Editor

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು?

ಸಮಗ್ರ ನ್ಯೂಸ್: ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿರುವುದರಿಂದ ಆಭರಣ ಪ್ರಿಯರು ಸಂತಸಗೊಂಡಿದ್ದಾರೆ. ಚಿನ್ನದ ಮೇಲೆ ಹೂಡಿಕೆ ಮಾಡುವವರೂ ಆಭರಣ ಅಂಗಡಿಗಳತ್ತ ಮುಖ ಮಾಡುತ್ತಿದ್ದಾರೆ. ಇದೀಗ ಆಷಾಢ ಇರುವುದರಿಂದ ಆಭರಣ ಖರೀದಿಗೆ ಜನ ಅಷ್ಟಾಗಿ ಆಸಕ್ತಿ ತೋರುವುದಿಲ್ಲ. ಆದರೆ ಇನ್ನು ಕೆಲವೇ ದಿನಗಳಲ್ಲಿ ಶ್ರಾವಣ ಬರಲಿದ್ದು, ಗ್ರಾಹಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಖರೀದಿಗೆ ಆಸಕ್ತಿ ತೋರುತ್ತಾರೆ. ಮದುವೆಯ ಶುಭ ಕಾರ್ಯಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತವೆ. ಶ್ರಾವಣ ಮಾಸದ ನಂತರ ಭಾದ್ರಪದ ಆಶ್ವಿಯುಜ ಮಾಸದಲ್ಲಿ ಅನೇಕ ಹಬ್ಬಗಳು […]

ಚಿನ್ನದ ಧಾರಣೆ ಇನ್ನಷ್ಟು ಕುಸಿಯುತ್ತಾ? ಮಾರುಕಟ್ಟೆಯಲ್ಲಿ ಹಳದಿ ಲೋಹದ ಮುಂದಿನ ನಡೆಯೇನು? Read More »

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ

ಸಮಗ್ರ ನ್ಯೂಸ್‌: ನ್ಯಾಷನಲ್ ಇನ್ಸಿಟ್ಯೂಷನ್ ಫಾರ್ ಟ್ರಾನ್ಸಾರ್ಮಿಂಗ್ ಇಂಡಿಯಾ (NITI ಆಯೋಗ್) ನ ಒಂಬತ್ತನೇ ಆಡಳಿತ ಮಂಡಳಿ ಸಭೆಯು ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. NITI ಆಯೋಗ್‌ನ ಅತ್ಯುನ್ನತ ಸಂಸ್ಥೆಯಾದ ಕೌನ್ಸಿಲ್, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಒಕ್ಕೂಟದ ಲೆಫ್ಟಿನೆಂಟ್ ಗವರ್ನ‌ರ್ಗಳನ್ನು ಒಳಗೊಂಡಿದೆ. ಪ್ರಾಂತ್ಯಗಳು ಮತ್ತು ಹಲವಾರು ಕೇಂದ್ರ ಮಂತ್ರಿಗಳು ಒಳಗೊಂಡಿದ್ದಾರೆ.ಭಾರತೀಯ ಜನತಾ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇನ್ನೂ

ಇಂದು ನೀತಿ ಆಯೋಗದ ಸಭೆ/ ವಿರೋಧ ಪಕ್ಷಗಳಿಂದ ಬಹಿಷ್ಕಾರ Read More »

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಎರಡು ವರ್ಷಗಳ ನಂತರ ಕೆಆರ್ ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಇಂದು ಬೆಳಗ್ಗೆ 11 ಗಂಟೆಗೆ ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 3:00 ಗಂಟೆಗೆ ಹೆಗ್ಗಡದೇವನಕೋಟೆ ತಾಲೂಕಿನ ಬಿಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲಿದ್ದಾರೆ. ಕೊಡಗು ಹಾಗೂ ಹಾಸನದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯದ ಕೃಷ್ಣರಾಜ ಸಾಗರ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.

ಕೆಆರ್‌ಎಸ್‌ ಭರ್ತಿ/ ಇಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ Read More »

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ದೇರೆಬೈಲ್‌ನಲ್ಲಿರುವ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ನಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಪಾನ ಮಾಡಲು ಉತ್ತೇಜಿಸುವ ಪೋಸ್ಟರ್ ಹರಿದಾಡುತ್ತಿರುವ ಹಿನ್ನೆಲೆ ಎಚ್ಚೆತ್ತ ಅಬಕಾರಿ ಇಲಾಖೆ ಬಾರ್ ಮಾಲೀಕರ ವಿರುದ್ಧ FIR ದಾಖಲಿಸಿದೆ. ಈ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದರಿಂದ ವಿಧ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರು ರೊಚ್ಚಿಗೆದ್ದಿದ್ದರು. ಈ ಬಗ್ಗೆ ಎಚ್ಚೆತ್ತ ಪೋಲಿಸ್ ಇಲಾಖೆಯ ಸೂಚನೆಯ ಮೇರೆಗೆ ಹಾಗೂ ಅಬಕಾರಿ ಇಲಾಖೆ ಕರ್ನಾಟಕ ಅಬಕಾರಿ

ಮಂಗಳೂರು: ವಿದ್ಯಾರ್ಥಿಗಳಿಗೆ ಹೆಂಡದ ಆಫರ್ ನೀಡಿದ್ದ ಪಬ್ ಮೇಲೆ ಎಫ್ಐಆರ್ Read More »

