Editor

ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಗಳು 3 ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಆ.28ರ ಮಧ್ಯರಾತ್ರಿ ಜಿಲ್ಲೆಯಲ್ಲಿ 2 ಪ್ರತ್ಯೇಕ ಎನ್‌ಕೌಂಟರ್ ನಡೆಸಿದ ಭದ್ರತಾ ಪಡೆಗಳು, ಕುಶಾಲ್ ಪೊಸ್ಟ್ ನ ಕರ್ನಾಹನಲ್ಲಿ (ತಂಗಧಾರ್) ಇಬ್ಬರು ಮತ್ತು ಗುಲಾಬ್ ಪೊಸ್ಟ್‌ನ ಕುಮಕಾರಿನ (ಮಿಚಿಲ್ ಸೆಕ್ಟರ್) ಪಕ್ಕದಲ್ಲಿ ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ಭದ್ರತಾ ಪಡೆಗೆ ಭಯೋತ್ಪಾದಕರ ಮೃತದೇಹಗಳನ್ನು ವಶಪಡಿಸಲು ಆಗಲಿಲ್ಲ ಎಂದು ವರದಿಯಾಗಿದೆ. ಭಾರತೀಯ […]

ದೇಶದಲ್ಲಿ ಸೈನ್ಯದಿಂದ ಒಳನುಸುಳಕೋರರ ವಿರುದ್ಧ ಆಪರೇಷನ್ | ಮೂವರು ಭಯೋತ್ಪಾದಕರ ಹತ್ಯೆ Read More »

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದಾತ ಒಂದೇ ಗಂಟೆಯಲ್ಲಿ ಅರೆಸ್ಟ್| ಕೇವಲ ಒಂದು ಸುಳಿವಲ್ಲೇ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

ಸಮಗ್ರ ನ್ಯೂಸ್: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಆಗಿದ್ದಾನೆ. ಕಳೆದ ಭಾನುವಾರ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಮೂಲತಃ ಉಡುಪಿ ತಾಲೂಕಿನ ಮಣಿಪಾಲದವರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಉಡುಪಿಗೆ ಹೊರಟಿದ್ದರು. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ. ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗಕ್ಕೆ ಯತ್ನಿಸಿದಾತ ಒಂದೇ ಗಂಟೆಯಲ್ಲಿ ಅರೆಸ್ಟ್| ಕೇವಲ ಒಂದು ಸುಳಿವಲ್ಲೇ ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು Read More »

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ದರ್ಶನ್…ಬ್ರ್ಯಾಂಡೆಡ್ ಬಟ್ಟೆ, ಕೂಲಿಂಗ್ ಗ್ಲಾಸ್ ಹಾಕಿ ಎಂಟ್ರಿ..?

ಸಮಗ್ರ ನ್ಯೂಸ್: ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ ದರ್ಶನ್ ನನ್ನು ಸ್ಥಳಾಂತರ ಮಾಡಲಾಗಿದೆ. ಬಿಗಿ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು. ಬೆಳಗ್ಗೆ 10 ಗಂಟೆ ಸುಮಾರಿಗೆ ದರ್ಶನ್ ನನ್ನು ಬಳ್ಳಾರಿ ಜೈಲಿಗೆ ಕರೆತರಲಾಯಿತು. ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ದರ್ಶನ್…ಬ್ರ್ಯಾಂಡೆಡ್ ಬಟ್ಟೆ, ಕೂಲಿಂಗ್ ಗ್ಲಾಸ್ ಹಾಕಿ ಎಂಟ್ರಿ..? Read More »

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..!

ಸಮಗ್ರ ನ್ಯೂಸ್: ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಆದರೆ ಇದೀಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಲು ಮುಂದಾಗಿದ್ದಾರೆ. ಹೌದು ಸುದೀಪ್ ಬರ್ತ್ ಡೇ ದಿನ ಹೊಸ ಸಿನಿಮಾ ಘೋಷಣೆ ಆಗಲಿದೆ ಎಂದು ಅನೂಪ್ ಭಂಡಾರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಅನೂಪ್ ಭಂಡಾರಿ ಅವರು ‘ರಂಗಿ ತರಂಗ’, ‘ರಾಜರಥ’ ಹೆಸರಿನ ಸಿನಿಮಾ ಮಾಡಿದರು. ಇದಾದ ಬಳಿಕ ಸುದೀಪ್ ಜೊತೆ ‘ವಿಕ್ರಾಂತ್ ರೋಣ’ ಸಿನಿಮಾ ಮಾಡಿದರು.

