Editor

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆ ವರದಿಯಾಗಿದೆ. ಮುಂದುವರಿದಂತೆ ಭಾನುವಾರ(ಸೆ.29) ಕೂಡಾ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಬಹುದು ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ದಕ್ಷಿಣ ಒಳಭಾಗದಿಂದ […]

ರಾಜ್ಯದಲ್ಲಿ ಸೆ.30ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ಗ್ರಹಗಳು, ರಾಶಿ, ನಕ್ಷತ್ರಗಳು ಸಾಮಾನ್ಯರ ಮೇಲೆ ಅಸಾಮಾನ್ಯ ಪ್ರಭಾವ ಬೀರುತ್ತವೆ ಎಂಬುದು ಶಾಸ್ತ್ರ ನಂಬಿಕೆ. ದಿನಚರಿ ಆರಂಭದಲ್ಲಿ ಜ್ಯೋತಿಷ ಶಾಸ್ತ್ರವು ರಾಶಿಗಳ ಫಲವನ್ನು ತಿಳಿದುಕೊಳ್ಳಲು ಸಲಹೆ ನೀಡುತ್ತದೆ. ಈ ವಾರ (ಸೆ.29-ಅ.05) ಯಾವ ರಾಶಿಗಳಿಗೆ ಶುಭ? ಯಾರಿಗೆ ಲಾಭ? ತರುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಮೇಷ ರಾಶಿ:ಅಮಾವಾಸ್ಯೆ ನಂತರ ಕಾಲರಾತ್ರಿಯೆಂಬ ದೇವಿಯು ಶರದ್ರುತುವಿನಲ್ಲಿ ಉದಯಿಸಿ ನವರಾತ್ರಿ ಆರಂಭವಾಗುತ್ತದೆ. ಈ ಪರ್ವವು ಮೇಷ ರಾಶಿಯವರಿಗೆ ಅತ್ಯಂತ ಲಾಭವನ್ನು ತರುತ್ತದೆ. ಮಾತಾಪಿತರನ್ನು ವಂದಿಸಿ.

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.29 ರಿಂದ ಅ.5ರವರೆಗೆ ನಿಮ್ಮ ರಾಶಿಗಳ ಗೋಚಾರಫಲ Read More »

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಈಗಾಗಲೇ ಎರಡು ಸ್ಪರ್ಧಿಗಳು ಅನೌನ್ಸ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 11ರ ಲಾಂಚ್‌ಗೆ ಕೇವಲ ಒಂದೇ ದಿನ ಬಾಕಿ ಇದೆ. ರಾಜಾ ರಾಣಿ ರೀಲೋಡೆಡ್ನ ಗ್ರ್ಯಾಂಡ್ ಫಿನಾಲೆಯಲ್ಲಿ ಸ್ಪರ್ಧಿಗಳ ಹೆಸರು ರಿವೀಲ್‌ ಆಗುತ್ತಿದೆ. ಮೊದಲ ಸ್ಪರ್ಧಿಯಾಗಿ ಗೌತಮ್‌ ಜಾದವ್‌ ಎಂಟ್ರಿ ಕೊಟ್ಟಿದ್ದಾರೆ. ಗೌತಮಿ ಜಾಧವ್ ‘ನಾಗಪಂಚಮಿ’ ಎಂಬ

ಬಿಗ್ ಬಾಸ್ 11ಗೆ ಮೂವರು ಅಭ್ಯರ್ಥಿಗಳ ಹೆಸರು ರಿವೀಲ್| ದೊಡ್ಮನೆಗೆ ಎಂಟ್ರಿ ಕೊಟ್ಟ ಕೊಡಲಿದ್ದಾರೆ ಚೈತ್ರಾ ಕುಂದಾಪುರ Read More »

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

ಸಮಗ್ರ ನ್ಯೂಸ್‌: ಅ.2 ರಂದು ಗಾಂಧಿ ಜಯಂತಿಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನಾಡ ಹಬ್ಬಗಳನ್ನು ಮತ್ತು ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ ಗೌರವಪೂರ್ವಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಉಲ್ಲೇಖ-01 ರಂತೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಲಾಗಿರುತ್ತದೆ.

