Editor

ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿ ಹೆಡೆ ಬಿಚ್ಚಿದ ಮರಿ ನಾಗರಾಜ

ಸಮಗ್ರ ನ್ಯೂಸ್: ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿದ ನಾಗರ ಹಾವು ಹೆಡೆ ಬಿಚ್ಚಿದ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಪುತ್ತೂರು ವಿವೇಕಾನಂದ ಪದವಿ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕ್ಲಾಸ್ ರೂಂನಲ್ಲಿ ವಿದ್ಯಾಭ್ಯಾಸದಲ್ಲಿ ಮಗ್ನ ವಾಗಿರುವ ಸಂದರ್ಭ ಏಕಾಏಕಿ ನಾಗರಹಾವಿನ ಮರಿಯೊಂದು ಕ್ಲಾಸ್ ರೂಂ ಗೆ ನುಗ್ಗಿದೆ.ಬಳಿಕ ಉರಗ ತಜ್ಞರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸ್ನೇಕ್ ತೇಜಸ್ ನಾಗರಹಾವಿನ ಮರಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ತರಗತಿ ನಡೆಯುತ್ತಿದ್ದಾಗಲೇ ಕ್ಲಾಸ್ ರೂಂಗೆ ನುಗ್ಗಿ ಹೆಡೆ ಬಿಚ್ಚಿದ ಮರಿ ನಾಗರಾಜ Read More »

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ!

ಸಮಗ್ರ ನ್ಯೂಸ್: ಬೈಕ್‌ಗೆ ಅಡ್ಡ ಬರುತ್ತಿದ್ದ ನಾಯಿಗಳಿಗೆ ಕಲ್ಲು ಹೊಡೆದಿದ್ದಕ್ಕೆ ಯುವತಿ ಮೇಲೆ ಹಲ್ಲೆ ಈ ಘಟನೆ ಎನ್.ಆ‌ರ್.ಐ ಲೇಔಟ್‌ನ ರಿಚಿಸ್ ಗಾರ್ಡ್‌ನ 1ನೇ ಕ್ರಾಸ್‌ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಹೋಗುತ್ತಿದ್ದ ಗಾಡಿಗೆ ನಾಯಿಗಳು ಏಕಾಏಕಿ ಅಡ್ಡ ಬಂದಿವೆ. ನಾಯಿಗಳು ಅಡ್ಡ ಬಂದಿವೆ ಎಂದು ಯುವತಿ ಕಲ್ಲಿನಿಂದ ಹೊಡೆದಿದ್ದಾಳೆ.ಆಗ ನೀಲಿ ಬಟ್ಟದ ಶರ್ಟ್ ಧರಿಸಿದ ಯುವಕನೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಬೈಕ್ ಕೀ ಕಿತ್ತುಕೊಂಡು ಅವಾಶ್ಯ ಶಬ್ದಗಳಿಂದ ನಿಂದಿಸಿ ಎದೆ ಮುಟ್ಟಿ ತಳ್ಳಾಡಿ ಮುಖಕ್ಕೆ ಹೊಡೆದು ಹಲ್ಲೆ

ಅಡ್ಡ ಬಂದ ನಾಯಿಗಳಿಗೆ ಕಲ್ಲು ಹೊಡೆದ ಯುವತಿಯ ಮೇಲೆ ಹಲ್ಲೆ! Read More »

ಕನ್ನಡದ ನಟನ ಮೇಲೆ ಚಿತ್ರಮಂದಿರದಲ್ಲಿ ಮಹಿಳೆಯಿಂದ ಹಲ್ಲೆ

ಸಮಗ್ರ ನ್ಯೂಸ್: ಹೈ ದರಾಬಾದ್‌ನ ಚಿತ್ರಮಂದಿರದಲ್ಲಿ ಕನ್ನಡದ ಖ್ಯಾತ ನಟ ಎನ್.ಟಿ. ರಾಮಸ್ವಾಮಿ ಅವರ ಮೇಲೆ ಮಹಿಳೆಯೊಬ್ಬರು ಓಡಿ ಬಂದು ನಟನಿಗೆ ಹೊಡೆದಿದ್ದಾರೆ.’ಲವ್ ರೆಡ್ಡಿ’ ಸಿನಿಮಾ ಪ್ರದರ್ಶನ ಆಗುತ್ತಿದ್ದ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ತೆಲುಗಿನ ‘ಲವ್ ರೆಡ್ಡಿ’ ಸಿನಿಮಾದಲ್ಲಿ ರಾಮಸ್ವಾಮಿ ಅವರು ಒಂದು ಮುಖ್ಯವಾದ ಪಾತ್ರ ಮಾಡಿದ್ದಾರೆ. ಅ.18 ರಂದು ಈ ಸಿನಿಮಾ ಬಿಡುಗಡೆ ಆಯಿತು.’ಲವ್‌ ರೆಡ್ಡಿ’ ಪ್ರದರ್ಶನ ಕಾಣುತ್ತಿದ್ದ ಚಿತ್ರಮಂದಿರವೊಂದಕ್ಕೆ ಸಿನಿಮಾ ತಂಡದವರು ಭೇಟಿ ನೀಡಿದ್ದಾರೆ. ಸಿನಿಮಾಗೆ ಎಲ್ಲ ಕಡೆಗಳಲ್ಲಿ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿರುವುದರಿಂದ

