Editor

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ

ಸಮಗ್ರ ನ್ಯೂಸ್: ಮೂರು ದಶಕಗಳ ಪರಿವಾರ ಸಂಘಟನೆಗಳ ವಿವಿಧ ಜವಾಬ್ದಾರಿ ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಸಂಘದ ಸ್ವಯಂ ಸೇವಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರೀಯರಾಗಿದ್ದು ಪರಿವಾರ ಸಂಘಟನೆಗಳಲ್ಲಿ ಸುದೀರ್ಘ 28 ವರ್ಷಗಳ ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಮುರಳಿಕೃಷ್ಣ ಹಸಂತಡ್ಕ ಅವರನ್ನು ಇದೀಗ ಸಂಘದಿಂದ ಪೂರ್ಣವಾಗಿ ಬಿಡುಗಡೆಗೊಳಿಸಿ ಪಕ್ಷ ಸಂಘಟನೆಯನ್ನು ಮಾಡುವಂತೆ ವಿಶ್ವಹಿಂದು ಪರಿಷದ್ ಸೂಚನೆ ನೀಡಿದೆ. ಈ ಬೆಳವಣಿಗೆ ಪುತ್ತೂರಿನ ಮುಂದಿನ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿದ್ಯಾರ್ಥಿ ಜೀವನದಲ್ಲೇ […]

ಸಂಘದ ಸ್ವಯಂ ಸೇವಕ ಹುದ್ದೆಯಿಂದ ಮುರಳೀಕೃಷ್ಣ ಹಸಂತಡ್ಕ ಬಿಡುಗಡೆ| ಪಕ್ಷದ ಜವಾಬ್ದಾರಿ ವಹಿಸಲು ವಿಎಚ್ ಪಿ ಸೂಚನೆ Read More »

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ, ದುಡ್ಡು ಕೊಟ್ಟರೆ ಎಲ್ಲವೂ ಸಿಗುತ್ತೆ . ಮಾದ್ಯಮವೊಂದಕ್ಕೆ ಜೈಲಿನಿಂದ ಬಿಡುಗಡೆಯಾದ ಕೈದಿಯೋರ್ವ ಈ ಬಗ್ಗೆ ಸ್ಪೋಟಕ ಮಾಹಿತಿ ಬಯಲು ಮಾಡಿದ್ದಾನೆ. ಹಾಸಿಗೆಯ ಬೆಡ್ ಶೀಟ್ ನೊಳಗೆ ಮೊಬೈಲ್ ಅಡಗಿಸಿಡಲಾಗುತ್ತದೆ. ನೆಟ್ ವರ್ಕ್ ಸಿಗದಂತೆ ಜಾಮರ್ ಅಳವಡಿಸಿದ್ರೂ ಗೋಡೆಗೆ ಮೊಬೈಲ್ ತಾಗಿಸಿದ್ರೆ ನೆಟ್ ವರ್ಕ್ ಸಿಗುತ್ತದೆ ಎಂದು ಹೇಳಿದ್ದಾರೆ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಪರಪ್ಪನ ಅಗ್ರಹಾರ ಜೈಲಲ್ಲ ಸ್ವರ್ಗ. ಹಣ ಕೊಟ್ಟರೆ ಏನು ಬೇಕಾದರೂ ಸಿಗುತ್ತದೆ. ಬಡ್ಡಿ

ಪರಪ್ಪನ ಅಗ್ರಹಾರ ಜೈಲಲ್ಲ; ಸ್ವರ್ಗ, ಹಣ ಕೊಟ್ರೆ ಇಲ್ಲಿ ಎಲ್ಲವೂ ಸಿಗುತ್ತೆ!! ಮಾಜಿ ಖೈದಿಯಿಂದ ಸ್ಪೋಟಕ ಹೇಳಿಕೆ Read More »

