Editor

‘ನನ್ನ ಜೊತೆ ಮಲಗಿದರಷ್ಟೇ ಗಂಡ ರಿಲೀಸ್ ‘| ಮೂಡಬಿದಿರೆ ಪಿಎಸ್ಐ ವಿರುದ್ಧ ಗಂಭೀರ ಆರೋಪ ಮಾಡಿದ ಮಹಿಳೆ

ಸಮಗ್ರ ನ್ಯೂಸ್: ಮೂಡುಬಿದಿರೆ ಠಾಣೆಯಲ್ಲಿ ದಾಖಲಾದ ಮೊಕದ್ದಮೆಯೊಂದರಲ್ಲಿ ವ್ಯಕ್ತಿಯೊಬ್ಬರು ಬಂಧನಕ್ಕೊಳಗಾಗಿದ್ದು, ಆತನ ಪತ್ನಿಯು ಠಾಣೆಯ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಗರ ಪೊಲೀಸ್‌ ಕಮಿಷನರ್‌ ಅವರು ಉತ್ತರ ಉಪವಿಭಾಗದ ಎಸಿಪಿಗೆ ನಿರ್ದೇಶನ ನೀಡಿದ್ದಾರೆ. ‘ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಪತಿಯನ್ನು ಬಿಡುಗಡೆಗೊಳಿಸುವುದಾಗಿ ಹಾಗೂ ₹ 25 ಲಕ್ಷ ನೀಡದಿದ್ದರೆ ನನ್ನ ಪತಿಯ ವಿರುದ್ಧ ರೌಡಿ ಶೀಟ್‌ ತೆರೆಯುವುದಾಗಿ ಮೂಡುಬಿದಿರೆ ಠಾಣೆಯ ಇನ್‌ಸ್ಪೆಕ್ಟರ್‌ ಸಂದೇಶ್‌ ಬಿ.ಜಿ. ಬೆದರಿಕೆ ಒಡ್ಡಿದ್ದಾರೆ. […]

‘ನನ್ನ ಜೊತೆ ಮಲಗಿದರಷ್ಟೇ ಗಂಡ ರಿಲೀಸ್ ‘| ಮೂಡಬಿದಿರೆ ಪಿಎಸ್ಐ ವಿರುದ್ಧ ಗಂಭೀರ ಆರೋಪ ಮಾಡಿದ ಮಹಿಳೆ Read More »

ಗುಂಡ್ಯ: ಬಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ದುರ್ಮರಣ

ಸಮಗ್ರ ನ್ಯೂಸ್: ಕೆಎಸ್ಸಾರ್ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಅಪರಾಹ್ನ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ವಿರುದ್ಧ ದಿಕ್ಕಿನಿಂದ ಸಾಗುತ್ತಿದ್ದ ಬಸ್ ನಡುವೆ ಗುಂಡ್ಯ ಗಡಿ ದೇವಸ್ಥಾನದ ಸಮೀಪ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಕಲೇಶಪುರದಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ

ಗುಂಡ್ಯ: ಬಸ್ – ಕಾರು ನಡುವೆ ಭೀಕರ ಅಪಘಾತ; ಮೂವರು ದುರ್ಮರಣ Read More »

ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಇರಾನ್ ಮತ್ತು ಅಮೇರಿಕಾ ಯುದ್ದದಿಂದಾಗಿ ದೇಶದಲ್ಲಿ ಉಂಟಾಗಿರುವ ಗ್ಯಾಸ್ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದ್ದು, ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ. ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನ

ಕುಕ್ಕೆಸುಬ್ರಹ್ಮಣ್ಯಕ್ಕೂ ತಟ್ಟಿದ ಯುದ್ಧದ ಬಿಸಿ| ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯ Read More »

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ದೊಡ್ಡ ಅಂತರದಲ್ಲಿ ಜಯ ಸಾಧಿಸಿ ಸತತವಾಗಿ ಎರಡನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್‌ಗಳ ಭಾರೀ ಮೊತ್ತವನ್ನು ಕಲೆಹಾಕಿತು. ಭಾರತದ ಪರವಾಗಿ ಸಂಜು ಸ್ಯಾಮ್ಸನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ 46 ಚೆಂಡುಗಳಲ್ಲಿ 89 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ 5 ಬೌಂಡರಿ

ಟಿ.20 ವಿಶ್ವಕಪ್ ಫೈನಲ್ಸ್| ಕಿವೀಸ್ ಮಣಿಸಿ ಮೂರನೇ ಬಾರಿ ಕಪ್ ಗೆದ್ದ ಟೀಂ ಇಂಡಿಯಾ Read More »

