Editor

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ (NEP ವಿದ್ಯಾರ್ಥಿಗಳು) ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ನೀಡಬೇಕಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವಿಚಾರವಾಗಿ ಉಪ ಕುಲಪತಿಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿದ್ದು, ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು […]

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ Read More »

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..!

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ವಾಹನದಲ್ಲಿ ಗುಪ್ತಚರ ಇಲಾಖೆಯ ಸಲಹೆ ಮೇರೆಗೆ ಇದೀಗ ಬದಲಾವಣೆ ಮಾಡಲಾಗಿದೆ. ಇದುವರೆಗೆ ಸಾಮಾನ್ಯ ಕಾರು ಬಳಸುತ್ತಿದ್ದ ರಾಜ್ಯಪಾಲರು ಇನ್ನು ಮುಂದೆ ಬುಲೆಟ್‌ ಪ್ರೂಫ್‌ ಕಾರು ಬಳಸಲಿದ್ದಾರೆ. ಮುಡಾ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ರಾಜ್ಯದ ಎಲ್ಲೆಡೆ ಕಾಂಗ್ರೆಸ್‌ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ರಾಜಭವನಕ್ಕೆ ನುಗ್ಗಲೂ ಕಾಂಗ್ರೆಸ್‌ ಕಾರ್ಯಕರ್ತರು ಯತ್ನಿಸಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ಇನ್ನು, ರಾಜ್ಯದ ಹಲವೆಡೆ

ಪ್ರಾಸಿಕ್ಯೂಷನ್ಗೆ ಅನುಮತಿ: ರಾಜ್ಯಪಾಲರಿಗೆ ಬಂತು ಬುಲೆಟ್‌ಪ್ರೂಫ್‌ ಕಾರು..! Read More »

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೀಗರೂಟ ಮಾಡಿದ್ದ ನಂತರ ವಾಂತಿ, ಬೇಧಿ ಕಾಣಿಸಿಕೊಂಡು ಸುಮಾರು 24 ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ಪಾವಗಡದ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿದೆ. ಅಲ್ಲದೇ ಅಗಸ್ಟ್ 16 ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರೂಟ ನಡೆದಿತ್ತು. ಬೀಗರು ಊಟ ಮಾಡಿ ಮನೆಗೆ ತೆರಳಿದ ವೇಳೆಯಲ್ಲಿ ಹಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡವರನ್ನು ಪಾವಗಡ, ಬೆಂಗಳೂರು, ಹಿಂದೂಪುರದ ಆಸ್ಪತ್ರೆಗೆ

ಪಾವಗಡ: ಬೀಗರೂಟ ಮಾಡಿದ್ದ 24 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು Read More »

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಚಿಂತಾಮಣಿ ಸರ್ಕಾರಿ ತಾಲೂಕು ಆಸ್ಪತ್ರೆಯಲ್ಲಿ 65 ವರ್ಷದ ವೃದ್ದೆಯ ಮೇಲೆ 24 ವರ್ಷದ ಯುವಕ ಅತ್ಯಾಚಾರ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ಚಿಕಿತ್ಸೆಗೆ ಬಂದು ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಬಳಿ ಇದ್ದ ವೃದ್ದೆ ಮೇಲೆ ಚಿಕಿತ್ಸೆಗೆ ಬಂದಿದ್ದ ಯುವಕನಿಂದ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಚಿಂತಾಮಣಿ ನಗರದ ಹೈದರಾಲಿ ನಗರದ ಇರ್ಫನ್ ಎಂದು ಗುರುತಿಸಲಾಗಿದೆ. ಇನ್ನು ಅಸ್ವಸ್ಥ ವೃದ್ದೆಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂತೋಷ ಕುಮಾರ್

ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಬಂದಿದ್ದ 65 ವರ್ಷದ ವೃದ್ಧೆ ಮೇಲೆ ಯುವಕನಿಂದ ಅತ್ಯಾಚಾರ Read More »

