Editor

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತರು. ಘಟನೆಯ ವಿವರ;ದಿನಾಂಕ 06-11-2025 ರಂದು ಕಾಲೇಜೊಂದರ 09 ವಿದ್ಯಾರ್ಥಿ/ವಿಧ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಅಂತಾ ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಪೆರಿಯಡ್ಕ […]

ಉಪ್ಪಿನಂಗಡಿ : ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾಠಿಯ ವಿಚಾರಿಸಲು ಹೋದ ವಿದ್ಯಾರ್ಥಿಗಳ ಮೇಲೆ‌ ನೈತಿಕ ಪೊಲೀಸ್ ಗಿರಿ| ಇಬ್ಬರು ಆರೋಪಿಗಳ ಬಂಧನ Read More »

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಳ್ಳುತ್ತಿರುವಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಬ್ಬಿನ ದರ ನಿಗದಿಯ ಜವಾಬ್ದಾರಿಯನ್ನು ನೇರವಾಗಿ ಕೇಂದ್ರ ಸರ್ಕಾರದ ಮೇಲೆ ಹೊರಿಸಿದ್ದಾರೆ. ‘ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿ ಮಾಡಬೇಕಿರುವುದು ಕೇಂದ್ರವೇ ಹೊರತು ರಾಜ್ಯ ಸರ್ಕಾರವಲ್ಲ’ ಎಂದು ಸ್ಪಷ್ಟಪಡಿಸುವ ಮೂಲಕ, ರಾಜ್ಯ ಸರ್ಕಾರದ ಮೇಲಿನ ಒತ್ತಡವನ್ನು ತಗ್ಗಿಸಿ, ಹೋರಾಟದ ದಿಕ್ಕನ್ನು ಕೇಂದ್ರದತ್ತ ತಿರುಗಿಸುವ ರಾಜಕೀಯ ನಡೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಕಬ್ಬು ಬೆಳೆಗಾರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ

ಕಬ್ಬಿಗೆ ಎಂಆರ್ ಪಿ ನಿರ್ಧರಿಸಬೇಕಿರುವುದು ಕೇಂದ್ರವೇ ಹೊರತು ರಾಜ್ಯವಲ್ಲ| ಕೇಂದ್ರದತ್ತ ಚೆಂಡು ಎಸೆದ ಸಿಎಂ ಸಿದ್ದರಾಮಯ್ಯ Read More »

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸಮಗ್ರ ನ್ಯೂಸ್: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ Read More »

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಸಮಗ್ರ ನ್ಯೂಸ್: ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ದಂಪತಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ನೆರಳೂರು ಗ್ರಾಮದ ವಾಸಿ ರವಿಕುಮಾರ್ ಮನೆಯಲ್ಲಿ ಖತರ್ನಾಕ್ ದಂಪತಿಯಿಂದ ಈ ದರೋಡೆ ನಡೆದಿದೆ. ರವಿಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಬುಧವಾರ ಸಹ ಕೆಲಸಕ್ಕೆ ಎಂದು ಹೋಗಿದ್ದಾಗ ಮನೆಯಲ್ಲಿ ರವಿಕುಮಾರ್ ಪತ್ನಿ ನಾಗವೇಣಿ ಒಬ್ಬರೆ ಇದ್ದರು. ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಖತರ್ನಾಕ್ ಜೋಡಿ

ಮದುವೆ ಆಹ್ವಾನ ಪತ್ರಿಕೆ ಕೊಡುವ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ Read More »

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಂಗಳೂರಿನ‌ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ Read More »

ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು

ಸಮಗ್ರ ನ್ಯೂಸ್: ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಮತ್ತಿಕಟ್ಟೆ ಸಮೀಪ ನಾಯಿ ಅಟ್ಟಾಡಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆಯು, ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳೀಯರು ರಕ್ಷಿಸಿದರೂ, ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ಘಟನೆಯ ನಂತರ ಸಮಾಜಸೇವಕ ಅರೀಫ್ ಅವರ ನೇತೃತ್ವದಲ್ಲಿ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಗಾಯಗೊಂಡ ಜಿಂಕೆಯನ್ನು ಸುರಕ್ಷಿತವಾಗಿ ಹಿಡಿದು ಪಶು ಚಿಕಿತ್ಸಾಲಯಕ್ಕೆ ಕರೆತರಿದರು. ಪಶು ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಜಿಂಕೆಯ ಗಾಯಗಳು ಗಂಭೀರವಾಗಿದ್ದರಿಂದ ಅದು ಪ್ರಾಣ ಉಳಿಸಿಕೊಳ್ಳಲಿಲ್ಲ ಎಂದು ಮೂಲಗಳು ತಿಳಿಸಿವೆ.

