Editor

ಭೀಕರ ರಸ್ತೆ ಅಪಘಾತ| 10 ಮಂದಿ ಸಾವು, 20 ಮಂದಿಗೆ ಗಂಭೀರ ಗಾಯ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಬುಲಂದ್ಶಹರ್‌ನ ಸೆಲಾಂಪುರ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ನಡೆದಿದೆ. ಖಾಸಗಿ ಬಸ್ ಮತ್ತು ಟೆಂಪೊ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಅಪಘಾತದಲ್ಲಿ ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಪಘಾತದಿಂದ ಕುಪಿತರಾದ ಸ್ಥಳೀಯರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಭೀಕರ ರಸ್ತೆ ಅಪಘಾತ| 10 ಮಂದಿ ಸಾವು, 20 ಮಂದಿಗೆ ಗಂಭೀರ ಗಾಯ Read More »

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾನಸ ಗಂಗೋತ್ರಿಯ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹೇಶ್ ಚಂದ್ರ ಗುರು ಅವರನ್ನು ಆ. 17ರಂದು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಚಾರವಾದಿಗಳು ಹಾಗೂ ಖ್ಯಾತ ವಾಗ್ಮಿಯೂ ಆಗಿದ್ದ ಮಹೇಶ್ ಚಂದ್ರ ಗುರು ಅವರು 80ರ ದಶಕದಲ್ಲಿ ಹೈದರಾಬಾದ್ ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು.

ಮೈಸೂರು ವಿವಿ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್ ಮಹೇಶ್ ಚಂದ್ರ ಗುರು ಇನ್ನಿಲ್ಲ Read More »

ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿದ ಸಾರ್ವಜನಿಕರು

ಸಮಗ್ರ ನ್ಯೂಸ್: ನ್ಯಾಷನಲ್ ಹೈವೆಯಲ್ಲಿ ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಸಾರ್ವಜನಿಕರು ಎತ್ತಿ ಬೀಸಾಡಿದ್ದಾರೆ. ತುಮಕೂರು ರಸ್ತೆಯ ಅಡಕಮಾರನಹಳ್ಳಿ ಬಳಿಯ ಫ್ಲೈಓವರ್ ಮೇಲಿಂದ ಸರ್ವಿಸ್ ರಸ್ತೆಗೆ ಡಿಯೋ ಸ್ಕೂಟರ್ ಳನ್ನ ಎಸೆಯಲಾಗಿದೆ. ಎರಡು ಸ್ಕೂಟರ್ಗಳನ್ನು ಎಸೆಯಲಾಗಿದೆ. ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಭಯ ಹುಟ್ಟಿಸೋ ರೀತಿ ವೀಲಿಂಗ್ ಮಾಡಿದಲ್ಲದೆ ಒಂದು ವಾಹನಕ್ಕೆ ಡಿಕ್ಕಿ ಕೂಡ ಹೊಡೆದಿದ್ದಾರೆ. ಈ ವೇಳೆ ಬೈಕ್ ತಡೆದು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡು ಬೈಕ್ಗೆ ಒಂದು ಗತೀ ಕಾಣಿಸಿದ್ದಾರೆ. ಇನ್ನು ವ್ಹೀಲಿಂಗ್

ವೀಲಿಂಗ್ ಮಾಡ್ತಿದ್ದ ಪುಂಡನ ಸ್ಕೂಟರ್ ಅನ್ನು ಫ್ಲೈಓವರ್ ಮೇಲಿಂದ ಬಿಸಾಡಿದ ಸಾರ್ವಜನಿಕರು Read More »

ತವರಿಗೆ ಮರಳಿದ ವಿನೇಶ್‌ ಪೋಗಟ್‌| ಏರ್ಪೋರ್ಟ್ ನಲ್ಲಿ ಭರ್ಜರಿ ಸ್ವಾಗತ

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌ ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್, ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ಜತೆಗಿದ್ದರು. ವಿಮಾನ ನಿಲ್ದಾಣದಿಂದ ಹೊರ ಬಂದ ತಕ್ಷಣ

ತವರಿಗೆ ಮರಳಿದ ವಿನೇಶ್‌ ಪೋಗಟ್‌| ಏರ್ಪೋರ್ಟ್ ನಲ್ಲಿ ಭರ್ಜರಿ ಸ್ವಾಗತ Read More »

