Editor

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್

ಸಮಗ್ರ ನ್ಯೂಸ್: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಪಿಜಿ ಯುವ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ಸೆ.22 ರಂದು ನಡೆದಿದೆ. ರಾತ್ರಿ ವೇಳೆ ಮದ್ಯದ ಅಮಲಿನಲ್ಲಿದ್ದ ವೈದ್ಯನ ವಿಡಿಯೋ ಮಾಡಿ ರೋಗಿಗಳ ಸಂಬಂಧಿಕರು ತರಾಟೆಗೆತ್ತಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಯುವ ವೈದ್ಯ ಕುಡಿದು ಎಲ್ಲಿಯೋ ಬಿದ್ದು ಬಟ್ಟೆಯೆಲ್ಲಾ ಸಂಪೂರ್ಣ ಕೆಸರು ಮಣ್ಣು ಮೆತ್ತಿಕೊಂಡಿದೆ. ಅದೇ ರೀತಿಯಲ್ಲಿ ಡಾಕ್ಟರ್ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು […]

ಮಂಗಳೂರು: ಖಾಸಗಿ ಆಸ್ಪತ್ರೆಯ ಪಿಜಿ ವೈದ್ಯ ಕುಡಿದು ಕರ್ತವ್ಯಕ್ಕೆ ಹಾಜರ್| ವಿಡಿಯೋ ವೈರಲ್ Read More »

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ

ಸಮಗ್ರ ನ್ಯೂಸ್: ಜೈಪುರದಲ್ಲಿ ಭಾನುವಾರ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ರಿಯಾ ಸಿಂಘಾ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಅವರು ಜಾಗತಿಕ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆ ಭಾನುವಾರ ರಾಜಸ್ಥಾನದ ಜೈಪುರದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ರಿಯಾ, ಇಂದು ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟವನ್ನು ಗೆದ್ದಿದ್ದೇನೆ. ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಟ್ಟಕ್ಕೆ ಬರಲು ನಾನು ತುಂಬಾ ಶ್ರಮಪಟ್ಟಿದ್ದೇನೆ ಎಂದರು.ನಟಿ

ರಿಯಾ ಸಿಂಘಾಗೆ ಮಿಸ್ ಯೂನಿವರ್ಸ್ ಇಂಡಿಯಾ 2024 ಕಿರೀಟ Read More »

ಹವಾಮಾನ ವರದಿ| ರಾಜ್ಯದಲ್ಲಿ ‌ಮತ್ತೆ ಚುರುಕುಗೊಂಡ ಮುಂಗಾರು| ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂಗಾರು ಚುರುಕು ಪಡೆದ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಬೆಳಗಾವಿ, ವಿಜಯಪುರದಲ್ಲಿ ಸೆ.23 ರಿಂದ ಮುಂದಿನ ಎರಡು ದಿನ ಹಾಗೂ ಧಾರವಾಡ, ಹಾವೇರಿ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ಸೆ.23ರಂದು ಭಾರಿ ಮಳೆ ಬೀಳುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ರಾಯಚೂರು, ಕೊಪ್ಪಳ

ಹವಾಮಾನ ವರದಿ| ರಾಜ್ಯದಲ್ಲಿ ‌ಮತ್ತೆ ಚುರುಕುಗೊಂಡ ಮುಂಗಾರು| ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ Read More »

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಸ್ಥಳೀಯ ಸಮಯ) ನ್ಯೂಯಾರ್ಕ್ ನಲ್ಲಿ ಕೃತಕ ಬುದ್ಧಿಮತ್ತೆಯ ವಿಷಯದಲ್ಲಿ ಭಾರತ ಮತ್ತು ಯುಎಸ್ ನಡುವಿನ ಸಂಬಂಧವನ್ನು ಎತ್ತಿ ತೋರಿಸಿದರು ಮತ್ತು ಅದಕ್ಕೆ ಹೊಸ ಅರ್ಥವನ್ನು ನೀಡಿದರು, ಇದನ್ನು ಅಮೆರಿಕ-ಭಾರತ ಸ್ಫೂರ್ತಿ ಎಂದು ಬಣ್ಣಿಸಿದರು. ಇಲ್ಲಿನ‌ ನಸ್ಸೌ ಕೊಲಿಸಿಯಂನಲ್ಲಿ ಮೋದಿ ಮತ್ತು ಯುಎಸ್ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡಿದ ಅವರು, “ಜಗತ್ತಿಗೆ, ಎಐ ಎಂದರೆ ಕೃತಕ ಬುದ್ಧಿಮತ್ತೆ, ಆದರೆ ನನಗೆ ಎಐ ಎಂದರೆ ಅಮೆರಿಕನ್-ಭಾರತೀಯ ಮನೋಭಾವ. ಇದು ವಿಶ್ವದ ಹೊಸ

ನ್ಯೂಯಾರ್ಕ್: ‘AI’ ಎಂದರೆ ಅಮೇರಿಕಾ-ಭಾರತ ಸ್ಪೂರ್ತಿ| ಹೊಸ ಅರ್ಥದೊಂದಿಗೆ ಉಭಯ ರಾಷ್ಟ್ರಗಳ ಸಂಬಂಧ ಬಣ್ಣಿಸಿದ ಮೋದಿ Read More »

