Editor

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ

ಸಮಗ್ರ ನ್ಯೂಸ್‌: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷ ಸದ್ಯೋದ್ಯಾನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದೆ. ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ. ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ […]

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ Read More »

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್ 

ಸಮಗ್ರ ನ್ಯೂಸ್: ಕನ್ನಡ ಸಿನಿಮಾರಂಗದ ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅದಕ್ಕೂ ಮೊದಲು ಅದ್ದೂರಿಯಾಗಿ ಅರಿಶಿಣ ಶಾಸ್ತ್ರಗಳನ್ನು ಮಾಡಿಕೊಳ್ಳಲಾಗಿದೆ. ಅರಿಶಿಣದ ನೀರನ್ನು ಹೊಯ್ದುಕೊಂಡು ಫೋಟೋಗೆ ತರುಣ್ ಹಾಗೂ ಸೋನಲ್ ಪೋಸ್ ಕೊಟ್ಟಿದ್ದಾರೆ.ಆಗಸ್ಟ್ 10ರಂದು ಬೆಂಗಳೂರಲ್ಲಿ ಆರತಕ್ಷತೆ ಜರುಗಲಿದೆ. ಆಗಸ್ಟ್ 11ರಂದು ಇವರ ವಿವಾಹ ನೆರವೇರುತ್ತಿದೆ. ಅರಿಶಿನ ಶಾಸ್ತ್ರಕ್ಕೆ ಚಿತ್ರರಂಗದ ಅನೇಕ ನಟರು ಭಾಗವಹಿಸಿದ್ದರು. ನೆನಪಿರಲಿ ಪ್ರೇಮ್, ಶರಣ್ ಸೇರಿದಂತೆ ಅನೇಕರು ಅರಿಶಿಣ ಶಾಸ್ತ್ರಕ್ಕೆ ಬಂದು ಪೋಸ್ ಕೊಟ್ಟಿದ್ದಾರೆ. ತರುಣ್ ಅವರು

ಅದ್ಧೂರಿಯಾಗಿ ಅರಿಶಿಣ ಶಾಸ್ತ್ರ ಮಾಡಿಕೊಂಡ ತರುಣ್-ಸೋನಲ್  Read More »

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಮುಂದಿನ ಮೂರು ದಿನ ಮುಂಗಾರು ಚುರುಕಾಗಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಕರಾವಳಿಯಲ್ಲಿ ಆತಂಕವನ್ನು ಸೃಷ್ಟಿ

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ Read More »

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ವ್ಯಕ್ತಿ ಕಬ್ಬಿಣದ ಏಣಿನ್ನು ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆ.8 ರಂದು ನಡೆದಿದೆ. ಮೃತನನ್ನು 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನು ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನು ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಬ್ಬಿಣದ ಏಣಿಯಾದ

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು Read More »

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡಿದ್ದು ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ವಿಮಾನದ

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ Read More »

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ

ಸಮಗ್ರ ನ್ಯೂಸ್‌: 17 ತಿಂಗಳ ಜೈಲು ವಾಸದ ಬಳಿಕ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಬಳಿಕ ಸಿಸೋಡಿಯಾ ಅವರು ಬಿಡುಗಡೆಯಾಗಿ ಹೊರ ಬಂದಿದ್ದಾರೆ. ಸಿಸೋಡಿಯಾ ಅವರನ್ನು 2023 ರ ಫೆಬ್ರವರಿ 26ರಂದು ಸಿಬಿಐ, ಎರಡು ವಾರಗಳ ನಂತರ ಇಡಿ ಬಂಧಿಸಿತ್ತು. ಈಗ ಎರಡೂ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ

ಮನೀಶ್ ಸಿಸೋಡಿಯಾ ಜೈಲು ವಾಸ ಮುಕ್ತಾಯ/ 17 ತಿಂಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆ Read More »

ಒಲಿಂಪಿಕ್ಸ್‌ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್

ಸಮಗ್ರ ನ್ಯೂಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನ ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದ್ದು, ಭಾರತದ ಧ್ವಜಧಾರಿಗಳಾಗಿ ಪದಕ ಗೆದ್ದ ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್ ಮನು ಭಾಕರ್ ಆಯ್ಕೆಯಾಗಿದ್ದಾರೆ. ಮಹಿಳಾ ಧ್ವಜಧಾರಿಯಾಗಿ ಮನು ಭಾಕರ್ ಅವರನ್ನು ಕಳೆದ ವಾರವೇ ಆಯ್ಕೆ ಮಾಡಲಾಗಿತ್ತು. ಆದರೆ, ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಆಯ್ಕೆಯಾಗಿರಲಿಲ್ಲ. ಇದೀಗ ಹಾಕಿಗೆ ವಿದಾಯ ಹೇಳಿರುವ ದಿಗ್ಗಜ ಗೋಲ್ ಕೀಪರ್ ಶ್ರೀಜೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಭಯ ಕ್ರೀಡಾಪಟುಗಳು ಧ್ವಜಧಾರಿಯಾಗಿ

