Editor

Helth tips:ಹಸಿರು ಸೇಬು ರಸಗಳನ್ನು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್:ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡಲು ಹಾಗೂ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.ಹಸಿರು ಆಪಲ್, ವಿಶೇಷವಾಗಿ ಅದರ ಸಿಪ್ಪೆಗಳು, ಹೆಚ್ಚಿನ ಉತ್ಕರ್ಷಣ ನಿರೋಧಕ ಚಟುವಟಿಕೆಯನ್ನು ಹೊಂದಿದೆ ಮತ್ತು ಯಕೃತ್ತಿನ ಕ್ಯಾನ್ಸರ್ ಕೋಶಗಳು ಮತ್ತು ಕರುಳಿನ ಕ್ಯಾನ್ಸ‌ರ್ ಕೋಶಗಳ ಬೆಳವಣಿಗೆಯನ್ನು ಹೆಚ್ಚು ತಡೆಯುತ್ತದೆ. ಇದು ವಯಸ್ಸಾಗುವುದನ್ನು ವಿಳಂಬಗೊಳಿಸುತ್ತದೆ ಹಾಗೂ ಚರ್ಮದ ರಚನೆ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುತ್ತದೆ. ಮೊಡವೆ, ಚರ್ಮದ ಸಮಸ್ಯೆಗಳನ್ನು ನಿಯಂತ್ರಿಸುತ್ತದೆ ಮತ್ತು ಕಪ್ಪು ವಲಯಗಳನ್ನು ಸುಧಾರಿಸುತ್ತದೆ. ಈ ರಸವನ್ನು ಕುಡಿಯುವ ಜನರು […]

Helth tips:ಹಸಿರು ಸೇಬು ರಸಗಳನ್ನು ಸೇವಿಸುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು Read More »

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ

ಸಮಗ್ರ ನ್ಯೂಸ್: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಭಾರತೀಯ ರಾಯಭಾರಿಗಳ ವಿರುದ್ಧ ಪ್ರಕರಣ ದಾಖಲಿಸುವ ಕೆನಡಾ ಸರ್ಕಾರದ ನಡೆಗೆ ಭಾರತ ದಿಟ್ಟ ನಿರ್ಧಾರ ಕೈಗೊಂಡಿದ್ದು 6 ಕೆನಡಾದ ರಾಜತಾಂತ್ರಿಕರನ್ನು ಹೊರಹಾಕಿದೆ. ಅಷ್ಟೇ ಅಲ್ಲ, ಅಕ್ಟೋಬರ್ 19ರ ಮಧ್ಯರಾತ್ರಿ 12 ಗಂಟೆಯೊಳಗೆ ಅಥವಾ ಅದಕ್ಕೂ ಮೊದಲು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಂಗಾಮಿ ಹೈ ಕಮಿಷನರ್ ಸ್ಟೀವರ್ಟ್ ರಾಸ್ ವೀಲರ್, ಡೆಪ್ಯುಟಿ ಹೈ ಕಮಿಷನರ್ ಪ್ಯಾಟ್ರಿಕ್ ಹೆಬರ್ಟ್, ಫಸ್ಟ್ ಸೆಕ್ರೆಟರಿ ಮೇರಿ

ಕೆನಡಾದ 6 ರಾಜತಾಂತ್ರಿಕರನ್ನು ಹೊರಹಾಕಿದ ಭಾರತ| ಅ.19ರ ಮಧ್ಯರಾತ್ರಿಯೊಳಗೆ ದೇಶ ತೊರೆಯಲು‌ ಖಡಕ್ ಸೂಚನೆ Read More »

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಮತ್ತು ವಿವಿಧ ಮಾನವೀಯ ಸೇವಾ ಕಾರ್ಯಗಳ ಮೂಲಕವಾಗಿ ಗುರುತಿಸಲ್ಪಡುತ್ತಿರುವ ಶಟರ್‌ ಬಾಕ್ಸ್‌ ಖ್ಯಾತಿಯ ಕಾಪುವಿನ ಸಚಿನ್‌ ಶೆಟ್ಟಿ ಮತ್ತು ಅಭಿಷೇಕ್‌ ಶೆಟ್ಟಿ ಅವರು ಕರಾವಳಿ ಪ್ರವಾಸೋದ್ಯಮ ಮತ್ತು ಧಾರ್ಮಿಕ ಪರಂಪರೆಯನ್ನು ಎಲ್ಲೆಡೆ ಪ್ರಚಾರ ಉದ್ದೇಶದೊಂದಿಗೆ ಸುಜುಕಿ ಜಿಮ್ನಿ ವಾಹನದಲ್ಲಿ ಈಶಾನ್ಯ ರಾಜ್ಯಗಳಿಗೆ 45 ದಿನಗಳ ಪ್ರವಾಸ ಹೊರಟಿದ್ದಾರೆ. 45 ದಿನಗಳ ಕಾಲ 17 ರಾಜ್ಯಗಳಲ್ಲಿ ಸುಮಾರು 14,000 ಕಿ.ಮೀ. ಸಂಚರಿಸ ಲಿರುವ ಇವರು ಕರ್ನಾಟಕ, ಆಂಧ್ರ ಪ್ರದೇಶ, ಒರಿಸ್ಸಾ, ಪಶ್ಚಿಮ