ಕೊಟ್ಟಿಗೆಹಾರ: ಮತ್ತಿಕಟ್ಟೆ ಸಮೀಪ ನಾಯಿ ದಾಳಿಯಿಂದ ಜಿಂಕೆ ಸಾವು Read More »

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ

ಸಮಗ್ರ ನ್ಯೂಸ್: ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಕ್ಕಾಗಿ ಆತನ ತಾಯಿಗೆ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಇದೇ ಅಕ್ಟೋಬರ್ 10ರಂದು ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಅವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4 ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಸ್ಕೂಟರ್ ಚಲಾಯಿಸಲು ನೀಡಿದ‌‌ ತಾಯಿಗೆ 26 ಸಾವಿರ ದಂಡ Read More »

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಾಲು, ಮೊಸರು ಬೆಲೆ ಏರಿಕೆಯ ನಂತರ ಇದೀಗ ಕೆಎಂಎಫ್ ನಂದಿನಿ ಬ್ರ್ಯಾಂಡ್ನ ತುಪ್ಪದ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಮೊದಲು 610 ರೂ.ಗೆ ಮಾರಾಟವಾಗುತ್ತಿದ್ದ ಒಂದು ಲೀಟರ್ ತುಪ್ಪ ಈಗ ನೇರವಾಗಿ 700 ರೂ.ಗೆ ನಿಗದಿಯಾಗಿದೆ. ಅಂದರೆ, ಬರೋಬ್ಬರಿ 90 ರೂಪಾಯಿ ಏರಿಕೆಯಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಬರೆ| ನಂದಿನಿ ತುಪ್ಪದ ಮೇಲೆ ಬರೋಬ್ಬರಿ ₹90 ಏರಿಸಿದ ಕೆಎಂಎಫ್ Read More »

ಇಂದು ಕಾರ್ತಿಕ ಹುಣ್ಣಿಮೆ| ಭೂಮಿಗೆ ಹತ್ತಿರ ಬರಲಿದ್ದಾನೆ ಚಂದಿರ| ಸೂಪರ್ ಮೂನ್ ಕಣ್ತುಂಬಿಕೊಳ್ಳಿ…

ಸಮಗ್ರ ನ್ಯೂಸ್: ಇಂದು ಕಾರ್ತಿಕ ಹುಣ್ಣಿಮೆ. ಈ ದಿನದಂದು ಸೂಪರ್‌ ಮೂನ್‌ ಗೋಚರವಾಗಲಿದೆ. ಇಂದು ಚಂದ್ರನು ಭೂಮಿಗೆ ತೀರಾ ಸಮೀಪದಲ್ಲಿರಲಿದ್ದು, ದೊಡ್ಡದಾಗಿ ಕಾಣಿಸಲಿದ್ದಾನೆ. ಭೂಮಿಗೆ ದೀರ್ಘವೃತ್ತದಲ್ಲಿ 28 ದಿನಗಳಿಗೊಮ್ಮೆ ತಿರುಗುವ ಚಂದ್ರ ಭೂಮಿಗೊಮ್ಮೆ ಸಮೀಪಿಸುವುದುಂಟು (3,56,400ಕಿ.ಮೀ). ಆಗ ಹುಣ್ಣಿಮೆಯಾದಲ್ಲಿ ಚಂದ್ರ ಮಾಮೂಲಿಗಿಂತ ದೊಡ್ಡದಾಗಿ ಕಾಣುತ್ತಾನೆ. ಈ ವರ್ಷದ ಮೂರು ಸೂಪರ್ ಮೂನ್​ಗಳಲ್ಲಿ ಅಕ್ಟೋಬರ್ ತಿಂಗಳ ವಿದ್ಯಮಾನ ಈಗಾಗಲೇ ಮುಗಿದಿದೆ. ನವೆಂಬರ್ ಹಾಗೂ ಡಿಸೆಂಬರ್ ತಿಂಗಳಲ್ಲಿ ಇಂತಹದೇ ವಿದ್ಯಮಾನ ಜರುಗಲಿದೆ. ಭೂಮಿಗೆ ಅತೀ ಸಮೀಪ ಇವತ್ತಿನ ಹುಣ್ಣಿಮೆಯಂದು ಚಂದ್ರ

ಇಂದು ಕಾರ್ತಿಕ ಹುಣ್ಣಿಮೆ| ಭೂಮಿಗೆ ಹತ್ತಿರ ಬರಲಿದ್ದಾನೆ ಚಂದಿರ| ಸೂಪರ್ ಮೂನ್ ಕಣ್ತುಂಬಿಕೊಳ್ಳಿ… Read More »

ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ

ಸಮಗ್ರ ನ್ಯೂಸ್: ರೈತರು ಕಷ್ಟಪಟ್ಟು ಬೆಳೆದ ಪ್ರತಿ ಟನ್‌ ಕಬ್ಬಿಗೆ ₹3500 ಘೋಷಣೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹೆಸರು ಸೇನೆ ವತಿಯಿಂದ ಕಬ್ಬು ಬೆಳೆಗಾರರ ಹೋರಾಟ ಸಮಿತಿ ಆಶ್ರಯದಲ್ಲಿ ಬೆಳಗಾವಿಯ ಅಥಣಿ ಪಟ್ಟಣದ ಎಲ್ಲ ಪ್ರಮುಖ ವೃತ್ತಗಳಲ್ಲಿ ನೂರಾರು ರೈತರು ಧರಣಿ ಹಮ್ಮಿಕೊಂಡು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಅಥಣಿ ಸಂಪೂರ್ಣ ಸ್ಥಬ್ದಗೊಂಡು ರೈತರಿಗೆ ಬೆಂಬಲ ನೀಡಿತು. ಪಟ್ಟಣದ ಶಿವಯೋಗಿ ವೃತ್ತದಲ್ಲಿ ಸೋಮವಾರ ತಡರಾತ್ರಿ ಒಂದು ಗಂಟೆಯಿಂದ ರಸ್ತೆಯಲ್ಲೇ ಮಲಗಿ

ಅಥಣಿ: ಕಬ್ಬಿಗೆ ಬೆಂಬಲ ಬೆಲೆ ಹೆಚ್ಚಿಸಲು ಆಗ್ರಹ| ರಸ್ತೆಯಲ್ಲೇ‌ ಮಲಗಿ ಪ್ರತಿಭಟನೆ Read More »