Editor

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌

ಸಮಗ್ರ ನ್ಯೂಸ್‌: ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಬಿಜೆಪಿಯ ಪ್ರಸ್ತಾಪವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟೀಕಿಸಿದ್ದು, ಇದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. “ಕಾಂಗ್ರೆಸ್ ಪಕ್ಷವು ಒಂದು ರಾಷ್ಟ್ರ ಒಂದು ಚುನಾವಣೆಯನ್ನು ನಂಬುವುದಿಲ್ಲ, ಪ್ರಾಯೋಗಿಕವಾಗಿ ಅದು ಸಾಧ್ಯವಿಲ್ಲ. ಅವರು ಎಲ್ಲಾ ರಾಜ್ಯ ಪಕ್ಷಗಳನ್ನು ಸಡಿಲಿಸಲು ಬಯಸುತ್ತಾರೆ. ಅವರು ರಾಷ್ಟ್ರೀಯ ಪಕ್ಷಗಳು ಮಾತ್ರ ಉಳಿಯಬೇಕು ಎಂದು ಅವರು ಭಾವಿಸುತ್ತಾರೆ. ಫೆಡರಲ್ ರಚನೆಯಲ್ಲಿ ನೀವು ಅದನ್ನು ಮಾಡಲು ಸಾಧ್ಯವಿಲ್ಲ ಅವರು ದೊಡ್ಡ ರಿಸ್ಕ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಶಿವಕುಮಾ‌ರ್ ತಿಳಿಸಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ/ ಪ್ರಾಯೋಗಿಕವಲ್ಲ ಎಂದು ಡಿ ಕೆ ಶಿವಕುಮಾರ್‌ Read More »

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಮನೋಜ್ ಕುಮಾರ್ ಕೋಡಿಕಲ್ , ಉಪಮೇಯರ್ ಆಗಿ ಬಿಜೆಪಿ ಬೆಂಬಲಿತ ಸದಸ್ಯೆ ಭಾನುಮತಿ ಆಯ್ಕೆ ಆಗಿದ್ದಾರೆ. ಇಂದು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆದ ಚುನಾವಣೆ ನಡೆದಿದ್ದು, ಮೇಯರ್ ಹುದ್ದೆಗೆ ಎಸ್ ಸಿ ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಮೇಯರ್ ಆಯ್ಕೆ ಅವಿರೋಧವಾಗಿ ನಡೆಯಿತು. ಒಟ್ಟು 60 ವಾರ್ಡ್ ಗಳನ್ನು ಹೊಂದಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು

ಮಂಗಳೂರು: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆ Read More »

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ

ಸಮಗ್ರ ನ್ಯೂಸ್‌: ಉತ್ತರ ಕರ್ನಾಟಕ ಭಾಗದ ಜನರ ಜೀವನಾಡಿಯಾಗಿರುವ ಕಳಸಾ ಬಂಡೂರಿ ನಾಲಾ ಕುಡಿಯುವ ನೀರಿನ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅನುಮೋದನೆ ಒದಗಿಸಿಕೊಡುವಂತೆ ಮಂಡಳಿಯ ಅಧ್ಯಕ್ಷರಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯಯನವರು ಜನ್ಮದಿನದ ಶುಭಾಶಯ ತಿಳಿಸಿ. ನಾಲಾ ಯೋಜನೆಯ ಬಗ್ಗೆ ವಿವರವಾಗಿ ಬರೆದಿದ್ದಾರೆ. ನಿಮ್ಮ ಜನ್ಮದಿನಕ್ಕೆ ಶುಭಾಶಯಗಳು, ನಿಮಗೆ ಭಗವಂತ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನೀಡಲಿ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ಮಹತ್ವದ

ಕಳಸಾ ಬಂಡೂರಿ ನಾಲಾ ಯೋಜನೆಗೆ ಶೀಘ್ರ ಅನುಮೋದನೆ/ ಮೋದಿಗೆ ಪತ್ರ ಬರೆದ ಸಿದ್ಧರಾಮಯ್ಯ Read More »

ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳ ಕೇಸ್ ಆರೋಪಿ ತಮಿಳು ಚಿತ್ರರಂಗದಲ್ಲಿ ಹೆಸರುವಾಸಿಯಾದ ಜಾನಿ ಮಾಸ್ಟರ್‌ ಬಂಧನವಾಗಿದೆ. ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಬೆಂಗಳೂರಿನಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ

ಲೈಂಗಿಕ ಕಿರುಕುಳ ಕೇಸ್ ಆರೋಪದಲ್ಲಿ ಕೊರಿಯೋಗ್ರಫರ್ ಜಾನಿ ಮಾಸ್ಟರ್‌ ಅರೆಸ್ಟ್ Read More »

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಜೀವ ಬೆದರಿಕೆ ಮತ್ತು ಜಾತಿನಿಂದನೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಅಂದರಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಇದೀಗ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ

ಶಾಸಕ ಮುನಿರತ್ನಗೆ ಮತ್ತೊಂದು ಟೆನ್ಷನ್: ಅತ್ಯಾಚಾರ ಆರೋಪದಡಿ ಎಫ್ಐಆರ್ ದಾಖಲು Read More »