ಕರಾವಳಿಯ ಪ್ರವಾಸೋದ್ಯಮ ಪ್ರಚಾರಕ್ಕೆ ಈಶಾನ್ಯದತ್ತ ಹೊರಟ ‘ಶಟರ್ ಬಾಕ್ಸ್’ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಅರ್ಜಿ ವಜಾ ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್ ಜಾಮೀನು ಅರ್ಜಿ ವಜಾ ಆಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್ ಗೆ ಮತ್ತಷ್ಟು ದಿನ ಜೈಲೇ‌ ಗತಿ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ…

ಸಮಗ್ರ ನ್ಯೂಸ್: ಪುತ್ತೂರಿನ ಹೆಸರಾಂತ ಬಟ್ಟೆಗಳ ಮಳಿಗೆ ರಾಧಾಸ್ ಫ್ಯಾಮಿಲಿ ಶೋರೂಂನಲ್ಲಿ ಆಫರ್ ಗಳ ಫಸ್ಟ್ ವೀಕ್ ಡ್ರಾ ವಿಜೇತರ ಪಟ್ಟಿ ಪ್ರಕಟಿಸಲಾಗಿದೆ. ಪ್ರಥಮ ಬಹುಮಾನ ಅಶ್ವಿನಿ ಟಿಕೆಟ್ ನಂ.20, ಬಿಲ್ ನಂ.J95900 (ರೆಫ್ರಿಜರೇಟರ್),ದ್ವಿತೀಯ ಬಹುಮಾನ ಸಚಿನ್ ಟಿಕೆಟ್ ನಂ.17, ಬಿಲ್ ನಂ.J95902,(ಕ್ಯೂಷನ್ ಸೋಫಾ) ಸಚಿನ್ ಹಾಗು ತೃತೀಯ ಬಹುಮಾನ ಕಾವ್ಯ ಟಿಕೆಟ್ ನಂ.100, ಬಿಲ್ ನಂ.ಜ್96078, (ಟಿವಿ 32inch) ಪಡೆದಿದ್ದಾರೆ. ನಾಲ್ಕನೇ ಬಹುಮಾನ ಜಸ್ವಿ .ಆರ್. ಹಳೇನೇರಂಕಿ, ಟಿಕೆಟ್ ನಂ.379, ಬಿಲ್ ನಂ.J97041,42.ಜಾಯನ್ ಬಿಲಾಲ್ ಬೆಟ್ಟಂಪಾಡಿ,

ಪುತ್ತೂರಿನ ರಾಧಾಸ್ ಶಾಪಿಂಗ್ ಉತ್ಸವದ ಫಸ್ಟ್ ವೀಕ್ ಡ್ರಾ| ವಿಜೇತರ ಪಟ್ಟಿ ಇಲ್ಲಿದೆ‌ ನೋಡಿ… Read More »

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ Read More »

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೆ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ಟೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಘಟನೆ ಅ.11 ರಂದು ನಡೆಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು.

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ Read More »

ಹರಿಯಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಬಿಜೆಪಿಯಿಂದ ಈ ಎರಡು ರಾಜ್ಯಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಹರಿಯಾಣ ರಾಜ್ಯದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ. ಕೇಂದ್ರ ಸಚಿವ ಪ್ರಲ್ಯಾದ್ ಜೋಶಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ವೀಕ್ಷಕರಾಗಿ ಬಿಜೆಪಿ ನೇಮಕ ಮಾಡಿದೆ.

ಹರಿಯಾಣ, ಜಮ್ಮು ಮತ್ತು ಕಾಶ್ಮೀರಕ್ಕೆ ವೀಕ್ಷಕರನ್ನು ನೇಮಕ ಮಾಡಿದ ಬಿಜೆಪಿ Read More »

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ

ಸಮಗ್ರ ನ್ಯೂಸ್‌: ವಿಶ್ವಸಂಸ್ಥೆಯ ದಿನವನ್ನು ಅಕ್ಟೋಬರ್ 24 ರಂದು ಆಚರಿಸಲಾಗುತ್ತಿದ್ದು. ಈ ದಿನ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಕೇಂದ್ರ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ವಿಶ್ವಸಂಸ್ಥೆಯ ದಿನವನ್ನು ಆಚರಿಸಲು ಈ ತಿಂಗಳ ಅಕ್ಟೋಬರ್ 24 ರಂದು ದೇಶದ ಎಲ್ಲಾ ಪ್ರಮುಖ ಕಟ್ಟಡಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜದೊಂದಿಗೆ ವಿಶ್ವಸಂಸ್ಥೆಯ ಧ್ವಜವನ್ನು ಹಾರಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಎಲ್ಲಾ ಕೇಂದ್ರ ಇಲಾಖೆಗಳಿಗೆ ಹೇಳಿದೆ. ಆದರೆ ವಿಶ್ವಸಂಸ್ಥೆಯ ಧ್ವಜವನ್ನು

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ Read More »

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು

ಸಮಗ್ರ ನ್ಯೂಸ್‌: ಕಜಾನ್‌ನಲ್ಲಿ ಅಕ್ಟೋಬರ್ 22 ಮತ್ತು ಅಕ್ಟೋಬರ್ 24ರಂದು ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅಧಿಕೃತವಾಗಿ ಅರ್ಜಿ ಸಲ್ಲಿಸಿದೆ. ಕಜಾನ್‌ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ 10 ಹೊಸ ಸದಸ್ಯರು ಮತ್ತು 10 ಪಾಲುದಾರರನ್ನು ಘೋಷಿಸಲಾಗುತ್ತದೆ. ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮೂರು ತಿಂಗಳ ಅವಧಿಯಲ್ಲಿ

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು Read More »