Editor

ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ ಸಿಗಲಿದೆ. ಈಗಾಗಲೇ ಅರಮನೆ ನಗರಿ ಮೈಸೂರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ […]

ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ Read More »

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಗೆ ಈಗಾಗಲೇ ಬಿಜೆಪಿಯಿಂದ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿತ್ತು. ಈಗ ಕಾಂಗ್ರೆಸ್ ಕೂಡ ರಾಜು ಪೂಜಾರಿಯವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಸಂಬಂಧ ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸೂಚನೆಯ ಮೇರೆಗೆ ರಾಜು ಪೂಜಾರಿ ಅವರನ್ನು ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ ಎಂದಿದ್ದಾರೆ.

ವಿಧಾನ ಪರಿಷತ್ ಉಪಚುನಾವಣೆ|ದ.ಕ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಆಯ್ಕೆ Read More »

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ನಾಲ್ವರು ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂ‌ರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ.ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು. ಬನ್ನೇರುಘಟ್ಟ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್‌ ಠಾಣೆ

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್ Read More »

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ

ಸಮಗ್ರ ನ್ಯೂಸ್: ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಲ್ಲಿ ನೇಪಾಳದಲ್ಲಿ 224 ಜನರು ಸಾವನ್ನಪ್ಪಿದ್ದಾರೆ.ಒಟ್ಟು 158 ಜನರು ಗಾಯಗೊಂಡಿದ್ದು, 24 ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಏಕ್ ನಾರಾಯಣ್ ಆರ್ಯಲ್ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಯಲ್, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 30,700 ಭದ್ರತಾ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ ಎಂದು ಕ್ಸಿಷ್ಣುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಪ್ರಯತ್ನಗಳು ಎರಡು ದಿನಗಳಲ್ಲಿ ಕೊನೆಗೊಳ್ಳಲಿವೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಒಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು,

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ Read More »

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ

ಸಮಗ್ರ ನ್ಯೂಸ್: ಸಿಎಂ ಸಿದ್ದದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಅವಘಡವೊಂದು ಸಂಭವಿಸಿದ್ದು, ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಉತ್ಸವ ಜ್ಯೋತಿಯ ಬೆಂಕಿಯ ಶಾಖ ತಗುಲಿದೆ. ಸಿಎಂ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ವೇಳೆ ಶರ್ಟ್ ಗೆ ಬೆಂಕಿಯ ಶಾಖ ತಗುಲಿದೆ.ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯ ನವರನ್ನು ಸರಿಸಿದ್ದು, ಗನ್ ಮ್ಯಾನ್ ಸಮಯ ಪ್ರಜ್ಞೆಯಿಂದ ಸಿಎಂ ಸಿದ್ದರಾಮಯ್ಯನವರು ಪಾರಾಗಿದ್ಧರೆ.

ಸಿದ್ದರಾಮಯ್ಯ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ Read More »

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು

ಸಮಗ್ರ ನ್ಯೂಸ್:ಅ.2-ಖಾಸಗಿ ಹೆಲಿಕಾಪ್ಟ‌ರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದೆ.ಹೆಲಿಕಾಪ್ಟ‌ರ್ ಪತನಗೊಂಡು ಕೂಡಲೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ.ಬೆಳಗ್ಗೆ 6.45ಕ್ಕೆ ಈ ಘಟನೆ ನಡೆದಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಪೂಣೆ ಬಳಿಯ ಆಕ್ಸ್ ಫರ್ಡ್ ಗಾಲ್ಫ್ ಕೋರ್ಸ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕ್ ಆಫ್‌ಆಗಿ ಮುಂಬೈನ ಜುಹುಗೆ ತೆರಳುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡು ಕೆಳಗೆ ಇಳಿದು ನೆಲಕ್ಕೆ ಅಪ್ಪಳಿಸಿದೆ ಎಂದು ಹಿಂಜೆವಾಡಿ ಪೊಲೀಸ್ ಠಾಣೆಯ

