Editor

ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ

ಸಮಗ್ರ ನ್ಯೂಸ್: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಪರಿಚಯಿಸುತ್ತಿರುವ ಹಿನ್ನೆಲೆ ಇಂದು ಸಹ (ಜು.30)ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿ ಆ.2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ […]

ಜು.30ರಂದು ಇ- ಸ್ವತ್ತು ಸಾಪ್ಟ್ ವೇರ್ ಕೆಲಸ ಮಾಡಲ್ಲ – ಪ್ರಿಯಾಂಕ ಖರ್ಗೆ Read More »

ತುಮಕೂರು: ಸಾವಿನಲ್ಲೂ ಸಾರ್ಥಕತೆ ಮೆರೆದ‌ ಪುಟ್ಟ ಬಾಲೆ| 6 ಮಂದಿ ಮಕ್ಕಳಿಗೆ ಚಂದನಾ ಅಂಗಾಂಗ ದಾನ ಮಾಡಿದ ಪೋಷಕರು

ಸಮಗ್ರ ನ್ಯೂಸ್: 12 ವರ್ಷದ ಬಾಲಕಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾಳೆ. ಸಾವು ಬದುಕಿನ ನಡುವೆ ಹೋರಾಡಿ, ಪ್ರಾಣಬಿಟ್ಟ ಈ ಪುಟ್ಟ ಬಾಲಕಿ ಅಂಗಾಂಗ ದಾನದಿಂದ ಆರು ಜನರಿಗೆ ಬೆಳಕಾಗಿದ್ದಾಳೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚಂದನಾ, ಆಸ್ಪತ್ರೆಗೆ ದಾಖಲಾಗಿದ್ದಳು. ಸತತ ಏಳು ದಿನಗಳ ಕಾಲ ಚಿಕಿತ್ಸೆ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ. ಕಡೆಗೆ ಇಹಲೋಕ ತ್ಯಜಿಸಿದಳು. ಆದರೆ ಸಾವಿನಲ್ಲೂ ಮತ್ತಷ್ಟು ಜನಕ್ಕೆ ಬೆಳಕಾಗಿದ್ದು ಮಾತ್ರ ಶ್ಲಾಘನೀಯ ಸಂಗತಿಯಾಗಿದೆ. ಈ ಪುಟ್ಟ ಬಾಲಕಿಯ ಕೆಲಸಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಆಕೆಯ

ತುಮಕೂರು: ಸಾವಿನಲ್ಲೂ ಸಾರ್ಥಕತೆ ಮೆರೆದ‌ ಪುಟ್ಟ ಬಾಲೆ| 6 ಮಂದಿ ಮಕ್ಕಳಿಗೆ ಚಂದನಾ ಅಂಗಾಂಗ ದಾನ ಮಾಡಿದ ಪೋಷಕರು Read More »

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್

ಸಮಗ್ರ ನ್ಯೂಸ್: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್ Read More »

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..!

ಸಮಗ್ರ ನ್ಯೂಸ್: ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದ್ದು, ರೈತರು ಸಂತಸಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಸೇರಿ ಕಾವೇರಿಗೆ ಬಾಗಿನ ಅರ್ಪಿಸಿದರು. ಆದ್ರೆ, ಈ ಬಾಗಿನ ಕಾರ್ಯಕ್ರಮದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಹೌದು…ಕೆಆರ್‌ಎಸ್‌  ಖಾಸಗಿ ಹೋಟೆಲ್ ನಲ್ಲಿ ಬಾಡೂಟ ಆಯೋಜನೆ ಮಾಡಲಾಗಿದ್ದು, ಸಿಎಂ, ಡಿಸಿಎಂ ಬಾಗಿನ ಅರ್ಪಣೆ ಮಾಡಿ ಹೊರಟು ಹೋದ ಬಳಿಕ ಇಲಾಖೆಯ ಅಧಿಕಾರಿಗಳು ಭರ್ಜರಿ ಬಾಡೂಟ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಕಾವೇರಿ

ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ.. ಕಾರ್ಯಕ್ರಮದಲ್ಲಿ ಬಾಡೂಟ ಮಾಡಿದ ಅಧಿಕಾರಿಗಳು..! Read More »

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ ಕೋರಿ ಸಲ್ಲಿಸಿರುವ ಅರ್ಜಿಯನ್ನು ಇದೀಗ ವಾಪಸ್ ಪಡೆಯುವುದಕ್ಕೆ ದರ್ಶನ್ ಪರ ವಕೀಲರು ಮೆಮೊ ಹಾಕಿದ್ದಾರೆ. ಇದೀಗ ದರ್ಶನ್ ಗೆ ಜೈಲು ಊಟವೇ ಫಿಕ್ಸ್ ಆಗಿದೆ. ಆದರೆ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದರು. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು

ದರ್ಶನ್ ಗಾಗಿ ಪರಪ್ಪನ ಅಗ್ರಹಾರಕ್ಕೆ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ Read More »

