Editor

ಸಿಎಂಗೆ ಮುಡಾ ಸಂಕಷ್ಟ: ಹಗರಣದ ಸಂಪೂರ್ಣ ವರದಿ ಕೇಳಿದ ರಾಜ್ಯಪಾಲ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಮತ್ತೆ ಮುಡಾ ಹಗರಣ ಸಂಪೂರ್ಣ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದಾರೆ. ಈಗಾಗಲೇ ಸರ್ಕಾರಿಂದ ಒಂದು ಬಾರಿ ವರದಿ ಪಡೆದುಕೊಂಡಿರುವ ರಾಜ್ಯಪಾಲರು ಇದೀಗ ನವದೆಹಲಿಯಲ್ಲಿ ಇದ್ದುಕೊಂಡೇ ಮತ್ತೊಮ್ಮೆ ವರದಿ ಕೇಳಿರುವುದು ಸಂಚಲನ ಮೂಡಿಸಿದೆ. […]

ಸಿಎಂಗೆ ಮುಡಾ ಸಂಕಷ್ಟ: ಹಗರಣದ ಸಂಪೂರ್ಣ ವರದಿ ಕೇಳಿದ ರಾಜ್ಯಪಾಲ Read More »

ವಯನಾಡ್ ಭೂಕುಸಿತ| ಮೃತರ ಸಂಖ್ಯೆ 254ಕ್ಕೆ ಏರಿಕೆ| 1592 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಈವರೆಗೆ 192 ಮಂದಿ ನಾಪತ್ತೆಯಾಗಿದ್ದರೆ, 1,592 ಜನರನ್ನು ರಕ್ಷಣೆ ಮಾಡಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇದ್ರ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ಅನ್ನು ಚೋರ್ ಮಂಡಲಾದಲ್ಲಿ ಓಪನ್ ಮಾಡಲಾಗಿದೆ. ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, ಅವರನ್ನು ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಗುಡ್ಡ ಕುಸಿತದಲ್ಲಿ

ವಯನಾಡ್ ಭೂಕುಸಿತ| ಮೃತರ ಸಂಖ್ಯೆ 254ಕ್ಕೆ ಏರಿಕೆ| 1592 ಮಂದಿಯ ರಕ್ಷಣೆ Read More »

ಕರ್ನಾಟಕದ 29 ತಾಲೂಕುಗಳಲ್ಲಿ ಭೂಕುಸಿತದ ಭೀತಿ| ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡಿನ ಹಲವು ತಾಲೂಕುಗಳು ಡೇಂಜರ್ ಝೋನ್!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಮತ್ತು ಜನತೆ ಈಗಲೇ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮಲೆನಾಡು ಮತ್ತು ಕರಾವಳಿ ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ! ಮಳೆಗಾಲದ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಕಾರಣ ಹಾಗೂ ಅದನ್ನು ತಡೆಯುವ ಸಲುವಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು 2022ರಲ್ಲಿ ಭೂಕುಸಿತ ನಿರ್ವಹಣೆಗಾಗಿ ಕ್ರಿಯಾಯೋಜನೆ ರೂಪಿಸಿತ್ತು. ಆ ಕ್ರಿಯಾಯೋಜನೆಗೆ ತಕ್ಕಂತೆ ಸರ್ಕಾರ ಈವರೆಗೆ ಸಮರ್ಪಕ ಕ್ರಮ ಕೈಗೊಂಡಿಲ್ಲ. ಹೀಗಾಗಿ

ಕರ್ನಾಟಕದ 29 ತಾಲೂಕುಗಳಲ್ಲಿ ಭೂಕುಸಿತದ ಭೀತಿ| ಸುಳ್ಯ, ಪುತ್ತೂರು ಸೇರಿದಂತೆ ಕರಾವಳಿ, ಮಲೆನಾಡಿನ ಹಲವು ತಾಲೂಕುಗಳು ಡೇಂಜರ್ ಝೋನ್!! Read More »

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಗೆ ಬಂದು ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದರಿಂದ ಪುನೀತ್ ಕೆರೆಹಳ್ಳಿ , ಪ್ರತಾಪ್ ಸಿಂಹ, ಹರೀಶ್ ಪೂಂಜ ಹಾಗೂ ಇತರರ ವಿರುದ್ಧ ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. A1ಪುನೀತ್ ಕೆರೆಹಳ್ಳಿ, A2ಪ್ರತಾಪ್‌ ಸಿಂಹ, A3 ಹರೀಶ್ ಪೂಂಜ ಸೇರಿ ಇತರರ ವಿರುದ್ಧ ಬೆಂಗಳೂರು ಬಸವೇಶ್ವರ