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ Read More »

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.

ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ Read More »

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ

ಸಮಗ್ರ ನ್ಯೂಸ್:ಇಸ್ರೇಲ್ ಮತ್ತು ಹಿಜ್ಜುಲ್ಲ ನಡುವಿನ ಸಮರದಿಂದಾಗಿ ಸೆ.20 ರಂದು ಸಂಜೆ ಇಸ್ರೇಲ್ ವಾಯುಪಡೆ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಭಾರಿ ದಾಳಿ ನಡೆಸಿ ಹಿಜ್ಜುಲ್ಲದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ.ಅಲ್ಲಿಯ ಮುಖ್ಯಸ್ಥನಾದ ಹಸನ್ ನಸ್ರಲ್ಲಾ ತಪ್ಪಿಸಿಕೊಂಡಿದ್ದಾನೆ.ದಾಳಿಗೆ 8 ಬಲಿಯಾಗಿ 76 ಮಂದಿಗೆ ಗಾಯಗೊಂಡಿದ್ದಾರೆ. ಅವರು ಅಂತಹ ದಾಳಿಯಿಂದ ಬದುಕುಳಿದಿದ್ದಾರೆಂದು ಇಸ್ರೇಲ್ ದಾಳಿಯಲ್ಲಿ ಆರು ಕಟ್ಟಡಗಳು ಧ್ವಂಸಗೊಂಡಿವೆ ಎಂದು ಹಿಜ್ಜುಲ್ಲಗೆ ನಿಕಟವಾದ ಮೂಲವೊಂದು ತಿಳಿಸಿದೆ.ಹಿಜ್ಜುಲ್ಲ ಮತ್ತು ಇಸ್ರೇಲ್ ನಡುವಿನ ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಬೈರುತ್‌ನಲ್ಲಿ ನಡೆದ ಅತಿದೊಡ್ಡ ದಾಳಿ

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ Read More »

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಹಣದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಈ ತಿಂಗಳು ಮುಗಿಯುವ ಮುನ್ನ ಸಿಹಿಸುದ್ದಿ, ಒಂದು ತಿಂಗಳ ಹಣ ಜಮಾವಣೆ ಮಾಡಲು ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ. ಸೆಪ್ಟೆಂಬ‌ರ್ ತಿಂಗಳು ಕೊನೆಗೆ ಬಂದರೂ ಜುಲೈ, ಆಗಸ್ಟ್ ತಿಂಗಳುಗಳ ಗೃಹಲಕ್ಷ ಹಣ ಮಾತ್ರ ಮಹಿಳೆಯರ ಖಾತೆಯನ್ನು ಸೇರಿಲ್ಲ. ಇದೀಗ ಜುಲೈ ತಿಂಗಳ ಹಣ ಒದಗಿಸಲು ಸಚಿವರು ಹಣಕಾಸು ಇಲಾಖೆಗೆ ತಾಕೀತು ಮಾಡಿದ್ದಾರೆ.ಹಣ ಜಮೆ ಆಗದಿರುವುದಕ್ಕೆ ಕಾರಣ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗದಿರುವುದು. ಸದ್ಯ ಇಲಾಖೆಯಿಂದ ಮೂರು ತಿಂಗಳ

ಗೃಹಲಕ್ಷ್ಮಿ ಹಣದ ನಿರೀಕ್ಷೆಯ ಮಹಿಳೆಯರಿಗೆ ಸಿಹಿಸುದ್ದಿ Read More »

ಟಾಟ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು, ಸಿಬ್ಬಂದಿಗಳು ಹೊರಗೋಡಿ ಬಂದಿದ್ದಾರೆ. ದಟ್ಟ ಹೊಗೆಯಿಂದಾಗಿ ಕೆಲ ಮಹಿಳಾ ಸಿಬ್ಬಂದಿಗಳಿಗೆ ಉಸಿರಾಟದ ತೊಂದರೆ ಎದುರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರಾಯಕೋಟೆ, ಡಂಕನಿಕೋಟೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಟಾಟ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ Read More »

