Editor

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆಯನ್ನು ವಿಧಿಸಲಾಗಿದೆ. 2024ರ ಹಿಂಸಾಚಾರದಲ್ಲಿ ಶೇಖ್ ಹಸೀನಾ ಅಪರಾಧಿ ಎಂಬುದಾಗಿ ಘೋಷಿಸಿದ್ದಂತ ಐಸಿಟಿಯು, ಇದೀಗ ಅವರಿಗೆ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಶಿಕ್ಷೆ ವಿಧಿಸಲಾಯಿತು. ಬಾಂಗ್ಲಾದೇಶದಲ್ಲಿ ನಡೆದ ದಂಗೆಯ ಸಮಯದಲ್ಲಿ ಢಾಕಾದಿಂದ ಪಲಾಯನ ಮಾಡಿದ ನಂತರ 78 ವರ್ಷದ ಹಸೀನಾ ಭಾರತದಲ್ಲಿ ವಾಸಿಸುತ್ತಿದ್ದಾರೆ. ವಿಚಾರಣೆಗೆ ಹಾಜರಾಗಲು ಮತ್ತೆ ಮತ್ತೆ ನ್ಯಾಯಾಲಯದ […]

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ Read More »

ರಾಜ್ಯದ ಅತೀದೊಡ್ಡ ಡಿಜಿಟಲ್ ಅರೆಸ್ಟ್| 31 ಕೋಟಿಗೂ‌ ಮಿಕ್ಕಿ ಹಣ ಕಳಕೊಂಡ ಟೆಕ್ಕಿ

ಸಮಗ್ರ ನ್ಯೂಸ್: ಆರು ತಿಂಗಳಿಗೂ ಹೆಚ್ಚು ಕಾಲ ನಡೆದ ಅತ್ಯಾಧುನಿಕ ‘ಡಿಜಿಟಲ್ ಅರೆಸ್ಟ್’ ಹಗರಣದಲ್ಲಿ 57 ವರ್ಷದ ಮಹಿಳೆಯೊಬ್ಬರು ಸುಮಾರು 32 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಸಿಬಿಐ ಅಧಿಕಾರಿಗಳಂತೆ ನಟಿಸಿದ ವಂಚಕರು, ಅವರನ್ನು ನಿರಂತರ ಸ್ಕೈಪ್ ಕಣ್ಗಾವಲಿನಲ್ಲಿ ಇರಿಸಿಕೊಂಡು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಬಂಧಿಸುವ ಬೆದರಿಕೆಯೊಡ್ಡಿ ಎಲ್ಲ ಹಣಕಾಸಿನ ವಿವರಗಳನ್ನು ಹಂಚಿಕೊಳ್ಳುವಂತೆ ಮತ್ತು 187 ಬಾರಿ ಬ್ಯಾಂಕ್ ವರ್ಗಾವಣೆಗಳನ್ನು ಮಾಡಿಸಿಕೊಂಡಿದ್ದಾರೆ. ಇಂದಿರಾನಗರದ ಸಾಫ್ಟ್‌ವೇರ್ ಎಂಜಿನಿಯರ್ ತಮ್ಮ ದೂರಿನಲ್ಲಿ, ವಂಚಕರಿಂದ ‘ಕ್ಲಿಯರೆನ್ಸ್ ಲೆಟರ್’ ಪಡೆಯುವವರೆಗೆ ಆರು

ರಾಜ್ಯದ ಅತೀದೊಡ್ಡ ಡಿಜಿಟಲ್ ಅರೆಸ್ಟ್| 31 ಕೋಟಿಗೂ‌ ಮಿಕ್ಕಿ ಹಣ ಕಳಕೊಂಡ ಟೆಕ್ಕಿ Read More »

ಮದೀನಾ ಬಳಿ ಹೊತ್ತಿ‌ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು

ಸಮಗ್ರ ನ್ಯೂಸ್: ಮೆಕ್ಕಾದಿಂದ ಮದೀನಾಕ್ಕೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮುಫ್ರಿಹತ್ ಎಂದು ಗುರುತಿಸಲಾದ ಸ್ಥಳದಲ್ಲಿ ಮುಂಜಾನೆ 1.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರು ಹೈದರಾಬಾದ್ ಮೂಲದವರು. ದುರಂತದ ಸಮಯದಲ್ಲಿ ಸುಮಾರು 20 ಮಹಿಳೆಯರು ಮತ್ತು 11 ಮಕ್ಕಳು ಬಸ್ಸಿನಲ್ಲಿದ್ದರು ಎಂದು ಆರಂಭಿಕ

ಮದೀನಾ ಬಳಿ ಹೊತ್ತಿ‌ ಉರಿದ ಬಸ್| 42 ಭಾರತೀಯ ಉಮ್ರಾ ಯಾತ್ರಾರ್ಥಿಗಳು ಸಾವು Read More »

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆ ನಡೆಯಿತು. ‘ಧ್ವನಿವರ್ಧಕ ಬಳಕೆಯ ನೆಪ ಹೇಳಿ ರಾತ್ರಿ ವೇಳೆ ಕಂಬಳಕ್ಕೆ ಅಡ್ಡಿಪಡಿಸದಂತೆ ಪೊಲೀಸರಿಗೆ ಸೂಚನೆ ನೀಡಬೇಕು’ ಎಂದು ಶಾಸಕ ಅಶೋಕ್‌

ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ| ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ Read More »

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ನಲ್ಲೇ ಪತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತಿಯೊಬ್ಬ ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ಸೂಸೈಡ್ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ಸಮೀಪದ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ (36) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಕೀರ್ತನ್‌ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆ ಆಗಿದ್ದ.ಪತಿ ಜೈಲಿಗೆ ಹೋದ ಸಂದರ್ಭದಲ್ಲಿ ಪತ್ನಿ ಜ್ಯೋತಿ ತವರು ಮನೆ ಸೇರಿಕೊಂಡಿದ್ದರು. ಜೈಲಿಂದ ರಿಲೀಸ್‌

