Editor

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು

ಸಮಗ್ರ ನ್ಯೂಸ್: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಶ್ಯಾಮಿಯಾನ ಅಂಗಡಿಯೊಂದರ ಬಳಿ ಸ್ಕೂಟರ್ ಸವಾರ ಸ್ಕೂಟರ್ ಸವಾರ ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ (ವ 75 ) ಎಂಬವರಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ . ಅಪಘಾತದ ಪರಿಣಾಮ […]

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು Read More »

ಈ ಬಾರಿ ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ? ಗೊಂದಲ ಬೇಡ; ಇಲ್ಲಿದೆ ಸರಳ ಉತ್ತರ…

ಸಮಗ್ರ ನ್ಯೂಸ್: 1947ರ ಆಗಸ್ಟ್ 15 ಭಾರತೀಯರ ಪಾಲಿಗೆ ಐತಿಹಾಸಿಕ ದಿನವಾಗಿದ್ದು, ಬ್ರಿಟೀಷರ ಕಪಿ ಮುಷ್ಠಿಯಿಂದ ನಮಗೆ ಸ್ವಾತಂತ್ರ್ಯ ದೊರೆತ ದಿನ. ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಹೋರಾಟಗಾರರು ಬಲಿದಾನಗೈದಿದ್ದಾರೆ. ಅವರ ನೆತ್ತರ ಹನಿಗಳಿಂದಾಗಿ ನಾವಿಂದು ನೆಮ್ಮದಿಯಾಗಿ ಉಸಿರಾಡುವಂತಾಗಿದೆ. ಪ್ರತಿ ವರ್ಷ ಆಗಸ್ಟ್ 15ರಂದು ದೇಶದ ನಾಗರಿಕರು ಸ್ವಾತಂತ್ರ್ಯಕ್ಕೆ ಹೋರಾಡಿದ ವೀರರನ್ನು ನೆನಪಿಸಿಕೊಳ್ಳುತ್ತೇವೆ. 200 ವರ್ಷಗಳ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತವಾದ ಭಾರತ ಪ್ರಜಾಸತ್ತಾತ್ಮಕ ಸಾರ್ವಭೌಮ ರಾಷ್ಟ್ರವಾಯಿತು. ಭಾರತ ಸ್ವಾತಂತ್ರ್ಯ ದಿನದ ಹಿಂದಿನ ರಾತ್ರಿ ಆಗಸ್ಟ್ 14, 1947 ರಂದು,

ಈ ಬಾರಿ ಎಷ್ಟನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತಿದ್ದೇವೆ? ಗೊಂದಲ ಬೇಡ; ಇಲ್ಲಿದೆ ಸರಳ ಉತ್ತರ… Read More »

ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಡೆತ್‌ ನೋಟ್‌ ಬರೆದಿಟ್ಟು ಬೆಂಗಳೂರಿನಲ್ಲಿ ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ನಗರ ಹೊರವಲಯದ ಯಲಹಂಕದಲ್ಲಿ ನಡೆದಿದೆ. ನನ್ನ ಸಾವಿಗೆ‌ ನಾನೇ ಕಾರಣ ಎಂದು ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ವೀರ್ ಮೃತ ವಿದ್ಯಾರ್ಥಿ. ಪ್ರತಿಷ್ಠಿತ ರೇವಾ ಯೂನಿವರ್ಸಿಟಿಯಲ್ಲಿ ಬಿಎಸ್ಸಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ತನ್ವೀರ್, ಭಾನುವಾರ ಇದ್ದಕ್ಕಿದ್ದಂತೆ ಪಿ.ಜಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಿ.ಜಿಯಲ್ಲಿನ ಕೆಲ‌ ವಿದ್ಯಾರ್ಥಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ

ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ Read More »

ಮತ್ತೊಂದು ಪಾದಯಾತ್ರೆ/ ಅತೃಪ್ತ ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ

ಸಮಗ್ರ ನ್ಯೂಸ್‌: ಮುಡಾ ಹಗರಣದ ವಿರುದ್ಧ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆ ಮುಗಿದಿದ್ದು, ಇದೀಗ ಅತೃಪ್ತ ಬಿಜೆಪಿ ನಾಯಕರು ಸೆ.17ರಿಂದ ಕೂಡಲಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲು ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಿಜೆಪಿಯ ಅತೃಪ್ತ ನಾಯಕರಾದ ಬಸನಗೌಡ ಪಾಟೀಲ್‌ ಯತ್ನಾಳ, ರಮೇಶ ಜಾರಕಿಹೊಳಿ, ಜಿ.ಎಂ.ಸಿದ್ದೇಶ್ವರ, ಅಣ್ಣಾಸಾಹೇಬ ಜೊಲ್ಲೆ, ಅರವಿಂದ ಲಿಂಬಾವಳಿ, ಪ್ರತಾಪ ಸಿಂಹ, ಕುಮಾರ ಬಂಗಾರಪ್ಪ ಸೇರಿದಂತೆ 12 ಬಿಜೆಪಿ ನಾಯಕರು ಗೌಪ್ಯ ಸಭೆ ನಡೆಸಿದರು. ಪಾದಯಾತ್ರೆಯಲ್ಲಿ ವಾಲ್ಮೀಕಿ ಕಾಂಗ್ರೆಸ್ ಅಭಿವೃದ್ಧಿ ನಿಗಮದ ಹಗರಣಗಳು ಹಾಗೂ