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ

ಸಮಗ್ರ ನ್ಯೂಸ್: ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಶಾಹಿಲ್ ಮಂಚಿಲ ನೇಮಕಗೊಂಡಿದ್ದಾರೆ. ಎನ್‌ಎಸ್ ಯುಐ ಉಸ್ತುವಾರಿಗಳಾದ ಜಾಕಿರ್ ಹುಸೇನ್ ರವರು ಶಾಹುಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಉಳ್ಳಾಲ NSUI ಅಧ್ಯಕ್ಷರಾಗಿ ಶಾಹುಲ್‌ ಮಂಚಿಲ Read More »

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಸಮಗ್ರ ನ್ಯೂಸ್: ರೈಲು ಹಳಿಯ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಸಮೀಪದ ಎಡಕುಮೇರಿ- ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಮಣ್ಣು ಕುಸಿದಿದೆ. ನಿರಂತರ ಮಳೆಯಿಂದಾಗಿ ಹಳಿಯ ಕೆಳಭಾಗದಲ್ಲಿ ಮಣ್ಣು ಕುಸಿತ ಉಂಟಾದ ಪರಿಣಾಮ ಮಂಗಳೂರು-ಬೆಂಗಳೂರು ನಡುವಿನ ರೈಲು ಶುಕ್ರವಾರ ಸಂಜೆ ಸ್ವಲ್ಪ ಹೊತ್ತು ಸ್ಥಗಿತಗೊಂಡಿತು. ನಂತರ ಬದಲಿ ಮಾರ್ಗದ ಮೂಲಕ ಸಾಗಿದವು. ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್ ಈ ಘಟನೆಯಿಂದಾಗಿ ವಾಪಸಾಯಿತು. ನಂತರ ಕಾರವಾರ, ಮಡಗಾಂವ್‌ ಜಂಕ್ಷನ್‌, ಕುಳೆಮ್‌, ಕ್ಯಾಸಲ್‌ರಾಕ್‌,

ಸುಬ್ರಹ್ಮಣ್ಯ ರೋಡ್- ಸಕಲೇಶಪುರ ನಡುವಿನ ಎಡಕುಮೇರಿ ಬಳಿ ಗುಡ್ಡ‌ಕುಸಿತ| ರೈಲು ಸಂಚಾರ ತಾತ್ಕಾಲಿಕ ಸ್ಥಗಿತ Read More »

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ?

ಸಮಗ್ರ ನ್ಯೂಸ್: ರಾಜಸ್ಥಾನದಿಂದ ಸಿಲಿಕಾನ್ ಸಿಟಿ ಬೆಂಗಳೂರಿಗೆ ರೈಲಿನಲ್ಲಿ ವಾರದ ಮೂರು ದಿನಗಳು ಸರಬರಾಜು ಆಗುತ್ತಿದ್ದ 4,500 ಕೆ.ಜಿ. ಮಟನ್ ಮಾಂಸ ನಾಯಿ ಮಾಂಸ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಮಾಂಸ ಮಾರಾಟ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ರಾಜ್ಯಗಳಿಂದ ಬೆಂಗಳೂರಿಗೆ ಬರುವ ರೈಲುಗಳಲ್ಲಿ ಅಕ್ರಮವಾಗಿ ಮಾಂಸ ಸರಬರಾಜು ಆಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಯಶವಂತಪುರಕ್ಕೆ ಆಗಮಿಸಿದ ಜೈಪುರ ರೈಲು ಬಂದಾಕ್ಷಣ ದಾಳಿ ಮಾಡಿದ್ದಾರೆ. ಈ ವೇಳೆ ಒಂದೆರಡು ಬಾಕ್ಸ್‌ಗಳನ್ನು ತೆರೆದು

ರಾಜಧಾನಿ ಬೆಂಗಳೂರಿಗೆ ಪೂರೈಕೆಯಾಗ್ತಿದೆಯಾ ನಾಯಿಮಾಂಸ? ರಾಜಸ್ಥಾನದಿಂದ ಸರಬರಾಜು ಆಯ್ತಾ 4500 ಕೆಜಿ ಮಾಂಸ ? Read More »

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮುಂಗಾರು ಮಳೆ ಮುಂದುವರಿದಿದ್ದು ಹಲವು ಅನಾಹುತಗಳು ಸೃಷ್ಟಿಯಾಗುತ್ತಿವೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜು.27ರಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು‌ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ‌ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ,‌ ಎನ್.ಆರ್. ಪುರ, ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ, ಪದವಿ ಕಾಲೇಜುಗಳಿಗೆ ಜು.27ರಂದು ರಜೆ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು ಇಂದು ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ.

ಮುಂದುವರಿದ ವರುಣಾರ್ಭಟ| ರಾಜ್ಯದ ಹಲವು ಜಿಲ್ಲೆಗಳಲ್ಲಿ ಜು.27ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 27ರಂದು ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ಕುಶಾಲನಗರ ‌ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ನಾಳೆ(ಜು.27) ಕೊಡಗು ಜಿಲ್ಲೆಯ ಎರಡು‌ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೊಯಲ್ ಅವರ ಪತ್ನಿಯವರನ್ನ ನೇಮಕ ಮಾಡುವ ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಇದೇ ತಿಂಗಳ ಜುಲೈ 31ಕ್ಕೆ ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ನಿವೃತ್ತಿ ಹೊಂದಲಿದ್ದಾರೆ. ನಂತರ ತೆರವಾಗುವ ಸ್ಥಾನಕ್ಕೆ ರಜನೀಶ್ ಗೋಯಲ್ ಅವರ ಪತ್ನಿಯೂ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕ Read More »