Editor

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ಸಮಗ್ರ ನ್ಯೂಸ್: ಹಿಜಾಬ್ ವಿರೋಧಿಸಿ ಯುವತಿಯೊಬ್ಬಳು ತನ್ನ ಬಟ್ಟೆಗಳನ್ನು ತೆಗೆದು ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅನೇಕ ದೇಶಗಳಲ್ಲಿ ಹಿಜಾಬ್‌ಗೆ ವಿರೋಧ ವ್ಯಕ್ತವಾಗಿದೆ. ಈ ಪಟ್ಟಿಯಲ್ಲಿ ಇರಾನ್‌ನ ಹೆಸರೂ ಕೂಡ ಇದೆ. ಇರಾನ್‌ನಲ್ಲಿ ಮಹಿಳೆಯರು ಹಿಜಾಬ್ ಧರಿಸುವುದನ್ನು ಬಹಳ ಹಿಂದಿನಿಂದಲೂ ವಿರೋಧಿಸಿಕೊಂಡು ಬಂದಿದ್ದಾರೆ. ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಹುಡುಗಿಯೊಬ್ಬಳು ಹಿಜಾಬ್ ವಿರುದ್ಧ ಪ್ರತಿಭಟಿಸಿದ್ದಾಳೆ. ತನ್ನ ಬಟ್ಟೆ ತೆಗೆದು ಅರೆ ಬೆತ್ತಲೆಯಲ್ಲಿ ಕುಳಿತಿರುವುದು ಕಂಡು ಬಂದಿದೆ. ಈ ವೀಡಿಯೋ ಇಸ್ಲಾಮಿಕ್ ದೇಶಗಳು ಸೇರಿದಂತೆ […]

ಹಿಜಾಬ್ ವಿರೋಧಿಸಿ ಬಟ್ಟೆ ಕಿತ್ತೆಸೆದ ಯುವತಿ| ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ Read More »

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಜಲಪಾತ ವೀಕ್ಷಣೆಗೆ ಬಂದಿದ್ದ ಛತ್ತಿಸಘಡದ ಮೂಲದ ಪ್ರವಾಸಿಗ ಜಲಪಾತದಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾನೆ. ಅಮೀತ್ ಕುಮಾರ್(30)ಮೃತ ದುರ್ದೈವಿ. ಈತ ಮೂಲತಃ ಛತ್ತಿಸಘಡದವನಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದು, ಭಾನುವಾರ ಸ್ನೇಹಿತರ ಜತೆ ಕೆಮ್ಮಣ್ಣುಗುಂಡಿ ಸಮೀಪದ ಹೆಬ್ಬೆ ಜಲಪಾತಕ್ಕೆ ತೆರಳಿದ ವೇಳೆ ಜಲಪಾತದ ಸಮೀಪ ಈಜಲು ಹೋಗಿ ಸಾವನ್ನಪ್ಪಿದ್ದಾನೆ.‌ ಘಟನೆ ಸಂಬಂಧ ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ಬೆ ಜಲಪಾತದ ಬಳಿ ಈಜಲು ಹೋಗಿ ಯುವಕ ಸಾವು Read More »

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ‘ಡಾನಾ’ ಚಂಡಮಾರುತ ಅಬ್ಬರಿಸಿ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಚಂಡಮಾರುತ ಪರಿಚಲನೆ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿದೆ. ಇದು ಏನೇನು ಅವಾಂತರ ಸೃಷ್ಟಿ ಮಾಡಲಿದೆಯೋ ಎಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ.

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ Read More »

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ಕವಿ, ಸಾಹಿತಿ, ಜ್ಯೋತಿಷಿಯಾಗಿರುವ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳ ಅವರು ಬೆಂಗಳೂರಿನ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಗಾಯಕ, ಚಿತ್ರ ನಿರ್ದೇಶಕ, ಜ್ಯೋತಿಷಿ ಮತ್ತು ಸಂಘಟಕ ಎಚ್. ಭೀಮರಾವ್ ವಾಷ್ಠರ್ ರವರು ಸುಳ್ಯದಲ್ಲಿ 22 ವರ್ಷಗಳಿಂದ ಖಾಯಂ ನೆಲೆಸಿ ಸಂಗೀತ, ಸಾಹಿತ್ಯ, ಜ್ಯೋತಿಷ್ಯ, ಚಲನಚಿತ್ರ, ಸಂಘಟನೆ, ಕಿರುಚಿತ್ರ ಮತ್ತು ಸಮಾಜಸೇವೆಗಳ ಮೂಲಕ ಜನಮಾನಸ ಗೆದ್ದಿದ್ದಾರೆ. ರಾಷ್ಟ್ರಪ್ರಶಸ್ತಿಗಳ ಜೊತೆ 25ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿ

ಸಾಹಿತಿ ಭೀಮರಾವ್ ವಾಷ್ಠರ್ ರಾಷ್ಟ್ರೀಯ ಅಹಿಂದ ಕಲಾವಿದರ ಒಕ್ಕೂಟದ ದ.ಕ. ಜಿಲ್ಲಾಧ್ಯಕ್ಷರಾಗಿ ಆಯ್ಕೆ Read More »

