ಕೇರಳದ ವಯನಾಡ್ ಬಳಿಕ ಕರ್ನಾಟಕದ ಪಶ್ಚಿಮ ಘಟ್ಟಗಳಿಗೆ ಕುಸಿತದ ಭೀತಿ!? ಎಚ್ಚರಿಕೆಯಿಂದ ಇರುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ಯಾಕೆ?
ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ದುರಂತವಾಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲೂ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಭಾರೀ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಕೇರಳದ ವಯನಾಡಿನಲ್ಲಿ ಮಳೆಯಿಂದಾಗಿ ಭಾರೀ ದುರಂತ ನಡೆದಿದೆ. ಗುಡ್ಡ ಕುಸಿದಿದ್ದು, ನದಿಯಲ್ಲಿ ಪ್ರವಾಹ ಉಕ್ಕಿ ಹರಿದ ಪರಿಣಾಮ 120 ಕ್ಕೂ ಹೆಚ್ಚಿನ ಮಂದಿ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ, ಸಾವಿರಾರು ಮಂದಿ ಮನೆ […]