ಕನ್ನಡದ ನಟನ ಮೇಲೆ ಚಿತ್ರಮಂದಿರದಲ್ಲಿ ಮಹಿಳೆಯಿಂದ ಹಲ್ಲೆ Read More »

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ.ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದರು. ಮರುದಿನ ಬೀಜಾಡಿ ಸಮುದ್ರಕ್ಕೆ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಸದ್ಯ, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಶುಭ ಕಾರ್ಯದ ನಿಮಿತ್ತ ಉಡುಪಿಗೆ ತೆರಳಿದ್ದ ಯುವಕರು ಬೀಚ್ ಗೆ ತೆರಳಿದ್ದರು ಎನ್ನಲಾಗಿದೆ.

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು Read More »

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ಧ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್ ಎಂದು ಹೇಳಲಾಗುತ್ತಿದ್ದೆ.ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್ ಬುಕ್

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ Read More »

ರಾಜ್ಯ ಸರ್ಕಾರಿ ನೌಕರರೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್‌ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು!

ಸಮಗ್ರ ನ್ಯೂಸ್: ಕಂಪ್ಯೂಟ‌ರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ ಡಿ.31ರ ವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ.ಈ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್‌ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು! Read More »

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ನನ್ನ ಜೊತೆ ಸಹಕರಿಸು ಇಲ್ಲದಿದ್ದರೆ 24 ಪೀಸ್ ಗಳನ್ನಾಗಿ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ ಯುವಕನನ್ನು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಶಾರೀಕ್ ಬಂಧಿತ ಆರೋಪಿ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್ Read More »

ಸರ್ಕಾರಿ ನೌಕರರೇ: ‘ನಿವೃತ್ತಿ’ ಸಂಬಂಧಿತ ನಿಯಮ ಬದಲಾವಣೆ, ‘ಹೊಸ ರೂಲ್’

ಸಮಗ್ರ ನ್ಯೂಸ್: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರ ಸ್ವಯಂ ನಿವೃತ್ತಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನ ಹೊರಡಿಸಲಾಗಿದೆ, ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ (DoP&PW) ಕಚೇರಿಯ ಮೆಮೊರಾಂಡಮ್ ಪ್ರಕಾರ, 20 ವರ್ಷಗಳ ನಿಯಮಿತ ಸೇವೆಯನ್ನು ಪೂರ್ಣಗೊಳಿಸಿದ ನೌಕರರು ನೇಮಕಾತಿ ಪ್ರಾಧಿಕಾರಕ್ಕೆ ಮೂರು ತಿಂಗಳ ನೋಟಿಸ್ ನೀಡುವ ಮೂಲಕ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಬಹುದು. ಈ ಕಚೇರಿ ಜ್ಞಾಪಕ ಪತ್ರವನ್ನು ಅ. 11 ರಂದು ನೀಡಲಾಗಿದೆ. ಹೊಸ ನಿಯಮಗಳ ಪ್ರಕಾರ, ಒಬ್ಬ ಉದ್ಯೋಗಿ

ಸರ್ಕಾರಿ ನೌಕರರೇ: ‘ನಿವೃತ್ತಿ’ ಸಂಬಂಧಿತ ನಿಯಮ ಬದಲಾವಣೆ, ‘ಹೊಸ ರೂಲ್’ Read More »

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು Read More »

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದಾಗಿ ಸಾಫ್ಟ್ ವೇ‌ರ್ ಎಂಜಿನಿಯ‌ರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಕಾಪೇಟೆಯಲ್ಲಿ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಛಾವಣಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ನಾಗ ಪ್ರಭಾಕರ್ ಆಂಧ್ರಪ್ರದೇಶ ಮೂಲದವರಾಗಿದ್ದು, ಗಚಿಬೌಲಿಯ ಸಾಫ್ಟ್ರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೋಕಾಪೇಟೆಯ ಹಾಸ್ಟೆಲ್‌ ಕೋಣೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗ ಪ್ರಭಾಕ‌ರ್ ಅವರ ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ Read More »