳಿಕೆ ಆರೋಪ| ವಿಟ್ಲದಲ್ಲಿ 5.48 ಎಕ್ರೆ ಸರ್ಕಾರಿ ಭೂಮಿ ನೋಂದಣಿ Read More »

ಬೆಂಗಳೂರು ಸೇರಿ ಜಿಲ್ಲೆಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಚಂಡಮಾರುತ ಪರಿಶೀಲನೆಯಿಂದ ಕರಾವಳಿ ರಾಜ್ಯಗಳಲ್ಲಿ ಮಳೆಯಾಗಲಿದೆ. ಎರಡು

ಬೆಂಗಳೂರು ಸೇರಿ ಜಿಲ್ಲೆಯಾದ್ಯಂತ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ Read More »

ಉಡುಪಿ: 22 ಮಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ಯಕ್ಷಗಾನ ಕಲಾರಂಗವು ಈ ಬಾರಿ ತೆಂಕು ಹಾಗೂ ಬಡಗುತಿಟ್ಟಿನ 22 ಯಕ್ಷಗಾನ ಕಲಾವಿದರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಎಚ್. ನಾರಾಯಣ ಶೆಟ್ಟಿ (ಉಡುಪಿ), ಪ್ರೊ. ಬಿ. ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಗೆ ದೇವದಾಸ್ ರಾವ್ (ಉಡುಪಿ), ನಿಟ್ಟೂರು ಸುಂದರ ಶೆಟ್ಟಿ-ಮಹೇಶ ಡಿ.ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಸುರೇಶ್ ಕುಪ್ಪೆಪದವು (ದಕ್ಷಿಣ ಕನ್ನಡ), ಬಿ. ಜಗಜ್ಜೀವನದಾಸ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಗೆ ಪುರಂದರ ಹೆಗಡೆ (ಶಿವಮೊಗ್ಗ), ಕೆ. ವಿಶ್ವಜ್ಞ ಶೆಟ್ಟಿ

ಉಡುಪಿ: 22 ಮಂದಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರಕಟ Read More »