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ದಿಯ ಹರಿಕಾರ, ಗ್ಯಾರೆಂಟಿಗಳ ಸರದಾರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆಇಲ್ಲದೆ ಈ ನಾಡಿನ 2 ನೇ ಬಾರಿಯ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆ ನಡೆಸಲು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಮತ್ತು ಕೇಂದ್ರ ಸರಕಾರವು ರಾಜ್ಯಭವನವನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ಘಟಕ ಖಂಡಿಸುತ್ತದೆ ಎಂದು ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಗೀತಾ ಕೋಲ್ಚಾರ್ ರವರು ಖಂಡಿಸಿದ್ದಾರೆ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಖಂಡನೀಯ – ಸುಳ್ಯ ಮಹಿಳಾ ಕಾಂಗ್ರೆಸ್ Read More »

ರಾಜ್ಯಪಾಲರ ನಡೆ ಖಂಡಿಸಿ ರಾಜ್ಯದಾದ್ಯಂತ ಸೋಮವಾರ ‘ಕೈ’ ಪ್ರತಿಭಟನೆ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್‌ ಸಿಡಿದೆದ್ದಿದೆ. ಇದೀಗ ಗವರ್ನರ್‌ ಕ್ರಮವನ್ನು ಖಂಡಿಸಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೈ ಪಡೆ ಮುಂದಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾ ಪತ್ರ ನೀಡಲು ತೀರ್ಮಾನಿಸಿದೆ. ರಾಷ್ಟ್ರಪತಿಗಳಿಗೆ ಡಿಸಿಗಳ ಮೂಲಕ ಪ್ರತಿಭಟನಾ ಪತ್ರ ನೀಡಲಾಗುತ್ತದೆ. ಈಗಾಗಲೇ ಎಲ್ಲಾ ಶಾಸಕರಿಗೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಕನಿಷ್ಠ ಅರ್ಧ ಕಿಲೋಮೀಟರ್ ನಡೆದು

ರಾಜ್ಯಪಾಲರ ನಡೆ ಖಂಡಿಸಿ ರಾಜ್ಯದಾದ್ಯಂತ ಸೋಮವಾರ ‘ಕೈ’ ಪ್ರತಿಭಟನೆ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಪ್ರಾರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. ಈ ವಾರದ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ… ಮೇಷ ರಾಶಿ:ನಿಮಗೆ ಈ ಅವಧಿ ಉತ್ತಮವಾಗಿದೆ, ಉದ್ಯೋಗದ ದೃಷ್ಟಿಯಿಂದ ಈ ಅವಧಿ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಕೆಲಸದಲ್ಲಿ ಉತ್ತಮ ಪ್ರಗತಿ ಕಂಡು ಬರಲಿದೆ. ವೈವಾಹಿಕ ಜೀವನ, ಕುಟುಂಬ ಬದುಕು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಅಚ್ಚರಿಗೆ ಕಾರಣವಾದ ಆ.15ರ ಆ ಘಟನೆ| ಕಂಬದಲ್ಲಿ ಸಿಲುಕಿದ ರಾಷ್ಟ್ರಧ್ವಜವನ್ನು ಬಿಡಿಸಿದ ಹಕ್ಕಿ!! ಇಲ್ಲಿದೆ ವೈರಲ್ ವಿಡಿಯೋ