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಬಿಗ್‌ ಗಿಫ್ಟ್‌ ನೀಡಿದ್ದಾರೆ. ರಾಜ್ಯದ ಅತ್ಯಂತ ಶ್ರೀಮಂತ ಹಾಗೂ ಪ್ರಸಿದ್ಧ ದೇವಾಲಯಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ. 17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ Read More »

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಅತ್ಯಂತ ದಿಟ್ಟ ಹೆಜ್ಜೆಯೊಂದನ್ನು ಇಟ್ಟಿದೆ. ವಿಪರೀತವಾಗುತ್ತಿರುವ ಮೊಬೈಲ್ ಗೀಳು ಹಾಗೂ ಸಾಮಾಜಿಕ ಜಾಲತಾಣಗಳ ದಾಸ್ಯದಿಂದ ಎಳೆಯ ಮನಸ್ಸುಗಳನ್ನು ಪಾರುಮಾಡುವ ಉದ್ದೇಶದಿಂದ ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಬಳಕೆ ಮಿತಿಮೀರುತ್ತಿದ್ದು, ಇದು ಅವರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಮೇಲೆ ತೀವ್ರ ಸ್ವರೂಪದ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡಿರುವ

16ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬಳಕೆ ಬ್ಯಾನ್ – ಸಿಎಂ Read More »

ಇಂದು ರಾಜ್ಯ ಬಜೆಟ್ ಮಂಡನೆ| 17ನೇ ಬಾರಿ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ| ಹಲವು ನಿರೀಕ್ಷೆಯಲ್ಲಿ ಕರ್ನಾಟಕ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಭಾರದ ನಡುವೆ ಆರ್ಥಿಕ ಶಿಸ್ತು ಜನರ ನಿರೀಕ್ಷೆ ಈಡೇರಿಕೆಗೆ ಬಜೆಟ್ ನಲ್ಲಿ ಆದ್ಯತೆ ನೀಡುವ ಸಾಧ್ಯತೆ ಇದೆ. ರಾಜ್ಯದ ಮಟ್ಟಿಗೆ ಹೆಚ್ಚು ಮತ್ತು ದೇಶದಲ್ಲಿ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇಂದು ಬೆಳಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಕಡಿವಾಣ ಹಾಕದೆ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್ ನಲ್ಲಿ ಒತ್ತು ನೀಡುವ ಸಾಧ್ಯತೆ

ಇಂದು ರಾಜ್ಯ ಬಜೆಟ್ ಮಂಡನೆ| 17ನೇ ಬಾರಿ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ| ಹಲವು ನಿರೀಕ್ಷೆಯಲ್ಲಿ ಕರ್ನಾಟಕ Read More »

ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ

ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ. ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್‌

ಟಿ.20 ವಿಶ್ವಕಪ್| ಇಂಗ್ಲೆಂಡ್ ಮಣಿಸಿ ಫೈನಲ್ ತಲುಪಿದ ಭಾರತ Read More »

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ| ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ಸಮಗ್ರ ನ್ಯೂಸ್: ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಒಟ್ಟು 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ವಿದ್ಯುತ್ ಇಲಾಖೆ (ಕೆಪಿಟಿಸಿಎಲ್/ ಬೆಸ್ಕಾಂ), ಜಲಮಂಡಳಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಉನ್ನತ

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ| ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ Read More »

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲೇ ಕಡಬ ತಾಲೂಕಿನ ತೆರಿಗೆ ಸಂಗ್ರಹಣೆಯು ಜಿಲ್ಲೆಗೆ ಮಾತ್ರವಲ್ಲ ರಾಜ್ಯಕ್ಕೆ ಪ್ರಥಮವಾಗಿರುವುದಾಗಿ ಕಡಬ ತಾ ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ಹೊಸ ತಾಲೂಕಾಗಿ ಘೋಷಣೆಯಾದಲ್ಲಿಂದ ಈವರೆಗೆ ಪ್ರತೀ ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಅಗ್ರಸ್ಥಾನವನ್ನು ಪಡೆಯುತ್ತಿದೆ. ಅಂತೆಯೇ ಈ ಆರ್ಥಿಕ ವರ್ಷದಲ್ಲಿಯೂ ಕಡಬ ತಾಲೂಕು ತನ್ನ ಪ್ರಸಕ್ತ ಸಾಲಿನ ತೆರಿಗೆ ಗುರಿಯನ್ನು ಮೀರಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯ ಪಥದಲ್ಲಿ ಕಡಬದ ಈ ಸಾಧನೆಯು ಒಂದು ಮೈಲಿಗಲ್ಲಾಗಿದೆ. ಕಡಬ ತಾಲೂಕಿನ

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ Read More »