Editor

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

ಸಮಗ್ರ ನ್ಯೂಸ್: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ‘ಬಾಲಿವುಡ್ ಹೀ ಮ್ಯಾನ್’ ಎಂದೇ ಖ್ಯಾತಿಯಾಗಿದ್ದ ಧರ್ಮೇಂದ್ರ ನಿಧನಕ್ಕೆ ಹಲವು ನಟರು ಕಂಬನಿ ಮಿಡಿದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಆದರೆ ಇಂದು ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಅವರ ಸಾವಿನ ವದಂತಿಗಳು […]

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ Read More »

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ

ಸಮಗ್ರ ನ್ಯೂಸ್: ಮಲಕ್ಕಾ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರ, ಬಂಗಾಲಕೊಲ್ಲಿ ಮತ್ತು ಶ್ರೀಲಂಕಾದಲ್ಲಿ ನಿಮ್ನ ಒತ್ತಡ ನಿರ್ಮಾಣಗೊಂಡಿದ್ದು, ಪಶ್ಚಿಮ ವಾಯುವ್ಯ ದಿಕ್ಕಿನತ್ತ ಸಾಗುತ್ತಿದೆ. ನ. 24ರಂದು ಇದರ ತೀವ್ರತೆ ಇನ್ನಷ್ಟು ಹೆಚ್ಚಾಗಿ ಮುಂದಿನ 48 ಗಂಟೆಗಳಲ್ಲಿ ಇದು ಚಂಡಮಾರುತವಾಗಿ ಪರಿವರ್ತನೆ ಯಾಗುವ ಸಾಧ್ಯತೆ ಇದೆ. ನಿಮ್ನ ಒತ್ತಡದ ಪರಿಣಾಮ ಮತ್ತು ಹಿಂಗಾರು ಕಾರಣದಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ರವಿವಾರವೂ ಮಳೆ

ಕರಾವಳಿಯಾದ್ಯಂತ ಕಾಡಿದ ವರುಣ| ಇಂದೂ ಮಳೆ ಮನ್ಸೂಚನೆ Read More »

ನ.23 ಕ್ಯಾಂಪ್ಕೋ‌ಗೆ ಚುನಾವಣೆ| 6 ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿ

ಸಮಗ್ರ ನ್ಯೂಸ್: ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ನಿಯಮಿತ (ಕ್ಯಾಂಪ್ಕೊ)ದ ಆಡಳಿತ ಮಂಡಳಿಯ ಚುನಾವಣೆ ನ.23ರಂದು ನಡೆಯಲಿದೆ. ಒಟ್ಟು 19 ನಿರ್ದೇಶಕ ಸ್ಥಾನಗಳಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಉಳಿದ ಆರು ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿದ್ದಾರೆ. ಕರ್ನಾಟಕ ಮತ್ತು ಕೇರಳದ ಅಡಿಕೆ ಮತ್ತು ಕೊಕ್ಕೊ ಬೆಳೆಗಾರರ ಸಂಘಟನೆಯಾಗಿರುವ ಕ್ಯಾಂಪ್ಕೊಗೆ 15 ವರ್ಷಗಳ ನಂತರ ಮತ್ತೆ ಚುನಾವಣೆ ನಡೆಯುತ್ತಿದೆ. 2010ರಲ್ಲಿ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ನಂತರದ ಎರಡು ಅವಧಿಗೆ ಎಲ್ಲ

ನ.23 ಕ್ಯಾಂಪ್ಕೋ‌ಗೆ ಚುನಾವಣೆ| 6 ಸ್ಥಾನಗಳಿಗೆ ಎಂಟು ಮಂದಿ ಕಣದಲ್ಲಿ Read More »

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಬೆಳ್ತಂಗಂಡಿಯಿಂದ ಕಾಲೇಜಿಗೆ

ಬೆಳ್ತಂಗಡಿ: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು Read More »

