Editor

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಮಗ್ರ ನ್ಯೂಸ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ತಲೆ ಮೇಲೆ ಇರುಮುಡಿ ಹೊತ್ತು, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮಹಿಳಾ ರಾಷ್ಟ್ರಪತಿಯಾಗಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿದ ಮೊದಲಿಗರು ಎಂದು ಮುರ್ಮು ದಾಖಲೆ ಬರೆದಿದ್ದಾರೆ. ಅಲ್ಲದೆ ಅಯ್ಯಪ್ಪ ಸನ್ನಿಧಿಗೆ ಭೇಟಿ ನೀಡಿದ ಭಾರತದ ಎರಡನೇ ರಾಷ್ಟ್ರಪತಿ ಎನಿಸಿಕೊಂಡಿದ್ದಾರೆ. ಇಂದು […]

ಶಬರಿಮಲೆ‌ಗೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ?

ಸಮಗ್ರ ನ್ಯೂಸ್: ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರು ಮೂಲದ ತಕ್ಷಿತ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪ್ರಕರಣ ಹೊಸ ತಿರುವು ಪಡೆದಿದೆ. ಮರಣೋತ್ತರ ಪರೀಕ್ಷೆಯ ವರದಿ ಮಡಿವಾಳ ಠಾಣೆಯ ಪೊಲೀಸರ ಕೈ ಸೇರಿದೆ. ಪುತ್ತೂರು ಮೂಲದ ತಕ್ಷಿತ್ ಸಾವಿನ ಪ್ರಕರಣ ಹೊಸ ಆಯಾಮ ಪಡೆದುಕೊಂಡಿದೆ. ಬೆಂಗಳೂರು ಲಾಡ್ಜ್‌ನಲ್ಲಿ ಅನುಮಾನಾಸ್ಪದವಾಗಿ ಮೃತನಾಗಿದ್ದ ತಕ್ಷಿತ್ ಮರಣೋತ್ತರ ಶವ ಪರೀಕ್ಷೆಯ ವರದಿ ಪೊಲೀಸರ ಕೈಗೆ ಸೇರಿದೆ. ವರದಿಯ ಕೆಲವೊಂದು ಅಂಶಗಳು ಲಭ್ಯವಾಗಿದೆ. ತಕ್ಷಿತ್ ಮತ್ತು ಯುವತಿ ಸುಮಾರು 20 ದಿನಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದರು. ಪದೇ

ಬೆಂಗಳೂರಿನ ಲಾಡ್ಜ್ ನಲ್ಲಿ‌ ಸಾವನ್ನಪ್ಪಿದ ಪುತ್ತೂರಿನ ಯುವಕನ ಪ್ರಕರಣಕ್ಕೆ ರೋಚಕ ತಿರುವು| ಪೋಸ್ಟ್ ಮಾರ್ಟಂ ವರದಿಯಲ್ಲೇನಿದೆ ಗೊತ್ತಾ? Read More »

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ

ವಿರಳ ಹಾಗೂ ತೀರ ಅಪರೂಪದ ಖಾಯಿಲೆ Hyper IGE Mediated Mast cell activation syndromeನಿಂದ ಬಳಲುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗಾಂಧಿನಗರ ನಿವಾಸಿ ಚಾಂದಿನಿ ಕೊನೆಗೂ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಚಾಂದಿನಿ ಈ ಕಾಯಿಲೆಯಿಂದ ಬಳಲುತ್ತಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದರು. ಇವರಿಗಿದ್ದ ಕಾಯಿಲೆ ಏನು ಎಂಬುದನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಬಹಳ ಸಮಯ ಹಿಡಿದಿತ್ತು. ಅಂತಿಮವಾಗಿ ಇವರಿಗೆ ಇದ್ದಿದ್ದು ಬಹಳ ಅಪರೂಪದ ಕಾಯಿಲೆ ಎಂದು ಗೊತ್ತಾಗಿ, ಅದಕ್ಕೆ ಚಿಕಿತ್ಸೆ

ಸುಳ್ಯ: ಹೈಪರ್ ಐಜಿಇ ಕಾಯಿಲೆಯಿಂದ ಬಳಲುತ್ತಿದ್ದ ಚಾಂದಿನಿ ನಿಧನ Read More »

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ

ಸಮಗ್ರ ನ್ಯೂಸ್: ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. ಅಂದರೆ ಈ ನದಿಗಳ ನೀರು ಕುಡಿಯಲು ಯೋಗ್ಯವಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ನದಿಗಳ ನೀರನ್ನು 32 ಕಡೆ ಪರೀಕ್ಷೆಗೊಳಪಡಿಸುತ್ತದೆ. ಪ್ರತಿ ತಿಂಗಳು ನದಿಗಳ ನೀರನ್ನು ಪರೀಕ್ಷೆ ನಡೆಸಿ ಅವುಗಳ ವರದಿ ಸಿದ್ಧಪಡಿಸಲಾಗುತ್ತಿದೆ.