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಮುಂದಿನ ಎರಡು- ಮೂರು ದಿನಗಳಲ್ಲಿ ದಕ್ಷಿಣ ರಾಜಸ್ಥಾನ, ಗುಜರಾತ್, ಕೊಂಕಣ, ಗೋವ, ಮಧ್ಯ ಮಹಾರಾಷ್ಟ್ರ ಮತ್ತು ಕರಾವಳಿ ಕರ್ನಾಟಕದಲ್ಲಿ ಅತಿ ಭಾರಿಯಿಂದ ಅತ್ಯಂತ ಭಾರಿ, ಅಂದರೆ 12.5 ಸೆಂಟಿಮೀಟರ್ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ವಾರ ದಿಲ್ಲಿ, ಹರ್ಯಾಣ ಮತ್ತು ಉತ್ತರಪ್ರದೇಶದಲ್ಲಿ ಚದುರಿದ ಮತ್ತು ಗುಡುಗುಸಹಿತ ಮಳೆಯಾಗಬಹುದು. ಎರಡು ತೀವ್ರ ಹವಾಮಾನ ವ್ಯವಸ್ಥೆಗಳು ರೂಪುಗೊಂಡಿರುವುದರಿಂದ ಮುಂಗಾರು ಚುರುಕಾಗುತ್ತಿದೆ ಎಂದು ಇಲಾಖೆ ಹೇಳಿದೆ. ಪೂರ್ವ ಭಾರತದಲ್ಲಿ,

ಹವಾಮಾನ ವರದಿ| ಮತ್ತೆ ಚುರುಕಾದ ಮಳೆ| ಕರ್ನಾಟಕದ ಕರಾವಳಿಗೆ ಭಾರೀ ಮಳೆ ಮುನ್ಸೂಚನೆ Read More »

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ

ಸಮಗ್ರ ನ್ಯೂಸ್: ಖಾಸಗಿ ಬಸ್ಸ್ ಅನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರ(ಆ.26)ದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ

ಕಡಬ: ಅವಸರ ತಂದ ಅಪಘಾತ| ಬೈಕ್ ಸವಾರ ಸಾವು; ಚರಂಡಿಗೆ ಉರುಳಿದ ಇನ್ನೋವಾ Read More »

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ

ಸಮಗ್ರ ನ್ಯೂಸ್: ಆಲಂಕಾರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವವು ಆ.30ರಂದು ಮಧ್ಯಾಹ್ನ ಗಂಟೆ 2.30 ರಿಂದ ಆಲಂಕಾರು ಪೇಟೆಯಲ್ಲಿ ನಡೆಯಲಿದೆ. ಆಲಂಕಾರು ವರ್ತಕ ಸಂಘದ ಅಧ್ಯಕ್ಷರು ಮತ್ತು ಉದ್ಯಮಿ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟನೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮಗಳು ಸಾರ್ವಜನಿಕ ಅಟ್ಟಿ ಮಡಿಕೆ ಒಡೆಯುವುದು, ಶ್ರೀ ಭಾರತಿ ಶಾಲೆಯ ಪುಟಾಣಿ ಮಕ್ಕಳ ಶ್ರೀ ಕೃಷ್ಣ

ಆಲಂಕಾರು: ಆ.30ರಂದು ಹಿಂದೂ ಜಾಗರಣ ವೇದಿಕೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ 9 ನೇ ವರ್ಷದ ಅಟ್ವಿ ಮಡಿಕೆ ಒಡೆಯುವ ಉತ್ಸವ Read More »

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಇಸ್ಕಾನ್ ದೇವಾಲಯದಲ್ಲಿ ಜನ್ಮಾಷ್ಟಮಿ ವಿಜೃಂಭಣೆಯಿಂದ ನಡೆಯುತ್ತಿದೆ. ಈ ಸಂಧರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡಿ ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಪಾಲ್ಗೊಂಡರು. ಇಸ್ಕಾನ್‌ನಲ್ಲಿ ಮುಂಜಾನೆ 4:3ರಿಂದ ರಾಧಾ-ಕೃಷ್ಣರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಮುಂಜಾನೆ 4:30ಕ್ಕೆ ಕೃಷ್ಣನಿಗೆ ಮಂಗಳಾರತಿ ಮತ್ತು ತುಳಸಿ ಆರತಿ ಮಾಡಿ ಬಳಿಕ 7:30ಕ್ಕೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಜನ್ಮಾಷ್ಟಮಿ ಹಿನ್ನೆಲೆ ಇಂದು ಕೃಷ್ಣನಿಗೆ

ಇಸ್ಕಾನ್ ದೇವಾಲಯಕ್ಕೆ ಶೋಭಾ ಕರಂದ್ಲಾಜೆ ಭೇಟಿ | ಕೃಷ್ಣನ ತೊಟ್ಟಿಲು ತೂಗಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಭಾಗಿ Read More »

