ಕುಂದಾಪುರ: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಕಡಿದು ನರ್ತಿಸಿದ ಪತಿ| ವಿಕೃತಿ ಮೆರೆದಾತನ ಬಂಧಿಸಲು ಅಶ್ರುವಾಯು ಸಿಡಿಸಿದ ಪೊಲೀಸರು
ಸಮಗ್ರ ನ್ಯೂಸ್: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ನಾಲ್ಕು ತಿಂಗಳ […]










