Editor

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಎಲ್ಲಾ ನದಿಗಳು ಕಾಲುವೆಗಳು ಕೆರೆಕಟ್ಟೆಗಳು ತುಂಬಿ ತುಳುಕಿವೆ. ಅಲ್ಲಲ್ಲಿ ಗುಡ್ಡ ಬೆಟ್ಟಗಳು ಕುಸಿದ ಪರಿಣಾಮ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ನಡುವಿನ ಪ್ರಯಾಣ ಕಡಿತಗೊಳ್ಳುತ್ತಿದೆ. ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟ ಮತ್ತೆ ಜೋರಾಗಿದೆ ನಿರಂತರ ಮಳೆಗೆ ಜಿಲ್ಲೆಯ ಜೀವನದಿ ಹೇಮಾವತಿ ಸೇರಿ ನದಿ ತೊರೆಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಈ ನಡುವೆ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆ ಎಡಕುಮೇರಿ-ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಶುಕ್ರವಾರ ಸಂಜೆ […]

ಎಡಕುಮೇರಿಯಲ್ಲಿ‌ ರೈಲ್ವೆ ಟ್ರ್ಯಾಕ್ ಮೇಲೆ ಮಣ್ಣುಕುಸಿತ| ಜು.29ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಬಂದ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಈ ವಾರ ನಿಮ್ಮ ರಾಶಿಗಳ ಗೋಚಾರಫಲ ಏನು? ಯಾರಿಗೆ ಲಾಭ? ಯಾವ ರಾಶಿಗೆ ಶುಭ? ಇಲ್ಲಿದೆ ಸಂಪೂರ್ಣ ಮಾಹಿತಿ… ಮೇಷ‌ರಾಶಿ:ಸುಖವಾಗಿ ಬಾಳಬೇಕಾದರೆ ಗುರುಕಟಾಕ್ಷ ಇರಲೇಬೇಕು. ಸಾಧನೆ ಮಾಡಬೇಕಾದರೆ ಸಂಕಲ್ಪ, ಮನಶ್ಶಾಂತಿ ಇರಬೇಕು. ನಾನು ಕೆಲಸವನ್ನು ಮಾಡಿಯೇ ತೀರುತ್ತೇನೆ ಎಂಬ ಛಲವೂ ಇರಬೇಕು. ಇದರೊಂದಿಗೆ ಆರೋಗ್ಯವು ನಮ್ಮನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್

ಸಮಗ್ರ ನ್ಯೂಸ್: ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು ಶವವನ್ನು ನವಿ ಮುಂಬೈನ ರೈಲ್ವೆ ನಿಲ್ದಾಣದ ಬಳಿಯ ಪೊದೆಗಳಲ್ಲಿ ಎಸೆದಿರುವ ಹೀನ ಕೃತ್ಯ ಮುಂಬೈನಲ್ಲಿ ನಡೆದಿದೆ. ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಅವರು ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಗಳಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಈ ವೇಳೆ ದೇಹದ ಮೇಲೆ ಅನೇಕ ಗಾಯದ ಗುರುತುಗಳು ಆಗಿದ್ದವು. ಅದಲ್ಲದೆ,

ಯುವತಿಯನ್ನು ಕೊಲೆಗೈದು ಪೊದೆಯೊಳಗೆ ಎಸೆದ ಬಾಯ್ ಪ್ರೆಂಡ್ Read More »

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಬೆಂಗಳೂರಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿತ್ತು. ಆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪೊಲೀಸರು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿದ್ದರು. ಆ ಬಳಿಕ ಅವರನ್ನು ಬೆಂಗಳೂರಿನ 5ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ

ಕರ್ತವ್ಯಕ್ಕೆ ಅಡ್ಡಿ ಆರೋಪ| ಪುನಿತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ Read More »

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್: ಸಂಬಂಧಿ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಾಹಿತನಾಗಿರುವ ಅಮ್ಟಾಡಿ ನಿವಾಸಿ ಗುರುಪ್ರಸಾದ್‌ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಯ ಕುರಿತು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಒಂದು ವರ್ಷದಲ್ಲಿ 2 ಬಾರಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಬಂಟ್ವಾಳ: ಸಂಬಂಧಿ ಯುವತಿಯ ಗರ್ಭವತಿ ಮಾಡಿದಾತ ಅರೆಸ್ಟ್ Read More »

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ

ಸಮಗ್ರ ನ್ಯೂಸ್: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದ ಸಿಬ್ಬಂದಿಗಳು ಹಾಗೂ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ರಭಸದಿಂದ ಹರಿಯುತ್ತಿದ್ದ ಈ ನದಿಯು ಮಧ್ಯದಲ್ಲಿ ದನವೊಂದು ತೇಲಿಕೊಂಡು ಹೋಗುತ್ತಿರುವುದನ್ನು ಗಮನಿಸಿದ ಹಳೆಗೇಟು ಸಮೀಪದ ದಡ್ಡು ಎಂಬಲ್ಲಿರುವ ಟಯರ್ ಅಂಗಡಿಯ ಮಾಲಕ ಚಂದಪ್ಪ ಅವರು ಕೂಡಲೇ ಪ್ರವಾಹ ರಕ್ಷಣಾ ತಂಡಕ್ಕೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ತಂಡ ತಮ್ಮಲ್ಲಿರುವ ರಬ್ಬರ್ ದೋಣಿಯ