ಭಾರತೀಯ ನೌಕಾಪಡೆಯ ರಹಸ್ಯ ಪಾಕ್ ಗೆ ರವಾನೆ| ಉಡುಪಿಯಲ್ಲಿ ಇಬ್ಬರು ದೇಶದ್ರೋಹಿಗಳು ಅರೆಸ್ಟ್

ಸಮಗ್ರ ನ್ಯೂಸ್: ದೆಹಲಿಯಲ್ಲಿ ಕಾರು ಬಾಂಬ್ ಸ್ಫೋಟ ದುರಂತಕ್ಕೆ ಸಂಬಂಧಪಟ್ಟಂತೆ ಈಗಾಗಲೇ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಈ ಒಂದು ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿ ಹಾಗೂ ಕೆಲವು ರಹಸ್ಯಗಳನ್ನು ಕಳುಹಿಸಿರುವ ಆರೋಪದ ಮೇರೆಗೆ ಶಿಪ್ ಯಾರ್ಡ್ ನ ಇಬ್ಬರು ನೌಕರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.  ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಗಳನ್ನು ವಾಟ್ಸಪ್‌ ಹಾಗೂ ಫೇಸ್‌ಬುಕ್ ಮೂಲಕ ಅನಧಿಕೃತವಾಗಿ ಶೇರ್‌ ಮಾಡಿ, ಅಕ್ರಮ ಲಾಭ

ಭಾರತೀಯ ನೌಕಾಪಡೆಯ ರಹಸ್ಯ ಪಾಕ್ ಗೆ ರವಾನೆ| ಉಡುಪಿಯಲ್ಲಿ ಇಬ್ಬರು ದೇಶದ್ರೋಹಿಗಳು ಅರೆಸ್ಟ್ Read More »

ಮೆಕ್ಯಾನಿಕ್ ನ ಜೊತೆಗೆ ಕಾಡುಹಂದಿ ಸಖ್ಯ| ಕುದುರೆಮುಖ ಕಾಡಂಚಿನಲ್ಲೊಂದು ಅಪರೂಪದ ದೃಶ್ಯ

ಸಮಗ್ರ ನ್ಯೂಸ್: ಕುದುರೆಮುಖ ಕಾಡಂಚಿನಲ್ಲಿ ಇಡೀ ಜೀವನವನ್ನು ಪ್ರಾಣಿಗಳಿಗಾಗಿ ಮೀಸಲಿಟ್ಟಿರುವ ಮೆಕ್ಯಾನಿಕ್ ಒಬ್ಬರು, ಸದ್ದಿಲ್ಲದೆ ಅವುಗಳೊಂದಿಗೆ ಸಹಜೀವನ ನಡೆಸುತ್ತಿದ್ದಾರೆ. ಇವರ ಪ್ರೀತಿ ಅರಸಿ ಕಾಡುಹಂದಿಯೂ ನಿತ್ಯ ಬರುವುದು ವಿಶೇಷ. ಕುದುರೆಮುಖ ಎಂದರೆ ಥಟ್ಟನೆ ನೆನಪಿಗೆ ಬರುವುದು ಪಶ್ಚಿಮಘಟ್ಟಗಳ ಪರ್ವತಶ್ರೇಣಿ, ಅಲ್ಲಿದ್ದ ಅದಿರು ಕಂಪನಿ, ರಾಷ್ಟ್ರೀಯ ಉದ್ಯಾನ, ಗುಡ್ಡಗಳ ನಡುವೆ ಪ್ರಶಾಂತವಾಗಿ ಹರಿಯುವ ನದಿಗಳು. ಅದಿರು ಕಂಪನಿ ಸ್ಥಗಿತಗೊಂಡ ಬಳಿಕ ಪಾಳುಬಿದ್ದಿರುವ ಕೇಂದ್ರೀಯ ವಿದ್ಯಾಲಯ, ಆಸ್ಪತ್ರೆ ಕಟ್ಟಡ, ನೆಹರೂ ಪ್ರತಿಮೆಗಳು, ಟೌನ್‌ಶಿಪ್‌ ಇದ್ದ ವೈಭವದ ಕುರುಹುಗಳನ್ನು ಹೇಳುತ್ತವೆ. ಅಳಿದುಳಿದಿರುವ

ಮೆಕ್ಯಾನಿಕ್ ನ ಜೊತೆಗೆ ಕಾಡುಹಂದಿ ಸಖ್ಯ| ಕುದುರೆಮುಖ ಕಾಡಂಚಿನಲ್ಲೊಂದು ಅಪರೂಪದ ದೃಶ್ಯ Read More »

ಹವಾಮಾನ ವರದಿ| ಕರಾವಳಿ, ದ.ಒಳನಾಡಿನಲ್ಲಿ ಹಗುರ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆಯ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರನದೊಂದಿಗೆ ಲಘು ಪ್ರಮಾಣದಲ್ಲಿ ಮಳೆಯಾಗಬಹುದು ಎಂಬ ಮುನ್ಸೂಚನೆಯಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ

ಹವಾಮಾನ ವರದಿ| ಕರಾವಳಿ, ದ.ಒಳನಾಡಿನಲ್ಲಿ ಹಗುರ ಮಳೆ ಮುನ್ಸೂಚನೆ Read More »