ಸುದೀಪ್ ಜೊತೆ ಮತ್ತೆ ಅನೂಪ್… ಕಿಚ್ಚ ಬರ್ತ್ ಡೇಗೆ ಹೊಸ ಸಿನಿಮಾ ಅನೌನ್ಸ್..! Read More »

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ

ಸಮಗ್ರ ನ್ಯೂಸ್: ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದು ಯುವಕ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದಲ್ಲಿ ನಡೆದಿದೆ. ಹನೀಷಾ ಎಂಬ 21 ವರ್ಷದ ಮಂಗಳಮುಖಿಗೆ ಮಂಡ್ಯದ ಆದಿಲ್‌ ಎಂಬ 23 ವರ್ಷದ ಯುವಕ ಚಾಕುವಿನಿಂದ ಇರಿದಿದ್ದಾನೆ. ಹನೀಷಾ ಹಾಗೂ ಆದಿಲ್ ಕಳೆದ ಆರು ತಿಂಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರ ಕಾರ್ಯಕ್ರಮಗಳ ನಿಮಿತ್ತ ಹನೀಷಾ ಆಗಾಗ ಬೇರೆ ಬೇರೆ ಊರುಗಳಿಗೆ ಹೋಗುತ್ತಿದ್ದಳು. ಇದನ್ನು

ಪ್ರೀತಿ‌ ನಿರಾಕರಿಸಿದ ಮಂಗಳಮುಖಿಗೆ ಚಾಕು ಇರಿದ ಯುವಕ Read More »

ಹವಾಮಾನ ವರದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ| ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ & ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ ಉಂಟಾದ ಕಾರಣ, ಕರ್ನಾಟಕದಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಇಂದಿನಿಂದ ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆರಾಯ ಆರ್ಭಟ ತೋರಿಸಲಿದ್ದಾನೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ಕೊಡಗು, ಹಾಸನದ ಮಲೆನಾಡು ಭಾಗ ಸೇರಿದಂತೆ ಹಲವಾರು ಜಿಲ್ಲೆಗಳಿಗೆ ಭಾರಿ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಆರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ

ಹವಾಮಾನ ವರದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅರಬ್ಬಿ ಸಮುದ್ರದಲ್ಲಿ ಮೇಲುಬ್ಬರ| ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ Read More »

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿ| ಸಿನಿಮಾ ಕೊರಿಯಾಗ್ರಾಫರ್ ಭೀಕರ ಹತ್ಯೆ

ಸಮಗ್ರ ನ್ಯೂಸ್: ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಪತಿ, ಆಕೆಗೆ ಭೀಕರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ನವ್ಯಾ (25) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಪತಿ ಕಿರಣ್‌ ಕೊಲೆಗೈದ ಆರೋಪಿ. ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಪತ್ನಿಯ ಶೀಲ ಶಂಕಿಸಿ, ಆಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ನೀಡಿ,

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪತಿ| ಸಿನಿಮಾ ಕೊರಿಯಾಗ್ರಾಫರ್ ಭೀಕರ ಹತ್ಯೆ Read More »

ಆಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಪುತ್ತಿಲ| ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಇದೀಗ ಪುತ್ತಿಲ ಪರಿವಾರದ ಹೆಸರಿನಲ್ಲಿ ಅರುಣ್‌ ಪುತ್ತಿಲ ಸ್ಪಷ್ಟನೆ ನೀಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ 3.5 ಕೋಟಿ ರೂಪಾಯಿ ವ್ಯವಹಾರದ ಆಪಾದನೆ ಮತ್ತು ನಾನು ಅದರ ಬಗ್ಗೆ ಸಾರ್ವಜನಿಕ ಸಭೆಯಲ್ಲಿ ಹೇಳಿರುವ ವಿಷಯಕ್ಕೆ ಇಂದು ಕೂಡ ಬದ್ಧನಾಗಿದ್ದೇನೆ. ಆದರೆ ಈ ರೀತಿಯಾಗಿ ಸುಳ್ಳು ಆರೋಪ ಮಾಡುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇದೇ ರೀತಿಯ ರಾಜಕೀಯ

ಆಡಿಯೋ ವೈರಲ್ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಪುತ್ತಿಲ| ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ Read More »

