Editor

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ

ಸಮಗ್ರ ನ್ಯೂಸ್‌: ವಿಶ್ವಪ್ರಸಿದ್ಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೆಆರ್‌ಎಸ್‌ ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಈ ಕಾರಣದಿಂದ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳು ಕೂಡ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದ್ರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ […]

ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ Read More »

ಬೈಕ್ ಸೈಡಿಗಿರಿಸಿ ಪೊದೆಯೊಳಗೆ ನುಸುಳಿದ ಯುವಜೋಡಿ| ಸ್ಥಳೀಯರು ಬಂದಾಗ ವಸ್ತುಗಳನ್ನು ಅಲ್ಲಲ್ಲೇ ಬಿಟ್ಟು ಎಸ್ಕೇಪ್

ಸಮಗ್ರ: ಯುವ‌ ಜೋಡಿಯೊಂದು ಮೈ ಬಿಸಿ ಮಾಡಿಕೊಳ್ಳೋದಕ್ಕೆ ಹೋಗಿ ಇನ್ನೇನು ಸಾರ್ವಜನಿಕರ ಕೈಗೆ ಸಿಕ್ಕಿ ಬೀಳುತ್ತೇವೆ ಎಂಬ ಸಮಯದಲ್ಲಿ ಎಸ್ಕೇಪ್ ಆದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೈಕ್ ಸವಾರನೊಬ್ಬ ಅಪ್ರಾಪ್ತ ಬಾಲಕಿಯನ್ನು ರಕ್ಷಿತಾರಣ್ಯಕ್ಕೆ ಕರೆದುಕೊಂಡು ಬಂದು ಮಿಲನ ಕ್ರಿಯೆ ನಡೆಸಲು ಮುಂದಾಗಿದ್ದಾನೆ. ಈ ಜೋಡಿ ತಮಗೆ ಬೇಕಾದ ಸಕಲ ವ್ಯವಸ್ಥೆಯನ್ನೂ ಮಾಡಿಕೊಂಡೇ ಬಂದಿದೆ. ಕಾಂಡೋಮ್, ಎಣ್ಣೆ, ಪಿಲ್ಸ್ ಯಾವುದೆಲ್ಲಾ ಬೇಕೋ ಅದನ್ನೆಲ್ಲಾ ಹಿಡಿದುಕೊಂಡು ಬಂದು ಏಕಾಂತದಲ್ಲಿ ಮೈಮರೆಯೋದಕ್ಕೆ ಸಿದ್ಧರಾಗಿದ್ದಾರೆ. ಕಾಡಿನೊಳಕ್ಕೆ ಹೊಕ್ಕ ಜೋಡಿ

ಬೈಕ್ ಸೈಡಿಗಿರಿಸಿ ಪೊದೆಯೊಳಗೆ ನುಸುಳಿದ ಯುವಜೋಡಿ| ಸ್ಥಳೀಯರು ಬಂದಾಗ ವಸ್ತುಗಳನ್ನು ಅಲ್ಲಲ್ಲೇ ಬಿಟ್ಟು ಎಸ್ಕೇಪ್ Read More »

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್

ಸಮಗ್ರ ನ್ಯೂಸ್: ನಟಿ ಪ್ರಣಿತಾ ಸುಭಾಷ್ ಇದೀಗ ಅಭಿಮಾನಿಗಳಿಗೆ ಮತ್ತೊಮ್ಮೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅದೂ ಎರಡನೇ ಬಾರಿ. ಅಂದರೆ ತಾವು ಎರಡನೇ ಬಾರಿ ಪ್ರೆಗ್ನೆಂಟ್ ಆಗಿರೋ ವಿಚಾರವನ್ನು ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ಪ್ರಣಿತಾ 2021ರ ಮೇ 30ರಂದು ಮದುವೆ ಆದರು. ಉದ್ಯಮಿ ನಿತಿನ್ ರಾಜು ಜೊತೆ ವಿವಾಹ ಆಗಿದ್ದಾರೆ. ಕೊವಿಡ್ ಇದ್ದ ಕಾರಣ ಸಿಂಪಲ್ ಆಗಿ ಈ ಮದುವೆ ನೆರವೇರಿತ್ತು. ಇವರು ಜೂನ್ 2022ರಲ್ಲಿ ಮೊದಲ ಮಗುವಿಗೆ ಜನ್ಮ