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ

ಸಮಗ್ರ ನ್ಯೂಸ್: ರಾಜ್ಯದ ಎರಡನೇ ಅತಿ ಎತ್ತರದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಉದ್ಘಾಟನ ಸಮಾರಂಭ ನಗರದ ಕದ್ರಿ ಪಾರ್ಕ್‌ನಲ್ಲಿ ನಡೆಯಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ಕೇಂದ್ರ ಸರಕಾರದ ಸ್ಮಾರ್ಟ್‌ಸಿಟಿ ಯೋಜನೆಯ ಮೂಲಕ ರಾಷ್ಟ್ರಧ್ವಜ ಸ್ತಂಭ ನಿರ್ಮಾಣದ ಮಹತ್ತರ ಕಾರ್ಯ ನಡೆದಿದ್ದು, ಇದರೊಂದಿಗೆ ಭಾರತೀಯತೆಯ ಗರ್ವ ಮತ್ತಷ್ಟು ಇಮ್ಮಡಿಗೊಳಿಸಿದೆ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ರಾಷ್ಟ್ರೀಯ ಭಾವನೆ, ಚಿಂತನೆ ಮತ್ತಷ್ಟು ಹೆಚ್ಚಾಗಿದೆ. ರಾಷ್ಟ್ರಧ್ವಜ ನಮ್ಮ ಸ್ವಾಭಿಮಾನದ ಸಂಕೇತ ಎಂದು

ಮಂಗಳೂರು: ರಾಜ್ಯದ ಎರಡನೇ ಅತಿದೊಡ್ಡ ದ್ವಜಸ್ಥಂಭ ಕದ್ರಿ ಪಾರ್ಕ್ ನಲ್ಲಿ ಲೋಕಾರ್ಪಣೆ Read More »

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ

ಸಮಗ್ರ ನ್ಯೂಸ್: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ವಿತರಿಸಲಾಗುವ ಲಡ್ಡುಗಳಲ್ಲಿ ಹಿಂದಿನ ವೈಎಸ್‌ಆರ್ ಕಾಂಗ್ರೆಸ್ ನೇತೃತ್ವದ ಸರ್ಕಾರ ಪ್ರಾಣಿಗಳ ಕೊಬ್ಬು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇದೀಗ ಗಂಭೀರ ಆರೋಪ ಮಾಡಿದ್ದಾರೆ. ಬುಧವಾರ ನಡೆದ ಎನ್ ಡಿಎ ಪಕ್ಷದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು ಹಿಂದಿನ ಸರ್ಕಾರದ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದಾರೆ. ಆದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಆರೋಪವನ್ನು ಕಟುವಾಗಿ ತಳ್ಳಿಹಾಕಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷವು

ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬು ಬಳಕೆ..? ಚಂದ್ರಬಾಬು ನಾಯ್ಡು ಗಂಭೀರ ಆರೋಪ Read More »

‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟ ಚಂದ್ರನಲ್ಲಿಗೆ ಭಾರತೀಯ ಗಗನಯಾನಿಗಳನ್ನು ಕಳಿಸುವುದು,ಶುಕ್ರ ಗ್ರಹ ಅಧ್ಯಯನ ಹಾಗೂ ಅನಿಮೇಷನ್ ತಂತ್ರಜ್ಞಾನಕ್ಕೆ ಉತ್ತೇಜನ ನೀಡುವ ಯೋಜನೆಗಳಿಗೆ ಸೆ.18 ರಂದು ಅನುಮೋದನೆ ನೀಡಿದೆ. ಭಾರತೀಯ ಗಗನಯಾನಿಗಳು ಚಂದಿರನ ಅಂಗಳದಲ್ಲಿ ಇಳಿದು, ಪುನಃ ಭೂಮಿಗೆ ಮರಳಲು ಅಗತ್ಯವಿರುವ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ಪ್ರಾತ್ಯಕ್ಷೀಕೆ ಒಳಗೊಂಡ ‘ಚಂದ್ರಯಾನ-4’ ಬಾಹ್ಯಾಕಾಶ ಕಾರ್ಯಕ್ರಮಕ್ಕೂ ಸಂಪುಟ ಅನುಮೋದನೆ ನೀಡಿದೆ. ಬಾಹ್ಯಾಕಾಶ ಯೋಜನೆಗೆ ಅಗತ್ಯವಿರುವ ಗಗನನೌಕೆ ಅಭಿವೃದ್ಧಿ ಮತ್ತು ಅದರ ಉದಾವಣೆಯ ಹೊಣೆಯನ್ನು ಇಸ್ರೋ ನಿಭಾಯಿಸಲಾಗುವುದು. 2040ರ ವೇಳೆಗೆ ಈ

‘ಚಂದ್ರಯಾನ-4’ಕ್ಕೆ ಸಚಿವ ಸಂಪುಟ ಅನುಮೋದನೆ Read More »

ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಸಮಗ್ರ ನ್ಯೂಸ್: ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ಹೊಂದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಶೇ. 40 ಪರ್ಸೆಂಟೆಜ್ ಆರೋಪ ಮಾಡಿದ್ದ ಕೆಂಪಣ್ಣ ಅವರು ಗುತ್ತಿಗೆದಾರರ ಪರ ಹೋರಾಟ ಮಾಡಿದ್ದರು.

ಅನಾರೋಗ್ಯದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ Read More »

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ. ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ

ಕಾರ್ಕಳ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ, ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ಆಕ್ರೋಶ Read More »