Editor

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಪಶ್ಚಿಮದ ಸಮುದ್ರದ ಮೇಲಿಂದ ಗಂಟೆಗೆ 35ರಿಂದ 45ಕಿ.ಮೀ. ವೇಗದ ಗಾಳಿ […]

ರಾಜ್ಯದಲ್ಲಿ ಮತ್ತೆ ಮುಂದುವರಿದ ಮಳೆಯಬ್ಬರ| ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂವರಿಗೆ ಜಾಮೀನು ಮಂಜೂರು| ದರ್ಶನ್, ಪವಿತ್ರಾ‌ ಗೌಡ ಕಥೆ ಏನು?

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಆರೋಪವಿದ್ದ ಮೂವರಿಗೆ ಜಾಮೀನು ಮಂಜೂರು ಆಗಿದೆ. ಎ15 ಕಾರ್ತಿಕ್‌, ಎ16 ಕೇಶವಮೂರ್ತಿಗೆ , ಎ17 ನಿಖಿಲ್ ನಾಯಕ್ ಅವರಿಗೆ ಜಾಮೀನು ಮಂಜೂರು ಆಗಿದೆ 57ನೇ ಸಿಸಿಹೆಚ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್‌ ಕೇಶವಮೂರ್ತಿ ಅವರಿಗೆ ಜಾಮೀನು ಮಂಜೂರು ಮಾಡಿದೆ. ತುಮಕೂರು ಜೈಲಿನಲ್ಲಿ ಕೇಶವಮೂರ್ತಿ ಇದ್ದರು. ಕೊನೆ ನಂತರದ ಸಾಕ್ಷ್ಯ ನಾಶ ಆರೋಪ ಮಾತ್ರ ಇವರ ಮೇಲಿತ್ತು. ಈ ಜಾಮೀನು ಇತರೆ ಆರೋಪಿಗಳ ಪ್ರಕರಣಕ್ಕೆ ಸಂಬಂಧಿಸಿಲ್ಲ ಎಂದು

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂವರಿಗೆ ಜಾಮೀನು ಮಂಜೂರು| ದರ್ಶನ್, ಪವಿತ್ರಾ‌ ಗೌಡ ಕಥೆ ಏನು? Read More »

ಸುಳ್ಯ: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾದ ಯುವಕನಿಗೆ ಸುಳ್ಯದಲ್ಲಿ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದ್ದು ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವರ್ಷಿತ್ ಚೊಕ್ಕಾಡಿ ಹಾಗೂ ಮಿಥುನ್ ಸುಳ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಸರಗೋಡಿನ ಅಬ್ದುಲ್ ನಿಯಾಝ್ (22) ಹಲ್ಲೆಗೊಳಗಾದ ಯುವಕ. ಬೆಂಗಳೂರಿನಿಂದ ಸುಳ್ಯಕ್ಕೆ ಬರುವ ಬಸ್ಸಿಗೆ ಸುಳ್ಯದಲ್ಲಿ ಡಿಪ್ಲೋಮ ಕಲಿಯುತ್ತಿರುವ ಸಕಲೇಶಪುರದ ವಿದ್ಯಾರ್ಥಿನಿ ಹತ್ತಿದ್ದು, ಬಸ್ಸಿನಲ್ಲಿ ನಿಯಾಝ್ ಹತ್ತಿರ ಕುಳಿತ್ತಿದ್ದಾರೆ. ಈ ವೇಳೆ

ಸುಳ್ಯ: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್ Read More »

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’