ಎರಡನೇ ಮಗು ನಿರೀಕ್ಷೆಯಲ್ಲಿ ನಟಿ ಪ್ರಣಿತಾ ಸುಭಾಷ್ Read More »

ಮಂಗಳೂರು ಜೈಲಿನ ಮೇಲೆ ಪೋಲಿಸರ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಪತ್ತೆ

ಸಮಗ್ರ ನ್ಯೂಸ್: ಬೆಳ್ಳಂ ಬೆಳಗ್ಗೆ ಪೊಲೀಸರು ಮಂಗಳೂರು ಜೈಲಿನ ಮೇಲೆ ದಾಳಿ ಮಾಡಿದ್ದು, ಕಾರ್ಯಾಚರಣೆ ವೇಳೆ ಗಾಂಜಾ ಮತ್ತು ಡ್ರಗ್ಸ್  ಪತ್ತೆಯಾಗಿದೆ. ಜೊತೆಗೆ ಮೊಬೈಲ್ ಫೋನ್ಗಳು, ಡಿವೈಸ್ಗಳು ಪತ್ತೆಯಾಗಿವೆ. ಏಕಾಏಕಿ ದಾಳಿ ಮಾಡಿದ್ದರಿಂದ ನಡೆಯುತ್ತಿದ್ದ ಅಕ್ರಮ ಬಯಲಾಗಿದೆ. ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಖೈದಿಗಳ

ಮಂಗಳೂರು ಜೈಲಿನ ಮೇಲೆ ಪೋಲಿಸರ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಪತ್ತೆ Read More »

ಅರಬ್ ರಾಷ್ಟ್ರಗಳಲ್ಲಿ ಉದ್ಯೋಗ ಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ| ಈಗಲೇ ನೇರ ಸಂದರ್ಶನಕ್ಕೆ ತಯಾರಾಗಿ

ಸಮಗ್ರ ನ್ಯೂಸ್: ಭಾರತ ಸರಕಾರದ ವಿದೇಶಾಂಗ ಇಲಾಖೆಯ ಅಂಗೀಕೃತ ಸಂಸ್ಥೆಯಾದ ನೂರ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವಿದೇಶಿ ಕಂಪೆನಿಯ ಉದ್ಯೋಗ ಸಂದರ್ಶನ ಕಾರ್ಯಕ್ರಮವು ಜು.26 ರಂದು ನಡೆಯಲಿದೆ. ಇದರಲ್ಲಿ ನೀವು ನಿಮ್ಮ ಕನಸಿನ ವಿದೇಶಿ ಉದ್ಯೋಗವನ್ನು ಪಡೆಯುವ ಸುವರ್ಣ ಅವಕಾಶ ಲಭ್ಯವಾಗಲಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9:00 ರಿಂದ ಸಂಜೆ 6:00ರ ವರೆಗೆ ನಡೆಯಲಿದ್ದು, ಇದರಲ್ಲಿ 22 ರಿಂದ 36 ವಯಸ್ಸಿನ (ಹೊಸಬರು /ಅನುಭವಿ)ಯುವಕರು ಭಾಗವಹಿಸಬಹುದು. ಲಕ್ಷದವರೆಗಿನ ಮಾಸಿಕ ವೇತನ ಗಳಿಸಬಹುದಾದ ಈ ವಿದೇಶಿ ಉದ್ಯೋಗ ಸಂದರ್ಶನದ

ಅರಬ್ ರಾಷ್ಟ್ರಗಳಲ್ಲಿ ಉದ್ಯೋಗ ಬೇಕಾ? ಇಲ್ಲಿದೆ ನಿಮಗೊಂದು ಸುವರ್ಣಾವಕಾಶ| ಈಗಲೇ ನೇರ ಸಂದರ್ಶನಕ್ಕೆ ತಯಾರಾಗಿ Read More »