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ

ಸಮಗ್ರ ನ್ಯೂಸ್: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ಒಲವು ಹೊಂದಿರುವ ಅನುರಾ ಕುಮಾರ ದಿಸ್ಸಾನಾಯಕೆ ಅವರು ಹಾಲಿ ಉದಾರವಾದಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಭಾನುವಾರ ವರದಿ ಮಾಡಿದೆ. ಈ ಮೂಲಕ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆಯಾಗಿದ್ದಾರೆ. ಶನಿವಾರ ಮತದಾನ ನಡೆಯಿತು. ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು

ಶ್ರೀಲಂಕಾಗೆ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾ ನಾಯಕೆ Read More »

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ Read More »

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ

ಸಮಗ್ರ ನ್ಯೂಸ್: ದೆಹಲಿಯ ಶ್ರದ್ಧಾ ವಾಕರ್‌ ಹತ್ಯೆ ಮಾದರಿಯಲ್ಲೇ ಪ್ರಿಯಕರನೊಬ್ಬ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು 20 ತುಂಡು ಮಾಡಿ, ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟ ಆಘಾತಕಾರಿ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ನಡೆದಿದೆ. ವೀರಣ್ಣ ಆಶ್ರಮದಲ್ಲಿ ಮೂರನೇ ಅಂತಸ್ತಿನಲ್ಲಿ ಯುವತಿಯನ್ನು ಕೊಲೆ ಮಾಡಿ, ನಂತರ ಆಕೆಯ ದೇಹವನ್ನು 20 ತುಂಡುಗಳನ್ನು ಮಾಡಿ ಫ್ರಿಡ್ಜ್‌ನಲ್ಲಿ ಶೇಖರಣೆ ಮಾಡಿಟ್ಟಿದ್ದಾನೆ. ಕೊಲೆಯಾದ ಯುವತಿ ಅಂತರರಾಜ್ಯದವರಾಗಿದ್ದಾರೆ ಎಂದು ತಿಳಿದುಬಂದಿದೆ. 15ರಿಂದ 20ದಿನಗಳ ಹಿಂದೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೈಯಾಲಿಕಾವಲ್‌ ಪೊಲೀಸರು

ಭಯಾನಕ ಕೃತ್ಯಕ್ಕೆ ಬೆಚ್ಚಿ ಬಿದ್ದ ಬೆಂಗಳೂರು| ಪ್ರೇಯಸಿಯ ಕೊಂದು 20 ತುಂಡು ಮಾಡಿ ಪ್ರಿಡ್ಜ್ ನಲ್ಲಿ ಇರಿಸಿ ಪರಾರಿಯಾದ ಪ್ರಿಯಕರ Read More »

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಬೈಂದೂರು ಠಾಣಾ ವ್ಯಾಪ್ತಿಯ ಬಾಲಕನೊಬ್ಬ ಸ್ಥಳೀಯಮಸೀದಿಗೆ ನಮಾಜ್‌ಗೆ ತೆರಳಿದ ಸಂದರ್ಭದಲ್ಲಿ ಆತನಿಗೆ ಲೈಂಗಿಕ ಕಿರುಕುಳ ನೀಡುವಉದ್ದೇಶದಿಂದ ಆತನಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವರದಿಯಾಗಿದ್ದ ಪ್ರಕರಣ ಸುಳ್ಳು ಎಂದು ಪೊಲೀಸರು ಬಿ ರಿಪೋರ್ಟ್ ನೀಡಿದ್ದು, ಸದ್ರಿ ಪ್ರಕರಣಕ್ಕೆ ಜಿಲ್ಲಾ ಪೋಕ್ಸೊ ನ್ಯಾಯಾಲಯ ಮರುಜೀವ ನೀಡಿದೆ. ಪ್ರಕರಣದಲ್ಲಿ ಆರೋಪಿಯಾದ ಫೈಜಲ್ ಬ್ಯಾರಿಮತ್ತು ಆ ಬಗ್ಗೆ ಬೇರೆಯವರಿಗೆ ವಿಷಯ ತಿಳಿಸದಂತೆ ಕೊಲೆ ಬೆದರಿಕೆ ಹಾಕಿರುವ ಆರೋಪಿಗಳಾದಆಖಿಲಾ ಮತ್ತು ಮೊಹಾಜಮ್‌ರವರ ಮೇಲೆ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ

ಪೋಕ್ಸೋ ಪ್ರಕರಣ ಸುಳ್ಳೆಂದು ಬಿ ರಿಪೋರ್ಟ್ ನೀಡಿದ ಪೊಲೀಸರು| ಪ್ರಕರಣಕ್ಕೆ ಮರುಜೀವ ನೀಡಿದ ಉಡುಪಿ ಜಿಲ್ಲಾ ಪೋಕ್ಸೋ ನ್ಯಾಯಾಲಯ Read More »

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ

ಸಮಗ್ರ ನ್ಯೂಸ್: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಉಜಿರೆ: ರಬ್ಬರ್ ಟ್ಯಾಪಿಂಗ್ ತರಬೇತಿ ಗೆ ಅರ್ಜಿ‌ ಆಹ್ವಾನ Read More »

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ

ಸಮಗ್ರ ನ್ಯೂಸ್: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ‌ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ ಮತ್ತು ಇತರ ಆಯ್ಕೆಗಳಿಗೆ

ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ Read More »