Editor

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್: ಆಂಧ್ರಪ್ರದೇಶದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ಸಾವನ್ನಪ್ಪಿದ್ದಾರೆ. ಭಕ್ತರ ದಟ್ಟಣೆಯಿಂದಾಗಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಹಠಾತ್ ಕಾಲ್ತುಳಿತ ಉಂಟಾಯಿತು. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿದರು. ರಾಜ್ಯ ಕೃಷಿ ಸಚಿವ ಕೆ. ಅಚ್ಚನ್ನಾಯ್ಡು ಅಪಘಾತದ ಸ್ಥಳಕ್ಕೆ ತಕ್ಷಣ ಧಾವಿಸಿದರು. ಘಟನೆಯ ಬಗ್ಗೆ ವಿವರಗಳನ್ನು ಸಂಗ್ರಹಿಸಲು ಅವರು ದೇವಾಲಯದ ಅಧಿಕಾರಿಗಳೊಂದಿಗೆ ಮಾತನಾಡಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ […]

ಆಂಧ್ರಪ್ರದೇಶದಲ್ಲಿ ಭೀಕರ ಕಾಲ್ತುಳಿತ| 10 ಮಂದಿ ಬಲಿ; ಹಲವರಿಗೆ ಗಾಯ Read More »

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ.ಜಿಲ್ಲಾಡಳಿತ ಶುಕ್ರವಾರ ಘೋಷಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಧಕರು: ಅಶೋಕ್ ಪೂವಯ್ಯ, ರಜನಿ ದಾಮೋದರ ಶೆಟ್ಟಿ, ವಿಜಯ ಸುವರ್ಣ, ಮುಹಮ್ಮದಲಿ ಉಚ್ಚಿಲ್, ಹಾಜಿ ಬಿ.ಎಚ್. ಖಾದರ್, ಪ್ರವೀಣ್ ಶೆಟ್ಟಿ ಪಿಲಾರ್, ಧರ್ಮಭಗಿನಿ ಲೂಸಿಯಾನ ಪಿಂಟೋ, ಇಸ್ಮಾಯೀಲ್ ಶಾಫಿ ಬಬ್ಬುಕಟ್ಟೆ, ಅನಿಲ್ ದಾಸ್, ಗಂಗಾಧರ ಎಸ್.ಪೂಜಾರಿ, ಮುಹಮ್ಮದ್ ಮುಕ್ಕಚೇರಿ, ಗಣೇಶ್ ಎಸ್., ಮೋಹನ ರೈ, ಸುದರ್ಶನ್ ಪಡಿಯಾರ್, ಬಿ.

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| 68 ಸಾಧಕರು, 26 ಸಂಘಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ಕುರಿತು ನಡೆಸುತ್ತಿದ್ದ ತನಿಖೆಯನ್ನು ಎಸ್‌ಐಟಿ ಸ್ಥಗಿತಗೊಳಿಸಿದೆ. ಹೈಕೋ‌ರ್ಟ್‌ ಮಧ್ಯಂತರ ತಡೆ ನೀಡಿರುವ ಕಾರಣ ನಿಲ್ಲಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಮತ್ತು ಸಂಬಂಧಿಸಿದ ವಿಚಾರಣೆಯನ್ನು ಸಮಾಪ್ತಿಗೊಳಿಸಲು ಆದೇಶಿಸಬೇಕು’ ಎಂದು ಗಿರೀಶ ಮಟ್ಟೆಣ್ಣವರ, ಮಹೇಶ್‌ ಶೆಟ್ಟಿ ತಿಮರೋಡಿ, ಜಯಂತ್‌ ಟಿ. ಮತ್ತು ವಿಠ್ಠಲ ಗೌಡ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ‘ಕೋರ್ಟ್‌ ಆದೇಶವು ತನಿಖೆಗೆ ಹಿನ್ನಡೆಯಾಗುವುದಿಲ್ಲ. ಇದು ತಾತ್ಕಾಲಿಕ ವಿರಾಮವಾಗಿದೆ. ಎಸ್‌ಐಟಿ ಕೋರ್ಟ್‌

ಧರ್ಮಸ್ಥಳ ಪ್ರಕರಣ| ಎಸ್ಐಟಿ ತನಿಖೆ ತಾತ್ಕಾಲಿಕ ಸ್ಥಗಿತ Read More »

ವಿಜಯಪುರ, ಕಲಬುರಗಿಯಲ್ಲಿ ಕಂಪಿಸಿದ ಭೂಮಿ| ಆತಂಕದಲ್ಲಿ ಮನೆಯಿಂದ ಹೊರಬಂದ ಜನತೆ

ಸಮಗ್ರ ನ್ಯೂಸ್: ವಿಜಯಪುರ, ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಈ ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ ಭೂಮಿ ಕಂಪಿಸಿದೆ. ಅದೇ ರೀತಿ ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. ಎರಡು ತಿಂಗಳಲ್ಲಿ ಬರೋಬ್ಬರಿ 12 ಬಾರಿ ಭೂಮಿ ಕಂಪಿಸಿದೆ.