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್ ನಲ್ಲೇ ಪತಿ ಆತ್ಮಹತ್ಯೆ Read More »

ಬೆಳಗಾವಿ: ಮುಂದುವರಿದ ಕೃಷ್ಣ ಮೃಗಗಳ ಸಾವಿನ ಸರಣಿ| ಮತ್ತೊಂದು ಸಾವಿನೊಂದಿಗೆ ಮೃತ ಮೃಗಗಳ ಸಂಖ್ಯೆ 29ಕ್ಕೆ ಏರಿಕೆ

ಸಮಗ್ರ ನ್ಯೂಸ್: ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರೆದಿದೆ. ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಕೃಷ್ಣಮೃಗಗಳ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಬೆಳಗಾವಿಯ ಭೂತರಾಯನಹಟ್ಟಿ ಬಳಿಯ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ನವೆಂಬರ್ 13 ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದು ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವು ಮೃಗಾಲಯದಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ

ಬೆಳಗಾವಿ: ಮುಂದುವರಿದ ಕೃಷ್ಣ ಮೃಗಗಳ ಸಾವಿನ ಸರಣಿ| ಮತ್ತೊಂದು ಸಾವಿನೊಂದಿಗೆ ಮೃತ ಮೃಗಗಳ ಸಂಖ್ಯೆ 29ಕ್ಕೆ ಏರಿಕೆ Read More »

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ

ಸಮಗ್ರ ನ್ಯೂಸ್: ಸರಣಿ ಅಪಘಾತ ನಡೆದು ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ

ಸುರತ್ಕಲ್: ಸರಣಿ ಅಪಘಾತಕ್ಕೆ ಮೂವರು ಬಲಿ Read More »

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’

ಸಮಗ್ರ ನ್ಯೂಸ್: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ವೇಗವಾಗಿ ಸಾಗುತ್ತಿರುವ ನಡುವಿನಲ್ಲಿ, ಎನ್‌ಡಿಎ ಮೈತ್ರಿಕೂಟವು 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ ಪಕ್ಷವು ಡಬಲ್‌ ಡಿಜಿಟ್‌ ದಾಟಲು ಸವಾಲುಗಳನ್ನು ಎದುರಿಸುತ್ತಿದೆ. ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಯ ಮುನ್ನದ ದಿನದವರೆಗೂ ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಸಮಸ್ಯೆ ಇತ್ತು. ವಿಶೇಷವಾಗಿ, ಕಾಂಗ್ರೆಸ್‌ ಪಕ್ಷದಲ್ಲಿ ಅಸಮಾಧಾನ ಸ್ಪಷ್ಟವಾಗಿ ಗೋಚರಿಸಿತು. ಪಕ್ಷದ ರಾಜ್ಯಾಧ್ಯಕ್ಷರು ಹಣ ನೀಡಿದವರಿಗೆ ಟಿಕೆಟ್‌ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಕೊನೆಗೆ ಆರ್‌ಜೆಡಿಯೊಂದಿಗೆ ನಡೆದ ಮಾತುಕತೆ ಬಳಿಕ

ಮಹಾಘಟಬಂಧನ್ ಸ್ಪೋಟಿಸಿದ ಎನ್ ಡಿಎ| ಮತ್ತೆ ನಿತೀಶ್ ಕೊರಳಿಗೆ ಬಿ’ಹಾರ’ Read More »

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ನಾಗ್ರೋಟ ಉಪ ಚುನಾವಣೆಯಲ್ಲಿ ಬಿಜೆಪಿ ಉತ್ಕೃಷ್ಟ ಪ್ರದರ್ಶನ ನೀಡಿದೆ. ನಾಗ್ರೋಟ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದೇವಯಾನಿ ರಾಣಾ 24,647 ಮತದ ಭಾರಿ ಅಂತರದ ಜಯ ಸಾಧಿಸಿದ್ದಾರೆ. ನಾಗ್ರೋಟ ಉಪ ಚುನಾವಣೆಯಲ್ಲಿ ಜಯದ ಸಂಭ್ರಮದಲ್ಲಿದ್ದ ದೇವಯಾನಿ ರಾಣಾ, “ನಮ್ಮ ಕುಟುಂಬದ ಪರಂಪರೆ, ಈ ಜನರ ಬೆಂಬಲ ಇಲ್ಲದೆ ಸಾಧ್ಯವಾಗಲಿಲ್ಲ” ಎಂಬ ಮಾತುಗಳಿಂದ ಭಾವುಕರಾಗಿದ್ದರು. ಇವರ ತಂದೆ ದೇವೇಂದ್ರ ಸಿಂಗ್ ರಾಣಾ ಈ ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಅಕಾಲಿಕ ಮರಣದಿಂದ ಶಾಸಕ ಸ್ಥಾನ ತೆರವಾಗಿತ್ತು. ತೆರವಾಗಿರುವ

ಜಮ್ಮು- ಕಾಶ್ಮೀರದ ನಾಗ್ರೋಟ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಬಿಜೆಪಿ Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ನವೆಂಬರ್ 2ರಿಂದ ಜಯನಗರ ಅಪೊಲೋ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬವರೊಂದಿಗೆ ಮದುವೆ ಮಾಡಿಕೊಡಲಾಗುತ್ತದೆ. ಆದ್ರೆ ಚಿಕ್ಕಯ್ಯ-ತಿಮ್ಮಯ್ಯ ದಂಪತಿಗೆ ಮಕ್ಕಳಾಗುವುದಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ತಿಮ್ಮಕ್ಕ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ Read More »