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನೇತ್ರಾವತಿ ನದಿಯಲ್ಲಿ ದಂಪತಿಯ ಮೃತದೇಹ ಪತ್ತೆಯಾದ ಘಟನೆ ರವಿವಾರ (ನ.03) ನಡೆದಿದೆ. ಮೃತ ದಂಪತಿಯನ್ನು ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ (61), ಈಶ್ವರಮ್ಮ (52) ಎಂದು ಗುರುತಿಸಲಾಗಿದೆ. ಚಿಂತಾಮಣಿಯಿಂದ ಕಾಣೆಯಾಗಿದ್ದ ದಂಪತಿಯ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿಯ ದೊಂಡೊಲೆ ಪವರ್ ಪ್ರಾಜೆಕ್ಟ್ ಬಳಿ ರವಿವಾರ ಮಧ್ಯಾಹ್ನ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅ.31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಅನುಮಾನಗೊಂಡ

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ದಂಪತಿ ಶವ ಪತ್ತೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಪ್ರತೀ ವಾರ ಆರಂಭವಾಗುತ್ತಿದ್ದಂತೆ ಪ್ರತಿಯೊಬ್ಬರಿಗೂ ಈ ವಾರ ಹೇಗಿರುತ್ತದೆ ಎನ್ನುವ ಬಗ್ಗೆ ತಿಳಿದುಕೊಳ್ಳಲು ಕುತೂಹಲವಿರುತ್ತದೆ. ನವೆಂಬರ್‌ 03 ರಿಂದ ನವೆಂಬರ್‌ 09 ಹೊಸ ಯೋಜನೆಗಳು, ಶಿಕ್ಷಣ, ವಿದೇಶ ಪ್ರವಾಸ, ಹಣಕಾಸು, ಆಸ್ತಿ-ಅಂತಸ್ತು ವಿಚಾರದಲ್ಲಿ ಎಲ್ಲಾ 12 ರಾಶಿಗಳ ಭವಿಷ್ಯ ಹೇಗಿದೆ ಎನ್ನುವುದರ ಬಗ್ಗೆ ವಿಸ್ತಾರವಾಗಿ ತಿಳಿಯೋಣ. ಮೇಷ ರಾಶಿ:ಗುರು ಎರಡನೇ ಮನೆಯಲ್ಲಿ ಬುಧ ಶುಕ್ರರು ಎಂಟನೇ ಮನೆಯಲ್ಲಿ ಶನಿ ಹನ್ನೊಂದನೇ ಮನೆಯಲ್ಲಿ, ಕೇತು ಆರನೇ ಮನೆಯಲ್ಲಿ ಇದ್ದಾರೆ. ಸಮಯ ಬಹಳ‌ ಚೆನ್ನಾಗಿ ಇದೆ. ಅಭಿವೃದ್ಧಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಕರಾವಳಿಗೆ ಪ್ರತ್ಯೇಕ ನೀತಿ ಹಾಗೂ ಟೂರಿಸಂ ಪಾಲಿಸಿ ರೂಪಿಸುತ್ತೇವೆ. ಮನಸ್ಸಿನ ಅಶಾಂತಿ ಸರಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕಿದೆ ಎಂದು ಅವರು ಹೇಳಿದರು. ನಾನು

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ – ಡಿಸಿಎಂ ಡಿ.ಕೆ ಶಿವಕುಮಾರ್ Read More »

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ ರತೀಶ್ ಬಂಧಿತರು. ಕೊಟ್ರಚ್ಚಾಲ್‌ನ ವಿಜಯನ್ ತಲೆಮರೆಸಿಕೊಂಡಿದ್ದಾರೆ. ಪ್ರಕರಣದಲ್ಲಿ ಸಮಿತಿಯ ಒಟ್ಟು 8 ಪದಾಧಿಕಾರಿಗಳನ್ನು ಆರೋಪಿಗಳೆಂದು ಪಟ್ಟಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 154 ಮಂದಿ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಎಜೆ,

ನೀಲೇಶ್ವರ ಪಟಾಕಿ ಸ್ಪೋಟ ಪ್ರಕರಣ| ಮೂವರು ಅರೆಸ್ಟ್; ಗಾಯಾಳುಗಳು ಗಂಭೀರ Read More »

ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್

ಸಮಗ್ರ ನ್ಯೂಸ್: ತಮ್ಮ ಪ್ರೀತಿಯ ತಾಯಿಯನ್ನು ಕಳೆದುಕೊಂಡ ಬಳಿಕ ಕಳೆದ 10 ದಿನಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ನಟ ಕಿಚ್ಚ ಸುದೀಪ್ ಇದೀಗ ಮೊದಲ ಬಾರಿಗೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ಅಮ್ಮನ ಕಳೆದುಕೊಂಡ ದುಃಖದಲ್ಲಿದ್ದ ಸುದೀಪ್ ಕಳೆದ ವಾರದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್ ನಲ್ಲಿ ನಿರೂಪಣೆ ಮಾಡಿರಲಿಲ್ಲ. ಅವರ ಬದಲಿಗೆ ಯೋಗರಾಜ್ ಭಟ್ ಮತ್ತು ಸೃಜನ್ ಲೋಕೇಶ್ ಎರಡು ದಿನಗಳನ್ನು ನಿಭಾಯಿಸಿದರು. ಇದೀಗ ಈ ವಾರ ಸುದೀಪ್ ಮತ್ತೆ ಎಂದಿನಂತೆ ವೀಕೆಂಡ್ ಎಪಿಸೋಡ್ ನಡೆಸಿಕೊಡಲಿದ್ದಾರೆ.

ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್ Read More »