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಹಿನ್ನೆಲೆ ಜಾಮೀನು ಸಿಕ್ಕ ಬಳಿಕವೂ ಬಿಡುಗಡೆಯಾಗದೇ ಇದ್ದ ಮೂವರು ಆರೋಪಿಗಳು ಇಂದು (ಅ.2) ತುಮಕೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸೆ.23 ರಂದು ಎ-16 ಆರೋಪಿ ಕೇಶವಮೂರ್ತಿಗೆ ಹೈಕೋಟ್‌ನಿಂದ ಹಾಗೂ ಎ-15 ಆರೋಪಿ ಕಾರ್ತಿಕ್, ಎ-17 ಆರೋಪಿ ನಿಖಿಲ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಕೋರ್ಟ್ 2 ಲಕ್ಷ ರೂ. ಹಣ ಹಾಗೂ ಇಬ್ಬರು ಶೂರಿಟಿದಾರರನ್ನ ಹೊಂದಿಸಲು ಆರೋಪಿಗಳ ಕುಟುಂಬಸ್ಥರ ಬಳಿ ಕೇಳಿದ್ದರು. ಆದರೆ ಜಾಮೀನು ಶೂರಿಟಿಗೂ ಹಣವಿಲ್ಲದೇ ಆರೋಪಿಗಳ ಕುಟುಂಬಸ್ಥರು

ರೇಣುಕಾಸ್ವಾಮಿ ಕೊಲೆ ಪ್ರಕರಣದ 3 ಆರೋಪಿಗಳು ರಿಲೀಸ್ Read More »

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಕ್ತದಲ್ಲಿನ ಗ್ಲೋಕೋಸ್ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಮಧುಮೇಹ ರೋಗಿಗಳಿಗೆ ಸಹ ಒಳ್ಳೆಯದು.ಇಸಾಬೋಲ್ ಸೇವನೆಯು ಪೈಲ್ಸ್‌ಗೆ ಒಳ್ಳೆಯದು ಏಕೆಂದರೆ ಮಲಬದ್ಧತೆಯನ್ನು ತಡೆಯುತ್ತದೆ. 3 ಸ್ಪೂನ್ ಇಸಾಬೋಲ್ ಅನ್ನು ತೆಗೆದುಕೊಂಡು ಅದನ್ನು 6 ಚಮಚ ಮೊಸರಿಗೆ ಬೆರೆಸಿ ಮತ್ತು ರಾತ್ರಿ ಊಟದ ನಂತರ ಇದನ್ನು ನಿಯಮಿತವಾಗಿ ಸೇವಿಸಿದರೆ,ಲೂಸ್ ಮೋಷನ್‌ಗೆ ಸಂಬಂಧಿಸಿದ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತದೆ. ನೀವು ಒಂದು ಲೋಟ ಮಜ್ಜಿಗೆಯಲ್ಲಿ 2 ಚಮಚ ಇಸಾಬೋಲ್ ಅನ್ನು ಹಾಕಿ ಮಲಗುವ ಮುನ್ನ ಸೇವಿಸಬಹುದು.

Helth tips:ಇಸಾಬೋಲ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ Read More »

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ.  ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ. ಗಾಜಾ ಪಟ್ಟಿಯಿಂದ ಆರಂಭವಾದ ಸಂಘರ್ಷ ವಿಶ್ವವೇ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದಲ್ಲದೆ. ತನಗೆ ಎದುರಾಗಿ ಯಾರೇ ನಿಂತರೂ ಹೊಡೆದುರುಳಿಸುತ್ತೇನೆ ಎಂದು ಇಸ್ರೇಲ್ ಮುನ್ನುಗ್ಗುತ್ತಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ನಾಯಕನನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಶತ್ರುಗಳ ಗುಂಪಿನ ನಾಯಕನನ್ನು

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್ Read More »

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್ ಕಂಡಕ್ಟರ್ ನನ್ನು ಪ್ರಯಾಣಿಕನೋರ್ವ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಅಕ್ಟೋಬರ್ 01 ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ. ನಂತರ ಬಸ್ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ.

ಬಿಎಂಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕನೋರ್ವನಿಂದ ಚಾಕು ಇರಿತ Read More »