ಮತ್ತೊಂದು ಪಾದಯಾತ್ರೆ/ ಅತೃಪ್ತ ಬಿಜೆಪಿ ನಾಯಕರಿಂದ ಬಳ್ಳಾರಿ ಚಲೋ Read More »

ಭಾರೀ ಮಳೆ/ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಲಾಮ್ ಮಾರ್ಗ ಮತ್ತು ಬಲ್ಟಾಲ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದಿದೆ. ಈ ಕಾರಣದಿಂದ ಎರಡೂ ಕಡೆಗಳಲ್ಲಿ ಯಾತ್ರೆಯನ್ನು ನಿಲ್ಲಿಸಲಾಗಿತ್ತು. ಬುಧವಾರ ನಿರ್ವಹಣೆಗಾಗಿ ಪಹಲ್ಲಾಮ್ ಮಾರ್ಗವನ್ನು ಮುಚ್ಚಲಾಗಿತ್ತು. ಅಮರನಾಥ ಯಾತ್ರೆಯ ಪಹಲ್ಲಾಮ್ ಮತ್ತು ಬಾಲ್ ಮಾರ್ಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ ಎಂದು ಕಾಶ್ಮೀರದ ವಿಭಾಗೀಯ ಆಯುಕ್ತ ವಿ ಕೆ ಬಿದುರಿ ಹೇಳಿದ್ದಾರೆ. ಮಳೆಯ ಕಾರಣ ಅಮರನಾಥ ಯಾತ್ರೆಯ ಬಾಲ್ಟಾಲ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಬೇಕಿದೆ.

ಭಾರೀ ಮಳೆ/ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ Read More »

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್

ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್ Read More »

ಕ್ಯಾಂಟರ್ – ಟೆಂಪೋ ಭೀಕರ ಅಪಘಾತ: ಮೂವರು ದುರ್ಮರಣ

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಕ್ಯಾಂಟರ್ – ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೊದಲ್ಲಿದ್ದ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಯಾದಗಿರಿ ಮೂಲದ ಕಟ್ಟಡ ಕಾರ್ಮಿಕಾರದ ನರಸಪ್ಪ(35), ಹುಸೇನಪ್ಪ(34), ಪಾದಚಾರಿ ತುಮಕೂರು ತಾಲೂಕಿನ ಸೀತಕಲ್ಲು ನಿವಾಸಿ ಶಿವಗಂಗಪ್ಪ(55) ಮೃತರು. ಐವರ ಸ್ಥಿತಿ ಚಿಂತಾಜನಕವಾಗಿದೆ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಚಾರ ಅಸ್ತವ್ಯಸ್ತ

ಕ್ಯಾಂಟರ್ – ಟೆಂಪೋ ಭೀಕರ ಅಪಘಾತ: ಮೂವರು ದುರ್ಮರಣ Read More »

ಚಿಕ್ಕಮಗಳೂರು, ಕೊಡಗಿನಲ್ಲಿ ಅರಣ್ಯ ಒತ್ತುವರಿ‌ ತೆರವು| ಕಾಫಿ ಬೆಳೆದಿದ್ದ ಜಮೀನು ವಶಕ್ಕೆ ಪಡೆದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಅರಣ್ಯ ಇಲಾಖೆಗೆ ಸಂಬಂಧಿಸಿದ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ವೇಗ ಪಡೆದುಕೊಂಡಿದ್ದು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ‌ ಹಲವು ಗ್ರಾಮಗಳಲ್ಲಿ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವುಗೊಳಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದ 20 ಎಕರೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿ ಹಲವರು ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ನೆಟ್ಟಿದ್ದರು. ಅರಣ್ಯ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕತ್ತರಿಸಿ ಅರಣ್ಯ

ಚಿಕ್ಕಮಗಳೂರು, ಕೊಡಗಿನಲ್ಲಿ ಅರಣ್ಯ ಒತ್ತುವರಿ‌ ತೆರವು| ಕಾಫಿ ಬೆಳೆದಿದ್ದ ಜಮೀನು ವಶಕ್ಕೆ ಪಡೆದ ಅರಣ್ಯ ಇಲಾಖೆ Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರ ಆಗ್ರಹ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ನಾಳೆ ಅಂದರೆ ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರ ಆಗ್ರಹ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ Read More »

ಮುರಿದ ತುಂಗಭದ್ರಾ ಡ್ಯಾಂ ಗೇಟ್: ಅಪಾರ ಪ್ರಮಾಣದ ನೀರು ನದಿಗೆ

ಸಮಗ್ರ ನ್ಯೂಸ್: ನಾಲ್ಕು ಜಿಲ್ಲೆ ಮೂರು ರಾಜ್ಯಗಳಿಗೆ ಜೀವನಾಧಾರವಾದ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ‌ಮುರಿದು ಸಾಕಷ್ಟು ಪ್ರಮಾಣದಲ್ಲಿ ‌ನೀರು ಹರಿದು ಹೋಗುತ್ತಿರುವ ಕಾರಣ ಜನರು ಆತಂಕಕ್ಕೀಡಾಗಿದ್ದಾರೆ. ಇದರಿಂದ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ

ಮುರಿದ ತುಂಗಭದ್ರಾ ಡ್ಯಾಂ ಗೇಟ್: ಅಪಾರ ಪ್ರಮಾಣದ ನೀರು ನದಿಗೆ Read More »