ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ
ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ. […]
ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ Read More »