ವಿಜಯಪುರ, ಕಲಬುರಗಿಯಲ್ಲಿ ಕಂಪಿಸಿದ ಭೂಮಿ| ಆತಂಕದಲ್ಲಿ ಮನೆಯಿಂದ ಹೊರಬಂದ ಜನತೆ Read More »

ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ ವೆಲ್ ಬಂಧನ

ಸಮಗ್ರ ನ್ಯೂಸ್: ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್ವೆಲ್ ಅವರ ಜಾಲತಾಣದ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ‌ ಪೊಲೀಸರು ಸುಮೋಟೊ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ವಿಡಿಯೊದಲ್ಲೇನಿದೆ?: ಕಳೆದ ಎರಡು ವರ್ಷಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಮಕ್ಕಳು ಹುಟ್ಟಿದರು ಎಂದು ನಾನೊಂದು ಲೆಕ್ಕ ತೆಗಿದಿದ್ದೇನೆ. 45,700

ಮಂಗಳೂರು: ವಿಹಿಂಪ ಮುಖಂಡ ಶರಣ್ ಪಂಪ್‌ ವೆಲ್ ಬಂಧನ Read More »

70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| ಇಲ್ಲಿದೆ ಸಂಪೂರ್ಣ ವಿವರ

ಸಮಗ್ರ ನ್ಯೂಸ್: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌ ಪ್ರಶಸ್ತಿಗೆ

70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ| ಇಲ್ಲಿದೆ ಸಂಪೂರ್ಣ ವಿವರ Read More »

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಗೆ ಮುನ್ನ ದಿನವೇ ಕುಸಿದುಬಿದ್ದು ಹೃದಯಾಘಾತದಿಂದ ನವವಧು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ (ಅ.31) ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ

ಹಸೆಮಣೆ ಏರಬೇಕಿದ್ದ ವಧು ಮಸಣಕ್ಕೆ| ಹೃದಯಾಘಾತದಿಂದ ಯುವತಿ ಸಾವು Read More »

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಸಮೀಪದ ಬಿಸ್ಲೆ ಘಾಟ್ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಮದುವೆಗೆ ತೆರಳುತ್ತಿದ್ದ ದಿಬ್ಬಣದ ವಾಹನ ಪಲ್ಟಿಯಾಗಿ ಹಲವರು ಆಸ್ಪತ್ರೆಗೆ ದಾಖಲಾದ ಘಟನೆ ಇಂದು(ಅ. ೩೦) ನಡೆದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆ ಕಾರ್ಯಕ್ರಮವಿತ್ತು. ಕೂಡುರಸ್ತೆ ವನಗೂರು ಯುವಕ ಹಾಗೂ ಏನೆಕಲ್ಲಿನ ಯುವತಿ ಜತೆ ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ಈ ಮದುವೆಗಾಗಿ ವರನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಹೀಗೆ ಬರುತ್ತಿರುವಾಗ ವ್ಯಾನ್ ಪಲ್ಟಿಗೊಂಡಿದ್ದು, ಅದರಲ್ಲಿದ್ದ ಹಲವರಿಗೆ ಗಂಭೀರ

ಸುಬ್ರಹ್ಮಣ್ಯ: ಮದುವೆ ದಿಬ್ಬಣದ ವಾಹನ ಪಲ್ಟಿ| ಹಲವರು ಜಖಂ, ಆಸ್ಪತ್ರೆಗೆ ದಾಖಲು Read More »

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!!

ಸಮಗ್ರ ನ್ಯೂಸ್: ಧರ್ಮಸ್ಥಳ ವಿರುದ್ಧ ದೂರು ದಾಖಲಿಸಿದ್ದ ದೂರುದಾರರ ತಂಡ ಇದೀಗ ಕಂಗಾಲಾಗಿದೆ. ತಿಮರೋಡಿ ಸಹಿತ ಈ ತಂಡದ ಸದಸ್ಯರು ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಇದೀಗ ಕೊನೆಯ ಪ್ರಯತ್ನ ಮಾಡಿದೆ. ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ಅತ್ಯಂತ ಮಹತ್ವದ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್‌ಗೆ ದೂರುದಾರರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಬುರುಡೆ ಗ್ಯಾಂಗ್ ಸದಸ್ಯರಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಬಂಧನ ಭೀತಿಯಿಂದ

ಬುರುಡೆ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ದೂರುದಾರರ ತಂಡ| ಬೀಸೋ ದೊಣ್ಣೆ ತಪ್ಪಿಸಲು ಕೊನೆ ಪ್ರಯತ್ನ!! Read More »

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ. ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ

ನ.28: ಕೃಷ್ಣ ನಗರಿ ಉಡುಪಿಗೆ ಪ್ರಧಾನಿ ಮೋದಿ ಭೇಟಿ Read More »