ಮಹಿಳಾ ಏಷ್ಯಾಕಪ್ ಫೈನಲ್ಸ್| ಶ್ರೀಲಂಕಾ ವಿರುದ್ಧ ಸೋಲು ಕಂಡ ಭಾರತ

ಸಮಗ್ರ ನ್ಯೂಸ್: ಮಹಿಳಾ ಎಷ್ಯಾ‌ಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೋಲು ಕಂಡು ನಿರಾಸೆ ಅನುಭವಿಸಿದೆ. ಫೈನಲ್ ಪಂದ್ಯದಲ್ಲಿ ಬಲಾಢ್ಯ ಭಾರತ ತಂಡವನ್ನು 8 ವಿಕೆಟ್’ಗಳಿಂದ ಭರ್ಜರಿಯಾಗಿ ಬಗ್ಗು ಬಡಿದ ಶ್ರೀಲಂಕಾ ವನಿತೆಯರು ಚೊಚ್ಚಲ ಏಷ್ಯಾ ಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡರು. ಇದಕ್ಕೂ ಮೊದಲು ಏಷ್ಯಾ ಕಪ್ ಟೂರ್ನಿಗಳಲ್ಲಿ ಐದು ಬಾರಿ ಫೈನಲ್ ತಲುಪಿದ್ದ ಶ್ರೀಲಂಕಾ ಐದು ಬಾರಿಯೂ ಭಾರತ ವಿರುದ್ಧ ಸೋಲು ಕಂಡಿತ್ತು. ಆದರೆ 6ನೇ ಪ್ರಯತ್ನದಲ್ಲಿ ಭಾರತಕ್ಕೆ ಶಾಕ್ ಕೊಟ್ಟ ಶ್ರೀಲಂಕಾ ಇದೇ ಮೊದಲ ಬಾರಿ

ಮಹಿಳಾ ಏಷ್ಯಾಕಪ್ ಫೈನಲ್ಸ್| ಶ್ರೀಲಂಕಾ ವಿರುದ್ಧ ಸೋಲು ಕಂಡ ಭಾರತ Read More »

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ರವಿವಾರ ರಾತ್ರಿ ಮೂಡಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ. ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು Read More »

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ ಬಳಲುತ್ತಿದ್ದರು ಎನ್ನಲಾಗಿದೆ.ಮೃತಳು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾಳೆ.

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು Read More »

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು, ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಬಾರಿ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು

ಸಕಲೇಶಪುರ: ರೈಲು ಮಾರ್ಗದಲ್ಲಿ ಭೂಕುಸಿತ ಹಿನ್ನೆಲೆ| 8 ರೈಲುಗಳ ಸಂಚಾರ 15 ದಿನ ಬಂದ್| ರೈಲ್ವೆ ಇಲಾಖೆಯಿಂದ ಅಧಿಕೃತ ಮಾಹಿತಿ Read More »

ನಿಮಗೆ ಹೀಗಾಗುತ್ತಿದ್ದರೆ ನಿಮ್ಮ ಮೆದುಳು ದುರ್ಬಲವಾಗಿದೆ ಎಂದರ್ಥ!!

ಸಮಗ್ರ ಡಿಜಿಟಲ್ ಡೆಸ್ಕ್: ಮೆದುಳು ಮಾನವ ದೇಹದಲ್ಲಿ ಒಂದು ಪ್ರಮುಖ ಅಂಗವಾಗಿದೆ. ವಯಸ್ಕ ಮಾನವ ಮೆದುಳು ಸರಾಸರಿ 1.5 ಕೆಜಿ (3.3 ಪೌಂಡ್) ತೂಕವಿರುತ್ತದೆ. ಪುರುಷರಲ್ಲಿ ಸರಾಸರಿ ತೂಕವು 1370 ಗ್ರಾಂ ಮತ್ತು ಮಹಿಳೆಯರಲ್ಲಿ 1200 ಗ್ರಾಂ. ಇರುತ್ತದೆ. ಆಲೋಚನೆಯೊಂದಿಗೆ, ಇತರರಿಗೆ ಸಲಹೆ ನೀಡುವಲ್ಲಿ ಇದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ನಾವು ಒಂದು ಹೆಜ್ಜೆ ಮುಂದೆ ಹೋದರೆ, ಅದು ನಮ್ಮ ಮೆದುಳಿನ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಮನಸ್ಸು ಸರಿಯಾಗಿ ಕೆಲಸ ಮಾಡದಿದ್ದರೆ, ಅನೇಕ ಸಮಸ್ಯೆಗಳು ಉಂಟಾಗುತ್ತವೆ ಎಂದು ತಜ್ಞರು

ನಿಮಗೆ ಹೀಗಾಗುತ್ತಿದ್ದರೆ ನಿಮ್ಮ ಮೆದುಳು ದುರ್ಬಲವಾಗಿದೆ ಎಂದರ್ಥ!! Read More »