Editor

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಸಮಗ್ರ ನ್ಯೂಸ್: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ ಪ್ರಶಂಸೆಗೆ ಪಾತ್ರವಾಗಿದೆ. ಪರ್ಪುಂಜದಲ್ಲಿ ಆಟೋ ರಿಕ್ಷಾ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಆಟೋದಲ್ಲಿದ್ದ ಬಾಲಕಿ ಮತ್ತು ಮಹಿಳೆಯೊಬ್ಬರು ಸಾವನಪ್ಪಿದ್ದರು. ಈ ಘಟನೆ ಬಗ್ಗೆ ಮಾಹಿತಿ ಅರಿತ ಕೂಡಲೇ ಪುತ್ತೂರು ಬ್ಲಾಕ್ ಕಾಂಗ್ರೆಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ […]

ಪುತ್ತೂರು: ಅಪಘಾತದಲ್ಲಿ ಗಾಯಗೊಂಡ ಮಗುವಿಗೆ ಮಿಡಿದ ತಾಯಿಹೃದಯ| ಚಂದ್ರಪ್ರಭಾ ಗೌಡ ಕಾರ್ಯಕ್ಕೆ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ Read More »

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು

ಸಮಗ್ರ ನ್ಯೂಸ್: ಅಪೂರ್ವ ಭಟ್ ಚೇತರಿಕೆಗೆ ಇಡೀ ರಾಜ್ಯ ಪ್ರಾರ್ಥಿಸಿತ್ತು. ರಸ್ತೆ ಅಪಘಾತದಲ್ಲಿ ಗಾಯಗೊಂಡ ಅಪೂರ್ವ ಭಟ್ ಬರುವಿಕೆಗಾಗಿ ಮೂರು ವರ್ಷದ ಮಗಳು, ಪತಿ ಆಶಿಶ್ ಸಾರಡ್ಕ ಹಗಳಿರುಳು ಪ್ರಾರ್ಥಿಸಿದ್ದರು. ಆದರೆ ಬರೋಬ್ಬರಿ 130 ದಿನ ಕೋಮಾದಲ್ಲಿದ್ದ ಅಪೂರ್ವ ಭಟ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೇ ಅಪಘಾತದಲ್ಲಿ ಗಾಯಗೊಂಡಿದ್ದ ಅಪೂರ್ವ ಭಟ್ ತಂದೆ ಈಶ್ವರ್ ಭಟ್ ನಿಧನರಾಗಿದ್ದಾರೆ. ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಈಶ್ವರ್ ಭಟ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 9 ತಿಂಗಳ ಹಿಂದೆ ಮಾಣಿ

ಪುತ್ತೂರು: ಅಪಘಾತದಲ್ಲಿ ಸಾವನ್ನಪ್ಪಿದ ಮಗಳ ಬಳಿಕ ತಂದೆಯೂ ಸಾವು Read More »

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಸೀರಿಯಲ್ ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೇಸ್ಬುಕ್ ನಲ್ಲಿ ಗುಪ್ತಾಂಗದ ಫೋಟೋ, ವಿಡಿಯೋ ಕಳುಹಿಸಿ ನಟಿಗೆ ಕಿರುಕುಳ ನೀಡಲಾಗಿದೆ. ತೆಲುಗು ಮತ್ತು ಕನ್ನಡ ಧಾರವಾಹಿಯಲ್ಲಿ ನಟಿಸಿರುವ ಸಂತ್ರಸ್ತೆಗೆ ಆರೋಪಿ ಕಳೆದ ಮೂರು ತಿಂಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾನೆ. ಫೇಸ್ ಬುಕ್ ನಲ್ಲಿ ಮೊದಲು ಆರೋಪಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಆದರೆ ರಿಕ್ವೆಸ್ಟ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮೆಸೆಂಜರ್ ನಲ್ಲಿ ಮೆಸೇಜ್ ಮಾಡಿದ್ದಾನೆ. ಮೆಸೇಜ್ ಮಾಡದಂತೆ ಆರೋಪಿಗೆ ನಟಿ ಎಚ್ಚರಿಕೆ ಕೂಡ