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ| ಕನಿಷ್ಠ 6 ಮಂದಿ ಸಾವು

ಸಮಗ್ರ ನ್ಯೂಸ್: ಶುಕ್ರವಾರ (ನವೆಂಬರ್ 21) ಬೆಳಿಗ್ಗೆ ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. 26 ಸೆಕೆಂಡುಗಳ ಕಾಲ ಕಂಪನ ಸಂಭವಿಸಿದ್ದು, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲೂ ಪರಿಣಾಮ ಕಂಡು ಬಂದಿದೆ. ಕೋಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನ ಕೆಲವು ಭಾಗಗಳಲ್ಲಿ ಭೂಕಂಪದ ಅನುಭವವಾಗಿದ್ದು, ಜನರು ಭಯಭೀತರಾಗಿ ಕಟ್ಟಡಗಳಿಂದ ಹೊರಗೆ ಬಂಧಿದ್ದಾರೆ. ಭಾರತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬಾಂಗ್ಲಾದೇಶ ಹವಾಮಾನ ಇಲಾಖೆ ಮತ್ತು ಭಾರತದ

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ| ಕನಿಷ್ಠ 6 ಮಂದಿ ಸಾವು Read More »

ದುಬೈ ಏರ್ ಶೋ ನಲ್ಲಿ ತೇಜಸ್ ಯುದ್ಧ ವಿಮಾನ ಪತನ

ಸಮಗ್ರ ನ್ಯೂಸ್: ದುಬೈನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ‘ದುಬೈ ಏರ್ ಶೋ 2025’ರಲ್ಲಿ ಭಾರತದ ‘ತೇಜಸ್’ ಲಘು ಯುದ್ಧವಿಮಾನ ಪತನವಾಗಿದೆ. ಏರ್‌ಶೋನಲ್ಲಿ ‘ತೇಜಸ್’ ಯುದ್ಧವಿಮಾನ ಪ್ರದರ್ಶನ ನಡೆಸುತ್ತಿದ್ದಾಗ ಪತನವಾಗಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ 2:10ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಪತನದ ತಕ್ಷಣ ವಿಮಾನ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ದೂರದಿಂದಲೇ ಹೊತ್ತಿ ಉರಿಯುತ್ತಿದ್ದ ಜ್ವಾಲೆಗಳು ಮತ್ತು ದಟ್ಟವಾಗಿ ಆವರಿಸಿರುವ ಹೊಗೆ ಗೋಚರಿಸಿವೆ. ಪೈಲಟ್ ಅಪಾಯದಿಂದ ಪಾರಾಗಿದ್ದಾರೋ ಇಲ್ಲವೋ ಎಂಬುದು ಇನ್ನೂ ದೃಢಪಡಿಸಬೇಕಾಗಿದೆ. ಈ

ದುಬೈ ಏರ್ ಶೋ ನಲ್ಲಿ ತೇಜಸ್ ಯುದ್ಧ ವಿಮಾನ ಪತನ Read More »

ಕೊನೆಗೂ ಪತ್ತೆಯಾದ ದರೋಡೆ ಮಾಡಿದ ಹಣ| ಪೊಲೀಸರು ಜಪ್ತಿ ಮಾಡಿಕೊಂಡ ಹಣವೆಷ್ಟು?

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ದೊಡ್ಡ ಯಶಸ್ಸು ಸಿಕ್ಕಿದೆ. ದರೋಡೆಗಾರರು ತಮಿಳುನಾಡಿನ ಚೆನ್ನೈಗೆ ತೆರಳಿದ್ದು ತಿಳಿದುಬಂದಿದ್ದು, ಚೆನ್ನೈ ಪೊಲೀಸರು 6.3 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ದರೋಡೆಯಲ್ಲಿ ಸಿಎಂಎಸ್ (CMS) ಸೆಕ್ಯೂರಿಟಿ ಮಾಜಿ ಸಿಬ್ಬಂದಿ ಮತ್ತು ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಚೆನ್ನೈಯಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಕೇವಲ 46 ಗಂಟೆಗಳೊಳಗೆ ಈ ಯಶಸ್ಸು ಸಾಧಿಸಿದ ಕರ್ನಾಟಕ ಪೊಲೀಸ್ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

ಕೊನೆಗೂ ಪತ್ತೆಯಾದ ದರೋಡೆ ಮಾಡಿದ ಹಣ| ಪೊಲೀಸರು ಜಪ್ತಿ ಮಾಡಿಕೊಂಡ ಹಣವೆಷ್ಟು? Read More »