Editor

Helth tips: ಖರ್ಜೂರದ ಆರೋಗ್ಯ ಪ್ರಯೋಜನಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಖರ್ಜೂರ ತಿನ್ನುವುದರಿಂದ ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಆರೋಗ್ಯಕರ ಜೀರ್ಣಕ್ರಿಯೆ.ಖರ್ಜೂರದಲ್ಲಿ ಕ್ಯಾರೊಟಿನಾಯ್ಡ್ಗಳು, ಫೀನಾಲಿಕ್ಸ್, ಪ್ಲೇವನಾಯ್ಡ್ಗಳು ಮತ್ತು ಇತರ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.ಮೆದುಳಿನಲ್ಲಿ ಉರಿಯೂತ ನಿವಾರಕ ಪರಿಣಾಮಗಳನ್ನು ಹೊಂದಿರುತ್ತವೆ. ಮಲಬದ್ಧತೆ, ಗರ್ಭಾವಸ್ಥೆಯಲ್ಲಿ ಸಾಮಾನ್ಯ ಕಾಳಜಿ.ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ.ಇದು ಮಧುಮೇಹಿಗಳಲ್ಲಿ ಗ್ಲೋಕೋಸ್ ಚಯಾಪಚಯ ಮತ್ತು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ.ಉರಿಯೂತವನ್ನು ಕಡಿಮೆ ಮಾಡುತ್ತದೆ.ಖರ್ಜೂರವು ಮೂತ್ರಪಿಂಡಗಳನ್ನು ನೆಫ್ರಾಟಾಕ್ಸಿಸಿಟಿಯಿಂದ ರಕ್ಷಿಸುತ್ತದೆ. ಖರ್ಜೂರವು ತ್ರಾಣವನ್ನು ಹೆಚ್ಚಿಸುವ ಅಮೈನೋ ಆಮ್ಲಗಳನ್ನು ಮತ್ತು ಪುರುಷ ಸಂತಾನೋತ್ಪತ್ತಿ ವ್ಯವಸ್ಥೆಯನ್ನು ಬೆಂಬಲಿಸುವ […]

Helth tips: ಖರ್ಜೂರದ ಆರೋಗ್ಯ ಪ್ರಯೋಜನಗಳು Read More »

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಲಕ್ಷದ್ವೀಪದಿಂದ ಪ್ರಾರಂಭವಾಗುವ ಬಿರುಗಾಳಿ ಮಾರುತಗಳು ಅಕ್ಟೋಬರ್ 3 ಮತ್ತು ಅಕ್ಟೋಬರ್ 9 ರ ನಡುವೆ ಬೆಂಗಳೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭಾರಿ ಮಳೆಯನ್ನು ತರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಹವಾಮಾನ ಮಾದರಿ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ನಿರೀಕ್ಷೆಯಿದೆ. ಹವಾಮಾನ ವರದಿಗಳ ಪ್ರಕಾರ, ಮಾಲ್ಡೀವ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ, ಇದು ಈಗ ಲಕ್ಷದ್ವೀಪದ

ಹವಾಮಾನ ವರದಿ| ರಾಜ್ಯದಲ್ಲಿ ನಾಲ್ಕು ದಿನ ಮಳೆ ಮುನ್ಸೂಚನೆ| ದಸರಾಗೆ ಬಿರುಸಾಗಲಿದೆ ವರ್ಷಧಾರೆ Read More »

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. 06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ. ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌,

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು Read More »

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಅಬುಜ್ಮದ್ನಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 20 ಮಾವೋವಾದಿಗಳನ್ನ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ರಿಸರ್ವ್ ಗಾರ್ಡ್ಗಳು (DRG) ಅಬುಜ್ಮದ್ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ವಿವಿಧ ಪೊಲೀಸ್ ಶಿಬಿರಗಳಿಂದ ಕಾರ್ಯಾಚರಣೆಗೆ ಹೊರಟರು. “ಗೋವೆಲ್-ನೆಂಡೂರ್-ತುಲ್ತುಲಿ ಎಂಬ ಮೂರು ಗ್ರಾಮಗಳ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂರು

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ Read More »

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ 8’ರ ವಿನ್ನರ್, ಮಜಾ ಭಾರತ, ಗಿಚ್ಚಿ ಗಿಲಿಗಿಲಿ ಖ್ಯಾತಿಯ ಮಂಜು ಪಾವಗಡ ಅವರು ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ನಂದಿನಿ ಎಂಬುವವರ ಜೊತೆ ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.‌ ಗುರು ಹಿರಿಯರ ಸಮ್ಮುಖದಲ್ಲಿ ಮಂಜು ಪಾವಗಡ ಮತ್ತು ನಂದಿನಿ ವಿವಾಹ ನಿಶ್ಚಿತಾರ್ಥ ನಡೆದಿದೆ. ಮಂಜು ಅವರ ಕೈ ಹಿಡಿದ ಹುಡುಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ತೀರಾ ಖಾಸಗಿಯಾಗಿ ನಡೆದ ಕಾರ್ಯಕ್ರಮದಲ್ಲಿ ಆಪ್ತರಷ್ಟೇ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಮಂಜು ಪಾವಗಡ ಹಾಗೂ ನಂದಿನಿ