ಸಮಗ್ರ ನ್ಯೂಸ್‌: ಈ ವರ್ಷದ ಆರಂಭದಲ್ಲಿ ರಿಲೀಸ್ ಆದ ಕಿರಣ್ ರಾವ್ ನಿರ್ದೇಶನದ ‘ಲಾಪತಾ ಲೇಡೀಸ್’ ಸಿನಿಮಾ ‘ಆಸ್ಕರ್ 2025’ಗೆ ಭಾರತದಿಂದ ಅಧಿಕೃತವಾಗಿ ಆಯ್ಕೆ ಆಗಿದೆ. ಮಹಿಳೆಯರ ಸಬಲೀಕರಣದ ಕುರಿತಾದ ಈ ಸಿನಿಮಾದಲ್ಲಿ ನಿಶಾಂಶಿ ಗೋಯಲ್, ಪ್ರತಿಭಾ ರಾಂತಾ, ಸ್ಪರ್ಶ್ ಶ್ರೀವಾಸ್ತವ, ಚಾಯಾ ಕದಮ್, ರವಿ ಕಿಶನ್ ನಟಿಸಿದ್ದಾರೆ. ‘ಲಾಪತಾ ಲೇಡಿಸ್’ ಅತ್ಯುತ್ತಮ ವಿದೇಶಿ ಸಿನಿಮಾ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದೆ. ಚೆನ್ನೈನ್‌ನಲ್ಲಿ ‘ಭಾರತ ಫಿಲ್ಡ್ ಫೆಡರೇಷನ್ ಸದಸ್ಯರು ಈ ಘೋಷಣೆ ಮಾಡಿದ್ದಾರೆ. ಈಗ ನಡೆಯಲಿರುವುದು 97ನೇ ಸಾಲಿನ

ಆಸ್ಕರ್ 2025/ ಭಾರತದಿಂದ ಅಧಿಕೃತವಾಗಿ ಆಯ್ಕೆಯಾದ ‘ಲಾಪತಾ ಲೇಡೀಸ್’ Read More »

ಕುಮಾರಧಾರದಲ್ಲಿ ಕುಸಿತಗೊಂಡ ನೀರಿನ ಮಟ್ಟ/ ಪುಣ್ಯ ಸ್ನಾನಕ್ಕೆ ಅವಕಾಶ

ಸಮಗ್ರ ನ್ಯೂಸ್‌: ಕುಮಾರಧಾರ ನದಿಯಲ್ಲಿ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು ಸ್ಥಾನಘಟ್ಟದಲ್ಲಿ ನೀರಿನ ಸೆಳೆತ ಜಾಸ್ತಿ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಕುಮಾರಧಾರ ನದಿಯಲ್ಲಿ ಭಕ್ತರಿಗೆ ಸ್ನಾನ ಮಾಡಲು ಜಿಲ್ಲಾಡಳಿತದಿಂದ ನಿರ್ಬಂಧ ವಿದಿಸಿತ್ತು. ಇದೀಗ ನೀರಿನ ಮಟ್ಟ ಕಡಿಮೆಯಾದ ಹಿನ್ನೆಲೆಯಲ್ಲಿ ನಿರ್ಬಂಧ ತೆರವುಗೊಳಿಸಿ. ಭಕ್ತರಿಗೆ ಪುಣ್ಯ ಸ್ನಾನ ಮಾಡಲು ಜಿಲ್ಲಾಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ರಕ್ಷಣೆಗಾಗಿ ಕುಮಾರಧಾರದಲ್ಲಿ ಗೃಹ ರಕ್ಷಕ ಸಿಬ್ಬಂದಿ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಕುಮಾರಧಾರದಲ್ಲಿ ಕುಸಿತಗೊಂಡ ನೀರಿನ ಮಟ್ಟ/ ಪುಣ್ಯ ಸ್ನಾನಕ್ಕೆ ಅವಕಾಶ Read More »

ಸಿಎಂ ವಿರುದ್ದದ ಮುಡಾ ಹಗರಣ| ಸೆ.24ರ ಮಧ್ಯಾಹ್ನ ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ನಂತರ ನಾಳೆ (ಸೆ.24) ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ

ಸಿಎಂ ವಿರುದ್ದದ ಮುಡಾ ಹಗರಣ| ಸೆ.24ರ ಮಧ್ಯಾಹ್ನ ಹೈಕೋರ್ಟ್ ತೀರ್ಪು Read More »

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| A16 ಆರೋಪಿ ಕೇಶವ ಸ್ವಾಮಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲು ಪಾಲಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಎ.16 ಆರೋಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಎ.16 ಆರೋಪಿಯಾಗಿರುವಂತ ಕೇಶವಮೂರ್ತಿ ಎಂಬುವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಆರೋಪಿಯಾಗಿರುವ ಕೇಶವ ಮೂರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.16 ಆರೋಪಿಯಾಗಿರುವ ಕೇಶವಮೂರ್ತಿ ವಿರುದ್ಧ ಕೊಲೆ ಪ್ರಕರಣ

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| A16 ಆರೋಪಿ ಕೇಶವ ಸ್ವಾಮಿಗೆ ಜಾಮೀನು ಮಂಜೂರು Read More »

