Editor

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ

ಸಮಗ್ರ ನ್ಯೂಸ್: ಶಾಲಾ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆ ಸಿಗಲಿದೆ. ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು […]

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ Read More »

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು

ಸಮಗ್ರ ನ್ಯೂಸ್: ಕಾರು ರಿವರ್ಸ್ ತೆಗೆಯುತ್ತಿದ್ದಾಗ ಕಾರಿನಡಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ಹಮೀದ್ ಎಂಬವರ ಮನೆಯ ಅಂಗಳದಲ್ಲಿ ನಡೆದಿದೆ. ಕೊಕ್ಕಡದ ಹಮೀದ್ ಎಂಬವರ ಪುತ್ರ ನವಾಫ್ (10) ಮೃತ ಬಾಲಕ. ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾನೆ. ನವಾಫ್

ಬೆಳ್ತಂಗಡಿ: ರಿವರ್ಸ್ ತೆಗೆಯುವ ವೇಳೆ ಕಾರಿನಡಿಗೆ ಬಿದ್ದು ಬಾಲಕ‌ ಸಾವು Read More »

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಹಾಲಾಡಿ ರಸ್ತೆಯ ಕಕ್ಕೇರಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಧನುಷ್(19 ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ನಾಗೂರು ನಿವಾಸಿಯಾಗಿರುವ ಧನುಷ್ ಕೋಟೇಶ್ವರದ ಕಾಳವರ ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ ಸಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಧನುಷ್ ಕೋಟೇಶ್ವರದತ್ತ ರಸ್ತೆ

ಕುಂದಾಪುರ: ಯಮ ಸ್ವರೂಪಿಯಾಗಿ ಬಂದ‌ ಟಿಪ್ಪರ್ |ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಬಲಿ Read More »

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಸಮಗ್ರ ನ್ಯೂಸ್: : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆಯಾಗಿದ್ದಾರೆ. ಕಿಶೋರ್ ಕುಮಾರ್ ಪುತ್ತೂರು ಅವರನ್ನು ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಣೆ ಮಾಡಿದೆ. ಪುತ್ತೂರಿನ ಸರ್ವೆಯ ಬೊಟ್ಯಾಡಿಯ ನಿವಾಸಿಯಾದ ಕಿಶೋರ್ ಕುಮಾರ್ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಿಶೋರ್ ಕುಮಾರ್ ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಈ ಬಾರಿ ವಿಧಾನ

ವಿಧಾನ ಪರಿಷತ್ ಉಪಚುನಾವಣೆ| ದ.ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

ಕಲಬುರ್ಗಿಯಲ್ಲಿ ‘KSRP’ ಪೊಲೀಸ್ ಸಿಬ್ಬಂದಿಯಿಂದ ಯುವತಿಯ ಮೇಲೆ ಅತ್ಯಾಚಾರ ದೂರು ದಾಖಲು

ಸಮಗ್ರ ನ್ಯೂಸ್: ಇಸ್ಟ್ರಾಗ್ರಾಮ್ ಮೂಲಕ ಪರಿಚಯವಾಗಿ, ಬಳಿಕ ಲಾಡ್ಜ್‌ ಗೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ ಎಸೆಗಿರುವ ಕೆ ಎಸ್ ಆರ್ ಪಿ ಪೊಲೀಸ್ ಸಿಬ್ಬಂದಿಯ ವಿರುದ್ಧ ಇದೀಗ ಸಂತ್ರಸ್ತ ಯುವತಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಹೌದು ಅತ್ಯಾಚಾರ ಎಸಗಿರುವ KSRP ಸಿಬ್ಬಂದಿಯನ್ನು ಯಲ್ಲಾಲಿಂಗ ಮೇತ್ರಿ ಎಂದು ಹೇಳಲಾಗುತ್ತಿದ್ದು, ಇಬ್ಬರು ಸುಮಾರು ಐದು ತಿಂಗಳು ಇನ್‌ಸ್ಟಾಗ್ರಾಮ್‌ನಲ್ಲಿ ಮೇಸೆಜ್ ಮಾಡಿದ್ದಾರೆ. ಬಳಿಕ ಮೊಬೈಲ್ ನಂಬ‌ರ್ ಬದಲಾಯಿಸಿಕೊಂಡಿದ್ದಾರೆ. ಇಬ್ಬರ ಸ್ನೇಹ ಪ್ರೀತಿಗೆ

