Editor

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜೊತೆಗೂಡಿ ಕಣಕ್ಕಿಳಿದಿದ್ದ ಭಾಕರ್‌, ಕಂಚಿನ ಪದಕದ ಪಂದ್ಯದಲ್ಲಿ ದ.ಕೊರಿಯಾ ಜೋಡಿ ವಿರುದ್ಧ ಗೆದ್ದು ಪದಕ ಮುಡಿಗೇರಿಸಿಕೊಂಡರು.

ಪ್ಯಾರಿಸ್ ಒಲಿಂಪಿಕ್ -2024| ಭಾರತಕ್ಕೆ ಎರಡನೇ ಕಂಚು ತಂದ ಮನು ಭಾಕರ್ Read More »

ಹವಾಮಾನ ವರದಿ| 7 ಜಿಲ್ಲೆಗಳಿಗೆ ವರುಣಾಘಾತದ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 7ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚಿನ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹವಾಮಾನ ವರದಿ| 7 ಜಿಲ್ಲೆಗಳಿಗೆ ವರುಣಾಘಾತದ ಮುನ್ಸೂಚನೆ Read More »

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮಲೆನಾಡು‌ ಹಾಗೂ ಕರಾವಳಿಯಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ‌ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ.

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ Read More »

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್

ಸಮಗ್ರ ನ್ಯೂಸ್: ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು – ಸುಳ್ಯ ರಸ್ತೆಯ ಶೇಖಮಲೆ ಎಂಬಲ್ಲಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಬಂಧಪಟ್ಟವರ ಕಾರ್ಯಾಚರಣೆಗೆ ಪ್ರಯಾಣಿಕರು ಕಾಯುತ್ತಿದ್ದಾರೆ. ಸದ್ಯ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ತಿಳಿದುಬಂದಿದೆ.

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್ Read More »

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎನ್ನಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ Read More »

ಸಕಲೇಶಪುರದಲ್ಲಿ ಭಾರೀ ಭೂಕುಸಿತ| ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಸಕಲೇಶಪುರದಲ್ಲಿ ಭಯಾನಕ ಭೂ ಕುಸಿತವಾಗಿದೆ. ರಸ್ತೆಯ ಸಮೇತ ಭೂಮಿ ಕೊಚ್ಚಿ ಹೋಗಿರುವ ಘಟನೆ ಸಕಲೇಶಪುರ ತಾಲೂಕಿನ ಕುಂಬರಡಿ ಹಾರ್ಲೇ ಎಸ್ಟೇಟ್ ಮಧ್ಯೆ ಸಂಭವಿಸಿದೆ. ಪರಿಣಾಮವಾಗಿ ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತ ಸಂಭವಿಸಿದೆ. ಪರಿಣಾಮವಾಗಿ ರಸ್ತೆ 200 ಮೀಟರ್ ಗೂ ಹೆಚ್ಚು ದೂರು ಕೊಚ್ಚಿ ಹೋಗಿದೆ. ರಸ್ತೆಯೇ ಕೊಚ್ಚಿ ಹೋಗಿರುವುದರಿಂದ ಹತ್ತಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಪಕ್ಕದಲ್ಲಿ

ಸಕಲೇಶಪುರದಲ್ಲಿ ಭಾರೀ ಭೂಕುಸಿತ| ರಸ್ತೆ ಸಮೇತ ಕೊಚ್ಚಿ ಹೋದ ಭೂಮಿ Read More »

ವಯನಾಡು ಭೂಕುಸಿತ ದುರಂತ| ಮೃತರ‌ ಸಂಖ್ಯೆ 36ಕ್ಕೆ ಏರಿಕೆ| ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ; ಮತ್ತೆಮತ್ತೆ ಕುಸಿಯುತ್ತಿರುವ ಭೂಮಿ

ಸಮಗ್ರ ನ್ಯೂಸ್: ಮಂಗಳವಾರ ಮುಂಜಾನೆ ಕೇರಳದ ಗುಡ್ಡಗಾಡು ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಕ್ಕಳು ಸೇರಿದಂತೆ 36 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ, ಜಿಲ್ಲೆಯ ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ನೇಪಾಳಿ ಕುಟುಂಬದ ಒಂದು ವರ್ಷದ ಮಗು ತೊಂಡರ್ನಾಡ್ ಗ್ರಾಮದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಕ್ಕೈ,

ವಯನಾಡು ಭೂಕುಸಿತ ದುರಂತ| ಮೃತರ‌ ಸಂಖ್ಯೆ 36ಕ್ಕೆ ಏರಿಕೆ| ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿ; ಮತ್ತೆಮತ್ತೆ ಕುಸಿಯುತ್ತಿರುವ ಭೂಮಿ Read More »

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ

ಸಮಗ್ರ ನ್ಯೂಸ್‌: ಭಾರತವು 2025 ರ ಪುರುಷರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕು ಪಡೆದಿದೆ. ಈ ಟೂರ್ನಿ 20 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಇದರಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಆರನೇ ತಂಡವನ್ನು ಅರ್ಹತಾ ಸುತ್ತಿನ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ IEOI ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್‌ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20

2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ Read More »

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ

ಸಮಗ್ರ ನ್ಯೂಸ್‌: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್‌ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್‌ಸಿಸಿಎಫ್‌ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದ್ದು, ಒಂದು ಕಿಲೋ ಟೊಮೆಟೋ 60 ರೂಗೆ ಸಿಗಲಿದೆ. ದೇಶದ ಹಲವೆಡೆ ಟೊಮೆಟೊ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120

ಏರುತ್ತಿರುವ ಟೊಮೆಟೋ ದರ/ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕ್ರಮ Read More »

ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ರಹಿತ ದಿನ/ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ

ಸಮಗ್ರ ನ್ಯೂಸ್‌: ಪ್ರತಿ ಶೈಕ್ಷಣಿಕ ವರ್ಷದಲ್ಲಿ 6 ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ 10 ದಿನಗಳವರೆಗೆ ಬ್ಯಾಗ್‌ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್‌ಸಿಇಆರ್‌ಟಿ) ಅಂಗಸಂಸ್ಥೆಯಾದ ಪಂಡಿತ್ ಸುಂದರ್ಲಾಲ್ ಶರ್ಮಾ (ಪಿಎಸ್‌ಎಸ್) ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಫಾರ್ ವೊಕೇಷನಲ್ ಎಜುಕೇಷನ್‌ ಈ ಕುರಿತು ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (2020) ನಾಲ್ಕನೇ ವರ್ಷಾಚರಣೆ ಸಂದರ್ಭದಲ್ಲಿ ಅದನ್ನು ಬಿಡುಗಡೆ ಮಾಡಲಾಗಿದೆ.

ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ರಹಿತ ದಿನ/ ಕೇಂದ್ರ ಶಿಕ್ಷಣ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ Read More »