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಅಲ್ಲದೆ ಮತ್ತಷ್ಟು ಮಳೆಯಾಗುವ ಸಾದ್ಯತೆ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಆಗಸ್ಟ್ 1ರ ಗುರುವಾರದಂದು ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ,ಪ್ರೌಡ ,ಪದವಿಪೂರ್ವ, ಐಟಿಐ, ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ Read More »

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಭೂಕುಸಿತ| ಮಣ್ಣಿನಡಿ ಹೂತುಹೋದ ವಾಹನಗಳು| ರಸ್ತೆ‌ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ.‌ ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಭೂಕುಸಿತ| ಮಣ್ಣಿನಡಿ ಹೂತುಹೋದ ವಾಹನಗಳು| ರಸ್ತೆ‌ ಸಂಚಾರ ಸ್ಥಗಿತ Read More »

ಉಡುಪಿ: ಭಾರೀ ಮಳೆ ಹಿನ್ನೆಲೆ| ಆ.01ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಉಡುಪಿ: ಭಾರೀ ಮಳೆ ಹಿನ್ನೆಲೆ| ಆ.01ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ.1ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್ Read More »

ಎಸಿಪಿ ಚಂದನ್ ಗೆ ಸವಾಲೆಸೆದಿದ್ದ ಪ್ರತಾಪ್ ಸಿಂಹಗೆ ಮುಖಭಂಗ| ಮಾಜಿ ಸಂಸದರ ಎದುರೇ ಪುನೀತ್ ಕೆರೆಹಳ್ಳಿಗೆ ಡ್ರಿಲ್

ಸಮಗ್ರ ನ್ಯೂಸ್: ಪುನೀತ್‌ ಕೆರೆಹಳ್ಳಿ ಬಂಧನವನ್ನು ವಿರೋಧಿಸಿ ಪ್ರತಿಭಟನೆಗೆ ಕರೆ ನೀಡಿ ಎಸಿಪಿ ಚಂದನ್‌ ಗೆ ಸವಾಲು ಹಾಕಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಭಾರೀ ಮುಖಭಂಗವಾಗಿದೆ. ಸವಾಲನ್ನು ಸ್ವೀಕರಿಸಿ ರಜೆಯ ಮೇಲೆ ಊರಿಗೆ ತೆರಳಿದ್ದರೂ ವಾಪಸ್‌ ಬಂದಿದ್ದ ಎಸಿಪಿ ಚಂದನ್‌, ಪ್ರತಾಪ್‌ ಸಿಂಹ ಎದುರಿನಲ್ಲಿಯೇ ಮತ್ತೆ ಪುನೀತ್‌ ಕೆರೆಹಳ್ಳಿಯನ್ನು ವಶಕ್ಕೆ ಪಡೆದು ವಾರ್ನ್‌ ಮಾಡಿ ಬಿಡುಗಡೆ ಮಾಡಿದ್ದಾರೆ. ನಾಯಿ ಮಾಂಸ ವಿವಾದದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧಿತನಾಗಿ ಜಾಮೀನು ಪಡೆದು ಹೊರಬಂದಿದ್ದ

ಎಸಿಪಿ ಚಂದನ್ ಗೆ ಸವಾಲೆಸೆದಿದ್ದ ಪ್ರತಾಪ್ ಸಿಂಹಗೆ ಮುಖಭಂಗ| ಮಾಜಿ ಸಂಸದರ ಎದುರೇ ಪುನೀತ್ ಕೆರೆಹಳ್ಳಿಗೆ ಡ್ರಿಲ್ Read More »

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ

ಸಮಗ್ರ ನ್ಯೂಸ್: ಎನ್.ಎಸ್.ಯು.ಐ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಂದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಭೇಟಿ ಮಾಡಿ ಸಂಜೆ ಕಾಲೇಜು ಸ್ಥಗಿತಗೊಳಿಸಿರುವ ಕುರಿತು ಮಾತನಾಡಿ, ಅದನ್ನು ಸ್ಥಗಿತಗೊಳಿಸದಂತೆ ಮನವಿ ಮಾಡಿದರು. ಕಾಲೇಜು ನಿಲ್ಲಿಸಿದರೆ ಪ್ರದೇಶದ ವಿದ್ಯಾಭ್ಯಾಸ ಮಾಡಲಿಚ್ಛಿಸುವ ಅನೇಕ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗುವ ಸಾಧ್ಯತೆಯಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ NSUI ಮಂಗಳೂರು ವಿಧಾನಸಭಾ ಕ್ಷೇತ್ರರ ಅಧ್ಯಕ್ಷರಾದ ಶಾಹಿಲ್ ಮಂಚಿಲ ಅವರ ನೇತೃತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಿ.ಎಲ್ ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ NSUI ಮಂಗಳೂರು

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ Read More »