ಸಮಗ್ರ ನ್ಯೂಸ್: ಆಗಸ್ಟ್‌ 15ರಂದು ದೇಶದೆಲ್ಲಡೆ ಅದ್ಧೂರಿಯಾಗಿ ಆಚಸರಿಸಲಾಯಿತು. ಈ ವೇಳೆ ಹಲವೆಡೆ ಅಪರೂಪದ ಘಟನೆಗಳು ಸಂಭವಿಸಿವೆ, ಅದೆರೀತಿ ಇಲ್ಲೋಂದು ಅಪರೂಪದ ಘಟನೆಯೊಂದರ ಭಾರಿ ವೈರಲ್‌ ಅಗಿದ್ದು ಆಶ್ಚರ್ಯವನ್ನು ತರೆಸಿದೆ. ಈ ವೈರಲ್ ವಿಡಿಯೊದಲ್ಲಿ ಶಾಲೆಯ ಮಕ್ಕಳು ಝಂಡಾ ಊಂಚಾ ರಹೆ ಹಮಾರಾ ಎಂಬ ಹಿಂದಿ ಭಾಷೆಯ ದೇಶ ಭಕ್ತಿಗೀತೆ ಹಾಡುತ್ತಿರುವುದು ಕೇಳುತ್ತಿದೆ. ಆ ವೇಳೆ ರಾಷ್ಟ್ರಧ್ವಜವನ್ನು ಹಗ್ಗಕ್ಕೆ ಕಟ್ಟಿ ಮೇಲಕ್ಕೆ ಎಳೆಯುತ್ತಿದ್ದಾರೆ. ಆದರೆ ಧ್ವಜ ಮೇಲೆ ಹೋಗಿ ಎಷ್ಟೇ ಎಳೆದರೂ ಅದು ಬಿಡಿಸಿಕೊಂಡು ಹಾರಲಿಲ್ಲ. ಆಗ

ಅಚ್ಚರಿಗೆ ಕಾರಣವಾದ ಆ.15ರ ಆ ಘಟನೆ| ಕಂಬದಲ್ಲಿ ಸಿಲುಕಿದ ರಾಷ್ಟ್ರಧ್ವಜವನ್ನು ಬಿಡಿಸಿದ ಹಕ್ಕಿ!! ಇಲ್ಲಿದೆ ವೈರಲ್ ವಿಡಿಯೋ Read More »

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ

ಸಮಗ್ರ ನ್ಯೂಸ್: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರಿನಲ್ಲಿ ಕೊಚ್ಚಿ ಹೋದ ಹಲವು ದಿನಗಳ ಬಳಿಕ ಗೇಟ್ ಡಿಸೈನ್ ತಜ್ಞ ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಆಪರೇಷನ್ ತುಂಗಭದ್ರಾ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಕನ್ಹಯ್ಯ ನಾಯ್ಡು ನೇತೃತ್ವದಲ್ಲಿ ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗಿದೆ. ಒಂದನೇ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು, ನಾಳೆ ಮತ್ತೊಂದು ಸ್ಟಾಪ್ ಲಾಗ್ ಗೇಟ್ ಅಳವಡಿಸಲಾಗುವುದು. ಎರಡು ದಿನಗಳ ಶ್ರಮದಿಂದ ಮೊದಲ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಯಾಗಿದ್ದು ತುಂಗಭದ್ರಾ ಜಲಾಶಯದ ಮೇಲೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಅಳವಡಿಕೆ ಯಶಸ್ವಿ Read More »

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!!

ಸಮಗ್ರ ನ್ಯೂಸ್: ತನ್ನದೇ ಕ್ಷೇತ್ರದ ಜನರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಪ್ರಶ್ನೆ ಮಾಡಿದರೆ ದೇವರ ಮೇಲೆ ಇಡುತ್ತೇನೆ ಎಂದು ದೇವರ ಹೆಸರಿನಲ್ಲಿ ಹೆದರಿಸಿದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಸುರಿದ ಭಾರೀ ಮಳೆಗೆ ಬೆಳ್ತಂಗಡಿ ತಾಲೂಕಿನ ಸವಾಣಾಲು ಗ್ರಾಮದ ಪಿಲಿಕಲ ರಸ್ತೆ ಬಿರುಕು ಬಿಟ್ಟು ವಾಹನ ಸಂಚಾರ ಹಾಗೂ ಜನರ ಓಡಾಟಕ್ಕೆ ಅಡಚಣೆ ಉಂಟಾಗಿತ್ತು. ಇಲ್ಲಿಗೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು

‘ನನ್ನ ಮೇಲೆ ಪ್ರಶ್ನೆ ಮಾಡಿದರೆ ದೇವರಿಗೆ ಇಡುತ್ತೇನೆ’ ಎಂದ ಶಾಸಕ ಹರೀಶ್ ಪೂಂಜಾ| ಗ್ರಾಮಸ್ಥರನ್ನೇ ಅವಾಚ್ಯವಾಗಿ ನಿಂದಿಸಿದ ವಿಡಿಯೋ ವೈರಲ್!! Read More »