Editor

ಬೆಳ್ತಂಗಡಿ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಸರ್ಕಾರಿ ಜಮೀನು ಒತ್ತುವರಿ| ಹೈಕೋರ್ಟ್ ನಿಂದ ಜಿಲ್ಲಾಡಳಿತಕ್ಕೆ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್‌ ಆಚಾರ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ […]

ಬೆಳ್ತಂಗಡಿ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಸರ್ಕಾರಿ ಜಮೀನು ಒತ್ತುವರಿ| ಹೈಕೋರ್ಟ್ ನಿಂದ ಜಿಲ್ಲಾಡಳಿತಕ್ಕೆ ನೋಟೀಸ್ ಜಾರಿ Read More »

ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ Read More »

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ| 70 ವರ್ಷ ಮೀರಿದ ಪ್ರತಿಯೊಬ್ಬರಿಗೂ ಉಚಿತ ವಿಮೆ ಘೋಷಣೆ

ಸಮಗ್ರ ನ್ಯೂಸ್: 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರನ್ನು ಈಗ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ವಿಮಾ ಯೋಜನೆಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಪ್ರಮುಖ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕ್ರಮವು ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ ಸುಮಾರು 4.5 ಕೋಟಿ ಕುಟುಂಬಗಳಿಗೆ ಕುಟುಂಬ ಆಧಾರದ ಮೇಲೆ 5 ಲಕ್ಷ ರೂ.ಗಳ ಉಚಿತ ಆರೋಗ್ಯ ವಿಮಾ ರಕ್ಷಣೆಯೊಂದಿಗೆ ಪ್ರಯೋಜನವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ| 70 ವರ್ಷ ಮೀರಿದ ಪ್ರತಿಯೊಬ್ಬರಿಗೂ ಉಚಿತ ವಿಮೆ ಘೋಷಣೆ Read More »

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ Read More »

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲು ಪ್ಲಾನ್ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಈ ಕಾರ್ಡ್ ಗಳನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಆಹಾರ ಭದ್ರತೆ

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ Read More »

ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಅದ್ಧೂರಿ ಸ್ವಾಗತ/ ನಾಳೆ ಪ್ರಧಾನಿ ನಿವಾಸದಲ್ಲಿ ಔತಣಕೂಟ

ಸಮಗ್ರ ನ್ಯೂಸ್‌: ಪ್ಯಾರಿಸ್‌ ಪ್ಯಾರಾಲಿಂಪಿಕ್ಸ್‌ನಲ್ಲಿ ಐತಿಹಾಸಿಕ ಪದಕ ಸಾಧನೆಗೈದ ಭಾರತದ ಕ್ರೀಡಾಪಟುಗಳು ಮಂಗಳವಾರ ತವರಿಗೆ ಹಿಂದಿರುಗಿದ್ದು, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕ್ರೀಡಾಪಟುಗಳು, ಕೋಚ್‌ಗಳು ಹಾಗೂ ಅಧಿಕಾರಿಗಳನ್ನು ನೂರಾರು ಕ್ರೀಡಾಭಿಮಾನಿಗಳು, ಕುಟುಂಬಸ್ಥರು ಹಾಗೂ ಅಧಿಕಾರಿಗಳು ಸ್ವಾಗತಿಸಿದರು. ಹೂಹಾರ ಹಾಕಿ, ಸಿಹಿ ತಿಂಡಿ ಹಂಚಿ, ಜೈಕಾರ ಕೂಗುತ್ತಾ ಅವರನ್ನು ಸ್ವಾಗತಿಸಲಾಯಿತು. ಭಾರತ ಪ್ಯಾರಾಲಿಂಪಿಕ್‌ ಸಮಿತಿ ಅಧ್ಯಕ್ಷ ದೇವೇಂದ್ರ ಝಝಾರಿಯಾ ಸೇರಿದಂತೆ ಕೆಲ ಕ್ರೀಡಾಪಟುಗಳನ್ನು ಅಭಿಮಾನಿಗಳು ಹೆಗಲ ಮೇಲೆ ಕುಳ್ಳಿರಿಸಿ ಸಂಭ್ರಮಿಸಿದರು. ಭಾರತದ ತ್ರಿವರ್ಣ ಧ್ವಜ ಪ್ರದರ್ಶಿಸಿ,