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಹೊಳಲ್ಕೆರೆ ಪಟ್ಟಣದಿಂದ ಆರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನಡೆದಿತ್ತು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಡ್ರೀಮ್ ವರ್ಡ್ ಇಂಟರ್ ನ್ಯಾಷನಲ್‌ ಸ್ಕೂಲ್ ನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ 6 ವಿದ್ಯಾರ್ಥಿಗಳಾದ ಶ್ರೇಯಸ್, ಧನುಷ್, ಮನು, ತರುಣ್, ಸಿದ್ದೇಶ್ ಹಾಗೂ ಯಶಸ್ ನಾಪತ್ತೆಯಾಗಿದ್ದರು. ಈ ಆರು ಜನ ವಿದ್ಯಾರ್ಥಿಗಳು, ಶಾಲೆಯ ವಸತಿ ಶಾಲೆಯಲ್ಲಿದ್ದರು. ಆದರೆ, ಇಂದು ಬೆಳಗ್ಗೆಯಿಂದ ನಾಪತ್ತೆ ಆಗಿದ್ದರು. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದಾಗ ಇದೀಗ

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ

ಸಮಗ್ರ ನ್ಯೂಸ್: ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಗೆ ಮುಂದಾದ ಗಂಡನನ್ನು ಮೊದಲನೇ ಹೆಂಡತಿ ಹಾಗೂ ಆಕೆಯ ಅಕ್ಕ ಮದುವೆ ಮನೆಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ ಕ್ರೈಸ್ಟ್ ಚರ್ಚ್‌ನಲ್ಲಿ ನಡೆದಿದೆ. ನೋಹನ್‌ ಕಾಂತ್‌ ಎಂಬಾತ ಮದುವೆಯಾಗುತ್ತಿರುವ ಸಂದರ್ಭದಲ್ಲಿ, ಆತನ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬವರು ಮದುವೆ ಮನೆಗೆ ಆಗಮಿಸಿ ಗಲಾಟೆ ಎಬ್ಬಿಸಿದ್ದಾರೆ. ನೋಹನ್‌ ಕಾಂತ್‌ ತನ್ನಿಂದ ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುತ್ತಿದ್ದಾನೆ ಎಂದು ರಶ್ಮಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ Read More »

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ

ಸಮಗ್ರ ನ್ಯೂಸ್: ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಸಿಲಿಂಡರ್‌ಗಳು ಸ್ಪೋಟಗೊಂಡ ಘಟನೆ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ನಡೆದಿದೆ. ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ತಿಳಿದು ಬಂದಿದೆ. ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೇ ಸ್ಥಳದಿಂದ ಓಡಿ ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ Read More »

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ

ಸಮಗ್ರ ನ್ಯೂಸ್: ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಅಗತ್ಯವಿದ್ದರೆ ಕುಮಾರಸ್ವಾಮಿ ಅವರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಯಾವ ಸಿಎಂ ಕೂಡ ಇಂತಹ ಭಂಡತನವನ್ನು ಪ್ರದರ್ಶಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ Read More »

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು

ಸಮಗ್ರ ನ್ಯೂಸ್: ಬಸ್ಸಿನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರ (ಆ.21) ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದಾನೆ. ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ

ಕಾರ್ಕಳ : ಬಸ್ಸಿನಿಂದ ಕೆಳಕ್ಕೆ ಎಸೆಯಲ್ಪಟ್ಟ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತ್ಯು Read More »

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌

ಸಮಗ್ರ ನ್ಯೂಸ್‌: ಬಾಂಗ್ಲಾದೇಶದಲ್ಲಿ ಶೇಖ್‌ ಹಸೀನಾ ಅವರ ಸರ್ಕಾರ ಪತನವಾದ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ (ಯುಎಇ) ವರ್ಗಾಯಿಸಲಾಗಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಘೋಷಿಸಿದೆ. ಇದೇ ವರ್ಷ ನಡೆಯಬೇಕಿರುವ ಐಸಿಸಿ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಬಾಂಗ್ಲಾದೇಶದಿಂದ ಯುನೈಟೆಡ್‌ ಅರಬ್ ಎಮಿರೈಟ್ಸ್‌ಗೆ ವರ್ಗಾವಣೆಯಾಗಿದೆ. ಭದ್ರತೆ ಕೊರತೆ ಎದುರಾಗಿರುವ ಕಾರಣ ಅನಿವಾರ್ಯವಾಗಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಅಂತಾರಾಷ್ಟ್ರೀಯ

ಬಾಂಗ್ಲಾದೇಶದಲ್ಲಿ ಹಿಂಸಾಚಾರ/ ಯುಎಇಗೆ ವರ್ಗಾವಣೆಗೊಂಡ ಮಹಿಳಾ ಟಿ20 ಕ್ರಿಕೆಟ್‌ ವಿಶ್ವಕಪ್‌ Read More »