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ

ಸಮಗ್ರ ನ್ಯೂಸ್: ನಾನ್ ಸ್ಟಿಕ್ ಕಿಚನ್ ವೇರ್ ಅತಿಯಾಗಿ ಬಿಸಿಯಾಗುವುದರಿಂದ ಅವುಗಳ ಮೇಲಿನ ಲೇಪನದಲ್ಲಿ ರಾಸಾಯನಿಕಗಳ ಬಿಡುಗಡೆಯಿಂದ ಉಂಟಾಗುವ ಹೊಗೆಯಿಂದ ಈ ಸಮಸ್ಯೆಗಳು ಉಂಟಾಗುತ್ತವೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ. ಕಳೆದ ವರ್ಷ ಯುನೈಟೆಡ್ ಸ್ಟೇಟ್ಸ್‌ ನಲ್ಲಿ ವರದಿಯಾದ ಪಾಲಿಮರ್ ಫ್ಯೂಮ್ ಜ್ವರದ ಪ್ರಕರಣಗಳಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ, ಇದು ಅತಿಯಾಗಿ ಬಿಸಿಯಾದ ನಾನ್‌ಸ್ಟಿಕ್ ಪ್ಯಾನ್‌ಗಳಿಂದ ಹೊಗೆಯನ್ನು ಉಸಿರಾಡುವುದರಿಂದ ಉಂಟಾಗುವ ಅಪರೂಪದ ಕಾಯಿಲೆಯಾಗಿದೆ. ಸಾಮಾನ್ಯವಾಗಿ ಪಾಲಿಮರ್ ಫ್ಯೂಮ್ ಜ್ವರವನ್ನು “ಟೆಫ್ಲಾನ್ ಫ್ಲೂ” ಎಂದು ಉಲ್ಲೇಖಿಸಲಾಗುತ್ತದೆ. ಟ್ರೇಡ್‌ಮಾರ್ಕ್ ನಾನ್‌ಸ್ಟಿಕ್ ಕೋಟಿಂಗ್,

ನಾನ್ ಸ್ಟಿಕ್ ಕುಕ್ ವೇರ್ ಬಳಕೆಯಿಂದ ಈ ಕಾಯಿಲೆ ಬರಬಹುದು!! ಆತಂಕಕಾರಿ ವರದಿ‌ ಬಹಿರಂಗ Read More »

110 ಕೆವಿ ಕಾಮಗಾರಿ ಸ್ಥಿತಿ ಹೇಗಿದೆ ತಿಳಿಸಿ| ಸದನದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ

ಸಮಗ್ರ ನ್ಯೂಸ್: ಸುಳ್ಯದಲ್ಲಿನ ವಿದ್ಯುತ್‌ ಸಮಸ್ಯೆ ಹಾಗೂ 110 ಕೆವಿ ವಿದ್ಯುತ್‌ ಸಬ್‌ಸ್ಟೇಷನ್‌ ಕಾಮಗಾರಿಯ ಬಗ್ಗೆ ವಿಧಾನಸಭೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಎತ್ತಿದರು. ಕಾಮಗಾರಿಯು ಯಾವ ಹಂತದಲ್ಲಿದೆ, ನಿರ್ಮಾಣ ಯಾವಾಗ ಪೂರ್ತಿಗೊಳ್ಳಲಿದೆ ಎಂದು ಶಾಸಕರು ಪ್ರಶ್ನಿಸಿದ್ದರು. ಸುಳ್ಯ 110ಕೆವಿ ಸಾಮರ್ಥ್ಯದ ವಿದ್ಯುತ್‌ ಉಪಕೇಂದ್ರ ಹಾಗೂ ಪ್ರಸರಣ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ವಿದ್ಯುತ್‌ ಉಪಕೇಂದ್ರದ ನಿಯಂತ್ರಣ ಕೊಠಡಿ ನಿರ್ಮಾಣ ಕಾರ್ಯ ಹಾಗೂ ಉಪಕೇಂದ್ರದ ಆವರಣ ಗೋಡೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಪ್ರಸರಣ ಮಾರ್ಗದ ಒಟ್ಟು 89