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತರಾಷ್ಟ್ರೀಯ ಖ್ಯಾತಿಯ ಹಿರಿಯ ಕಲಾವಿದ ವಿಜಯ ಸಿಂಧೂ‌ರ್ ವಿಧಿವಶರಾಗಿದ್ದಾರೆ.ಇವರು ಜಮಖಂಡಿಯ ಸ್ವಗೃಹದಲ್ಲಿ ಮುಂಜಾನೆ ನಿಧನರಾಗಿದ್ದಾರೆ. ವಿಜಯ ಸಿಂಧೂರ ಅವರು 1940ರ ಜೂನ್ 7ರಂದು ಬಿಜಾಪುರ ಜಿಲ್ಲೆಯ ಬನಹಟ್ಟಿಯಲ್ಲಿ ಜನಿಸಿದರು. ತಂದೆ ಗಂಗಪ್ಪ, ತಾಯಿ ಬಸಮ್ಮ, ಬಾಲ್ಯದಿಂದಲೇ ಅವರು ಚಿತ್ರಕಲೆಯಲ್ಲಿ ಬಹಳ ಆಸಕ್ತ ವಹಿಸಿದ್ದರು. ಇಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂದು ಅಂದುಕೊಂಡಿದ್ದ ಅವರ ಮನಸ್ಸು ಚಿತ್ರಕಲೆಯತ್ತ ಸೆಳೆಯಿತು. ಅವರಿಗೆ ಕರ್ನಾಟಕ ಸರ್ಕಾರದ ವರ್ಣಶಿಲ್ಪಿ ವೆಂಕಟಪ್ಪ ಇಂದ್ರ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಬಂದಿವೆ.ಬಾಂಬೆ ಆರ್ಟ್ ಸೊಸೈಟಿ

ಚಿತ್ರ ಕಲಾವಿದ ‘ವಿಜಯ ‘ ಸಿಂಧೂರ ಇನ್ನಿಲ್ಲ Read More »

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ‌ಹಿಂತಿರುಗಿಸಿದ ಗ್ರಾಮ ಆಡಳಿತಾಧಿಕಾರಿ| ಪ್ರಶಸ್ತಿ ಹಿಂತಿರುಗಿಸಲು ಅಚ್ಚರಿಯ ಕಾರಣ ನೀಡಿದ ಪ್ರಥ್ವಿರಾಜ್‌

ಸಮಗ್ರ ನ್ಯೂಸ್: ರಾಜ್ಯ ಸರಕಾರದ ಕಂದಾಯ ಇಲಾಖೆಯ ನೀಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಯನ್ನು ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಆಡಳಿತ ಅಧಿಕಾರಿ ಹಿಂದಿರುಗಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮಪಂಚಾಯತ್ ಗ್ರಾಮ ಆಡಳಿತ ಅಧಿಕಾರಿ ಪೃಥ್ವಿರಾಜ್.ಪಿ.ಶೆಟ್ಟಿ ಪ್ರಶಸ್ತಿ ಹಿಂದಿರುಗಿಸಿದ ಅಧಿಕಾರಿ, ರಾಜ್ಯ ಕಂದಾಯ ಇಲಾಖೆ ಪ್ರತಿ ವರ್ಷ ನೀಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿ ಈ ಬಾರಿ ಪ್ರಥ್ವಿರಾಜ್ ಅವರಿಗೆ ಸಿಕ್ಕಿದೆ. ಆದರೆ ಅದನ್ನ ನಿರಾಕರಿಸಿ ಕಂದಾಯ ಇಲಾಖೆಯ ಆಯುಕ್ತರಿಗೆ

ಬೆಳ್ತಂಗಡಿ: ರಾಜ್ಯ ಪ್ರಶಸ್ತಿ ‌ಹಿಂತಿರುಗಿಸಿದ ಗ್ರಾಮ ಆಡಳಿತಾಧಿಕಾರಿ| ಪ್ರಶಸ್ತಿ ಹಿಂತಿರುಗಿಸಲು ಅಚ್ಚರಿಯ ಕಾರಣ ನೀಡಿದ ಪ್ರಥ್ವಿರಾಜ್‌ Read More »