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್

ಸಮಗ್ರ ನ್ಯೂಸ್: ಪಾಕಿಸ್ತಾನದ ಬಲೂಚಿಸ್ತಾನ್ ಮುಸಾಖೆಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗೆ 23 ಜನರು ಸಾವನ್ನಪ್ಪಿರುವ ಬಗ್ಗೆ ವರಿಯಾಗಿದೆ. ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಲು ಒತ್ತಾಯಿಸಿ, ಅವರ ಗುರುತುಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದ್ದಾರೆ. ಮುಸಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಂತರ-ಪ್ರಾಂತೀಯ ಹೆದ್ದಾರಿಯನ್ನು ತಡೆದು ಪ್ರಯಾಣಿಕರನ್ನು ಬಸ್‌ಗಳಿಂದ ಕೆಳಗಿಳಿಸಿದರು ಎಂದು ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಮೃತರು ಪಂಜಾಬ್ ಮೂಲದವರು ಎಂದು ಗುರುತಿಸಲಾಗಿದೆ. ಇದರ ಜೊತೆಗೆ ಉಗ್ರರು 10 ವಾಹನಗಳಿಗೆ ಬೆಂಕಿ

ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಪರಿಶೀಲಿಸಿ 23 ಮಂದಿ ಶೂಟೌಟ್ Read More »

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಕ್ಕೂ ಮುನ್ನ ದೆಹಲಿಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿತ್ತು. ಶ್ರೀ ಮಾತಾ ವೈಷ್ಟೋದೇವಿ ಕ್ಷೇತ್ರದಿಂದ ರೋಹಿತ್ ದುಬೆ ಅವರಿಗೆ ಟಿಕೆಟ್ ನೀಡಲಾಗಿದೆ. ಸುನೀಲ್ ಶರ್ಮಾ ಕಿಶ್ಚಾರ್ ನಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈ ಬಾರಿ ಬಿಜೆಪಿ ಹೊಸ ತಂತ್ರದೊಂದಿಗೆ ಚುನಾವಣಾ ಕಣಕ್ಕೆ ಇಳಿದಿರುವುದು ಪಟ್ಟಿಯಿಂದ ಸ್ಪಷ್ಟವಾಗಿದೆ. ಪಕ್ಷವು ತನ್ನ ಹಲವು ಹಳೆಯ ನಾಯಕರ

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುಣಾವಣೆ/ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್‌: ಕೆಪಿಎಸ್‌ಸಿ ಪರೀಕ್ಷೆ ಮುಂದೂಡಬೇಕೆಂಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ಮಂಗಳವಾರವೇ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಕೆಪಿಎಸ್’ಸಿ ಮೂಲಕ ಆಗಸ್ಟ್ 27ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಘ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊಂದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ. ನಾಳೆಯೇ ಪರೀಕ್ಷೆ ನಡೆಯಲಿದೆ ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸುದೀರ್ಘ ಪತ್ರಿಕಾ

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ ಇಲ್ಲ/ ನಾಳೆಯೇ ಪರೀಕ್ಷೆ ಎಂದು ತಿಳಿಸಿದ ರಾಜ್ಯ ಸರ್ಕಾರ Read More »

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಗ್ಗಸಗೋಡು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆ .26 ರಂದು ಪ್ರತಿಭಟನೆ ನಡೆಸಿದರು. ಸರ್ಕಾರಿ ಶಾಲೆಯಲ್ಲಿನ ಶಿಕ್ಷಕರ ಕೊರತೆಯಿಂದ ಮಕ್ಕಳಿಗೆ ತೊಂದರೆ ಆಗುತ್ತಿದ್ದು, ಶತಮಾನದ ಶಾಲೆಗೆ ಶಿಕ್ಷಕರನ್ನು ವರ್ಗಾವಣೆ ಮಾಡಿದೆ ನಿರ್ಲಕ್ಷ್ಯ ಮಾಡಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ವಿದ್ಯಾರ್ಥಿಗಳು ಹಾಗೂ ಪೋಷಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1 ರಿಂದ 7 ನೇ ತರಗತಿಗೆ ತನಕ ಇರುವ ಶಾಲೆಗೆ ಇಬ್ಬರೇ ಶಿಕ್ಷಕರು.ಅಲ್ಲದೇ 75

ಕೊಟ್ಟಿಗೆಹಾರ: ಶಿಕ್ಷಕರ ಕೊರತೆ ಈಡೇರಿಸುವಂತೆ ಪೋಷಕರಿಂದ ಪ್ರತಿಭಟನೆ Read More »