ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್
ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು […]









