Editor

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ […]

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಜಿಗಿತ ಕಂಡಿದ್ದು, 500 ರೂ.ಗಡಿಗೆ ತಲುಪಿದೆ. ಕೆಲವು ದಿನಗಳ ಹಿಂದೆ ಹೊಸ ಅಡಿಕೆ, ಸಿಂಗಲ್‌ ಚೋಲ್‌ ಧಾರಣೆಯಲ್ಲಿ ಏರಿಕೆ ಕಂಡಿತ್ತು. ಈಗ ಡಬ್ಬಲ್‌ ಚೋಲ್‌ ಧಾರಣೆ ಏರಿಕೆ ಕಂಡಿರುವುದು ಬೆಳೆಗಾರರಲ್ಲಿ ಉತ್ಸಾಹ ಮೂಡಿಸಿದೆ. ಅ.19ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 490 ರೂ. ಇದ್ದರೆ, ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ 500 ರೂ. ತನಕವೂ ಬೇಡಿಕೆ ಕಂಡು ಬಂದಿದೆ. ಹೊಸ ಅಡಿಕೆ, ಸಿಂಗಲ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| 500ರ ಗಡಿ ದಾಟುವತ್ತ ಡಬ್ಬಲ್ ಚೋಲ್ ಅಡಿಕೆ Read More »

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ನಟ ಸುದೀಪ್ ಗೆ ಮಾತೃವಿಯೋಗ Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಅ.22ರವರೆಗೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ, ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಅ.22ರವರೆಗೆ ಭಾರೀ ಮಳೆ‌ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಕ್ರೋಧಿ ನಾಮ ಸಂವತ್ಸರ ದಕ್ಚಿಣಾಯನ ಶರದ್ ಋತು ಆಶ್ವಯುಜ ಮಾಸದ ಶುಕ್ಲಪಕ್ಷ ಏಕಾದಶಿಯಿಂದ ಬಹುಳ ತದಿಗೆಯವರೆಗೆ ಅಂದರೆ 13.10.24 ರಿಂದ 20.10.24 ವರೆಗೆ, ಈ ವಾರದ ಚಂದ್ರನ ಸಂಚಾರ ಧನಿಷ್ಠ ನಕ್ಷತ್ರದಿಂದ ಕೃತ್ತಿಕಾವರೆಗೆ ವಾರಭವಿಷ್ಯ ಹೇಗಿದೆ ಎಂದು ತಿಳಿಯೋಣ… ಮೇಷರಾಶಿ: . ಏಳನೇ ಮನೆಯಲ್ಲಿ ಬುಧ ಬಹಳ ಒಳ್ಳೆಯ ಫಲ ನೀಡುತ್ತಾನೆ. ಬಹುದಿನಗಳಿಂದ ಕಾಯುತ್ತಿದ್ದ ಒಂದು ಸಂಗತಿ ಈ ವಾರ ನಿಮ್ಮ ಕೈಸೇರುತ್ತದೆ. ಆರನೇ ಮನೆಯ ಕೇತು, ಸೂರ್ಯ ಧನಲಾಭ ಕೊಡುತ್ತಾರೆ. ಮೂರರಲ್ಲಿ ಮಂಗಳ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯದ ಗಾಯಕ, ಸಾಹಿತಿ, ಜ್ಯೋತಿಷಿ ಎಚ್ ಭಿಮರಾವ್ ವಾಷ್ಠರ್ ಅವರ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮವು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಜರುಗಿತು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಮೆಲೋಡಿಸ್ ಜಂಟಿ ಸಹಯೋಗದಲ್ಲಿ ಸುಳ್ಯ ದಸರಾ ಹಬ್ಬದ ಶ್ರೀ ಶಾರದಾಂಬಾ ದೇವಿಯ ಶೋಭಾಯಾತ್ರೆಯ ಪ್ರಯುಕ್ತ ಅದ್ದೂರಿ ಸಂಗೀತ ರಸಮಂಜರಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಎಚ್. ಭೀಮರಾವ್ ವಾಷ್ಠರ್ ವಹಿಸಿದ್ದರು. ನಿವೃತ್ತ ತಾಂತ್ರಿಕ ಕೃಷಿ ಅಧಿಕಾರಿ

ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಅದ್ದೂರಿ ವಾಷ್ಠರ್ ಫೈವ್ ಸ್ಟಾರ್ ಆರ್ಕೆಸ್ಟ್ರಾ ಕಾರ್ಯಕ್ರಮ Read More »

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ

ಸಮಗ್ರ ನ್ಯೂಸ್: ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದೆ. ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್‌ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ

ಮಗನ ಹುಟ್ಟುಹಬ್ಬಕ್ಕಾಗಿ ಕಡವೆ ಬೇಟೆಯಾಡಿ ಪ್ರಿಡ್ಜ್ ನಲ್ಲಿಟ್ಟರು| ಅಧಿಕಾರಿಗಳ ದಾಳಿಯಲ್ಲಿ ಮಾಂಸ, ಕೋವಿ ವಶ Read More »

ಇಂದಿನಿಂದ ಕಬಡ್ಡಿ ಕಲರವ| ಪಿಕೆಎಲ್ 11ನೇ ಸೀಸನ್ ಆರಂಭ

ಸಮಗ್ರ ನ್ಯೂಸ್: ಐಪಿಎಲ್ ನಂತರ ಭಾರತದಲ್ಲಿ ಹೆಚ್ಚು ಅಭಿಮಾನಿಗಳ ಗಮನ ಸೆಳೆಯುವ ಕಬಡ್ಡಿ ಮತ್ತೆ ಮನರಂಜನೆ ನೀಡಲು ಸಿದ್ಧವಾಗಿದೆ. 10 ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿರುವ ಪ್ರೊ ಕಬಡ್ಡಿ ಲೀಗ್‌ನ 11ನೇ ಸೀಸನ್ ಇಂದಿನಿಂದ ಆರಂಭವಾಗಲಿದೆ. ಮೊದಲ ಲೀಗ್ ಪಂದ್ಯಗಳಿಗೆ ಹೈದರಾಬಾದ್​ ಗಚಿಬೌಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್-ಬೆಂಗಳೂರು ಬುಲ್ಸ್ ಮುಖಾಮುಖಿಯಾಗಲಿವೆ. ರಾತ್ರಿ 8 ಗಂಟೆಗೆ 3 ತಿಂಗಳ ಟೂರ್ನಮೆಂಟ್​ಗೆ ಚಾಲನೆ ದೊರೆಯಲಿದೆ. ಈ ಬಾರಿ ಮೂರು ನಗರಗಳಲ್ಲಿ ಟೂರ್ನಮೆಂಟ್ ನಡೆಯಲಿದೆ. ಹೈದರಾಬಾದ್, ನೊಯ್ಡಾ ಹಾಗೂ

ಇಂದಿನಿಂದ ಕಬಡ್ಡಿ ಕಲರವ| ಪಿಕೆಎಲ್ 11ನೇ ಸೀಸನ್ ಆರಂಭ Read More »

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು

ಸಮಗ್ರ ನ್ಯೂಸ್: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸ್ಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು(ಅ.18) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರಿನಲ್ಲಿ ಕಾರು – ಬೈಕ್ ನಡುವೆ ಅಪಘಾತ| ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಸಿಇಒ ಭಾಸ್ಕರ್ ಸಾವು Read More »

ಮುಡಾ ಕಚೇರಿ ಮೇಲೆ ಇಡಿ ದಾಳಿ.. ಸಿದ್ದರಾಮಯ್ಯಗೂ ಸಂಕಷ್ಟ

ಸಮಗ್ರ ನ್ಯೂಸ್: ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಈ ಹಗರಣ ಸಂಬಂಧ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮ್ಸನ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು.

ಮುಡಾ ಕಚೇರಿ ಮೇಲೆ ಇಡಿ ದಾಳಿ.. ಸಿದ್ದರಾಮಯ್ಯಗೂ ಸಂಕಷ್ಟ Read More »