ಪ್ಯಾರಾಲಿಂಪಿಕ್ಸ್‌ ಪದಕ ವಿಜೇತರಿಗೆ ಅದ್ಧೂರಿ ಸ್ವಾಗತ/ ನಾಳೆ ಪ್ರಧಾನಿ ನಿವಾಸದಲ್ಲಿ ಔತಣಕೂಟ Read More »

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಮಗ್ರ ನ್ಯೂಸ್‌: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಅಮೆರಿಕದಲ್ಲಿ ಮೀಸಲಾತಿ ರದ್ದು ಕುರಿತು ನೀಡಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದು, ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತಿತ್ತು. ರಾಹುಲ್ ಹೇಳಿಕೆಯಿಂದ ಎಸ್ಸಿ, ಎಸ್‌ಟಿ ಸಮುದಾಯ ಗಾಬರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿಗೆ ನಾಚಿಕೆ

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಸಮಗ್ರ ನ್ಯೂಸ್‌: ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 11 ರಂದು ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ. ಈ ಹಿಂದೆ ಅವರಿಗೆ ನೀಡಲಾಗಿದ್ದ ಕಸ್ಟಡಿ ಅವಧಿ ಮುಗಿದ ನಂತರ, ಶಾ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಸರೆನ್ಸಿಂಗ್ ಮೂಲಕ ರೊಸ್ ಅವೆನ್ಯೂ ಕೋರ್ಟ್‌ ಗೆ ಹಾಜರಾದರು.

ಕೇಜ್ರಿವಾಲ್‌ಗೆ ಸಿಗದ ಬಿಡುಗಡೆ ಭಾಗ್ಯ/ ಸೆಪ್ಟೆಂಬರ್ 25 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ Read More »

5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್‌ ಶಾ ಹೇಳಿಕೆ

ಸಮಗ್ರ ನ್ಯೂಸ್‌: ಭಾರತದಲ್ಲಿ ಸೈಬರ್ ಅಪರಾಧಗಳನ್ನು ತಡೆಯಲು ಮುಂದಿನ 5 ವರ್ಷಗಳಲ್ಲಿ 5,000 ಸೈಬರ್ ಕಮಾಂಡೋಗಳನ್ನು ನೇಮಿಸಿಕೊಳ್ಳಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ 5000 ಕಮಾಂಡೋಗಳಿಗೆ ಸೈಬರ್‌ ದಾಳಿಯನ್ನು ತಡೆಯುವುದರ ಬಗ್ಗೆ ತರಬೇತಿ ನೀಡಲಾಗುವುದು ಎಂದರು. ‘ವಿಶ್ವದ ಶೇ.46 ರಷ್ಟು ಡಿಜಿಟಲ್ ವಹಿವಾಟುಗಳು ಭಾರತದಲ್ಲಿ ನಡೆಯುತ್ತಿವೆ. ಸೈಬರ್‌ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳದೇ ದೇಶದ ಪ್ರಗತಿ ಸಾಧ್ಯವಿಲ್ಲ. ಇದೊಂದು

5,000 ಸೈಬರ್ ಕಮಾಂಡೋಗಳ ನೇಮಕಾತಿಗೆ ಸರ್ಕಾರದ ಸಿದ್ಧತೆ/ ಅಮಿತ್‌ ಶಾ ಹೇಳಿಕೆ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ. ಕುಟುಂಬದ ಯಜಮಾನಿಗೆ ಮಾಸಿಕ 3,000 ಹಣ, ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ಯೋಜನೆಯ ಮರುಜಾರಿ ಮಾಡುವುದಾಗಿ, ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌ Read More »