ಒಲಿಂಪಿಕ್ಸ್‌ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್ Read More »

ಹರಿಯಾಣದ ಶಾಲೆಗಳಲ್ಲಿ ಇನ್ಮುಂದೆ ಗುಡ್‌ ಮಾರ್ನಿಂಗ್‌ ಬದಲು ʼಜೈ ಹಿಂದ್‌ʼ/ ಸರ್ಕಾರದ ಆದೇಶ

ಸಮಗ್ರ ನ್ಯೂಸ್‌: ಹರಿಯಾಣದ ಎಲ್ಲಾ ಶಾಲೆಗಳಲ್ಲಿ ʼಶುಭೋದಯ’ (ಗುಡ್ ಮಾರ್ನಿಂಗ್) ಬದಲಿಗೆ ʼಜೈ ಹಿಂದ್’ ಎಂದು ಹೇಳಲು ನಿರ್ಧರಿಸಲಾಗಿದೆ. ಹರಿಯಾಣ ಸರ್ಕಾರವು ಆರಂಭಿಸಿರುವ ಈ ಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹೆಮ್ಮೆಯ ಭಾವನೆಯನ್ನು ಮೂಡಿಸುವ ಗುರಿಯನ್ನು ಹೊಂದಿದೆ ಎಂದು ಶಾಲಾ ಶಿಕ್ಷಣ ನಿರ್ದೇಶನಾಲಯವು ಎಲ್ಲಾ ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಜಿಲ್ಲಾ ಬ್ಲಾಕ್ ಶಿಕ್ಷಣಾಧಿಕಾರಿಗಳು, ಬ್ಲಾಕ್ ಪ್ರಾಥಮಿಕ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರಿಗೆ ಸುತ್ತೋಲೆಯನ್ನು ಕಳುಹಿಸಿದೆ.. ಸುತ್ತೋಲೆಯ ಪ್ರಕಾರ, ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯಿಂದಲೇ

ಹರಿಯಾಣದ ಶಾಲೆಗಳಲ್ಲಿ ಇನ್ಮುಂದೆ ಗುಡ್‌ ಮಾರ್ನಿಂಗ್‌ ಬದಲು ʼಜೈ ಹಿಂದ್‌ʼ/ ಸರ್ಕಾರದ ಆದೇಶ Read More »

ಮುಂಬೈನ ಕಾಲೇಜಿನಲ್ಲಿ ಹಿಜಾಬ್‌ ಬ್ಯಾನ್‌/ ತಡೆ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್‌: ಮುಂಬೈನ ಕಾಲೇಜಿನ ಆವರಣದಲ್ಲಿ ಹಿಜಾಬ್, ಬುರ್ಖಾ, ಕ್ಯಾಪ್ ರೀತಿಯ ಉಡುಗೆಗಳನ್ನು ಧರಿಸುವುದನ್ನು ನಿಷೇಧಿಸಿ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದ್ದು, ತರಗತಿಯೊಳಗೆ ಹುಡುಗಿಯರು ಯಾವುದೇ ರೀತಿಯ ಬುರ್ಖಾವನ್ನು ಧರಿಸಲು ಅನುಮತಿ ನೀಡಲಾಗುವುದಿಲ್ಲ ಮತ್ತು ಕ್ಯಾಂಪಸ್‌ನಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಅನುಮತಿಯಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಮಹಿಳಾ ಸಬಲೀಕರಣ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ʼಹೆಣ್ಣುಮಕ್ಕಳು ಧರಿಸುವುದನ್ನು ನಿರ್ಬಂಧಿಸುವ ಮೂಲಕ ನೀವು

ಮುಂಬೈನ ಕಾಲೇಜಿನಲ್ಲಿ ಹಿಜಾಬ್‌ ಬ್ಯಾನ್‌/ ತಡೆ ನೀಡಿದ ಸುಪ್ರೀಂ Read More »

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತು: ಸತೀಶ್ ಜಾರಕಿಹೊಳಿಗೆ ಸಮನ್ಸ್

ಸಮಗ್ರ ನ್ಯೂಸ್: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತು: ಸತೀಶ್ ಜಾರಕಿಹೊಳಿಗೆ ಸಮನ್ಸ್ Read More »