ಭಟ್ರ ಜೊತೆ ಅಡುಗೆ ಮಾಡಲು ಟೀಚರಮ್ಮ ಬರ್ತಿದಾರೆ!! ದಾಂಪತ್ಯಕ್ಕೆ ಕಾಲಿಡಲು ಸಿದ್ದರಾದ ಭಟ್ ಎನ್ ಭಟ್ ಚಾನಲ್ ನ ಸುದರ್ಶನ್ ಬೆದ್ರಾಡಿ

ಸಮಗ್ರ ನ್ಯೂಸ್: ಭಟ್ ಎನ್ ಭಟ್ ಯುಟ್ಯೂಬ್ ಚಾನಲ್ ಅಂದಾಗ ಕಣ್ಣ ಮುಂದೆ ಬರೋದು ಲುಂಗಿಯುಟ್ಟು, ತಲೆಗೆ ಮುಂಡಾಸ ಕಟ್ಟಿ, ಅಪ್ಪಟ ಕನ್ನಡದಲ್ಲಿ ಮಾತನಾಡುವ ಸುದರ್ಶನ್ ಭಟ್. ದೇಶ ಮಾತ್ರವಲ್ಲ ವಿದೇಶದಲ್ಲೂ ಪ್ರಸಿದ್ಧಿ ಪಡೆದಿರುವ ಅಡುಗೆ ಚಾನೆಲ್ ಗಳಲ್ಲಿ ಭಟ್ ಎನ್ ಭಟ್ ಚಾನೆಲ್ ಸೇರಿದೆ. ದಕ್ಷಿಣ ಭಾರತದ ಪ್ರಸಿದ್ಧ ಅಡುಗೆಗಳೆಲ್ಲ ನಿಮಗೆ ಈ ಯುಟ್ಯೂಬ್ ಚಾನೆಲ್ ನಲ್ಲಿ ಲಭ್ಯವಿದೆ. ಸುದರ್ಶನ್ ಭಟ್ ಅವರ ಈ ಯುಟ್ಯೂಬ್ ಚಾನೆಲ್ ನೋಡುವ ಪ್ರತಿಯೊಬ್ಬ ವೀಕ್ಷಕರು ಈಗ ಖುಷಿಯಾಗಿದ್ದಾರೆ. ಸುದರ್ಶನ್

ಭಟ್ರ ಜೊತೆ ಅಡುಗೆ ಮಾಡಲು ಟೀಚರಮ್ಮ ಬರ್ತಿದಾರೆ!! ದಾಂಪತ್ಯಕ್ಕೆ ಕಾಲಿಡಲು ಸಿದ್ದರಾದ ಭಟ್ ಎನ್ ಭಟ್ ಚಾನಲ್ ನ ಸುದರ್ಶನ್ ಬೆದ್ರಾಡಿ Read More »

ಆ.29ರಿಂದ ಸೆ.2ರವರೆಗೆ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಸೇವೆ ಸ್ಥಗಿತ

ಸಮಗ್ರ ನ್ಯೂಸ್: ಆ.29ರ ರಾತ್ರಿ ಎಂಟರಿಂದ ಸೆ.2ರ ಬೆಳಿಗ್ಗೆ ಆರು ಗಂಟೆಯವರೆಗೆ ಪಾಸ್‌ಪೋರ್ಟ್ ಸೇವಾ ಪೋರ್ಟಲ್‌ನ ತಾಂತ್ರಿಕ ನಿರ್ವಹಣೆ ನಡೆಯಲಿದ್ದು,ಈ ಅವಧಿಯಲ್ಲಿ ಪೋರ್ಟಲ್ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಆ.30ರಂದು ನಿಗದಿಯಾಗಿದ್ದ ಎಲ್ಲ ಅಪಾಯಂಟ್‌ಮೆಂಟ್‌ಗಳನ್ನು ರದ್ದುಗೊಳಿಸಲಾಗಿದೆ. ಅಂದು ನಿಗದಿತ ಅಪಾಯಿಂಟ್ಮೆಂಟ್ ಗಳನ್ನು ಹೊಂದಿದ್ದ ಅರ್ಜಿದಾರರಿಗೆ ಹೊಸ ದಿನಾಂಕಗಳ ಕುರಿತು ಎಸ್‌ಎಂಎಸ್ ಸಂದೇಶಗಳನ್ನು ರವಾನಿಸಲಾಗುವುದು ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ.

ಆ.29ರಿಂದ ಸೆ.2ರವರೆಗೆ ಪಾಸ್ ಪೋರ್ಟ್ ಸೇವಾ ಪೋರ್ಟಲ್ ಸೇವೆ ಸ್ಥಗಿತ Read More »