ಕಲಬುರ್ಗಿಯಲ್ಲಿ ‘KSRP’ ಪೊಲೀಸ್ ಸಿಬ್ಬಂದಿಯಿಂದ ಯುವತಿಯ ಮೇಲೆ ಅತ್ಯಾಚಾರ ದೂರು ದಾಖಲು Read More »

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ – ಪುತ್ತೂರು ಹೆದ್ದಾರಿಯ ಬೇರಿಕೆ ಸಮೀಪ ಸಂಭವಿಸಿದೆ. ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ಹಾಗೂ ಅದೇ ಕಡೆ ಸಾಗುತ್ತಿದ್ದ ಸ್ಕೂಟಿ ನಡುವೆ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಸ್ಕೂಟಿ ಸವಾರ ಬಸ್ ನ ಚಕ್ರದಡಿಗೆ ಬಿದ್ದಿದ್ದು, ಆತನ ಕೈನ ಮೇಲೆ ಬಸ್ ಚಕ್ರ ಹರಿದು, ಗಂಭೀರವಾಗಿ ಗಾಯಗೊಂಡಿರುವುದಾಗಿ

ಉಪ್ಪಿನಂಗಡಿ: ಬಸ್ ಮತ್ತು ಸ್ಕೂಟಿ ನಡುವೆ ಅಪಘಾತ; ಸವಾರ ಗಂಭೀರ Read More »

5,8 ಹಾಗು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಸ್ತಾವದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ಏನನ್ನೂ ಮಾಡದಂತೆ ಸೆ.30 ರಂದು ಎಚ್ಚರಿಸಿದೆ. 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಉಪ ನಿರ್ದೇಶಕರು ಸೆಪ್ಟೆಂಬರ್ 4 ಮತ್ತು 15ರಂದು ಜ್ಞಾಪನಾ ಪತ್ರಗಳನ್ನು ಹೊರಡಿಸಿದ್ದರು. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಯಾವುದನ್ನೂ ಮಾಡಬಾರದು. ಹೀಗಾದರೆ

5,8 ಹಾಗು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ Read More »

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..!

ಸಮಗ್ರ ನ್ಯೂಸ್:ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ಧಾರೆ. ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ,ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನಲ್ಲಿ ಆಟವಾಡುತ್ತಿದ್ದ ಪುಟ್ಟ ಬಾಲಕಿಯರು ಕೃಷಿ ಹೊಂಡಕ್ಕೆ ಬಿದ್ದು ಸಾವು..! Read More »

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ

ಸಮಗ್ರ ನ್ಯೂಸ್:ನಟ ಗೋವಿಂದ ಅವರು ತಮ್ಮದೇ ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ.ಮುಂಜನೆ 5 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ನಡೆದಿರೋ ಘಟನೆ. ಬುಲೆಟ್‌ ಫೈಯರ್ ಆಗಿದ್ದು, ಅವರ ಕಾಲಿಗೆ ತಾಗಿದೆ.ಅವರನ್ನು ಅಂಧೇರಿಯ ಕೃತಿ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.ಗುಂಡಿನ ಶಬ್ದ ಕೇಳಿದ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಗೋವಿಂದ ಅವರ ಗನ್‌ನ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ‘ನಟ ಹಾಗೂ ಶಿವಸೇನಾ ಮುಖ್ಯಸ್ಥ ಗೋವಿಂದ ಕೋಲ್ಕತ್ತಾ ತೆರಳಲು

ಗನ್‌ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ Read More »

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕಾಲಿವುಡ್ ನಟ ರಜನಿಕಾಂತ್ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅವರ ಹೃದಯ ಪರೀಕ್ಷೆ ಕೂಡ ಮಾಡಿಸಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಆತಂಕಗೊಂಡಿದ್ದಾರೆ. ಸೆಪ್ಟೆಂಬರ್ 30ರ ತಡರಾತ್ರಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಕಾರಣದಿಂದ ಅವರನ್ನು ತಕ್ಷಣವೇ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಈ

ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು Read More »