ಬೆಂಗಳೂರು: ನಟಿಗೆ ಗುಪ್ತಾಂಗದ ವಿಡಿಯೋ ತೋರಿಸಿದ ಕಾಮುಕ ಅರೆಸ್ಟ್ Read More »

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್

ಸಮಗ್ರ ನ್ಯೂಸ್: ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಪತ್ತೆಯಾಗಿದ್ದು, 50 ದಿನಗಳ ಬಳಿಕ ಮಹೇಶ್ ಶೆಟ್ಟಿ ತಿಮರೋಡಿ ಪ್ರತ್ಯಕ್ಷರಾಗಿದ್ದು, ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಬರೋಬ್ಬರಿ 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್‌ಐಟಿ ನೋಟಿಸ್ ಎದುರಿಸುತ್ತಿರುವ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಅವರ ಮೇಲೆ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ. ಧರ್ಮಸ್ಥಳದ ಬುರುಡೆ ಷಡ್ಯಂತ್ರ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಕೋರ್ಟ್ ಗೆ ಹಾಜರ್ Read More »

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಸರ್ಕಾರಿ ಬಸ್ ಮೇಲೆ ಟಿಪ್ಪರ್ ಮಗುಚಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೋಮವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾಂಡೂರು ಡಿಪೋಗೆ ಸೇರಿದ ಆರ್ ಟಿಸಿ ಬಸ್ ಗೆ ಜಲ್ಲಿಕಲ್ಲು ತುಂಬಿಕೊಂಡು ಬರುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಚೇವೆಲ್ಲಾ ಮಂಡಲದ ಮಿರ್ಜಾಗುಡಾ ಬಳಿ ಈ ಘಟನೆ ನಡೆದಿದೆ. ಬಸ್ ಮೇಲೆ ಜಲ್ಲಿಕಲ್ಲು ಲೋಡ್ ಬಿದ್ದಿದ್ದು, ಹಲವು ಪ್ರಯಾಣಿಕರು ಅದರಲ್ಲಿ ಸಿಲುಕಿಕೊಂಡರು. ಈ ಅಪಘಾತದಲ್ಲಿ ಟಿಪ್ಪರ್

ತೆಲಂಗಾಣ: ಸಾರಿಗೆ ಬಸ್ ಮೇಲೆ ಮಗುಚಿದ‌ ಟಿಪ್ಪರ್| 17 ಮಂದಿ ದುರಂತ ಸಾವು Read More »

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ

ಸಮಗ್ರ ನ್ಯೂಸ್: ”ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಬಹಿರಂಗವಾಗಿ ಪೈಪೋಟಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಸೇರಿ ಏಳೆಂಟು ‌ಹಿರಿಯ ಸಚಿವರು ಮುಖ್ಯಮಂತ್ರಿಯಾಗಲು ಆಸೆವ್ಯಕ್ತಪಡಿಸುತ್ತಿದ್ದಾರೆ‌. ಇದರ ಪರಿಣಾಮ ಆಡಳಿತದ ಮೇಲೂ ಬೀಳುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ‌. ವಿಜಯೇಂದ್ರ ಹೇಳಿದರು. ಭಾನುವಾರ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನವೆಂಬರ್ ಕ್ರಾಂತಿ ಎಂದು ಬಿಜೆಪಿಯವರು ಹೇಳಿಲ್ಲ. ಆಡಳಿತ ಪಕ್ಷದ ಸಚಿವರೇ ಹೇಳಿದ್ದು’ ಎಂದ ಅವರು ‘ರಾಜ್ಯದಲ್ಲಿ ಅಭಿವೃದ್ಧಿ

ಸುಬ್ರಹ್ಮಣ್ಯ: ‘ಅಧಿಕಾರಕ್ಕೆ ಪೈಪೋಟಿ ಆಡಳಿತದಲ್ಲಿ ಗ್ರಹಣ’ – ವಿ.ವೈ ವಿಜಯೇಂದ್ರ Read More »

ಮಾನವ – ವನ್ಯಜೀವಿ ಸಂಘರ್ಷ ಹತೋಟಿಗೆ ಬರದಿದ್ದಲ್ಲಿ ಸಫಾರಿ ಬಂದ್ – ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ

ಮಾನವ – ವನ್ಯಜೀವಿ ಸಂಘರ್ಷ ಹತೋಟಿಗೆ ಬರದಿದ್ದಲ್ಲಿ ಸಫಾರಿ ಬಂದ್ – ಸಚಿವ ಖಂಡ್ರೆ Read More »

ಉತ್ತರ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ| ಹಲವು ಸಾವು ನೋವಿನ ಆತಂಕ

ಸಮಗ್ರ ನ್ಯೂಸ್: ಕಳೆದ ತಡರಾತ್ರಿ ಉತ್ತರ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ವರದಿ ಮಾಡಿದೆ. ಮಜಾರ್-ಇ-ಶರೀಫ್ ನಗರದ ಬಳಿಯ ಖೋಲ್ಮ್ ಪ್ರದೇಶದಲ್ಲಿ 28 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಮತ್ತು ರಾಜಧಾನಿ ಕಾಬೂಲ್‌ನವರೆಗೆ ಕಂಪನದ ಅನುಭವವಾಗಿದೆ. ಅಂಕಿಅಂಶವನ್ನು ನವೀಕರಿಸುವ ಮೊದಲು ಯುಎಸ್‌ಜಿಎಸ್ ಆರಂಭದಲ್ಲಿ 10 ಕಿಲೋಮೀಟರ್ ಆಳದಲ್ಲಿ ಆಳವನ್ನು ದಾಖಲಿಸಿತ್ತು. ಆಗಸ್ಟ್ 31 ರಂದು ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ 6.0 ತೀವ್ರತೆಯ ಭೂಕಂಪದಲ್ಲಿ 2,200 ಕ್ಕೂ

ಉತ್ತರ ಅಫ್ಘಾನಿಸ್ತಾನದಲ್ಲಿ ಭೀಕರ ಭೂಕಂಪ| ಹಲವು ಸಾವು ನೋವಿನ ಆತಂಕ Read More »

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು

ಸಮಗ್ರ ನ್ಯೂಸ್: 150 ಕೋಟಿ ಭಾರತೀಯರು ಬಹಳ ದಿನಗಳಿಂದ ಕಾಯುತ್ತಿದ್ದುದ್ದನ್ನು ಭಾರತದ ಹೆಣ್ಣುಮಕ್ಕಳು ಮಾಡಿ ತೋರಿಸಿದ್ದಾರೆ. 2025 ರ ಮಹಿಳಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ, ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಎತ್ತಿಹಿಡಿದಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ವನಿತಾ ಪಡೆ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 288 ರನ್ ಕಲೆಹಾಕಿತು. ಈ ಗುರಿ

ಮಹಿಳಾ ವಿಶ್ವಕಪ್ ಕ್ರಿಕೆಟ್| ಚೊಚ್ಚಲ ಪ್ರಶಸ್ತಿ ಗೆದ್ದ ಭಾರತೀಯ ವನಿತೆಯರು Read More »

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು

ಸಮಗ್ರ ನ್ಯೂಸ್: ಆಟೋ ರಿಕ್ಷಾ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸಾವನಪ್ಪಿದ ಘಟನೆ ಶನಿವಾರ ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಒಳಮೊಗ್ರು ಗ್ರಾಮದ ಪರ್ಪುಂಜ ಕೊಯ್ಲತ್ತಡ್ಕ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹನೀಫ್ ಎಂಬವರ ಮಗಳು ಶಜ್ವಾ ಫಾತಿಮಾ (6) ಎಂದು ತಿಳಿದು ಬಂದಿದೆ. ಇಲ್ಲಿನ ಅಬ್ರೋಡ್ ಹಾಲ್ ಬಳಿಯಲ್ಲಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಪುತ್ತೂರು ನಗರದಿಂದ ತಿಂಗಲಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ

ಪುತ್ತೂರು: ಅಟೋ – ಕಾರು ನಡುವೆ ಭೀಕರ ಅಪಘಾತ| ಬಾಲಕಿ ದುರಂತ ಸಾವು Read More »