Editor

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ

ಸಮಗ್ರ ನ್ಯೂಸ್: ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಲ್ಲಿ ನೇಪಾಳದಲ್ಲಿ 224 ಜನರು ಸಾವನ್ನಪ್ಪಿದ್ದಾರೆ.ಒಟ್ಟು 158 ಜನರು ಗಾಯಗೊಂಡಿದ್ದು, 24 ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಏಕ್ ನಾರಾಯಣ್ ಆರ್ಯಲ್ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಯಲ್, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 30,700 ಭದ್ರತಾ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ ಎಂದು ಕ್ಸಿಷ್ಣುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಪ್ರಯತ್ನಗಳು ಎರಡು ದಿನಗಳಲ್ಲಿ ಕೊನೆಗೊಳ್ಳಲಿವೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಒಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು, […]

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ Read More »

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ

ಸಮಗ್ರ ನ್ಯೂಸ್: ಸಿಎಂ ಸಿದ್ದದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಅವಘಡವೊಂದು ಸಂಭವಿಸಿದ್ದು, ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಉತ್ಸವ ಜ್ಯೋತಿಯ ಬೆಂಕಿಯ ಶಾಖ ತಗುಲಿದೆ. ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ವೇಳೆ ಶರ್ಟ್ ಗೆ ಬೆಂಕಿಯ ಶಾಖ ತಗುಲಿದೆ.ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯ ನವರನ್ನು ಸರಿಸಿದ್ದು, ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಿಎಂ ಸಿದ್ದರಾಮಯ್ಯನವರು ಪಾರಾಗಿದ್ಧರೆ.

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ Read More »

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು

ಸಮಗ್ರ ನ್ಯೂಸ್:ಅ.2-ಖಾಸಗಿ ಹೆಲಿಕಾಪ್ಟ‌ರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದೆ.ಹೆಲಿಕಾಪ್ಟ‌ರ್ ಪತನಗೊಂಡು ಕೂಡಲೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ.ಬೆಳಗ್ಗೆ 6.45ಕ್ಕೆ ಈ ಘಟನೆ ನಡೆದಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಪೂಣೆ ಬಳಿಯ ಆಕ್ಸ್ ಫರ್ಡ್ ಗಾಲ್ಫ್ ಕೋರ್ಸ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕ್ ಆಫ್‌ಆಗಿ ಮುಂಬೈನ ಜುಹುಗೆ ತೆರಳುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡು ಕೆಳಗೆ ಇಳಿದು ನೆಲಕ್ಕೆ ಅಪ್ಪಳಿಸಿದೆ ಎಂದು ಹಿಂಜೆವಾಡಿ ಪೊಲೀಸ್ ಠಾಣೆಯ

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್ Read More »

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಕ್ತದಲ್ಲಿನ ಗ್ಲೋಕೋಸ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಸಹ ಒಳ್ಳೆಯದು.ಇಸಾಬೋಲ್ ಸೇವನೆಯು ಪೈಲ್ಸ್‌ಗೆ ಒಳ್ಳೆಯದು ಏಕೆಂದರೆ ಮಲಬದ್ಧತೆಯನ್ನು ತಡೆಯುತ್ತದೆ. 3 ಸ್ಪೂನ್ ಇಸಾಬೋಲ್ ಅನ್ನು ತೆಗೆದುಕೊಂಡು ಅದನ್ನು 6 ಚಮಚ ಮೊಸರಿಗೆ ಬೆರೆಸಿ ಮತ್ತು ರಾತ್ರಿ ಊಟದ ನಂತರ ಇದನ್ನು ನಿಯಮಿತವಾಗಿ ಸೇವಿಸಿದರೆ,ಲೂಸ್ ಮೋಷನ್‌ಗೆ ಸಂಬಂಧಿಸಿದ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತದೆ. ನೀವು ಒಂದು ಲೋಟ ಮಜ್ಜಿಗೆಯಲ್ಲಿ 2 ಚಮಚ ಇಸಾಬೋಲ್ ಅನ್ನು ಹಾಕಿ ಮಲಗುವ ಮುನ್ನ ಸೇವಿಸಬಹುದು.

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ Read More »

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ.  ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ. ಗಾಜಾ ಪಟ್ಟಿಯಿಂದ ಆರಂಭವಾದ ಸಂಘರ್ಷ ವಿಶ್ವವೇ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದಲ್ಲದೆ. ತನಗೆ ಎದುರಾಗಿ ಯಾರೇ ನಿಂತರೂ ಹೊಡೆದುರುಳಿಸುತ್ತೇನೆ ಎಂದು ಇಸ್ರೇಲ್ ಮುನ್ನುಗ್ಗುತ್ತಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ನಾಯಕನನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಶತ್ರುಗಳ ಗುಂಪಿನ ನಾಯಕನನ್ನು

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್ Read More »

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ Read More »

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್‌ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ?

ಸಮಗ್ರ ನ್ಯೂಸ್: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣವು 2024 ರ ಅಕ್ಟೋಬರ್ 2 ರಂದು ಸಂಭವಿಸಲಿದೆ. ಇಂದು ಹಿಂದೂ ಕ್ಯಾಲೆಂಡರ್ ನಲ್ಲಿ ಅಮಾವಾಸ್ಯೆ ತಿಥಿ. ಗ್ರಹಣವು ರಾತ್ರಿ 9:13 ಕ್ಕೆ ಪ್ರಾರಂಭಗೊಂಡು ಮತ್ತು ಆಗಸ್ಟ್ 3 ರಂದು ಮುಂಜಾನೆ 3:17 ಕ್ಕೆ ಕೊನೆಗೊಳ್ಳುತ್ತದೆ. ಸಂಪೂರ್ಣ ಸೂರ್ಯಗ್ರಹಣವು ಸುಮಾರು 6 ಗಂಟೆ

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ? Read More »