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ

ಸಮಗ್ರ ನ್ಯೂಸ್:ತಿರುಪತಿಯಂತಹ ಮಹಾನ್ ಶ್ರದ್ದಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ. ಕನಿಷ್ಟ ಆಕ್ರೋಶವನ್ನೂ ಹೊರಹಾಕುತ್ತಿಲ್ಲದಿರುವುದು ದುರಂತ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ತಿರುಪತಿ ದೇವರ ಪ್ರಸಾದದ ಬಗೆಗಿನ ಅಪವಿತ್ರತೆಯ ಕುರಿತು ಮಾತನಾಡಿದರು. ಪ್ರಸಾದಕ್ಕೆ ದನದ ಕೊಬ್ಬನ್ನು ಹಾಕಿ ಭಕ್ತಾದಿಗಳಿಗೆ ಹಂಚಲಾಗಿದೆ. ಭಕ್ತರ ನಂಬಿಕೆಯ ಬುಡವನ್ನೇ ಅಲ್ಲಾಡಿಸಲಾಗುತ್ತಿದೆ. ಹಿಂದೂಗಳ ಮೇಲೆ ಈ

ಅಂಬಿಕಾ ಮಹಾವಿದ್ಯಾಲಯದಲ್ಲಿ ಜಾಗೃತಿ ಉಪನ್ಯಾಸ ಕಾರ್ಯಕ್ರಮ Read More »

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿಯಲ್ಲಿ ನಡೆದ ನಾಟಕೀಯ ಬೆಳವಣಿಗೆಗಳಿಂದಾಗಿ ದಿಲ್ಲಿ ಮುಖ್ಯಮಂತ್ರಿಯಾಗಿರುವ ಆತಿಷಿ ಸಿಂಗ್ ಮರ್ಲೆನಾ ಇಂದು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಅರವಿಂದ ಕೇಬ್ರಿವಾಲ್‌ ಕುಳಿತುಕೊಳ್ಳುತ್ತಿದ್ದ ಕುರ್ಚಿಯಲ್ಲಿ ಕುಳಿತುಕೊಂಡಿಲ್ಲ. ಬದಲಾಗಿ ಮುಖ್ಯಮಂತ್ರಿ ಕುರ್ಚಿ ಪಕ್ಕದಲ್ಲೇ ಬೇರೆ ಕುರ್ಚಿ ಹಾಕಿಕೊಂಡು ಕುಳಿತು ಅಧಿಕಾರ ಚಲಾಯಿಸುತ್ತಿರುವ ಫೋಟೋ ಭಾರಿ ವೈರಲ್ ಆಗಿದೆ.ಮುಖ್ಯಮಂತ್ರಿ ಎಂದಿಗಾದರೂ ಕೇಜ್ರವಾಲ್ ತಾನು ಅವರ ಆದೇಶ ಪಾಲಕಿ ಮಾತ್ರ ಎಂಬುದನ್ನು ಮರ್ಲಿನಾ ಸಾಂಕೇತಿಕವಾಗಿ ಈ ರೀತಿ ತೋರಿಸಿದ್ದಾರೆ. ಅಧಿಕಾರ ಸ್ವೀಕಾರ ಬಳಿಕ ಮಾಧ್ಯಮದವರ ಜೊತೆ

ಮುಖ್ಯಮಂತ್ರಿ ಆಸನ ಪಕ್ಕ ಬೇರೆ ಕುರ್ಚಿ ಹಾಕಿಕೊಂಡು ಕುಳಿತ ಆತಿಷಿ Read More »

ಕಾರು- ಬೈಕ್ ಡಿಕ್ಕಿ: ಪೋಷಕರ ಮುಂದೆಯೇ 5 ವರ್ಷದ ಮಗು ದಾರುಣ ಸಾವು

ಸಮಗ್ರ ನ್ಯೂಸ್: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕ ಲಿಖಿತ್ (5) ಎಂಬಾತ ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದಿದೆ. ಬೈಕ್‌ಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಹೊಡೆದ ರಭಸಕ್ಕೆ ಮಗು ಹಾರಿ ಬಿದ್ದಿದೆ. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಕಾರು- ಬೈಕ್ ಡಿಕ್ಕಿ: ಪೋಷಕರ ಮುಂದೆಯೇ 5 ವರ್ಷದ ಮಗು ದಾರುಣ ಸಾವು Read More »