ನೇತ್ರಾವತಿ, ಕಾವೇರಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ| ಆಘಾತಕಾರಿ ವರದಿ ಬಹಿರಂಗ Read More »

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ ಪುಡಿ ರೌಡಿಗಳ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ದಾಂಧಲೆ ನಡೆಸಿ, ಸಾರ್ವಜನಿಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಅಟ್ಟಹಾಸದಿಂದ ಹೆಣ್ಣೂರು ಬಡಾವಣೆಯ ನಿವಾಸಿಗಳು ಬೆಚ್ಚಿಬಿದ್ದಿದ್ದು, ಸ್ಥಳೀಯರ ಧೈರ್ಯದಿಂದ ಮೂವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಘಟನೆ ತಡರಾತ್ರಿ ಸುಮಾರು 10 ಗಂಟೆ ಸುಮಾರಿಗೆ ಹೆಣ್ಣೂರು ಬಡಾವಣೆಯ ದೊಡ್ಡೆರಾಮಣ್ಣ ಬಡಾವಣೆ ಬಳಿ ನಡೆದಿದೆ. ಸರ್ವಜ್ಞನಗರ ನಿವಾಸಿಗಳೆನ್ನಲಾದ ಐವರು ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಈ ದಾಂಧಲೆಗೆ ಕಾರಣವಾದ

ಬೆಂಗಳೂರು:ಪಟಾಕಿ ಸಿಡಿಸಿದ್ದಕ್ಕೆ ಲಾಂಗು, ಮಚ್ಚು ಹಿಡಿದು ಬೆದರಿಸಿದ ಅನ್ಯಕೋಮಿನ ಪುಂಡರು| ಮೂವರು ಪೊಲೀಸ್ ವಶಕ್ಕೆ; ಇಬ್ಬರು ಪರಾರಿ Read More »

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ

ಸಮಗ್ರ ನ್ಯೂಸ್: ಅಕ್ಟೋಬರ್.31, 2025ರವರೆಗೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡಲಾಗಿದೆ. ಇನ್ಮುಂದೆ ಇತರೆ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಜಾತಿಗಣತಿ ಸಮೀಕ್ಷೆ ಮುಂದುವರೆಸಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಅಕ್ಟೋಬರ್.31, 2025ರವರೆಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ

ಅ.31ರವರೆಗೆ ಗಣತಿ ಕಾರ್ಯ ವಿಸ್ತರಣೆ| ಶಿಕ್ಷಕರಿಗೆ ಗಣತಿ ಕಾರ್ಯದಿಂದ ಬಿಡುಗಡೆ Read More »

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ದೀಪಾವಳಿ ಸಂಭ್ರಮದಲ್ಲಿರುವ ಕರ್ನಾಟಕ ಮಂದಿಗೆ ಮಳೆರಾಯ ಅಡ್ಡಿಯಾಗಿದ್ದಾನೆ. ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ರಾಜ್ಯಕ್ಕೆ ಮಳೆ ಅಲರ್ಟ್ ನೀಡಿದೆ. ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಿಗೆ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು ಇದರ ಪರಿಣಾಮ ರಾಜ್ಯದ ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಉತ್ತರಕನ್ನಡ, ಮಂಗಳೂರು, ಉಡುಪಿ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು ಜಿಲ್ಲೆಗಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ.

ದೀಪಾವಳಿಗೆ ಮಳೆರಾಯನ ಅಡ್ಡಿ| ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಭಾರೀ ಮಳೆ ಸಂಭವ Read More »

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ರಾಜ್ಯದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದು ಆಗಸ್ಟ್ ತಿಂಗಳ ಬಾಕಿ ಹಣವನ್ನು 2-3 ದಿನಗಳಲ್ಲಿ ಅಕೌಂಟ್ ಗೆ ಜಮಾ ಮಾಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಹಾಸನಾಂಬೆ ದೇವಿ ದರ್ಶನದ ಸಂದರ್ಭದಲ್ಲಿ ಸರದಿ ಸಾಲಿನಲ್ಲಿದ್ದಂತ ಸಾರ್ವಜನಿಕರು ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಂದಿಲ್ಲ ಎಂಬುದಾಗಿ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದಂತ ಅವರು, ಜುಲೈ ತಿಂಗಳವರೆಗಿನ ಹಣ ಈಗಾಗಲೇ ಕ್ಲಿಯರ್ ಆಗಿದೆ ಎಂದರು. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಕೊಟ್ಟಿದ್ದೇವೆ. 2-3 ದಿನಗಳಲ್ಲಿ

ರಾಜ್ಯದ ಗೃಹಲಕ್ಷ್ಮಿಯರಿಗೆ ದೀಪಾವಳಿ ಗಿಪ್ಟ್| ಇನ್ನೆರಡು ದಿನದಲ್ಲಿ ನಗದು ಜಮಾ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್

ಸಮಗ್ರ ನ್ಯೂಸ್: 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖಿಸದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಯಮ ಜಾರಿಯಾದರೆ RSS ಮಾತ್ರವಲ್ಲ. ಖಾಸಗಿ ಸಂಘ ಸಂಸ್ಥೆಗಳು/ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ

ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಕ್ರಮಗಳಿಗೆ ಬ್ರೇಕ್| ಶೆಟ್ಟರ್ ಸರ್ಕಾರದ ಆದೇಶವನ್ನೇ ಅಸ್ತ್ರವಾಗಿ ಬಳಸಿಕೊಂಡ ಕಾಂಗ್ರೆಸ್ Read More »