ಉಪ್ಪಿನಂಗಡಿ: ತುಂಬಿ ಹರಿಯುತ್ತಿದ್ದ ನೇತ್ರಾವತಿಯಲ್ಲಿ ಕೊಚ್ಚಿ ಬಂದ ದನ| ಗೋವನ್ನು ರಕ್ಷಣೆ ಮಾಡಿದ ವಿಕೋಪ ತಂಡ Read More »

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಜಿರೆಯಿಂದ ಮುಂಡಾಜೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ರಸ್ತೆಯ ಸೀಟು ಕಾಡು ಎಂಬಲ್ಲಿ ಬೊಲೆರೋ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಬಾಲಕಿಯ ತಂದೆ ಗಂಭೀರ ಗಾಯಗೊಂಡ ಘಟನೆ ಜು.27ರಂದು ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ ಗುರುಪ್ರಸಾದ್ ಗೋಖಲೆಯವರು ಮಗಳಾದ ಅನರ್ಘ್ಯ(13)ಳನ್ನು ಕೂರಿಸಿಕೊಂಡು ಮುಂಡಾಜೆ ಕಡೆ ಹೋಗುತ್ತಿದ್ದಾಗ ಕುಡಿದ ಮತ್ತಿನಲ್ಲಿ ಬೊಲೆರೋ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕನು ತನ್ನ ವಾಹನದಲ್ಲಿ

ಉಜಿರೆ: ಬೊಲೆರೋ – ಬೈಕ್ ನಡುವೆ ಭೀಕರ ಅಪಘಾತ| ಗಾಯಾಳು ಬಾಲಕಿ ಚಿಕಿತ್ಸೆ ಫಲಿಸದೇ ಸಾವು Read More »

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್

ಸಮಗ್ರ ನ್ಯೂಸ್: ಹೊರ ರಾಜ್ಯದಿಂದ ರೈಲಿನಲ್ಲಿ ಪ್ರತಿದಿನ ಸಾವಿರಾರು ಕೆಜಿ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದನ್ನು ನಗರದಲ್ಲಿರುವ ಬಹುತೇಕ ಹೋಟೆಲ್​ಗಳಿಗೆ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕೆಲ ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತ ಶಶಿಕುಮಾರ್, ಸಾಕ್ಷಿ ಸಮೇತ ಬಿಬಿಎಂಪಿ, ಪೊಲೀಸರಿಗೆ ಮತ್ತು ಆರೋಗ್ಯ ಇಲಾಖೆಗೆ ದೂರು ಸಲ್ಲಿಸಿದ್ದರು. ಈ ಸಂಬಂಧ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಶುಕ್ರವಾರ (ಜೂನ್ 26) ಸಂಜೆ ಹಿಂದೂ

ಕುರಿ ಮಾಂಸ ಬದಲು ನಾಯಿ ಮಾಂಸ ಸರಬರಾಜು ಆರೋಪ| ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಪುನೀತ್ ಕೆರೆಹಳ್ಳಿ ಆಸ್ಪತ್ರೆಗೆ ಶಿಪ್ಟ್ Read More »

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು?

ಸಮಗ್ರ ನ್ಯೂಸ್: ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಸಂತಸಗೊಂಡಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಮಾಡುವವರೂ ಆಭರಣ ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಆಷಾಢ ಇರುವುದರಿಂದ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಆದರೆ ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಮದುವೆಯ ಶುಭ ಕಾರ್ಯಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತವೆ. ಶ್ರಾವಣ ಮಾಸದ ನಂತರ ಭಾದ್ರಪದ ಆಶ್ವಿಯುಜ ಮಾಸದಲ್ಲಿ ಅನೇಕ ಹಬ್ಬಗಳು

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು? Read More »

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ

ಸಮಗ್ರ ನ್ಯೂಸ್‌: ನ್ಯಾಷನಲ್ ಇನ್ಸಿಟ್ಯೂಷನ್ ಫಾರ್ ಟ್ರಾನ್ಸಾರ್ಮಿಂಗ್ ಇಂಡಿಯಾ (NITI ಆಯೋಗ್) ನ ಒಂಬತ್ತನೇ ಆಡಳಿತ ಮಂಡಳಿ ಸಭೆಯು ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. NITI ಆಯೋಗ್‌ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಒಕ್ಕೂಟದ ಲೆಫ್ಟಿನೆಂಟ್ ಗವರ್ನ‌ರ್ಗಳನ್ನು ಒಳಗೊಂಡಿದೆ. ಪ್ರಾಂತ್ಯಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳು ಒಳಗೊಂಡಿದ್ದಾರೆ.ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ Read More »