110 ಕೆವಿ ಕಾಮಗಾರಿ ಸ್ಥಿತಿ ಹೇಗಿದೆ ತಿಳಿಸಿ| ಸದನದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ Read More »

ಮಂಗಳೂರು: ಕಾಂಪೌಂಡ್ ಕುಸಿದು ಬಾಲಕ ಸಾವು

ಸಮಗ್ರ ನ್ಯೂಸ್: ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಮಂಗಳೂರು ಹೊರ ವಲಯದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತರು. ತಡೆ ಗೋಡೆ ಕುಸಿದು ಬಿದ್ದ ಮನೆಗೆ ಬಾಲಕ ಶೈಲೇಶ್ ಅತಿಥಿಯಾಗಿ ಬಂದಿದ್ದ ಎಂದು ತಿಳಿದು ಬಂದಿದೆ.

ಮಂಗಳೂರು: ಕಾಂಪೌಂಡ್ ಕುಸಿದು ಬಾಲಕ ಸಾವು Read More »

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ/ ಶೀಘ್ರದಲ್ಲೇ ಹೆಚ್ಚಾಗುತ್ತೆ ಗೌರವಧನ

ಸಮಗ್ರ ನ್ಯೂಸ್‌: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ/ ಶೀಘ್ರದಲ್ಲೇ ಹೆಚ್ಚಾಗುತ್ತೆ ಗೌರವಧನ Read More »

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು

ಸಮಗ್ರ ನ್ಯೂಸ್‌: ಭಾರತವು ಇಂದಿನಿಂದ ಒಲಿಂಪಿಕ್ಸ್ ಅಭಿಯಾನ ಆರಂಭಿಸಲಿದ್ದು, ಬಿಲ್ಲುಗಾರಿಕೆ (ಆರ್ಚರಿ) ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟುಗಳಾದ ದೀಪಿಕಾ ಕುಮಾರಿ, ಅಂಕಿತಾ ಭಕತ್, ಭಜನ್ ಕೌರ್, ಬಿ ಧೀರಜ್, ತರುಣ್‌ದೀಪ್ ರೈ ಮತ್ತು ಪ್ರವೀಣ್ ಜಾಧವ್ ಸ್ಪರ್ಧಿಸಲಿದ್ದಾರೆ. ವೈಯಕ್ತಿಕ ಶ್ರೇಯಾಂಕ ಸುತ್ತಿನಲ್ಲಿ ಸ್ಪರ್ಧೆ ನಡೆಯಲಿದೆ. ಇದಾದ ಬಳಿಕ ಪುರುಷರ ವೈಯುಕ್ತಿಕ ಶ್ರೇಯಾಂಕ ಸುತ್ತಿನ ಆರ್ಚರಿ ಸ್ಪರ್ಧೆಗಳು ನಡೆಯಲಿವೆ. ಭಾರತೀಯ ಬಿಲ್ಲುಗಾರರ ಪದಕದ ಮಹತ್ವಾಕಾಂಕ್ಷೆಗೆ ಇಂದಿನ ಶ್ರೇಯಾಂಕದ ಸುತ್ತು ನಿರ್ಣಾಯಕವಾಗಿರುತ್ತದೆ. ಶ್ರೇಯಾಂಕದ ಸುತ್ತಿನಿಂದ ಆಗ್ರ ನಾಲ್ಕು ಶ್ರೇಯಾಂಕದ ತಂಡಗಳು ನೇರವಾಗಿ

ಪ್ಯಾರಿಸ್‌ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಭಾರತದ ಒಲಿಂಪಿಕ್ಸ್ ಅಭಿಯಾನ ಶುರು Read More »