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ Read More »

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ಸಮಗ್ರ ನ್ಯೂಸ್: ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ.04 ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ನಡೆದಿದೆ. ಮೃತರನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಪ್ರವೀಣ್ ಇವರು ಬೆಳಗ್ಗೆ 10 ಗಂಟೆಗೆ ಮರದ ರೆಂಬೆ ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತರಲಾಯಿತು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು. ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು

ಬೆಳ್ತಂಗಡಿ: ಮರದಿಂದ ಬಿದ್ದು ವ್ಯಕ್ತಿ ಸಾವು Read More »

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ.

ಸಮಗ್ರ ನ್ಯೂಸ್: ಎಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆದರೆ ಗೃಹ ಲಕ್ಷ್ಮೀಯರು ಮಾತ್ರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ಲ ಎಂಬ ಪಿಸುಮಾತುಗಳನ್ನು ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ. Read More »

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು.

ಸಮಗ್ರ ನ್ಯೂಸ್: ವಿಶ್ವ ವೇದಿಕೆಯಲ್ಲಿ ಬ್ರಿಟನ್‌ನ ಸೋಲು,ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ದಾರೆ. ಭಾರತದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಅವರು 193 ಮತಗಳಲ್ಲಿ 183 ಮತಗಳನ್ನು ಪಡೆದರು (ಪ್ರತಿ ದೇಶದಿಂದ ಒಬ್ಬರು ಪ್ರತಿನಿಧಿಸುತ್ತಾರೆ) ಮತ್ತು ಬ್ರಿಟನ್‌ನ ನ್ಯಾಯಮೂರ್ತಿ ಕ್ರಿಸ್ಟೋಫರ್ ಗ್ರೀನ್‌ವುಡ್ ಅವರನ್ನು ಸೋಲಿಸಿದರು. ಅವರು ಬ್ರಿಟನ್‌ನ ಈ ಹುದ್ದೆಯ ಮೇಲಿನ 71 ವರ್ಷಗಳ ಏಕಸ್ವಾಮ್ಯವನ್ನು ಮುರಿದರು. 11 ಸುತ್ತಿನ ಮತದಾನದಲ್ಲಿ, ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಸಾಮಾನ್ಯ ಸಭೆಯಲ್ಲಿ 193 ಮತಗಳಲ್ಲಿ 183

ಅಂತಾರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಆಯ್ಕೆಭಾರತಕ್ಕೆ ಭರ್ಜರಿ ಗೆಲುವು. Read More »

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ..

ಸಮಗ್ರ ನ್ಯೂಸ್: ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಮನೆಗೆ ಸೆಪ್ಟೆಂಬರ್ 3ರಂದು ಮಗುವಿನ ಆಗಮನ ಆಗಿದೆ. ಈ ಖುಷಿ ಸುದ್ದಿಯನ್ನು ದಂಪತಿ ರಿವೀಲ್ ಮಾಡಿದ್ದಾರೆ. ಹರ್ಷಿಕಾಗೆ ಹೆಣ್ಣುಮಗು ಜನಿಸಿದ್ದು, ಈ ವಿಚಾರ ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಹೆಣ್ಣು ಮಗುವಿನ ಆಗಮನದಿಂದ ಹರ್ಷಿಕಾ ಹಾಗೂ ಭುವನ್ ಕುಟುಂಬಸ್ಥರು ಸಂತಸಗೊಂಡಿದ್ದಾರೆ. ಇನ್ನೂ ಮುಖ್ಯವಾಗಿ ನವರಾತ್ರಿಯ ಮೊದಲ ದಿನವೇ ಹೆಣ್ಣು ಮಗು ಜನಿಸಿದೆ ಅನ್ನೋದು ಕುಟುಂಬದ ಖುಷಿ ಹೆಚ್ಚಿಸಿದೆ. ಹರ್ಷಿಕಾ ಪೂಣಚ್ಚ & ಭುವನ್ ಅವರದ್ದು ಪ್ರೇಮ ವಿವಾಹವಾಗಿದ್ದು,

ನವರಾತ್ರಿ ಮೊದಲ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಹರ್ಷಿಕಾ ಪೂಣಚ್ಚ.. Read More »

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..!

ಸಮಗ್ರ ನ್ಯೂಸ್: ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಅ.3 ರಂದು ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..! Read More »